ಸೈಫ್‌ ಅಲಿ ಖಾನ್‌ ಪರಿವಾರದ 15 ಸಾವಿರ ಕೋ. ರೂ. ಆಸ್ತಿ ಸರಕಾರಕ್ಕೆ?

100ಕ್ಕೂ ಅಧಿಕ ಭವ್ಯ ಮಹಲುಗಳು, ಕಟ್ಟಡಗಳು ಕೇಂದ್ರದ ಪಾಲಾಗುವ ಸಾಧ್ಯತೆ ಮುಂಬಯಿ : ಕೆಲದಿನಗಳ ಹಿಂದಷ್ಟೇ ಮನೆಯಲ್ಲಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಈಗ ಚೇತರಿಸುತ್ತಿರುವ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ಈಗ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮನೆತನದ ಬರೋಬ್ಬರಿ 15,000 ಕೋ. ರೂ. ಮೌಲ್ಯದ ಆಸ್ತಿ ಈಗ ಕೇಂದ್ರ ಸರಕಾರದ ಪಾಲಾಗುವ ಭೀತಿ ತಲೆದೋರಿದೆ. ಸೈಫ್‌ ಅಲಿ ಖಾನ್‌ ತಂದೆ ಮಾಜಿ ಕ್ರಿಕೆಟಿಗ ದಿವಂಗತ ಮನ್ಸೂರ್‌ ಅಲಿ ಖಾನ್‌ ಪಟೌಡಿ ಮಧ್ಯಪ್ರದೇಶದ ಭೋಪಾಳದ […]

ಸೈಫ್‌ ಅಲಿ ಖಾನ್‌ ಪರಿವಾರದ 15 ಸಾವಿರ ಕೋ. ರೂ. ಆಸ್ತಿ ಸರಕಾರಕ್ಕೆ? Read More »

ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕಿ

ಪುತ್ತೂರು  :  ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುವ  ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನಲ್ಲಿ  ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ ಎನ್ನಲಾಗಿದೆ. ಕೃಷಿ ಪೂರಕ ವ್ಯವಸ್ಥೆಯ ಈ ಸಹಕಾರಿ ಬ್ಯಾಂಕಿನ ಮೆಟ್ಟಲು ಏರಿದ ಮೊದಲ ಕಾಲೇಜು ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ.

ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕಿ Read More »

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತವಾಗಿ ನೀಡಲು ಸರಕಾರ ನಿರ್ಧರಿಸಿದೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ ಅಸ್ಥಿಮಜ್ಜೆ (bone marrow transplant (BMT) ಕಸಿ ಅಗತ್ಯವಿದೆ. ಪ್ರಸ್ತುತ ಈ ಚಿಕಿತ್ಸೆ ಬಹಳ ದುಬಾರಿಯಾಗಿದ್ದು, ಬಡವರ ಕೈಗೆಟುಕುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20-40 ಲಕ್ಷ

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ Read More »

ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡr ಪತ್ನಿ ಸುಶೀಲ (76) ಮೃತಪಟ್ಟವರು. ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು  ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಮುಂಜಾನೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ

ಪಿಎಫ್ಐ ಸೀಕ್ರೆಟ್‌ ಸರ್ವಿಸ್ ಟೀಮ್ ಸದಸ್ಯ ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಕೊಲೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ Read More »

ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ

ಪುತ್ತೂರು : ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ 17 ಮಂದಿ ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಮಂದಿ ಸದಸ್ಯರನ್ನು ಇಂದು ಆಯ್ಕೆ ಮಾಡಲಾಯಿತು. ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ನಿರ್ದೇಶಕರ ವಿವರ : ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪೈಕೆರೆ ಮನೋಹರ ಪಿ., ಉಪಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ, ಕಾರ್ಯದರ್ಶಿಯಾಗಿ ಕಪಿಲ್ ದುಗ್ಗಳ, ಖಜಾಂಚಿಯಾಗಿ ಪುರುಷೋತ್ತಮ ಮುಂಗ್ಲಿಮನೆ, ನಿರ್ದೇಶಕರುಗಳಾಗಿ ಅಂಬೆಕಲ್ಲು ಪ್ರವೀಣ್‍ ಕುಂಟ್ಯಾನ, ಎಂ.ಪಿ.ಉಮೇಶ್‍, ನವೀನ್‍, ಪುದಿಯನೆರವಿನ

ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ Read More »

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು

ಪುತ್ತೂರು: ರಾಜ್ಯ ಒಲಿಂಪಿಕ್ಸ್ ವೈಟ್‍ ಲಿಫ್ಟಿಂಗ್‍ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ದ್ವಿತೀಯ ಬಿಎಯ ರಂಜಿತ್ 108+ ಕೆ.ಜಿ. ವಿಭಾಗದಲ್ಲಿ ಚಿನ್ನ, ದ್ವಿತೀಯ ಬಿಎಸ್ಸಿಯ ಸ್ಪಂದನಾ 45 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಎಂಕಾಂನ ಬ್ಯೂಲಾಹ್‍ ಪಿ.ಟಿ. 64 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಬಿಎಸ್ಸಿಯ ಶಿವಾನಿ 45 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕಗಳನ್ನು ಗಳಿಸಿ ಈ ಮೂಲಕ ಕಾಲೇಜಿನ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲನ್ನು

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು Read More »

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ.   ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ರಚನೆ | ಸ್ಪರ್ಧಾ ಕಣದಲ್ಲಿರುವ ನನಗೆ ಮತದಾರರ ಪಟ್ಟಿ ನೀಡದ್ದಕ್ಕೆ ‘ಹ್ಯಾಕ್‍’ ಮಾಡಿ ಪಡೆದುಕೊಂಡಿದ್ದೇನೆ : ಪತ್ರಿಕಾಗೋಷ್ಠಿಯಲ್ಲಿ ಸುದರ್ಶನ್ ಗೌಡ

ಪುತ್ತೂರು: ಪ್ರತಿಷ್ಠಿತ ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ನ ಆಡಳಿತ ಮಂಡಳಿಗೆ ಸಹಕಾರ ಭಾರತಿಯ ವಿರುದ್ಧ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ನಾನು ಸ್ಪರ್ಧಾ ಕಣದಲ್ಲಿದ್ದೇನೆ. ಈ ನಿಟ್ಟಿನಲ್ಲಿ ಬ್ಯಾಂಕ್‍ ನ ಮತದಾರರ ಪಟ್ಟಿಯನ್ನು ಕೇಳಿದ್ದಕ್ಕೆ ನೀಡದ ಹಿನ್ನಲೆಯಲ್ಲಿ ಬ್ಯಾಂಕ್‍ ನ ಮತದಾರರ ಪಟ್ಟಿಯನ್ನು ನಾನು ಹ್ಯಾಕ್‍ ಮಾಡಿ ಪಡೆದುಕೊಂಡಿದ್ದೇನೆ. ಇಂದಿನಿಂದಲೇ ಮನೆ ಮನೆಗೆ ತೆರಳಿ ಅಭಿಯಾನ ನಡೆಸಲಿದ್ದೇವೆ ಎಂದು ಹೋರಾಟ ಸಮಿತಿಯ ಪ್ರಮುಖ, ಚುನಾವಣಾ ಅಭ್ಯರ್ಥಿ ಸುದರ್ಶನ ಗೌಡ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು

ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ರಚನೆ | ಸ್ಪರ್ಧಾ ಕಣದಲ್ಲಿರುವ ನನಗೆ ಮತದಾರರ ಪಟ್ಟಿ ನೀಡದ್ದಕ್ಕೆ ‘ಹ್ಯಾಕ್‍’ ಮಾಡಿ ಪಡೆದುಕೊಂಡಿದ್ದೇನೆ : ಪತ್ರಿಕಾಗೋಷ್ಠಿಯಲ್ಲಿ ಸುದರ್ಶನ್ ಗೌಡ Read More »

error: Content is protected !!
Scroll to Top