ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 541ನೇ ನಮ್ಮೂರ ಕೆರೆಗೆ ಭೂಮಿ ಪೂಜೆ | ಶಾಸಕ ಸಂಜೀವ ಮಠಂದೂರು ಅವರಿಂದ ಚಾಲನೆ
ಪುತ್ತೂರು “ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಒಳಮೊಗ್ರು ಗ್ರಾಪಂ, ಅಜಲಡ್ಕಕೆರೆ ಸಮಿತಿ, ಸಹಯೋಗದಲ್ಲಿ 541ನೇ ನಮ್ಮೂರ ನಮ್ಮ ಕೆರೆ ಹೂಳೆತ್ತುವ, ಭೂಮಿ ಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮ ಅಜಲಡ್ಕಕೆರೆ ಆವರಣದಲ್ಲಿ ಗುರುವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಕೆರೆ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಬೂಡಿಯರು ವಹಿಸಿದ್ದರು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ […]










