ಹೆಲ್ಮೆಟ್ ಹಾಕಿದ್ದರೂ ತಲೆಗೇ ಬಲವಾದ ಪೆಟ್ಟು ಬಿದ್ದು ಮೃತ್ಯು | ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅಂತಿಮ ದರ್ಶನ

ಪುತ್ತೂರು: ಎನ್.ಐ.ಎ. ತಂಡಕ್ಕೆ ಬೆಂಗಾವಲು ವಾಹನವಾಗಿ ಸಾಗುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ, ಆರ್ಲಪದವಿನ ಪಾಣಾಜೆ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ನಾಯ್ಕ್ (48) ಅವರ ಮೃತದೇಹದ ಅಂತಿಮ ದರ್ಶನ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು. ಬಳಿಕ ಸ್ವಗೃಹ ಕೋಟೆಯಲ್ಲಿ ಅಂತಿಮ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಸೋಮವಾರ ಬೆಳಿಗ್ಗೆ ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಆರ್ಲಪದವಿಗೆ ತರಲಾಯಿತು. ಪಾಣಾಜೆ, ನಿಡ್ಪಳ್ಳಿ, ಬೆಟ್ಟಂಪಾಡಿ ಗ್ರಾಮದ ನೂರಾರು […]

ಹೆಲ್ಮೆಟ್ ಹಾಕಿದ್ದರೂ ತಲೆಗೇ ಬಲವಾದ ಪೆಟ್ಟು ಬಿದ್ದು ಮೃತ್ಯು | ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅಂತಿಮ ದರ್ಶನ Read More »

ಹೆಚ್ಚಾಗಲಿದೆ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ

ಏಪ್ರಿಲ್‌ನಿಂದ ಶೇ.5-10 ಹೆಚ್ಚಿಸಲು ನಿರ್ಧಾರ ಹೊಸದಿಲ್ಲಿ : ಹೆದ್ದಾರಿ ಟೋಲ್‌ ದರ ಏರಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈಗಾಗಲೇ ಹೆದ್ದಾರಿಗಳಲ್ಲಿ ಅಲ್ಲಲ್ಲಿ ರಸ್ತೆ ಶುಲ್ಕ ಪಾವತಿಸಿ ಹೈರಾಣಾಗಿರುವ ವಾಹನ ಸವಾರರಿಗೆ ಟೋಲ್‌ ಮತ್ತೆ ಬರೆ ಎಳೆಯಲಿದೆ.ರಾಷ್ಟ್ರಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್​ಪ್ರೆಸ್​ವೇ ಟೋಲ್​ಗಳಲ್ಲಿ ದರ ಏರಿಕೆ ಮಾಡಲು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್​ಎಚ್​ಎಐ ನಿರ್ಧರಿಸಿದೆ. ಟೋಲ್ ದರ ಶೇ. 5ರಿಂದ 10ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಮಾಸಿಕ ಟೋಲ್ ಪಾಸ್​ನ ದರವನ್ನೂ ಶೇ. 10ರಷ್ಟು ಏರಿಕೆ

ಹೆಚ್ಚಾಗಲಿದೆ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ Read More »

ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಉಜಿರೆ : ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಶನಿವಾರ ವಿವಾಹ ನೋಂದಣಿ ಕಾರ್ಯಾಲಯವನ್ನು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ.

ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ Read More »

ಕೂಲಿ ಕಾರ್ಮಿಕರಿಗೆ ಶ್ರಮಿಕ ನಿವಾಸ ನಿರ್ಮಿಸಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡಿ, ನೆರವಿಗೆ ಮುಂದಾಗಿದೆ.ಈ ವಸತಿ ಸಮುಚ್ಚಯವು ರಸ್ತೆ ಬದಿಗಳಲ್ಲಿ ಟೆಂಟ್ ಗಳನ್ನು ಹಾಕಿಕೊಂಡು ಜೀವನ ನಡೆಸುವ ಕೂಲಿ ಕಾರ್ಮಿಕರಿಗೆ ಗೌರವಯುತವಾಗಿ ಜೀವನ ನಡೆಸಲು ಸಹಾಯ ಮಾಡುತ್ತದೆ. ಕಟ್ಟಡ ಕಾಮಗಾರಿಗಳು ಪೂರ್ಣಗೊಳ್ಳುವವರೆಗೂ ಕಾರ್ಮಿಕರು ಅಲ್ಲಿ ಜೀವನ ನಡೆಸಬಹುದು ಎಂದು ಕಾರ್ಮಿಕ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಕಾರ್ಮಿಕ ಇಲಾಖೆಯು ಈಗಾಗಲೇ

