ಅಡಿಕೆಯ ಕನಿಷ್ಠ ಆಮದು ದರ ಹೆಚ್ಚಿಸಿದ ಕೇಂದ್ರ: ಕ್ಯಾಂಪ್ಕೊ ಶ್ಲಾಘನೆ

ಪುತ್ತೂರು: ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಕೇಂದ್ರ ಸರಕಾರದ ಕ್ರಮಕ್ಕೆ ಅಡಿಕೆ ಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯ ದರ ಅನಿಶ್ಚಿತತೆಯಿಂದ ಕೂಡಿತ್ತು. ಇದರಿಂದ ರೈತರಲ್ಲಿ ಹತಾಶೆಯ ಭಾವನೆ ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ […]

ಅಡಿಕೆಯ ಕನಿಷ್ಠ ಆಮದು ದರ ಹೆಚ್ಚಿಸಿದ ಕೇಂದ್ರ: ಕ್ಯಾಂಪ್ಕೊ ಶ್ಲಾಘನೆ Read More »

ಅಫಘಾತದಲ್ಲಿ ಮೃತಪಟ್ಟ ನಿಡ್ಪಳ್ಳಿ ಗ್ರಾ.ಪಂ. ಸದಸ್ಯ ಮುರಳೀಕೃಷ್ಣ ಭಟ್ ಮೃತದೇಹದ ಮೆರವಣಿಗೆ, ಅಂತಿಮ ದರ್ಶನ | ಸಾಮಾಜಿಕ ಜಾಲತಾಣದಲ್ಲಿ ಅಗಲಿದ ಗೆಳೆಯನಿಗೆ ‘ಅಕ್ಷರ ನಮನ’

ಪುತ್ತೂರು: ಬೆಟ್ಟಂಪಾಡಿ ಮಂಡಲದ ನಿಡ್ಪಳ್ಳಿಯ ಸಕ್ರೀಯ ಬಿಜೆಪಿ ಕಾರ್ಯಕರ್ತ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳೀಕೃಷ್ಣ ಭಟ್ ಮುಂಡೂರು ಅವರ ಮೃತದೇಹದ ಅಂತಿಮಯಾತ್ರೆ ಹಾಗೂ ಅಂತಿಮ ದರ್ಶನ ಬುಧವಾರ ಮಧ್ಯಾಹ್ನ ನಡೆಯಿತು. ವಾಹನದ ಮೂಲಕ ಸಾಗಿಬಂದ ಅಂತಿಮ ಯಾತ್ರೆಯಲ್ಲಿ ಹಲವಾರು ಮಂದಿ ಜೊತೆಗೂಡಿದರು. ಬಳಿಕ ಅಂತಿಮ ದರ್ಶನವನ್ನು ವೀಕ್ಷಿಸಿದ ಮಂದಿಯ ಕಣ್ಣಾಲಿಗಳು ತುಂಬಿ ಬಂದವು. ಸಂಟ್ಯಾರಿನ ಬಳಕ್ಕದಲ್ಲಿ ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಮುರಳೀಕೃಷ್ಣ ಭಟ್ ಅವರು ಕೊನೆಯುಸಿರೆಳೆದಿದ್ದರು. ಮುರಳೀಕೃಷ್ಣ ಭಟ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ

ಅಫಘಾತದಲ್ಲಿ ಮೃತಪಟ್ಟ ನಿಡ್ಪಳ್ಳಿ ಗ್ರಾ.ಪಂ. ಸದಸ್ಯ ಮುರಳೀಕೃಷ್ಣ ಭಟ್ ಮೃತದೇಹದ ಮೆರವಣಿಗೆ, ಅಂತಿಮ ದರ್ಶನ | ಸಾಮಾಜಿಕ ಜಾಲತಾಣದಲ್ಲಿ ಅಗಲಿದ ಗೆಳೆಯನಿಗೆ ‘ಅಕ್ಷರ ನಮನ’ Read More »

