ಉಡುಪಿ, ದ.ಕ. 10 ಸ್ಥಾನಗಳಲ್ಲಿ ಗೆಲುವು : ಡಿಕೆಶಿ

ಮೊಗವೀರರು, ಬಂಟರು, ಬಿಲ್ಲವರು, ಕುಲಾಲ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವರದಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಮಗೆ ತಪ್ಪು ಮಾಹಿತಿ ಬಂದಿದೆ. ನಮ್ಮ ವರದಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ ಎಂದರು.ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ […]

ಉಡುಪಿ, ದ.ಕ. 10 ಸ್ಥಾನಗಳಲ್ಲಿ ಗೆಲುವು : ಡಿಕೆಶಿ Read More »

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ

ಪುತ್ತೂರು: ಅಡಕೆಗೆ ಕೆಲವೊಂದು ಸವಾಲುಗಳಿದ್ದು, ಹಳದಿ ರೋಗ, ಎಲೆಚುಕ್ಕಿ ರೋಗ ಬಂದಿರುವುದು ಸಮಸ್ಯೆಯಾಗಿದೆ ಕಾಡಿದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಈ ಬಾರಿಯ ಬಜೆಟಿನಲ್ಲಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಭರವಸೆ ನೀಡಿದರು. ತೆಂಕಿಲ ವಿವೇಕಾನಂದ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತ 6 ಲಕ್ಷ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಯುತ್ತಿದ್ದು, ಸಮಸ್ಯೆಗಳು ಅಷ್ಟೇ ಇದೆ. ಇದನ್ನು ಹೋಗಲಾಡಿಸಲು ಸರಕಾರ

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ Read More »

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಅವರ ಭಾಗವಹಿಸುವಿಕೆಯೊಂದಿಗೆ ಇಲ್ಲಿಯ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತಾ ಶಾ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ರಾಜ್ಯವನ್ನು ಎಟಿಎಂ ಆಗಿ ಮಾಡಿ ಭ್ರಷ್ಟಾಚಾರ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಬೇಕಾ ಎಂದು ನೆರೆದಿದ್ದವರನ್ನು ಪ್ರಶ್ನಿಸಿದ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ Read More »

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ 5ನೇ ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕಾರ್ಯಕ್ರಮದ 2ನೇಯ ದಿನ “ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಸರಗೋಡು ಐಎಪ್‌ಎಆರ್ ಮತ್ತು ಸಿಪಿಸಿಆರ್‌ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ Read More »

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿದ್ದ ಅಮಿತ್ ಶಾ ಅವರು ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮುಂದಿನ ಬಾರಿಯೂ ಬಿಜೆಪಿ ಸರಕಾರವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಕಾಂತಾರ ಚಲನಚಿತ್ರವನ್ನು ನೋಡಿ ಕರಾವಳಿಯ ಸೊಗಡನ್ನು ಅರಿತಿದ್ದೇನೆ ಎಂದು ಮಾತಿಗಾರಂಭಿಸಿದ ಶಾ, ಕದ್ರಿ ಶ್ರೀ ಮಂಜುನಾಥ್ ದೇವರು, ಪುತ್ತೂರು

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ Read More »

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ

ಪುತ್ತೂರು: ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾದ ಗೃಹ ಸಚಿವ ಅಮಿತ್ ಶಾ ಅವರು ಈಶ್ವರಮಂಗಲದ ಅಮರಗಿರಿಯಿಂದ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಹನುಮಗಿರಿಯ ಧರ್ಮಶ್ರೀ ಪ್ರತಿಷ್ಠಾನದಲ್ಲಿ ಅಮರಗಿರಿಯಲ್ಲಿ ಕಾರ್ಯಕ್ರಮ ಮುಗಿಸಿ, ಪುತ್ತೂರಿನ ತೆಂಕಿಲಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕಾಫ್ಟರಿನಲ್ಲಿ ಇದೀಗ ಹೊರಟಿರುವ ಅಮಿತ್ ಶಾ ಅವರು ಕೆಲವೇ ಕ್ಷಣದಲ್ಲಿ ಮೊಟ್ಟೆತ್ತಡ್ಕ ಹೆಲಿಪ್ಯಾಡಿನಲ್ಲಿ ಇಳಿಯಲಿದ್ದಾರೆ. ಹೆಲಿಪ್ಯಾಡಿನಿಂದ ಝೀರೋ ಟ್ರಾಫಿಕಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ Read More »

ಇಂದು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಪುತ್ತೂರಿಗೆ | ಕಾರ್ಯಕ್ರಮ ಹೀಗಿದೆ