ಕೂಲಿ ಕಾರ್ಮಿಕರಿಗೆ ಶ್ರಮಿಕ ನಿವಾಸ ನಿರ್ಮಿಸಲು ಮುಂದಾದ ರಾಜ್ಯ ಸರಕಾರ Read More »

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ

ಹಲವು ಮನೆಗಳಲ್ಲಿ ಶೋಧ ಕಾರ್ಯಾಚರಣೆ ಮಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಯಾಚರಣೆ ನಡೆಸಿ ಕೆಲವರನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ. ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮೋದಿಯವರ ಚುನಾವಣಾ ರ್ಯಾಲಿಯಲ್ಲಿ ಬಾಂಬ್‌ ಸ್ಫೋಟಿಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ಐಎ

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ Read More »

ಕಗ್ಗದ ಸಂದೇಶ -ನಮ್ಮ ಪ್ರಯತ್ನವಿದ್ದರೆ ಮಾತ್ರ ದೇವರೊಲುಮೆ ಸಿಗುವುದು…

ನಿನ್ನ ಹೆಗಲಿನ ಹೊರೆಯ ದೈವಭುಜಕೇರಿಸುವ|ಸನ್ನಾಹ ಸಾಗೀತೆ? ದೈವ ಒಪ್ಪಿತೆ?||ಮನ್ನಿಸಲಿ ವಿಧಿ ನಿನ್ನ ಬೇಡಿಕೆಯ, ಭಿನ್ನಿಸಲಿ|ನಿನ್ನ ಬಲವನು ಮೆರೆಸೊ-ಮಂಕುತಿಮ್ಮ||ನಾವು ಹೊತ್ತು ತಂದ ವಿಧಿಯ ಭಾರವನು ದೈವದ ಭುಜಕ್ಕೆ ಏರಿಸುವ ಪ್ರಯತ್ನ ಮಾಡಬಾರದು. ನಮ್ಮ ಈ ಬೇಡಿಕೆಯನ್ನು ದೈವ ಒಪ್ಪಲಿ ಅಥವಾ ತಿರಸ್ಕರಿಸಲಿ ಈ ಬಗ್ಗೆ ಯೋಚಿಸದೆ ದೇವರು ನಮಗೆ ಕೊಟ್ಟ ಬಲವನ್ನು ಬಳಸಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಮಾನ್ಯ ಡಿವಿಜಿಯವರು ಈ ಕಗ್ಗದಲ್ಲಿ ಹೇಳಿದ್ದಾರೆ.ಜೀವನದಲ್ಲಿ ಎಲ್ಲವೂ ವಿಧಿ ಲಿಖಿತದಂತೆ ನಡೆಯುವುದು ಎಂದು ಭಾವಿಸಿಕೊಂಡು ಕೈಕಟ್ಟಿಕೊಂಡು ಕುಳಿತುಕೊಳ್ಳಬಾರದು. ದೇವರು

ಕಗ್ಗದ ಸಂದೇಶ -ನಮ್ಮ ಪ್ರಯತ್ನವಿದ್ದರೆ ಮಾತ್ರ ದೇವರೊಲುಮೆ ಸಿಗುವುದು… Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ

ಪಡುಮಲೆ : ಪಡುಮಲೆ ಶ್ರೀ ಕೂವೆ ಶಾಸ್ತರ ವಿಷ್ಣುಮೂರ್ತಿ ದೇವಾಲಯದಲ್ಲಿ  1008 ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಮಾ.5 ರಂದು ನಡೆಯಿತು. ಪೂರ್ವಾಹ್ನ ಗಂ 5 ರಿಂದ   ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ವಾಸುದೇವ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ   ಗಣಪತಿ ಹೋಮ,ಕವಟೋದ್ಘಾಟನೆ,ಶಾಂತಿ, ಪ್ರಾಯಶ್ಚಿತ್ತ ಮತ್ತು ಶಾಂತಿ ಹೋಮ ನಡೆದು ಬಳಿಕ ಪಡುಮಲೆ ಒಡೆಯ ಶ್ರೀ ಶಾಸ್ತಾರ ವಿಷ್ಣುಮೂರ್ತಿ  ದೇವರಗೆ  ಕಲಶಾಭಿಷೇಕ  ಅವಭೃತ ಪ್ರೋಕ್ಸಣೆ ಮಹಾಪೂಜೆ ,ಮಂತ್ರಾಕ್ಷತೆ ಕಾರ್ಯಕ್ರಮ ನೆಡೆಯಿತು. .ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. 

