ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು, ಬಿಜೆಪಿ ಮಾತ್ರವಲ್ಲ ಪ್ರಧಾನಿ ಮೇಲೂ ವಾಗ್ದಾಳಿ ನಡೆಸುತ್ತಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಪ್ರಧಾನಿ ಅವರನ್ನು ಸ್ವಾಗತಿಸಲು ರೌಡಿ ಶೀಟರ್‌ಗೆ ಅವಕಾಶ ನೀಡಿದ್ದಕ್ಕಾಗಿ ಕರ್ನಾಟಕ ಕಾಂಗ್ರೆಸ್ […]

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಠದ ಶ್ರೀ ಸತ್ಯನಾರಾಯಣ ಗುಡಿಯಲ್ಲಿ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಪಂಚಗವ್ಯ ಪುಣ್ಯಾಹ, ಪುರಸ್ಸರ, ಕಲಶಾಭಿಷೇಕ, ಕಲಶ ಪ್ರತಿಷ್ಠೆ, 10.30 ರಿಂದ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಿತು. ಈ ಸಂದರರ್ಭದಲ್ಲಿ ಮಠದ ಟ್ರಸ್ಟಿಗಳಾದ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ, ಈ ಕುರಿತು ಆತಂಕಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಚುನಾವಣೆ ವೇಳೆ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಇಧರಿಂದ ಪರೀಕ್ಷೆಗಳಿಗೆ ಸಮಸ್ಯೆಗಳಾಗುತ್ತವೆ ಎಂಬ ಆತಂಕಗಳು ಶುರುವಾಗಿದೆ.ಡಿಸೆಂಬರ್ 2022 ರಲ್ಲಿ ಕೊನೆಯ ಬಾರಿಗೆ ಬೂತ್ ಮಟ್ಟದ ಅಧಿಕಾರಿಗಳಂತೆ 60,000 ಶಿಕ್ಷಕರನ್ನು ಚುನಾವಣಾ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ Read More »

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು : ನಗರದ  ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.  ಸಮಾರಂಭದಲ್ಲಿ ವಿದ್ಯಾಲಯದ ಹಿರಿಯ ಶಿಕ್ಷಕಿ ಹಾಗೂ ಉಪ ಪ್ರಾoಶುಪಾಲೆ ಸುಜನಿ ಬೋರ್ಕರ್ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸುಜನಿ ಬೋರ್ಕರ್, ಭಾರತೀಯ ಪರಂಪರೆಯಲ್ಲಿ ಸ್ತ್ರೀಯರಿಗೆ ಅಪಾರ ಗೌರವವಿದೆ. ಯತ್ರ ನಾರ್ಯಸ್ತು ಪೂಜ್ಯoತೆ ರಮಂತೆ ತತ್ರ ದೇವತಾ: ಎಂಬ ನುಡಿಯಂತೆ ಎಲ್ಲಿ ಸ್ತ್ರೀಯರನ್ನು ಪೂಜ್ಯ ಭಾವದಿಂದ ನೋಡುತ್ತಾರೋ,

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ

ಕಾವು: ಇಲ್ಲಿನ ನವೋದಯ ಒಕ್ಕೂಟದ ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುತ್ತಾ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ ನವೋದಯ

ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ Read More »

ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ

ಪುತ್ತೂರು: ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಮಾಹಿತಿ ಮತ್ತು ಕಾರ್ಯಾಗಾರ ಸಭೆ ಆರ್ಯಾಪು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಂಗಳೂರು, ಆರ್ಯಾಪು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಮನಸ್ವಿನಿ, ವಿಧವಾ ವೇತನದ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ,

ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ Read More »

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೆಹಲಿ: 1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಜಸ್ಟಿಸ್ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇತ್ಯರ್ಥದ ಎರಡು ದಶಕಗಳ ನಂತರ ಈ ಸಮಸ್ಯೆಯನ್ನು ತರಲು ಕೇಂದ್ರದಿಂದ ಯಾವುದೇ ತರ್ಕವಿಲ್ಲ ಎಂದು ಹೇಳಿದೆ. ಸಂತ್ರಸ್ತರಿಗಾಗಿ ಆರ್‌ಬಿಐ ಬಳಿ ಇರುವ 50 ಕೋಟಿ ರೂಪಾಯಿಯನ್ನು ಸಂತ್ರಸ್ತರ ಬಾಕಿ ಇರುವ ಕ್ಲೈಮ್‌ಗಳನ್ನು ಪೂರೈಸಲು ಯೂನಿಯನ್

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಮಾ. 13 ರ ರಾತ್ರಿ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಎರಡು ತಿಂಗಳಲ್ಲಿ ಪತ್ತೆಯಾದ ಈ ಮಾದರಿಯ ಮೂರನೇ ಪ್ರಕರಣ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರನ್ನು ಹತ್ತ್ಯೆ ಮಾಡುವ ಸೀರಿಯಲ್‌ ಕಿಲ್ಲರ್‌ ಇದ್ದಾನೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಬಳಿ ಡ್ರಮ್‌ ಹಾಗೂ ಚೀಲಗಳಲ್ಲಿ ಮಹಿಳೆಯರ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದಂದು ವಿಶೇಷವಾಗಿ ಮುಂಜಾನೆಯ ವೇಳೆ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಶಿಸುತ್ತಿರುವ ರಾಜ್ಯದ ಏಕೈಕ ದೇವಸ್ಥಾನ ಎಂದು ಪ್ರಸಿದ್ಧಿ ಪಡೆದಿರುವ, ಇಲ್ಲಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮಂಗಳವಾರದ  ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಮಹಾಲಿಂಗೇಶ್ವರ ಭಜಕ ವೃಂದದವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7ಗಂಟೆಯಿಂದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು Read More »

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ

ಜನಸಾಮಾನ್ಯರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟನೆ ಮಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಜಾನ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಸಾಮಾನ್ಯ ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಜಾನ್ ಕೇಳಿದಾಗ ತೊಂದರೆಯಾಗುತ್ತದೆ. ಯಾವುದೇ ಧರ್ಮವನ್ನು ಖಂಡಿಸುವ ಉದ್ದೇಶವಿಲ್ಲ. ಆದರೆ ಯಾರಾದರೂ ಸಾಮಾನ್ಯ ಜನರ ಭಾವನೆಗಳಿಗೆ ಧ್ವನಿ ನೀಡಬೇಕು. ಇದು ಧರ್ಮವನ್ನು ಖಂಡಿಸುವುದಲ್ಲ ಎಂದು ಹೇಳಿದ್ದಾರೆ.ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಸಮಾವೇಶದ ವೇಳೆ ಆಝಾನ್‌ ಮೊಳಗಿದಾಗ

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ Read More »

error: Content is protected !!
Scroll to Top