ಪುತ್ತೂರು : ಅಮಿತ್‍ ಶಾ ಪುತ್ತೂರಿಗೆ ಭೇಟಿ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಮೂರು ಹೆಲಿಪ್ಯಾಡ್‍ಗಳನ್ನು ನಿರ್ಮಿಸಲಾಗಿದೆ. ಕೇರಳದ ಗಡಿ ಭಾಗದಲ್ಲಿರುವ ಹನುಮಗಿರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅಮರಗಿರಿಯಲ್ಲಿ ಭಾರತ್‍ಮಾತಾ ಮಂದಿರವನ್ನು ಉದ್ಘಾಟಿಸುವರು. ಹೈದರಾಬಾದ್‍ನಿಂದ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದು, ಅಲ್ಲಿಂದ ಬಿಎಎಸ್‍ಎಫ್‍ ಹೆಲಿಕ್ಯಾಪ್ಟರ್‍ನಲ್ಲಿ ಬರಲಿರುವ ಅಮಿತ್‍ ಶಾ ಅವರ ಹೆಲಿಕಾಪ್ಟರ್ ಲ್ಯಾಂಡ್‍ ಆಗಲು ಈಶ್ವರಮಂಗಲದ ಗಜಾನನ ಶಾಲಾ ಮೈದಾನದಲ್ಲಿ ಹೆಲಿಪ್ಯಾಡ್‍ ನಿರ್ಮಿಸಲಾಗಿದೆ. ಹನುಮಗಿರಿ ಕಾರ್ಯಕ್ರಮ ಮುಗಿಸಿ ಹೆಲಿಕ್ಯಾಪ್ಟರ್‍ನಲ್ಲಿ ಬರಲಿರುವ ಶಾ ಅವರು

ಇಂದು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಪುತ್ತೂರಿಗೆ | ಕಾರ್ಯಕ್ರಮ ಹೀಗಿದೆ Read More »

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ

ಪುತ್ತೂರು : ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಅಮಿತ್‍ ಶಾ ಆಗಮನದ ಹಿನ್ನಲೆಯಲ್ಲಿ ಫೆ. 11ರಂದು ಪುತ್ತೂರು ನಗರದಲ್ಲಿ ವಾಹನ ಸಂಚಾರ ಬದಲಿ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 273 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ನಿಷೇಧ ಮಾಡಲಾಗಿದೆ. ಮಂಜಲ್ಪಡ್ಪು ಬೈಪಾಸ್‍ ಜಂಕ್ಷನ್‍ನಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ 2.30 ರಿಂದ ಸಂಜೆ 5.30ರವರೆಗೆ ವಾಹನ ಸಂಚಾರಕ್ಕೆ ನಿಷೇಧ. ಮಂಗಳೂರಿನಿಂದ ಮಡಿಕೇರಿಗೆ ಹೋಗುವ ವಾಹನಗಳು ಮಂಜಲ್ಪಡ್ಪು – ಬೊಳುವಾರು

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ Read More »

ಅಮಿತ್ ಶಾ ಆಗಮನಕ್ಕೆ ಬಿಗಿ ಭದ್ರತೆ ಹೀಗಿದೆ | ಪಾರ್ಕಿಂಗ್, ಊಟದ ವ್ಯವಸ್ಥೆ ಬಗ್ಗೆಯೂ ಇಲ್ಲಿದೆ ಮಾಹಿತಿ

ಪುತ್ತೂರು : ಪ್ರತಿಷ್ಠಿತ ಅಂತರಾಜ್ಯ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಹಾಗೂ ಹನುಮಗಿರಿಯಲ್ಲಿ ಅಮರಗಿರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು  ಇಂದು (ಫೆ. 11) ಪುತ್ತೂರಿಗೆ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್‍ ಶಾ ಭೇಟಿ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್‍ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‍ ನಿಯೋಜನೆ ಮಾಡಲಾಗಿದೆ. ಅಮಿತ್‍ ಶಾ ಸಹಿತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ರಾಜ್ಯದ ಹಲವು ಸಚಿವರು, ಜನಪ್ರತಿನಿಧಿಗಳು, ರಾಜಕೀಯ ನಾಯಕರುಗಳು

ಅಮಿತ್ ಶಾ ಆಗಮನಕ್ಕೆ ಬಿಗಿ ಭದ್ರತೆ ಹೀಗಿದೆ | ಪಾರ್ಕಿಂಗ್, ಊಟದ ವ್ಯವಸ್ಥೆ ಬಗ್ಗೆಯೂ ಇಲ್ಲಿದೆ ಮಾಹಿತಿ Read More »

error: Content is protected !!
Scroll to Top