ಸದಸ್ಯರ ಗಮನಕ್ಕೆ ಬಾರದೆ ಬ್ಯಾನರ್‍ ತೆಗೆಸಿದ ವಿಚಾರ : ಬೆಟ್ಟಂಪಾಡಿ ಗ್ರಾಪಂ ಸಾಮಾನ್ಯ ಸಭೆ ಕಲಾಪ ಬಿಟ್ಟು ಹೊರ ನಡೆದ ಸದಸ್ಯರು | ರದ್ದುಗೊಂಡ ಗ್ರಾಮಸಭೆ

ಪುತ್ತೂರು : ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಕಿರುವ ಬ್ಯಾನರ್ ಗಳನ್ನು ಪಂಚಾಯಿತಿ ಸದಸ್ಯರ ಗಮನಕ್ಕೆ ಬಾರದೆ ಪಿಡಿಒ ತೆಗೆಸಿದ ವಿಚಾರ ಮುಂದಿಟ್ಟುಕೊಂಡು ಸದಸ್ಯರು ಸಾಮಾನ್ಯ ಸಭೆ ಕಲಾಪ ಬಿಟ್ಟು ಹೊರ ನಡೆದ ಘಟನೆ ಶುಕ್ರವಾರ ನಡೆದ ಬೆಟ್ಟಂಪಾಡಿ ಗ್ರಾಪಂನಲ್ಲಿ ನಡೆದಿದೆ. ಪಂಚಾಯಿತಿ ಅಧ್ಯಕ್ಷೆ ಪವಿತ್ರ ಡಿ. ಅಧ್ಯಕ್ಷತೆ ಸಭೆ ಆರಂಭಗೊಂಡು ಪಿಡಿಒ ಸೌಮ್ಯ ಲೆಕ್ಕಪತ್ರ ವರದಿ ಮಂಡಿಸಲು ಆರಂಭಿಸುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಸದಸ್ಯೆ ಉಮಾವತಿ, ಬ್ಯಾನರ್‍ ತೆಗೆಯಲು ಪಂಚಾಯಿತಿಗೆ ಸುತ್ತೋಲೆ ಬಂದಿದೆಯೇ ಎಂದು ಪ್ರಶ್ನಿಸಿ ಬಂದಿದ್ದರೆ ಅದನ್ನು ಸಭೆಯ […]

ಸದಸ್ಯರ ಗಮನಕ್ಕೆ ಬಾರದೆ ಬ್ಯಾನರ್‍ ತೆಗೆಸಿದ ವಿಚಾರ : ಬೆಟ್ಟಂಪಾಡಿ ಗ್ರಾಪಂ ಸಾಮಾನ್ಯ ಸಭೆ ಕಲಾಪ ಬಿಟ್ಟು ಹೊರ ನಡೆದ ಸದಸ್ಯರು | ರದ್ದುಗೊಂಡ ಗ್ರಾಮಸಭೆ Read More »

ಫೆ.23 : ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಸಭಾಭವನ, ಅನ್ನಛತ್ರ ಲೋಕಾರ್ಪಣೆ

ಪುತ್ತೂರು : ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ನೂತನ ಸಭಾಭವನ, ಅನ್ನಛತ್ರ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ದೇವಸ್ಥಾನದ ಪ್ರತಿಷ್ಠಾ ದಿನವಾದ ಫೆ.23 ರಂದು ಲೋಕಾರ್ಪಣೆಗೊಳ್ಳಲಿದೆ. ದೇವಸ್ಥಾನದಲ್ಲಿ ಈ ಬಾರಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ ನಡೆಯಲಿದ್ದು, ಇದರ ಸವಿನೆನಪಿಗಾಗಿ ನೂತನ ಸಭಾಭವನ, ಅನ್ನಛತ್ರ ನಿರ್ಮಾಣ ಲೋಕಾರ್ಪಣೆಗೊಳ್ಳಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದ್ವಾದಶ ನಾರಿಕೇಳ ಗಣಪತಿ ಹವನ,

ಫೆ.23 : ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಸಭಾಭವನ, ಅನ್ನಛತ್ರ ಲೋಕಾರ್ಪಣೆ Read More »

ಕೀಟ ನಾಶಕ ಸೇವಿಸಿ ಆತ್ಮಹತ್ಯೆ : ಕೃಷಿಕ ಮೃತ್ಯು

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ಕೃಷಿಕರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇಡಿಯಾಪು ದಿ.ಈಶ್ವರ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುವಾರ ಸಂಜೆ ಮನೆಯಲ್ಲಿ ಕೃಷಿಗೆ ಬಲಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿಷಯ ತಿಳಿದ ಮನೆ ಮಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು

ಕೀಟ ನಾಶಕ ಸೇವಿಸಿ ಆತ್ಮಹತ್ಯೆ : ಕೃಷಿಕ ಮೃತ್ಯು Read More »

