ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಅವರು ನೀಡಿರುವ ಅನುದಾನವನ್ನು ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿರುವುದೇ ತನ್ನ ಗೆಲುವಿಗೆ ಕಾರಣ ಎಂದು ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು ಪಡೆದುಕೊಂಡ ಯತೀಶ್ ದೇವ ತಿಳಿಸಿದ್ದಾರೆ. ಗಿರೀಶ್ ಗೌಡ ಅವರ ಅಕಾಲಿಕ ನಿಧನದ ಬಳಿಕ ಉಪಚುನಾವಣೆ ನಡೆದಿದ್ದು, ತನ್ನ ಗೆಲುವನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಗಿರೀಶ್ ಗೌಡ ಅವರಿಗೆ ಅರ್ಪಿಸುತ್ತೇನೆ ಎಂದಿರುವ ಯತೀಶ್ ದೇವ. ಶಾಸಕ ಸಂಜೀವ ಮಠಂದೂರು […]

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ Read More »

ಉಳ್ಳಾಲ : ಯುವಕನಿಗೆ ಚೂರಿ ಇರಿತ

ಮನೆಯಿಂದ ಹೊರಗೆ ಕರೆದು ಮರಣಾಂತಿಕ ಹಲ್ಲೆ ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ಆತನ ಮನೆಯ ಎದುರೇ ಸಂಭವಿಸಿದೆ. ಶುಕ್ರವಾರ ತಡರಾತ್ರಿ ವೇಳೆ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬವರು ಕೊಲೆಯತ್ನಕ್ಕೆ ಒಳಗಾದವರು. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಹಾಗೂ ಇನ್ನಿಬ್ಬರು ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ

ಉಳ್ಳಾಲ : ಯುವಕನಿಗೆ ಚೂರಿ ಇರಿತ Read More »

ಮಾ.5 : ವಿಹಿಂಪ, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ

ಪುತ್ತೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಯಾತ್ರೆ ಮಾ.5 ಭಾನುವಾರ ನಡೆಯಲಿದೆ. ಭಾನುವಾರ ಮಧ್ಯಾಹ್ನ 2.30 ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಸಂಘರ್ಷದಿಂದ ಹುಟ್ಟಿದ ಸಂಘಟನೆಯ ಶೌರ್ಯ ನಡಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಶೌರ್ಯ ಯಾತ್ರೆ ಆರಂಭಗೊಳ್ಳಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ. ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್‍

ಮಾ.5 : ವಿಹಿಂಪ, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ Read More »

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ

ಪುತ್ತೂರು : ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಚುನಾವಣಾ ಪೂರ್ವ ತಯಾರಿ  ಸಭೆ ಶುಕ್ರವಾರ ಟೌನ್‍ ಬ್ಯಾಂಕ್‍ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು, ಅದಕ್ಕಾಗಿ ಪಕ್ಷವನ್ನು ಮತ್ತಷ್ಟು ಕಟ್ಟುವಲ್ಲಿ ಪ್ರಯತ್ನಗಳು ಸಾಗಬೇಕು. ಇಂದು ಬಹುಮತ ಇರುವ ಮಹಿಳೆಯರು ಸಂಘಟನೆ ಮಾಡಿ ನಾಯಕತ್ವ ಬೆಳೆಸುವ ಕೆಲಸ ಕಾರ್ಯ ಆಗಬೇಕು ಎಂದ ಅವರು, ವಿಜಯ ಸಂಕಲ್ಪ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಬಿಜೆಪಿ

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ Read More »

ಮಾ.7 : ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಆರಂಭ

ಪುತ್ತೂರು : ಕರ್ನಾಟಕ ಎಸ್ ಪಿವೈಎಸ್ ಎಸ್ ವತಿಯಿಂದ ಪುತ್ತೂರು ಲಯನ್ಸ್ ಸೇವಾ ಸದನ, ಲಯನ್ಸ್ ಕ್ಲಬ್ ಸಹಯೋಗದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಮಾ.7 ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ. ಈ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯಲ್ಲಿ ಕೇಂದ್ರ ಸಮಿತಿಯಿಂದ ಶಿಕ್ಷಣ ಪಡೆದ ನುರಿತ ಶಿಕ್ಷಕಕರಿಂದ ಯೋಗಾಸನ, ಪ್ರಾಣಾಯಾಮ, ಧ್ಯಾನ, ಶರೀರ ಶುದ್ಧೀಕರಣ ಕ್ರಿಯೆ, ಅಗ್ನಿಹೋತ್ರ, ಅಕ್ಯುಪ್ರೆಶರ್ ಕ್ರಿಯೆಗಳು, ಸೂರ್ಯ

ಮಾ.7 : ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಆರಂಭ Read More »

ನಾಳೆ (ಮಾ. 4) ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಬೇಕು ಎನ್ನುವ ಉದ್ದೇಶದಿಂದ ಪುತ್ತೂರಿನ ಪ್ರೇರಣಾ ಸಂಸ್ಥೆಯಲ್ಲಿ ಮಾರ್ಚ್ 4ರಂದು ಸಂಜೆ 4 ಗಂಟೆಗೆ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ ಹಮ್ಮಿಕೊಳ್ಳಲಾಗಿದೆ. ಎನ್.ಸಿ.ಇ.ಆರ್.ಟಿ. ಕ್ಲಾಸ್, ಪ್ರಚಲಿತ ವಿದ್ಯಮಾನಗಳ ತರಗತಿಗಳು, ಆಪ್ಟಿಟ್ಯೂಡ್ ಕ್ಲಾಸ್ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಿದ್ದು, ಇಂಗ್ಲೀಷ್ ಭಾಷೆಯ ಬ್ರಿಡ್ಜ್ ಕೋರ್ಸ್ ಮತ್ತು ಬರವಣಿಗೆಯ ಕೌಶಲ್ಯದ ಬಗ್ಗೆಯೂ ಮಾಹಿತಿ ನೀಡಲಾಗುವುದು. ಪ್ರಥಮ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಥಿಗಳು

ನಾಳೆ (ಮಾ. 4) ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

ಪುತ್ತೂರು : ಶ್ರದ್ಧಾ ಕೇಂದ್ರಗಳ ಮೂಲಕ ಧರ್ಮ ರಕ್ಷಣೆಯ ಕಾರ್ಯಗಳು ಆಗುತ್ತವೆ. ದೇವಾಲಯಗಳು ಯುವ ಪೀಳಿಗೆಗೆ ಸಂಸ್ಕಾರ, ಸಂಪದ್ರಾಯಗಳನ್ನು ತಿಳಿಸಿಕೊಡುವ ಕೇಂದ್ರಗಳಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ದೇವಾಲಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಆರನೇ ದಿನ ಗುರುವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ Read More »

ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ “ಉಬಾರ್ ಚೆಸ್ ಟ್ರೋಫಿ”

ಪುತ್ತೂರು : ಉಬರ್ ಚೆಸ್ ಅಕಾಡೆಮಿ ಹಾಗೂ ತೆಂಕಿಲ ವಿವೇಕಾನಂದ  ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ ಇತ್ತೀಚೆಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ್ ನಾಯರ್ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಚೆಸ್ ಪಂದ್ಯಾಟದಲ್ಲಿ ಗ್ರಾಮೀಣ ಪ್ರತಿಭೆಗಳೂ ಬಹಳ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದು, ಅವರಿಗೂ ಅವಕಾಶ ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ. ಪಂದ್ಯಾಟದಲ್ಲಿ ಸೋತರೂ, ಗೆದ್ದರೂ ಈ ಆಟದಲ್ಲಿ ಪಾಲ್ಗೊಳ್ಳುವುದನ್ನು ಮುಂದುವರಿಸಿಕೊಂಡು ಹೋಗಿ.

ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ “ಉಬಾರ್ ಚೆಸ್ ಟ್ರೋಫಿ” Read More »

ತಾ.ಪಂ. ಮಾಜಿ ಸದಸ್ಯ, ಪಾಪೆಮಜಲು ಗರಡಿ ಮೊಕ್ತೇಸರ ಮುಕುಂದ ಶಾಂತಿವನ ನಿಧನ | ನಾಟಿವೈದ್ಯರ ಕೊನೆಯಾಸೆ ಈಡೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಒಳಮೊಗ್ರು ಗ್ರಾಮದ ಶಾಂತಿವನ ನಿವಾಸಿ ನಾಟಿವೈದ್ಯ ಎಂ.ಎಸ್. ಮುಕುಂದ ಶಾಂತಿವನ (80 ವ.) ಅವರು ಮಾ. 3ರಂದು ಸ್ವಗೃಹದಲ್ಲಿ ನಿಧನರಾದರು. ಅಸೌಖ್ಯದಿಂದ ಬಳಲುತ್ತಿದ್ದ ಅವರು, ಶಾಸಕ ಸಂಜೀವ ಮಠಂದೂರು ಅವರಲ್ಲಿ ಮಾತನಾಡಬೇಕು ಎಂಬ ತನ್ನ ಆಸೆಯನ್ನು ಮುಂದಿಟ್ಟಿದ್ದರು. ಅದರಂತೆ ಶಾಸಕ ಸಂಜೀವ ಮಠಂದೂರು ಅವರು ಮಾ. 2ರಂದು ಮುಕುಂದ ಶಾಂತಿವನ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದರು. ಮಾ. 3ರಂದು ಬೆಳಿಗ್ಗೆ ಮುಕುಂದ ಶಾಂತಿವನ ಅವರು ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು

ತಾ.ಪಂ. ಮಾಜಿ ಸದಸ್ಯ, ಪಾಪೆಮಜಲು ಗರಡಿ ಮೊಕ್ತೇಸರ ಮುಕುಂದ ಶಾಂತಿವನ ನಿಧನ | ನಾಟಿವೈದ್ಯರ ಕೊನೆಯಾಸೆ ಈಡೇರಿಸಿದ ಶಾಸಕ ಸಂಜೀವ ಮಠಂದೂರು Read More »

ಲಂಚ ಪಡೆದ ಆರೋಪ: ಗ್ರಾಮ ಆಡಳಿತಾಧಿಕಾರಿ ಮಹೇಶ್ ಎಸ್.ಗೆ ಜೈಲು, ದಂಡ

ಪುತ್ತೂರು: ಲಂಚ ಪಡೆದ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿ ಮಹೇಶ್ ಎಸ್. ಅವರಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ. ಪುತ್ತೂರು ಕಸಬಾ ಹಾಗೂ ನರಿಮೊಗರು ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿದ್ದ ಮಹೇಶ್ ಎಸ್. ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಕಟ್ಟಲು ವಿಫಲವಾದರೆ ಮತ್ತೆ 8 ತಿಂಗಳ ಜೈಲು ಶಿಕ್ಷೆಗೆ ಆದೇಶಿಸಲಾಗಿದೆ. ಅಕ್ರಮ ಸಕ್ರಮದ ಅರ್ಜಿ

ಲಂಚ ಪಡೆದ ಆರೋಪ: ಗ್ರಾಮ ಆಡಳಿತಾಧಿಕಾರಿ ಮಹೇಶ್ ಎಸ್.ಗೆ ಜೈಲು, ದಂಡ Read More »

error: Content is protected !!
Scroll to Top