ಮಾಂಬಾಡಿ ರಾಮಕೃಷ್ಣ ಭಟ್‍ ನಿಧನ

ಪುತ್ತೂರು: ಬಡಗನ್ನೂರು ಗ್ರಾಮದ ಪಡುಮಲೆ ನಿವಾಸಿ ಮಾಂಬಾಡಿ ರಾಮಕೃಷ್ಣ ಭಟ್ (95) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು. ಪ್ರಸಿದ್ಧ ಜ್ಯೋತಿಷಿ ಮಾಂಬಾಡಿ ಈಶ್ವರ ಭಟ್ಟರ ಪುತ್ರರಾಗಿದ್ದ ಅವರು ತಮ್ಮ ಚಿಕ್ಕಪ್ಪ ಮಾಂಬಾಡಿ ನಾರಾಯಣ ಭಟ್ಟರಿಂದ ಮದ್ದಳೆ ಕಲಿತು ಹವ್ಯಾಸಿ ಕಲಾವಿದರಾಗಿದ್ದರು. ಕೂಡ್ಲು ಮೇಳದ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದು, ಪಡುಮಲೆ ಕೋಟಿ-ಚೆನ್ನಯ ಯುವಕ ಮಂಡಲ ಹಾಗೂ ಬೆನಕ ಯಕ್ಷ ಕಲಾ ವೇದಿಕೆ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ನಾಲ್ವರು ಪುತ್ರರು, ನಾಲ್ಕು ಮಂದಿ ಪುತ್ತಿಯರು, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ.

ಮಾಂಬಾಡಿ ರಾಮಕೃಷ್ಣ ಭಟ್‍ ನಿಧನ Read More »

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್

ಮಂಗಳೂರು : ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ನಿರ್ದೇಶನದ ಯಶಸ್ವಿ ತುಳು ನಾಟಕ ಶಿವದೂತೆ ಗುಳಿಗೆ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ ಎನ್ನಲಾಗಿರುವ ವ್ಯಂಗ್ಯ ಮಾತೊಂದು ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ತುಳುವರ ಗುಳಿಗ ದೈವಕ್ಕೆ ಅಪಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರಗ ಜ್ಞಾನೇಂದ್ರ ಅವರ ವ್ಯಂಗ್ಯ ಭಾಷಣದ ತುಣುಕನ್ನು ವೈರಲ್‌ಮಾಡಲಾಗಿದೆ. ಮಾ.14ರಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಶಿವದೂತೆ ಗುಳಿಗೆ ನಾಟಕ ಆಯೋಜಿಸಿದ್ದರು. ಈ ನಾಟಕ ಪ್ರದರ್ಶನ ಕುರಿತು ಎಲ್ಲೆಡೆ ಪೋಸ್ಟರ್‌ ಅಂಟಿಸಲಾಗಿತ್ತು. ಈ ಬಗ್ಗೆ

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್ Read More »

ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್‌ ರಗಳೆ: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ

ಬೆಂಗಳೂರು : ಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು ನಿರ್ಧರಿಸಿವೆ.ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಈ ಬೇಸಿಗೆಯಲ್ಲಿ ಜನರಿಗೆ ಲೋಡ್‌ಶೆಡ್ಡಿಂಗ್‌ ರಗಳೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಿದ್ದಾರೆ. ಇದೀಗ ಬೇಸಿಗೆ ಆರಂಭವಾಗಿದ್ದು, ವಿದ್ಯುತ್‌ ಬಳಕೆಯೂ ಹೆಚ್ಚಾಗಿದೆ. ಈಗಾಗಲೇ ಪರೀಕ್ಷೆಗಳು ಆರಂಭವಾಗಿವೆ. ಹಾಗೆಯೇ ರೈತರಿಗೂ

ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್‌ ರಗಳೆ: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ Read More »

ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ- ಅಲ್ಟಿಮೇಟ್ ಸ್ಫೋಟ್ಸ್‌ ಕ್ಲಬ್‌ಗೆ ಪ್ರಥಮ ಪ್ರಶಸ್ತಿ

ಪುತ್ತೂರು : ದಕ್ಷಿಣಕನ್ನಡಜಿಲ್ಲಾ ಖೊ-ಖೊ ಅಸೋಸಿಯೇನ್ ವತಿಯಿಂದ ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ್‌ಕ್ಲಬ್ ಮತ್ತು ವಿವೇಕಾನಂದಕಾಲೇಜು ಸ್ವಾಯತ್ತ ಪುತ್ತೂರು, ದೈಹಿಕ ಶಿಕ್ಷಣ ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಪುತ್ತೂರಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ -1 2023 ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 12  ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನುಅಲ್ಟಿಮೇಟ್ ಸ್ಪೋರ್ಟ್ಸ್‌ಕ್ಲಬ್ ಪುತ್ತೂರುತಂಡ, ದ್ವಿತೀಯ

ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ- ಅಲ್ಟಿಮೇಟ್ ಸ್ಫೋಟ್ಸ್‌ ಕ್ಲಬ್‌ಗೆ ಪ್ರಥಮ ಪ್ರಶಸ್ತಿ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಮುನ್ಸೂಚನೆಯಂತೆ ಬ್ರಹ್ಮರಥ ಮಂದಿರದಿಂದ ರಥಬೀದಿಗೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10 ರಿಂದ ನಡೆಯುವ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತಂದು ನಿಲ್ಲಿಸುವ ಮುಹೂರ್ತ ಗುರುವಾರ ನಡೆಯಿತು. ಈ ಮೂಲಕ ಪುತ್ತೂರು ಜಾತ್ರೋತ್ಸವಕ್ಕೆ ಮುನ್ಸೂಚನೆ ನೀಡಲಾಯಿತು. ಪ್ರತೀ ವರ್ಷದಂತೆ ಬಿಲ್ವಪತ್ರೆ ಭೂಸ್ಪರ್ಶ ಮಾಡುವ ಮೂಲಕ ಸೂಚಿಸುವಂತೆ ಈ ಬಾರಿಯೂ ಬಿಲ್ವಪತ್ರೆ ಭೂಸ್ಪರ್ಶ ಮಾಡಿದೆ. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೆ.ಮೂ. ವಸಂತ ಕೆದಿಲಾಯರು ಬ್ರಹ್ಮರಥಕ್ಕೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ

ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಮುನ್ಸೂಚನೆಯಂತೆ ಬ್ರಹ್ಮರಥ ಮಂದಿರದಿಂದ ರಥಬೀದಿಗೆ Read More »

ಪರಿವರ್ತಕ ಬದಲು : ಸಚಿವ ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿಗೆ ಪ್ರಶಂಸೆ

ಸವಣೂರು: ಕೆಟ್ಟು ನಿಂತಿದ್ದ ಸವಣೂರು ವಿದ್ಯುತ್ ಸಬ್ ಸ್ಟೇಷನಿನ 33/11 ಕೆವಿ ಪರಿವರ್ತಕವನ್ನು ಬದಲಿಸಿ, ಹೊಸ ಟ್ರಾನ್ಸ್‍ಫಾರ್ಮರ್ ಅಳವಡಿಸುವ ಕಾರ್ಯದ ನಂತರ ವಿದ್ಯುತ್ ಸರಬರಾಜು ಸರಾಗವಾಗಿ ನಡೆಯುತ್ತಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕ, ಸಚಿವ ಎಸ್. ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಕುಮಾರ್ ಬೊಟ್ಯಾಡಿ, ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಾತುಗಳು ವ್ಯಕ್ತವಾಗಿದೆ. ಕಳೆದ ಕೆಲ ದಿನಗಳಿಂದ ಟ್ರಾನ್ಸ್‍ಫಾರ್ಮರ್ ಕೆಟ್ಟು ಹೋಗಿತ್ತು. ಇದನ್ನು ಶಾಸಕ, ಮೆಸ್ಕಾಂ ನಿರ್ದೇಶಕರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದನೆ ನೀಡಿದ್ದಾರೆ.

ಪರಿವರ್ತಕ ಬದಲು : ಸಚಿವ ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿಗೆ ಪ್ರಶಂಸೆ Read More »

ಮಾ.16 ರಿಂದ 20 : ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು : ಬಡಗನ್ನೂರು ಗ್ರಾಮದ ದೇಯಿಬೈದೈತಿ – ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಾ.16 ರಿಂದ 20 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹೋತ್ಸವದ ಅಂಗವಾಗಿ ಮಾ.16 ಗುರುವಾರ ಸಂಜೆ 5.30 ರಿಂದ ಸ್ವಸ್ತಿ ಪುಣ್ಯಾಹ ಸ್ಥಳ ಶುದ್ಧಿ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ರಾತ್ರಿ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ನಾಳ

ಮಾ.16 ರಿಂದ 20 : ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ Read More »

ಪ್ರಧಾನಿ ಮೋದಿಗೆ ನೋಬೆಲ್‌ ಶಾಂತಿ ಪ್ರಶಸ್ತಿ…?