`ಡೂ ಆರ್ ಡೈ’ ಬ್ಯಾಟಲ್ ಘೋಷಣೆ ಮಾಡಿದ ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಹಲವು ಬಾರಿ ಕಾಂಗ್ರೆಸ್‌ನಿAದ ಟಿಕೇಟ್ ವಂಚಿತರಾದ ಕಾವು ಹೇಮನಾಥ ಶೆಟ್ಟಿ ಅವರು, ಈ ಬಾರಿಯೂ ಶಾಸಕ ಅಭ್ಯರ್ಥಿ ಸ್ಥಾನದ ಆಕಾಂಕ್ಷಿ. ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ ಅನುಭವ ಇವರದ್ದು. ಹಾಗಿದ್ದು, ಆಡಳಿತದ ವಿಚಾರಕ್ಕೆ ಬಂದಾಗ ಮಾತ್ರ ಅವಕಾಶ ಸಿಕ್ಕಿಲ್ಲ ಎನ್ನುವುದು ಯಕ್ಷ ಪ್ರಶ್ನೆ. ಜನಸಾಮಾನ್ಯರ ಒಡನಾಟ, ಹೈಕಮಾಂಡ್ ಲೀಡರ್‌ಗಳ ಸ್ನೇಹ ಎಲ್ಲವೂ ಇದ್ದರೂ ಅವಕಾಶ ಮಾತ್ರ ಇನ್ನೂ ಅರಸಿ ಬಂದಿಲ್ಲ. ಆದ್ದರಿಂದ ಹೇಮನಾಥ ಶೆಟ್ಟಿ ಅವರು ಈ ಬಾರಿ `ಡೂ ಆರ್ ಡೈ’ ಬ್ಯಾಟಲ್

`ಡೂ ಆರ್ ಡೈ’ ಬ್ಯಾಟಲ್ ಘೋಷಣೆ ಮಾಡಿದ ಕಾವು ಹೇಮನಾಥ ಶೆಟ್ಟಿ Read More »

ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ

ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘ ಅಗ್ರಹ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಎರಡು ಕ್ಷೇತ್ರಗಳಲ್ಲಿ ಸಾಧ್ಯವಾಗದಿದ್ದರೆ ಕನಿಷ್ಠ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆ ಅವಕಾಶ ನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಗೌಡ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ಮಂಗಳೂರು ಪ್ರೆಸ್ಕ್ಲಬ್ನಲ್ಲಿ

ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ Read More »

2023-24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್

ಬೆಂಗಳೂರು : 2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಯಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುವೆಂಪು ಕವನದ ಮೂಲಕ ಬಜೆಟ್‌ ಮಂಡನೆ ಪ್ರಾರಂಭಿಸಿದರು. 25 ವರ್ಷಗಳ ದೂರದೃಷ್ಟಿಯ ಬಜೆಟ್‌ ಎಂದು ಸಿಎಂ ಹೇಳಿಕೆ ನೀಡಿದ್ದು, ಆದ್ಯತಾ ವಲಯಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಕರ್ನಾಟಕ ಬಜೆಟ್‌ನ ಹೈಲೈಟ್ಸ್ ಇಂತಿದೆ:

2023-24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ Read More »

ಫೆ.25 ರಿಂದ ಮಾ.5 ರ ವರೆಗೆ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪಡುಮಲೆ : ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರು ಹಾಗೂ ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ.25 ರಿಂದ ಮಾ.6 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ಕುರಿತು ಜೀಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು ಅವರು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿ, ಸುಮಾರು 5 ಕೋಟಿಗೂ ಮಿಕ್ಕಿ

ಫೆ.25 ರಿಂದ ಮಾ.5 ರ ವರೆಗೆ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಪುತ್ತೂರು ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು : ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ ಅಂಗನವಾಡಿ ಕಾರ್ತಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ – 6  ಹಾಗೂ ಸಹಾಯಕಿ – 9 ಹುದ್ದೆಗಳು ಖಾಲಿಯಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದರ್ಬೆ ಸ್ತ್ರೀಶಕ್ತಿ ಭವನದ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾ.17 ಆಗಿರುತ್ತದೆ. ಪಡ್ನೂರು ಗ್ರಾಮದ ಪಡ್ನೂರು, ಆರ್ಯಾಪು ಗ್ರಾಮದ ಕುಂಜೂರುಪಂಜ, ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ, ಗಾಳಿಮುಖ, ಪಟ್ಟಣ ಪಂಚಾಯತ್ ಅಡ್ಡಗದ್ದೆ

ಪುತ್ತೂರು ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ನಾಳೆ (ಫೆ.18) : ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಫೆ.18 ಶನಿವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಭಜನಾ ತಂಡಗಳಿಂದ ಸಂಜೆ 6 ಕ್ಕೆ ಕುಣಿತ ಭಜನೆ,  ಮಹಾಪೂಜೆ  ಮತ್ತು ರಾತ್ರಿ 9ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 12 ಕ್ಕೆ ಮಹಾಶಿವರಾತ್ರಿಯ ವಿಶೇಷ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಫೆ.18) : ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ

ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ ಗುರುವಾರ ಸಂಜೆ ಬಂಗಾರಡ್ಕ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್‍ ರಾಧಾಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೀರ್ಣೋದ್ಧಾರದ ಕುರಿತು ಚರ್ಚಿಸಿ ಸಾರ್ವಜನಿಕರ ಸಹಕಾರ ಕೋರಲಾಯಿತು. ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್‍ ಆರ್ಯಾಪು, ರಾಮಕೃಷ್ಣ ಭಟ್‍ ಬಂಗಾರಡ್ಕ, ವಿರೂಪಾಕ್ಷ ಭಟ್ ಮಚ್ಚಿಮಲೆ, ಪ್ರದೀಪ್ ಕೃಷ್ಣ ಭಟ್ ಬಂಗಾರಡ್ಕ, ಗ್ರಾಮಸ್ಥರು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ Read More »

error: Content is protected !!
Scroll to Top