ಸಂತ ಸೇವಾಲಾಲ್ ಜಯಂತ್ಯೋತ್ಸವ ಆಚರಣೆ

ಪುತ್ತೂರು: ಸಂತ ಸೇವಾಲಾಲ್ ಅವರ ಜಯಂತ್ಯುತ್ಸವ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು. ದೇಶದ ಬಂಜಾರ ಸಮುದಾಯದ ಏಕೈಕ ಸಂತ ಇವರಾಗಿದ್ದಾರೆ. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್. ದೀಪ ಪ್ರಜ್ವಲಿಸಿ, ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ತಾಲೂಕು ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಉಪಸ್ಥಿತರಿದ್ದರು. ಉಪತಹಶೀಲ್ದಾರ್ ಸುಲೋಚನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದಯಾನಂದ್ ಕಾರ್ಯಕ್ರಮ ನಿರೂಪಿಸಿದರು.

ಸಂತ ಸೇವಾಲಾಲ್ ಜಯಂತ್ಯೋತ್ಸವ ಆಚರಣೆ Read More »

ಇಂದಿನಿಂದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ.15ರಿಂದ ಫೆ.17ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ ಕ್ಷೇತ್ರವಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವರು ಅವಭೃತ ಸ್ನಾನಕ್ಕೆ ತೆರಳುವ ಸಂದರ್ಭ ವೀರಮಂಗಲ ಶ್ರೀ ವಿಷ್ಣುಮೂರ್ತಿ

ಇಂದಿನಿಂದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ Read More »

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಬೆಂಗಳೂರು : ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ರವಿ ಅವರ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು. ಪ್ರಸ್ತುತ ರಾಜ್ಯದಲ್ಲಿ 2700 ಕಟ್ಟಡ

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ Read More »

ಸವಣೂರು ಕಿನಾರ ವಾರಿಜ ಶೆಟ್ಟಿ ನಿಧನ

ಪುತ್ತೂರು: ಸವಣೂರು ಕಿನಾರ ದಿ. ಸಂಕಪ್ಪ ಶೆಟ್ಟಿಯವರ ಪತ್ನಿ ವಾರಿಜ ಶೆಟ್ಟಿ (75 ವ) ಫೆ. 15ರಂದು ಬೆಳಿಗ್ಗೆ ನಿಧನರಾದರು. ಮೃತರು ಪುತ್ರರಾದ ಪ್ರಗತಿಪರ ಕೃಷಿಕ ಸತೀಶ್ ಶೆಟ್ಟಿ ಕಿನಾರ, ಉದ್ಯಮಿ ಶಿವಪ್ರಸಾದ್ ಶೆಟ್ಟಿ ಕಿನಾರ, ಪುತ್ರಿಯರಾದ ಜಯಶ್ರೀ, ವಸಂತಿ, ಉಷಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ: ಫೆ. 15ರಂದು ಮಧ್ಯಾಹ್ನ ಗಂಟೆ 12ಕ್ಕೆ ಮೃತರ ಅಂತ್ಯಸಂಸ್ಕಾರ ಸವಣೂರಿನ ಕಿನಾರ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸವಣೂರು ಕಿನಾರ ವಾರಿಜ ಶೆಟ್ಟಿ ನಿಧನ Read More »