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ Read More »

ಮುಕ್ಕೂರು ಅಂಚೆ ಕಚೇರಿ ಉಳಿಸಿಕೊಳ್ಳಲು ಪೂರ್ವಭಾವಿ ಸಭೆ

ಮುಕ್ಕೂರು: ಊರಿನ ಅಂಚೆ ಕಚೇರಿಯು ವ್ಯವಹಾರ ಕುಸಿತದಿಂದ ಬೇರೆಡೆಗೆ ಸ್ಥಳಾಂತರ ಅಥವಾ ಮುಚ್ಚುವುದನ್ನು ಯಾರಿಂದಲೂ ಒತ್ತಡ ಹೇರಿ ತಡೆಯುವುದು ಸಾಧನೆ ಅಲ್ಲ. ಅದರ ಬದಲಾಗಿ ಅಂಚೆ ಕಚೇರಿಯಲ್ಲಿ ಪ್ರತಿಯೊಬ್ಬರು ಖಾತೆ ತೆರೆದು ವ್ಯವಹಾರ ಹೆಚ್ಚಳಗೊಳಿಸಿ ಸ್ವಂತ ಶಕ್ತಿಯಿಂದ ಅಂಚೆ ಕಚೇರಿ ಶಾಶ್ವತವಾಗಿ ಉಳಿಯುವಂತೆ ಮಾಡುವುದೇ ಸಾಧನೆ ಎಂದು ಪೆರುವಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹೇಳಿದರು. ಬೆಳ್ಳಾರೆ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರು ಶಾಖಾ ಅಂಚೆ ಕಚೇರಿ ವ್ಯವಹಾರ ಕುಸಿದಿದ್ದು ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ

ಮುಕ್ಕೂರು ಅಂಚೆ ಕಚೇರಿ ಉಳಿಸಿಕೊಳ್ಳಲು ಪೂರ್ವಭಾವಿ ಸಭೆ Read More »

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ

ಪುತ್ತೂರು : ಭಾಗ್ಯಜ್ಯೋತಿ ಜ್ಞಾನವಿಕಾಸ  ಕೇಂದ್ರದ ಮಾಸಿಕ  ಸಭೆ  ಕೀರ್ತಿ ಸಂಘದ  ಸದಸ್ಯೆ ಜ್ಯೋತಿ ಅವರ  ಅಧ್ಯಕ್ಷತೆಯಲ್ಲಿ  ಕುಂಜೂರುಪಂಜ ಶ್ರೀ ಮಂಜುನಾಥ  ಸಭಾಭವನದಲ್ಲಿ ನಡೆಯಿತು,  ಸಭೆಯಲ್ಲಿ  ಮಹಿಳಾ   ಸಾಂತ್ವನ  ಕೇಂದ್ರದ  ಸಾಮಾಜಿಕ  ಕಾರ್ಯಕರ್ತೆ  ಅಶ್ವಿನಿ  ಮಹಿಳಾ  ದೌರ್ಜನ್ಯ ಮತ್ತು ಅದಕ್ಕೆ ಪರಿಹಾರ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೇವಾಪ್ರತಿನಿಧಿ ಆಶಾಲತಾ, ವರಮಹಾಲಕ್ಷ್ಮಿ ಪೂಜಾ  ಸಮಿತಿ  ಅಧ್ಯಕ್ಷೆ ವಸಂತಿ, ಸಂಯೋಜಕಿ  ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ Read More »

ಪೊಲೀಸ್ ಜೀಪ್ – ಬೈಕ್ ಡಿಕ್ಕಿ: ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಮೃತ್ಯು

ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ್ ನಾಯ್ಕ್ ಎಂದು ಗುರುತಿಸಲಾಗಿದೆ. ಪುತ್ತೂರಿಗೆ ಆಗಮಿಸುತ್ತಿದ್ದ ಪೊಲೀಸ್ ಜೀಪ್ ಹಾಗೂ ಆರ್ಲಪದವು ಕಡೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅವರು ಗಂಭೀರ ಗಾಯಗೊಂಡು, ಕೊನೆಯುಸಿರೆಳೆದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಜೀಪ್ – ಬೈಕ್ ಡಿಕ್ಕಿ: ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಮೃತ್ಯು Read More »

error: Content is protected !!
Scroll to Top