ಮತ್ತೆ ಮುರಿದು ಬಿದ್ದ ಸಂಧಾನ : ಅಮೆರಿಕ, ಪಾಕಿಸ್ತಾನಕ್ಕೆ ಮುಖಭಂಗ

ಅಮೆರಿಕ ಪ್ರತಿನಿಧಿಗಳನ್ನು ಭೇಟಿಯಾಗಲು ನಿರಾಕರಿಸಿ ನಿರ್ಗಮಿಸಿದ ಇರಾನ್‌ ನಿಯೋಗ ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಆಯೋಜನೆಯಾಗಿದ್ದ ಇರಾನ್-ಅಮೆರಿಕ ಸಂಧಾನ ಸಭೆ ಮತ್ತೆ ಮುರಿದುಬಿದ್ದಿದ್ದು, ಸಂಧಾನಕ್ಕಾಗಿ ಆಗಮಿಸಿದ್ದ ಅಮೆರಿಕ ಸರ್ಕಾರದ ನಿಯೋಗವನ್ನು ಭೇಟಿಯಾಗದೆ ಇರಾನ್ ನಿಯೋಗ ನಿರ್ಗಮಿಸಿದೆ. ಪಾಕಿಸ್ತಾನದಲ್ಲಿ ಅಮೆರಿಕಕ್ಕೆ ಜಾಗತಿಕ ಮುಜುಗರವಾಗಿದ್ದು, ಅಮೆರಿಕದ ಪ್ರತಿನಿಧಿಯನ್ನು ಭೇಟಿಯಾಗದೆ ಇರಾನ್ ನಿಯೋಗವು ಪಾಕಿಸ್ತಾನದಿಂದ ನಿರ್ಗಮಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗ ಅಮೆರಿಕದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸದೆ ಶನಿವಾರ ಇಸ್ಲಾಮಾಬಾದ್‌ನಿಂದ ನಿರ್ಗಮಿಸಿತು. ಹೀಗಾಗಿ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನಕ್ಕೆ […]

ಮತ್ತೆ ಮುರಿದು ಬಿದ್ದ ಸಂಧಾನ : ಅಮೆರಿಕ, ಪಾಕಿಸ್ತಾನಕ್ಕೆ ಮುಖಭಂಗ Read More »

ಬೈಕ್‌ ಪಲ್ಟಿಯಾಗಿ ಗಾಯಗೊಂಡಿದ್ದ ಯುವಕ ಸಾವು

ಪುತ್ತೂರು : ಬೈಕ್ ಪಲ್ಟಿಯಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಹಿರೇಬಂಡಾಡಿ ನಿವಾಸಿ ಲಿಖಿತ್ ರೈ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಏಪ್ರಿಲ್ 22ರ ಸಂಜೆ ಕೊಯಿಲ-ಹಿರೇಬಂಡಾಡಿ ರಸ್ತೆಯ ಶಾಖಾಪುರ ಎಂಬಲ್ಲಿ ಲಿಖಿತ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿತ್ತು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸಾರ್ವಜನಿಕರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಕೆಲವು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಲಿಖಿತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬೈಕ್‌ ಪಲ್ಟಿಯಾಗಿ ಗಾಯಗೊಂಡಿದ್ದ ಯುವಕ ಸಾವು Read More »

ತಲೆಮರೆಸಿಕೊಂಡಿದ್ದ ಅಪರಾಧಿ ಆಂಧ್ರ ಪ್ರದೇಶದಲ್ಲಿ ಪತ್ತೆ

ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಯಾಗಿದ್ದ ಅಪರಾಧಿ ಕಡಬ : ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಪ್ರರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಕುಖ್ಯಾತ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ.ಅಬ್ದುಲ್ ಅಜೀಜ್ (30) ಬಂಧಿತ ಆರೋಪಿ. 2012ರ ಜನವರಿ 31ರಂದು ಕಡಬ ಠಾಣಾ ವ್ಯಾಪ್ತಿಯ ಪುತ್ತೂರು, ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿ ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ

ತಲೆಮರೆಸಿಕೊಂಡಿದ್ದ ಅಪರಾಧಿ ಆಂಧ್ರ ಪ್ರದೇಶದಲ್ಲಿ ಪತ್ತೆ Read More »

ಶ್ವೇತ ಭವನದ ಭೋಜನ ಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್‌ ದಂಪತಿಯ ರಕ್ಷಣೆ

