ನೆಲ್ಲಿಕಟ್ಟೆ ಪಾರ್ಕ್‌ನಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಸ್ಥಳೀಯರು | ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ

ಪುತ್ತೂರು : ನಗರದ ನೆಲ್ಲಿಕಟ್ಟೆಯಲ್ಲಿರುವ ಪಾರ್ಕ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ಸ್ಥಳೀಯರು ಎಚ್ಚೆತ್ತುಕೊಂಡು ಬೆಂಕಿ ನಂದಿಸಿದ ಪರಿಣಾಮ ಸಂಭವಿಸಬಹುದಾದ ಅಪಾಯ ತಪ್ಪಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಪಾರ್ಕ್‌ನಲ್ಲಿ ಎಲೆಕ್ಟ್ರಿಕ್ ವೈರ್ ತುಂಡಾಗಿ ಬಿದ್ದದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಜಾಗೃತರಾದ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾದರು. ಬಳಿಕ ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಸಂಪೂರ್ಣ ಬೆಂಕಿ ನಂದಿಸಿದರು. ಯಾವುದೇ ನಷ್ಟವಾಗಲಿ, ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ನೆಲ್ಲಿಕಟ್ಟೆ ಪಾರ್ಕ್‌ನಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಸ್ಥಳೀಯರು | ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ Read More »

ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ತನ್ನ ಹುಟ್ಟುಹಬ್ಬ ನಿರಾಕರಿಸಿದ ವಿದ್ಯಾರ್ಥಿನಿ  | ದೇಶಪ್ರೇಮ ಮೆರೆದು ಮಾದರಿಯಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ  ತನ್ವಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿನಿ ತನ್ವಿ ವಿ. ತನ್ನ ದಿಟ್ಟ ನಿರ್ಧಾರದಿಂದಾಗಿ ಮಾದರಿ ಎನಿಸಿದ್ದಾಳೆ. ಫೆ. 14 ಆಕೆಯ ಜನ್ಮದಿನ. ಆದರೆ ನಾಲ್ಕು ವರ್ಷದ ಹಿಂದೆ ಅದೇ ದಿನದಂದು ಪುಲ್ವಾಮಾ ದಾಳಿಯಲ್ಲಿ ದೇಶದ ವೀರಯೋಧರು ಮರಣಿಸಿದ್ದು ಈಕೆಯ ಮನಸ್ಸಿನಲ್ಲಿ ಅಚ್ಚೊತ್ತಿದೆ. ಆ ಭಾವನೆ ಆಕೆ ದೊಡ್ಡವಳಾದಂತೆ ಮತ್ತಷ್ಟು ಗಾಢವಾಗಿದೆ. ಹಾಗಾಗಿ ಫೆ. 14 ರಂದು ತನಗೆ ಯಾವುದೇ ಸಂಭ್ರಮ ಇಲ್ಲ ಎಂದು ಆಕೆ

ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ತನ್ನ ಹುಟ್ಟುಹಬ್ಬ ನಿರಾಕರಿಸಿದ ವಿದ್ಯಾರ್ಥಿನಿ  | ದೇಶಪ್ರೇಮ ಮೆರೆದು ಮಾದರಿಯಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ  ತನ್ವಿ Read More »

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್

ಪುತ್ತೂರು : ಪೂರ್ವಿಕರು ಕೊಟ್ಟ ಔಷಧೀಯ ಜ್ಞಾನವನ್ನು ಇಂದು ಯುವಜನಾಂಗ ಅರಿಯಬೇಕಿದೆ. ಆಟಿ ಅಮಾವಾಸ್ಯೆಯಿಂದ ಆರಂಭಿಸಿ ಬಲೀಂದ್ರ ಪೂಜೆಯವರೆಗೆ ಬಳಸಬೇಕಾದ ಪಾಲೆಯ ಮರವನ್ನು ಮರೆತು ಇನ್ಯಾವುದೋ ಇಂಗ್ಲೀಷ್ ಔಷಧಿಯತ್ತ ನಾವು ಗಮನಹರಿಸುತ್ತಿರುವುದು ಬೇಸರದ ಸಂಗತಿ ಎಂದು ಕಾರ್ಕಳ ಕರ್ನಾಟಕ ರಾಜ್ಯ ಔಷಧೀಯ ಗಿಡಮೂಲಿಕ ಪ್ರಾಧಿಕಾರದ ಜೀವವೈವಿಧ್ಯ ಮಂಡಳಿ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಅಭಿಪ್ರಾಯಪಟ್ಟರು. ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ, ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿ?ನ (ಎಆರ್‌ಡಿಎಫ್) ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಮಂಗಳೂರು

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್ Read More »

ವಸಂತ ಲಕ್ಷ್ಮೀ ಸಚ್ಚರಿಪೇಟೆ ಸೂರ್ಡೆಲ್ ನಿಧನ

ಪೆರ್ನಾಜೆ  : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆ ನಿವಾಸಿ ನಿವೃತ್ತ ಶಿಕ್ಷಕ  ಉದಯ  ಶಂಕರ ಭಟ್ ಸೂರ್ಡೆಲ್ ಪತ್ನಿ ವಸಂತ ಲಕ್ಷ್ಮೀ (62 ವ ) ಫೆ.12 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ ಶಾರದಮ್ಮ ಪೆರ್ನಾಜೆ, ಪತಿ ಉದಯಶಂಕರ ಭಟ್ ಸೂರ್ಡೆಲ್, ಸಹೋದರರಾದ ಸತ್ಯನಾರಾಯಣ ಭಟ್ ಪಿಲ್ಯಪೆರ್ನಾಜೆ, ಕುಮಾರ್ ಪೆರ್ನಾಜೆ,  ಉಪನ್ಯಾಸಕ ಮುರ್ಡೇಶ್ವರ ಕೃಷ್ಣ ಪ್ರಸಾದ್ ಪೆರ್ನಾಜೆ., ಸಹೋದರಿಯರಾದ ಸರಸ್ವತಿ ಪ್ರಕಾಶ್ ಕೋಟೆ ಸುಳ್ಯ ,ಪಾರ್ವತಿ ಜಯರಾಮ್ ಭಟ್ ಉಳ್ಳಿಂಜ,  ಶಂಕರಿ ಬಾಲಕೃಷ್ಣ

ವಸಂತ ಲಕ್ಷ್ಮೀ ಸಚ್ಚರಿಪೇಟೆ ಸೂರ್ಡೆಲ್ ನಿಧನ Read More »

ಪುತ್ತೂರು ಬ್ಲಾಕ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರು – ಬಿ.ಎಲ್.ಎ.ಗಳ ತರಬೇತಿ ಶಿಬಿರ

ಪುತ್ತೂರು : ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಹಾಗೂ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರ – ಬಿ.ಎಲ್.ಎ. ಗಳ ತರಬೇತಿ ಶಿಬಿರ ನಗರದ ಪುರಭವನದಲ್ಲಿ ಮಂಗಳವಾರ ನಡೆಯಿತು. ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡ ತರಬೇತಿ ಶಿಬಿರವನ್ನು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ನಡೆದ ತರಬೇತಿ ಶಿಬಿರದಲ್ಲಿ ತರಬೇತುದಾರ ಎಂ.ಜಿ.ಹೆಗಡೆ ತರಬೇತು ನೀಡಿ, ಬದಲಾವಣೆ ಜಗದ ನಿಯಮವಾಗಿದ್ದು, ಸಾಮಾಜಿಕ, ರಾಜಕೀಯವಾಗಿ ಬದಲಾವಣೆಗಳು ನಡೆಯುತ್ತಾ ಇರುತ್ತವೆ. ರಾಜಕೀಯ

ಪುತ್ತೂರು ಬ್ಲಾಕ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರು – ಬಿ.ಎಲ್.ಎ.ಗಳ ತರಬೇತಿ ಶಿಬಿರ Read More »

ಪಿಎಸ್‌ಐ ನೇಮಕಾತಿ ಹಗರಣದ ರೂವಾರಿಯಿಂದ ಕಾಂಗ್ರಸ್‌ ಟಿಕೆಟ್‌ ಕೋರಿಕೆ

ಟಿಕೆಟ್‌ ಕೊಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣದ ರೂವಾರಿ ಕಾಂಗ್ರೆಸ್‌ ನಾಯಕ ರುದ್ರಗೌಡ್ ಪಾಟೀಲ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿ ಟಿಕೆಟ್ ನೀಡುವಂತೆ ಕಾಂಗ್ರೆಸ್​ಗೆ ಮನವಿ ಮಾಡಿದ್ದಾನೆ. ರುದ್ರಗೌಡ್ ಪಾಟೀಲ್​​ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಮನವಿ ಮಾಡಿದ್ದೇವೆ. ಟಿಕೆಟ್ ನೀಡದೆ ಇದ್ದರೆ ಬಂಡಾಯ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಗ್ಯಾರಂಟಿ ಎಂದು ಪಾಟೀಲನ ಸಹೋದರ ಮಹಾಂತ್ ಪಾಟೀಲ್ ಹೇಳಿದ್ದಾನೆ.ಪಿಎಸ್ಐ

