ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ಬಳಿಕ ಇದೀಗ ವಿದ್ಯುತ್‌ ಇಲಾಖೆಯ ನೌಕರರು ಮುಷ್ಕರಕ್ಕೆ ತಯಾರಾಗಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮಾ.16ರಂದು ಎಲ್ಲ ಎಸ್ಕಾಂಗಳ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳ ನೌಕರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. ಇದರಿಂದ ವಿದ್ಯುತ್‌ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೆಪಿಟಿಸಿಎಲ್‌ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ(ಎಸ್ಕಾಂ) ಅಧಿಕಾರಿಗಳು, ನೌಕರರ ಬೇಡಿಕೆಗೆ ಈವರೆಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಬುಧವಾರ ತನಕ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು […]

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ Read More »

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾ.20ರಂದು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾ.16ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ Read More »

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

ಬೆಂಗಳೂರು : ಮೊದಲ ಸಲ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ–2022 ಅತ್ಯುತ್ತಮ ಸಂಸದ ಪ್ರಶಸ್ತಿಗೆ (ಮೊದಲ ಸಲ ಸಂಸದರಾದವರಿಗೆ ನೀಡುವ ಪ್ರಶಸ್ತಿ) ಭಾಜನರಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ತೇಜಸ್ವಿ ಸೂರ್ಯ ಸ್ವೀಕರಿಸಿದ್ದಾರೆ. 17ನೇ ಲೋಕಸಭೆಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಅವರು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ Read More »

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ Read More »

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ

ಬೆಂಗಳೂರು: ಎಲ್ಲ ಶಾಸಕರಿಗೆ ಟಿಕೆಟ್‌ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ನಾಯಕ ಯಡಿಯೂರಪ್ಪ ಖಡಕ್‌ ಅಗಿ ಹೇಳಿದ ಬಳಿಕ ಬಿಜೆಪಿಯ ಹಲವು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ ಎದುರಾಗಿದೆ. ಕರಾವಳಿಯಲ್ಲೂ ಕೆಲವು ಶಾಸಕರಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿಲ್ಲ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತಿದೆ.ಬಿಜೆಪಿ ಕರ್ನಾಟಕದಲ್ಲೂ ಉತ್ತರ ಪ್ರದೇಶ ಮತ್ತು ಗುಜರಾತ್‌ ಮಾದರಿಯ ಪ್ರಯೋಗಕ್ಕೆ ಮುಂದಾದರೆ ಹಾಲಿ ಇರುವ ಹಲವು ಶಾಸಕರು ಟಿಕೆಟ್‌ ಕಳೆದುಕೊಳ್ಳುವುದು ಖಚಿತ. ಉತ್ತರ ಪ್ರದೇಶ ಮತ್ತು ಗುಜರಾತಿನಲ್ಲಿ ನಿಷ್ಕ್ರಿಯ, ಹಿರಿಯ ಮತ್ತು

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ Read More »

ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ

ಮೆರವಣಿಗೆ ವೇಳೆ ಕಲ್ಲುತೂರಾಟ; ಹಿಂಸಾಚಾರದಲ್ಲಿ ಹಲವರಿಗೆ ಗಾಯ ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕೋಮು ಹಿಂಸಾಚಾರದ ಕಿಡಿ ಹತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆಯ ಮುಂದುವರಿಕೆ ಇದು ಎನ್ನಲಾಗಿದೆ. ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ

ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ Read More »

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ

ಪುತ್ತೂರು :,ಶಿಕ್ಷಣ ವೃತ್ತಿಯು  ಮಕ್ಕಳನ್ನು ತಿದ್ದುವ ಒಂದು ಅಭೂತಪೂರ್ವ ವೇದಿಕೆಯಾಗಿದೆ. ಸಮಾಜವನ್ನು ತಿದ್ದಲು ಹಾಗೂ ಮಕ್ಕಳ ಜೀವನ ಸರಿಪಡಿಸಲು ಶಿಕ್ಷಕ ವೃತ್ತಿ ಒಂದು ಪ್ರಮುಖ ವೃತ್ತಿ. ಶಿಕ್ಷಕನಾದವನು ಮಕ್ಕಳಿಂದ ಏನನ್ನು ನಿರೀಕ್ಷಿಸಬಾರದು. ಅವರ ಮನೋಭಾವವನ್ನು ಅರ್ಥೈಸಿಕೊಂಡು ಅವರೊಂದಿಗೆ ಬೆರೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಭವಿಷ್ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ’ನಾನು ಯಾಕೆ ಅಧ್ಯಾಪಕ ವೃತ್ತಿ ಆಯ್ದುಕೊಂಡೆ’