ಮಾ. 5: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗ ದೈವದ ಕೋಲ, ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಜಂಕ್ಷನ್ ಬಳಿಯ ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನಿಧ್ಯದಲ್ಲಿ ಮಾ. 5ರಂದು ಶ್ರೀ ರಾಜಗುಳಿಗ ದೈವದ ಕೋಲವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಫೆ. 13ರಂದು ಬಿಡುಗಡೆಗೊಳಿಸಲಾಯಿತು. ಸಂಕ್ರಮಣದ ಪ್ರಯುಕ್ತ ತಂಬಿಲ ಸೇವೆ ನಡೆದ ಬಳಿಕ ದೈವ ನರ್ತಕರಿಗೆ ವೀಳ್ಯ ನೀಡುವುದರೊಂದಿಗೆ ಶ್ರೀ ರಾಜಗುಳಿಗ ದೈವದ ಕೋಲ ಹಾಗೂ ವೈದಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಎಸ್. ಮಾಧವ ರೈ ಕುಂಬ್ರ, ನವೀನ್ ಸಾಲ್ಯಾನ್ ಕಿನ್ನಿಮಜಲು, ದೇವದಾಸ್ ಕುರಿಯ, ದಾದು

ಮಾ. 5: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗ ದೈವದ ಕೋಲ, ಆಮಂತ್ರಣ ಬಿಡುಗಡೆ Read More »

ಕರ್ನಾಟಕದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ : ಅಮಿತ್‌ ಶಾ ವಿಶ್ವಾಸ

ಮೋದಿ ನಾಯಕತ್ವ, ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಹೊಸದಿಲ್ಲಿ : ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಕರ್ನಾಟಕಕ್ಕೆ ಎರಡು ತಿಂಗಳಲ್ಲಿ ಐದು ಬಾರಿ ಹೋಗಿದ್ದೇನೆ. ಅಲ್ಲಿನ ಜನರ ನಾಡಿಮಿಡಿತ ಅರಿತಿದ್ದೇನೆ. ನರೇಂದ್ರ ಮೋದಿ ಅವರು ಜನಪ್ರಿಯತೆಯನ್ನು ಕರ್ನಾಟಕ ಕಣ್ಣಾರೆ ಕಂಡಿದೆ. ಅಲ್ಲಿ ತುಂಬ ದೊಡ್ಡ ಮಟ್ಟದ ಬಹುಮತ ಬಿಜೆಪಿಗೆ

ಕರ್ನಾಟಕದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ : ಅಮಿತ್‌ ಶಾ ವಿಶ್ವಾಸ Read More »

ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ 

ತರಾತುರಿಯಲ್ಲಿ ಟೆಂಡರ್‌ ಕರೆಯಲಾಗುತ್ತಿದೆ ಎಂದು ಆರೋಪ ಬೆಂಗಳೂರು : ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲ ಇಲಾಖೆಗಳಲ್ಲಿ ತರಾತುರಿಯಿಂದ ಟೆಂಡರ್ ಕರೆಯಲಾಗುತ್ತಿದೆ. 500 ಕೋಟಿ ರೂ. ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆರೋಪಿಸಿದ್ದಾರೆ.ಡಿಕೆಶಿ ಮನೆಯಲ್ಲಿ ಬುಧವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದು ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ. ಸರ್ಕಾರ ಇನ್ನು ಒಂದು

ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ  Read More »

ಶರವೂರು: ಮೊಟ್ಟೆ ಸಾಗಾಟದ ಟೆಂಪೋ ಪಲ್ಟಿ, ಚಾಲಕ ಗಂಭೀರ

ಪುತ್ತೂರು: ಆಲಂಗಾರು ಬಳಿಯ ಶರವೂರು ದೇವಸ್ಥಾನದ ಬಳಿಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಟೆಂಪೋವೊಂದು ಪಲ್ಟಿಯಾದ ಘಟನೆ ಫೆ. 15ರಂದು ಬೆಳಿಗ್ಗೆ ನಡೆದಿದೆ. ಆಲಂಗಾರು ಕಡೆಯಿಂದ ಶಾಂತಿಮೊಗರು ಕಡೆಗೆ ಬರುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೆಂಪೋದಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಶರವೂರು: ಮೊಟ್ಟೆ ಸಾಗಾಟದ ಟೆಂಪೋ ಪಲ್ಟಿ, ಚಾಲಕ ಗಂಭೀರ Read More »

error: Content is protected !!
Scroll to Top