ಮಾಧ್ಯಮದವರಿಗಾಗಿ ಆಯೋಜಿಸಿದ್ದ ಭೋಜನಕೂಟದಲ್ಲಿ ಕೇಳಿಸಿದ ಗುಂಡಿನ ಶಬ್ದ ವಾಷಿಂಗ್ಟನ್ : ವಾಷಿಂಗ್ಟನ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತ ಭವನದ ವಾರ್ಷಿಕ ಭೋಜನಕೂಟದಲ್ಲಿ ಗಂಭೀರ ಸ್ವರೂಪದ ಭದ್ರತಾ ವೈಫಲ್ಯ ನಡೆದಿರುವುದು ವರದಿಯಾಗಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣಕ್ಕೂ ಮುನ್ನ ಗುಂಡಿನ ಶಬ್ದ ಕೇಳಿಬಂದು ಸಭಾಂಗಣದಲ್ಲಿ ಅವ್ಯವಸ್ಥೆ ಉಂಟಾಯಿತು. ನೂರಾರು ಪತ್ರಕರ್ತರು, ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಹಿರಿಯ ರಾಜತಾಂತ್ರಿಕರಿಂದ ತುಂಬಿದ್ದ ಸಭಾಂಗಣದಲ್ಲಿ ಐದರಿಂದ ಎಂಟು ಬಾರಿ ಗುಂಡು ಹಾರಿಸಿದ ಶಬ್ದ ಕೇಳಿಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ,

ಶ್ವೇತ ಭವನದ ಭೋಜನ ಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್‌ ದಂಪತಿಯ ರಕ್ಷಣೆ Read More »

ಮದುವೆ ಮಂಟಪದಿಂದ 1 ಕೋ.ರೂ. ಆಭರಣ ಕಳವು

ಬೆಂಗಳೂರು : ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಕಳ್ಳರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಡಾ.ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ಕದ್ದಿರುವ ಪ್ರಕರಣ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಘಟನೆ ಸಂಬಂಧ ಡಾ.ಸಿರುವೆಲ್ಲ ಶ್ರೀದೇವಿ ಗುರುವಾರ ಮಧ್ಯಾಹ್ನ ದೂರು

ಮದುವೆ ಮಂಟಪದಿಂದ 1 ಕೋ.ರೂ. ಆಭರಣ ಕಳವು Read More »

ಕಾಣೆಯಾಗಿದ್ದ ಉಪನ್ಯಾಸಕನ ‌ಶವ ಬಾವಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಉಡುಪಿಯ ಸಂಸ್ಕೃತ ಕಾಲೇಜಿನ ಉಪನ್ಯಾಸಕ ಶಿರಸಿಯ ಗಣೇಶ್ ಭಟ್ (55) ಎಂಬವರೇ ಮೃತರು. ಇವರು ಅವಿವಾಹಿತರಾಗಿದ್ದು, ಎಂ.ಜಿ.ಎಂ. ಕಾಲೇಜಿನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ನಾಪತ್ತೆಯಾದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶವವನ್ನು ಅಗ್ನಿಶಾಮಕ ದಳ ಬಾವಿಯಿಂದ ಮೇಲೆತ್ತಿದೆ. ಉಡುಪಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾಣೆಯಾಗಿದ್ದ ಉಪನ್ಯಾಸಕನ ‌ಶವ ಬಾವಿಯಲ್ಲಿ ಪತ್ತೆ Read More »

ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕನ ಸಾವು

ಪುತ್ತೂರು: ಬಾಲಕನೊಬ್ಬ ವಿದ್ಯುತ್ ತಂತಿ ತಗುಲಿ ಮೃತಪಟ್ಚ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ಮೃತನನ್ನು ನೇರಳಕಟ್ಟೆ ‌ಕೊಡಾಜೆಯ ಶಹೀರ್(15) ಎಂದು ಗುರುತಿಸಲಾಗಿದೆ. ನೇರಳಕಟ್ಟೆಯ ಗಣೇಶ್ ನಗರದ ಫ್ಲಾಟ್ ಒಂದರಲ್ಲಿ ಬಾಲಕ ಹೆತ್ತವರ ಜೊತೆಗೆ ವಾಸವಾಗಿದ್ದು, ಶಾಲೆಗೆ ರಜೆಯಾದ ಕಾರಣ ಗಡಿಯಾರದಲ್ಲಿರುವ ‌ತನ್ನ ಅಜ್ಜನ ಮನೆಗೆ ತೆರಳಿದ್ದ. ಇಂದು ಬೆಳಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಆತ‌ ಸಾವನ್ನಪ್ಪಿದ್ದಾನೆ.

ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕನ ಸಾವು Read More »

ಸೋಣಂದೂರಿನ ವ್ಯಕ್ತಿ ನಾಪತ್ತೆ

ಉಪ್ಪಿನಂಗಡಿ: ಕಡಬದ ಶಿರಾಡಿಯ ಸೋಣಂದೂರಿನ 44 ವರ್ಷದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ತಡವಾಗಿ ವರದಿಯಾಗಿದೆ. ನಾಪತ್ತೆಯಾದವರನ್ನು ಜಗದೀಶ್ ಎಸ್. ಎಸ್. ಎಂದು ಗುರುತಿಸಲಾಗಿದೆ. ಸೋಣಂದೂರಿನಲ್ಲಿ ಪ್ರತ್ಯೇಕ ಮನೆಯಲ್ಲಿ ಇವರು ವಾಸವಾಗಿದ್ದರು. ಗಾರೆ ಕೆಲಸ ಮಾಡಿಕೊಂಡಿದ್ದ ಇವರ ಪತ್ನಿ ಮತ್ತು ಮಕ್ಕಳು ಹಾಸನದಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ತಂದೆಯ ಮನೆಯಲ್ಲಿ ಪ್ರತಿನಿತ್ಯ ಅವರು ಊಟ, ಚಹಾ ಸೇವನೆಗೆ ಹೋಗುತ್ತಿದ್ದರು. ಎ. 6 ರಂದು ಬೆಳಗ್ಗೆ 9 ಗಂಟೆಯ ವರೆಗೆ ಮನೆಯಲ್ಲಿ ಇದ್ದ ಅವರು, ಗಂಟೆ 10.30 ಆದರೂ

ಸೋಣಂದೂರಿನ ವ್ಯಕ್ತಿ ನಾಪತ್ತೆ Read More »

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು ಪೊಲೀಸ್ ವಶಕ್ಕೆ

ಕೊಪ್ಪಳ: ಜಮೀನೊಂದರ ಗೋದಾಮಿನಲ್ಲಿ ಅನ್ನ ಭಾಗ್ಯ ಯೋಜನೆಯ ಸುಮಾರು 150 – 200 ಟನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಘಟನೆ ಕೂಕನಹಳ್ಳಿಯಲ್ಲಿ ನಡೆದಿದ್ದು, ಇದನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಳೆಪ್ಪ ಎಂಬವರ ಜಮೀನಿನ ಗೋದಾಮಿನಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಯೋಜನೆಯ ಅಕ್ಕಿ ದಾಸ್ತಾನಿಡಲಾಗಿದೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿರುವುದಾಗಿದೆ. ಸುಮಾರು ಸಾವಿರಕ್ಕೂ ಅಧಿಕ ಪಡಿತರ ತುಂಬಿದ ಗೋಣಿಗಳು ಪೊಲೀಸರ ವಶಕ್ಕೆ ಸಿಕ್ಕಿದೆ‌. ಆಹಾರ ಇಲಾಖೆಯ ಅಧಿಕಾರಗಳು ಸಹ ಸ್ಥಳದಲ್ಲಿ ಸಿಕ್ಕಿರುವ ಅಕ್ಕಿಯನ್ನು

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು ಪೊಲೀಸ್ ವಶಕ್ಕೆ Read More »

ಮನೆಯಿಂದ ನಗ – ನಗದು ಲೂಟಿ: ಮನೆ ಕೆಲಸಕ್ಕಿದ್ದ ಮಹಿಳೆಯ ಮೇಲೆ ಸಂಶಯ

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿನ ಮನೆಯೊಂದರಿಂದ ‌ಸುಮಾರು 3.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಾಣೆಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಕಳ್ಳತನದ ಸಂದೇಹ ಬಂದಿದೆ. ಎಪಿಎಂಸಿ ರಸ್ತೆಯ ಮಹಾಲಿಂಗೇಶ್ವರ ನಿಲಯದ ಕೆ. ಎಸ್. ಮಹಾದೇವಸ್ವಾಮಿ ಅವರು ಮನೆ ಕೆಲಸಕ್ಕೆ ಮೈಸೂರಿನ ಮಹಿಳೆಯನ್ನು ಕಳೆದ ಜನವರಿ ತಿಂಗಳಿನಲ್ಲಿ ಕರೆದುಕೊಂಡು ಬಂದಿದ್ದರು. ಜ. 2 – 25 ರ ವರೆಗೆ ಮನೆಗೆಲಸ ಮಾಡಿದ್ದ ಆಕೆ ಬಳಿಕ ಕೆಲಸ

ಮನೆಯಿಂದ ನಗ – ನಗದು ಲೂಟಿ: ಮನೆ ಕೆಲಸಕ್ಕಿದ್ದ ಮಹಿಳೆಯ ಮೇಲೆ ಸಂಶಯ Read More »

error: Content is protected !!
Scroll to Top