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ Read More »

ಪುತ್ತೂರಿನಲ್ಲಿ 12 ಮಾದರಿ ಮತಗಟ್ಟೆಗಳು | ಮತದಾನದ ಪೂರ್ವಸಿದ್ಧತೆಗಳ ಬಗ್ಗೆ ವಿವರಿಸಿದ ಸಹಾಯಕ ಆಯುಕ್ತ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 12 ಬೂತುಗಳನ್ನು ಮಾದರಿ ಬೂತುಗಳೆಂದು ಗುರುತಿಸಲಾಗಿದ್ದು, ಚುನಾವಣೆಯ ದಿನ ವಿಶೇಷ ಅಲಂಕಾರ ಮಾಡಲಾಗುವುದು ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನವಾದ 12 ಬೂತುಗಳನ್ನು ವಿಶೇಷ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಆ ಮತಗಟ್ಟೆಗಳಲ್ಲಿ ಈ ಬಾರಿ ಹೆಚ್ಚಿನ ಮತದಾನ ಆಗುವ ನಿಟ್ಟಿನಲ್ಲಿ ಸಖಿ, ಯಕ್ಷಗಾನ, ಕಂಬಳ, ನೀಲತರಂಗ, ಪರಂಪರೆ, ಗೋ ಗ್ರೀನ್, ಯುವ, ವಿಕಲಚೇತನ ಎಂದು ಗುರುತಿಸಿ, ವಿಶೇಷ ಅಲಂಕಾರ ಮಾಡಲಾಗುವುದು

ಪುತ್ತೂರಿನಲ್ಲಿ 12 ಮಾದರಿ ಮತಗಟ್ಟೆಗಳು | ಮತದಾನದ ಪೂರ್ವಸಿದ್ಧತೆಗಳ ಬಗ್ಗೆ ವಿವರಿಸಿದ ಸಹಾಯಕ ಆಯುಕ್ತ Read More »

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ

ದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ನೆರವಿವಾಗಿ ಎಂದಿಗೂ ವಿದೇಶಗಳನ್ನು ಆಹ್ವಾನಿಸಿಲ್ಲ. ಅವರು ಸುಳ್ಳು ಆಧಾರಿತ, ತಪ್ಪು ಮಾಹಿತಿಯನ್ನೊಳಗೊಂಡ ಸಂಘಟಿತ ವೈಯಕ್ತಿಕ ದಾಳಿಗಳಿಗೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ನೀಡಿದ್ದ ಹೇಳಿಕೆ ಸಂಸತ್ ನಲ್ಲೂ ಗದ್ದಲ ಉಂಟುಮಾಡಿತ್ತು.

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ Read More »

ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಶಿವರಾಮ ಕಾರಂತರ ಬಾಲವನ ಅಂಗನವಾಡಿ ಕಟ್ಟಡಕ್ಕೆ ಸಂಪೂರ್ಣ ಪೈ೦ಟ್ ಕೆಲಸ ಪೂರ್ತಿಗೊಳಿಸಿ, ಬಾಲವನ ಅಂಗನವಾಡಿಗೆ ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಕೊಡುಗೆ ಯೋಜನೆಯನ್ನು ರೋಟರಿ ಜಿಲ್ಲೆ 3181 ವಲಯ 5ರ  ಅಸಿಸ್ಟೆ೦ಟ್ ಗವರ್ನರ್ ಎ. ಜಗಜೀವನ್ ದಾಸ್ ರೈ ಉದ್ಘಾಟಿಸಿದರು. ರೋಟರಿ ಸೆ೦ಟ್ರಲ್ ಅದ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿಗೆ ರೋಟರಿ ಮೂಲಕ ನೀರಿನ ಘಟಕ ಮತ್ತು ಸುಣ್ಣ ಬಣ್ಣ ಬಳಿಯಲು ಸಹಕರಿಸಿದ ನಿವೃತ್ತ ಉಪನ್ಯಾಸಕ

ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ Read More »

error: Content is protected !!
Scroll to Top