ಚರ್ಚೆಗೆ ಗ್ರಾಸವಾದ ನೋಬೆಲ್‌ ಕಮಿಟಿಯ ವೈಸ್‌ ಚೇರ್‌ ಆಗಿರುವ ಅಸ್ಲೆ ಟೋಜೆ ಹೇಳಿಕೆ ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪ್ರತಿಷ್ಠಿತ ನೋಬೆಲ್‌ ಪ್ರಶಸ್ತಿ ಸಿಗಲಿದೆಯೇ? ಹೀಗೊಂದು ಪ್ರಶ್ನೆ ಈಗ ತೀವ್ರ ಚರ್ಚೆಗೆ ಒಳಪಟ್ಟಿದೆ. ಈ ಚರ್ಚೆ ಹುಟ್ಟು ಹಾಕಿದ್ದು ನೋಬೆಲ್‌ ಕಮಿಟಿಯ ವೈಸ್‌ ಚೇರ್‌ ಆಗಿರುವ ಅಸ್ಲೆ ಟೋಜೆ ಮಾಡಿರುವ ಒಂದು ಟ್ವೀಟ್‌. ಜಾಗತಿಕವಾಗಿ ಮೋದಿಯವರ ಜನಪ್ರಿಯತೆ ಹೆಚ್ಚಾಗುತ್ತಿದೆ. ರಷ್ಯಾ-ಯುಕ್ರೇನ್‌ ಸಮರ, ಜಾಗತಿಕ ಬಿಕ್ಕಟ್ಟುಗಳ ವಿಚಾರದಲ್ಲಿ ಪ್ರಧಾನಿ ಮೋದಿಯವರ ನಿಲುವು ಮತ್ತು ಮಾತುಗಳು ಜಗತ್ತಿನ ಮುಂಚೂಣಿ ರಾಷ್ಟ್ರಗಳಲ್ಲಿ

ಪ್ರಧಾನಿ ಮೋದಿಗೆ ನೋಬೆಲ್‌ ಶಾಂತಿ ಪ್ರಶಸ್ತಿ…? Read More »

ತಾಯಿಯನ್ನು ಕೊಂದು ಹೆಣವನ್ನು 3 ತಿಂಗಳು ಮನೆಯಲ್ಲಿಟ್ಟುಕೊಂಡ ಮಗಳು

ವಾಸನೆ ತಡೆಯಲು 500 ಬಾಟಲಿ ಸೆಂಟ್‌ ಚಿಮುಕಿಸಿದ್ದಳು ಮುಂಬಯಿ : ಮಗಳೇ ತಾಯಿಯನ್ನು ಕೊಂದು ಹೆಣವನ್ನು ಮೂರು ತಿಂಗಳು ಮನೆಯಲ್ಲಿಟ್ಟುಕೊಂಡ ಅಮಾನವೀಯ ಘಟನೆಯೊಂದು ಮುಂಬಯಿಯಲ್ಲಿ ಸಂಭವಿಸಿದೆ. ಮುಂಬಯಿಯ ಲಾಲ್‌ಬಾಗ್‌ನ ರಿಂಪಲ್‌ ಜೈನ್‌ (24) ಈ ಪಾಪಿ ಮಗಳು. ಕಳೆದ ಡಿಸೆಂಬರ್‌ನಲ್ಲಿ ಆಕೆ ತಾಯಿ ಬೀನಾ ಜೈನ್‌ರನ್ನು (55) ಕೊಲೆ ಮಾಡಿದ್ದಳು. ಬಳಿಕ ಶವವನ್ನು ಹಲವಾರು ತುಂಡು ಮಾಡಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿ ಮನೆಯೊಳಗಿಟ್ಟಿದ್ದಳು. ಬುಧವಾರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ಹೆಣ ಪೊಲೀಸರು ತಪಾಸಣೆ

ತಾಯಿಯನ್ನು ಕೊಂದು ಹೆಣವನ್ನು 3 ತಿಂಗಳು ಮನೆಯಲ್ಲಿಟ್ಟುಕೊಂಡ ಮಗಳು Read More »

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಎಂಟು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಾವೂರಿನ ರಾಜಾ ಅಲಿಯಾಸ್ ರೋಹನ್ ರೆಡ್ಡಿ , ಪಡೀಲ್-ಕಣ್ಣೂರಿನ ಪ್ರಕಾಶ್ ಶೆಟ್ಟಿ, ಕೃಷ್ಣಾಪುರದ ನಿಸ್ಸಾರ್ ಹುಸೇನ್, ಕಸಬಾ ಬೆಂಗ್ರೆಯ ಕಬೀರ್, ಅಚ್ಯುತ್ ಮತ್ತು ಕಾವೂರಿನ ರಿಜ್ವಾನ್ ಬಂಧಿತರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂಟು ಆರೋಪಿಗಳ ಪೈಕಿ ರೆಡ್ಡಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಅಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದನು.ಈತ 2013ರಲ್ಲಿ ಬಸ್ ಚಾಲಕನ ಕೊಲೆ ಪ್ರಕರಣದ

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

error: Content is protected !!
Scroll to Top