ಪಿಎಸ್‌ಐ ನೇಮಕಾತಿ ಹಗರಣದ ರೂವಾರಿಯಿಂದ ಕಾಂಗ್ರಸ್‌ ಟಿಕೆಟ್‌ ಕೋರಿಕೆ Read More »

ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು : ಬೆಳ್ಳಿಪ್ಪಾಡಿ ಗ್ರಾಮದ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸುಮಾರು ಎಂಟು ಕಿ.ಮೀ. ದೂರದಲ್ಲಿರುವ ಬೆಳ್ಳಿಪ್ಪಾಡಿಯಲ್ಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಇದೀಗ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಜಿರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಗೌಡ ಪಮ್ಮನಮಜಲು, ಕೋಶಾಧಿಕಾರಿ ಚಂದ್ರ ಶೆಟ್ಟಿಗಾರ್ ಆಲಂಗೋಡಿ ಮತ್ತಿತರರು

ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ Read More »

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ

ಪುತ್ತೂರು: ಕುಂಜೂರುಪಂಜ  ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಫೆ. 15ರಂದು 20ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರಮದಾನ ಹಾಗೂ ಬಲ್ನಾಡು ಘಟಕದ ಮಾಸಿಕ ಸಭೆ ನಡೆಯಿತು. ಫೆ. 15ರಂದು ಮಂದಿರದಲ್ಲಿ ಸಾಮೂಹಿಕ  ದುರ್ಗಾ ಪೂಜೆ ಮತ್ತು ಅರ್ಧ ಏಕಾಹ ಭಜನೆ ನಡೆಯಲಿದೆ. ಮಾಸಿಕ ಸಭೆ: ಇದೇ ಸಂದರ್ಭ ಬಲ್ನಾಡು ಘಟಕದ  ಮಾಸಿಕ ಸಭೆ ನಡೆಯಿತು. ಲೆಕ್ಕಪರಿಶೋದಕಿ ಲತಾ, ವಲಯ ಮೇಲ್ವಿಚಾರಕ ಹರೀಶ್ ಮಾಹಿತಿ ನೀಡಿದರು. ಘಟಕದ ಸಂಯೋಜಕಿ ಆಶಾಲತಾ, ಪ್ರತಿನಿಧಿ ವಿನಯ, ಸದಸ್ಯರಾದ ಬಾಲಕೃಷ್ಣ, ಶಂಭು  ಪೂಜಾರಿ, ಹರಿಪ್ರಸಾದ್, ಸುನೀಲ್,

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ Read More »

ಮಾಸಾಶನದ ಪ್ರಥಮ ಕಂತು ವಿತರಣೆ

ಪುತ್ತೂರು : ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದ ಮಚ್ಚಿಮಲೆ ನಿವಾಸಿ ಅಕ್ಕಮ್ಮ ಅವರಿಗೆ ಮಾಶಾಸನದ ಪ್ರಥಮ ಕಂತನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಮಾಸಾಶನ ಪ್ರಥಮ ಕಂತು ರೂ. 750ನ್ನು ಒಕ್ಕೂಟ ಅಧ್ಯಕ್ಷ ಮಹಾಲಿಂಗ ನಾಯ್ಕ  ವಿತರಿಸಿದರು. ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ಹರೀಶ್ ಕುಲಾಲ್, ಸೇವಾಪ್ರತಿನಿಧಿ ಆಶಾಲತಾ, ದೀಪಿಕಾ, ಸುವಿಧಾ ಸಹಾಯಕಿ ಸ್ವಾತಿ, ನವದುರ್ಗ ಸಂಘದ ಸದಸ್ಯ ಹೊನ್ನಪ್ಪ ಪೂಜಾರಿ ಉಪಸ್ಥಿತರಿದ್ದರು

ಮಾಸಾಶನದ ಪ್ರಥಮ ಕಂತು ವಿತರಣೆ Read More »

ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಪತ್ನಿ ಬೆಂಗಳೂರಿಗೆ ತೆರಳಿದ ವೇಳೆ ಕೃತ್ಯ ಬೆಳಗಾವಿ : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫಿರಜಾದೆ (39) ಎಂಬವರು ನಿನ್ನೆ ರಾತ್ರಿ ಬೆಳಗಾವಿಯ ಅಜಮ್ ನಗರದ ಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಿರಜಾದೆ ಕಂದಾಯ ನಿರೀಕ್ಷಕರಾಗಿದ್ದರು. ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪಿರಜಾದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಲೀಸಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೇಷ್ಮಾ ತಾಳಿಕೋಟೆ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನ

ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ Read More »

error: Content is protected !!
Scroll to Top