ಕಗ್ಗದ ಸಂದೇಶ- ನಡೆ ನುಡಿ ಎಂದೆಂದೂ ಸತ್ಯವಾಗಿರಲಿ…

ಸತ್ಯವಂತನನರಸಲೆನುತ ಪೇಟೆಗಳೊಳಗೆ|ಹಟ್ಟಹಗಲೊಳೆ ದೀವಿಗೆಯ ಹಿಡಿದು ನಡೆದು||ಕೆಟ್ಟುದೀ ಜಗವೆಂದು ತೊಟ್ಟಿಯೊಳೆ ವಾಸಿಸಿದನು|ತಾತ್ವಿಕ ಡಯೋಜೆನಿಸ್ – ಮಂಕುತಿಮ್ಮ|| ಸುಮಾರು ಎರಡೂವರೆ ಸಾವಿರ ವರ್ಷುಗಳ ಹಿಂದೆ ಗ್ರೀಕ್ ದೇಶದಲ್ಲಿ ಜನಸಿದ ಡಯೋಜನಿಸ್ ಎಂಬ ತತ್ತ್ವಜ್ಞಾನಿ ಸತ್ಯವಂತರು ಯಾರಾದರೂ ಇದ್ದಾರೆಯೆ ಎಂದು ನೋಡಲು ಪೇಟೆಯಲ್ಲಿ ನಡುಹಗಲಿನಲ್ಲಿಯೇ ದೀಪವನ್ನು ಹಿಡಿದುಕೊಂಡು ನಡೆದು ನೋಡಿ ಕೊನೆಗೆ ಯಾರೂ ಸಿಗದಿದ್ದಾಗ ಈ ಜಗತ್ತು ಕೆಟ್ಟು ಹೋಗಿದೆ ಎಂದು ಮನೆಯಲ್ಲಿಯೆ ಒಂದು ತೊಟ್ಟಿಯನ್ನು ನಿರ್ಮಿಸಿಕೊಂಡು ವಾಸಿಸಿದನು ಎಂದು ಮಾನ್ಯ ಡಿವಿಜಿಯವರು ಜಗತ್ತಿನ ವಾಸ್ತವ ಸಂಗತಿಯನ್ನು ವಿಡಂಬನಾತ್ಮಕವಾಗಿ ಈ ಮುಕ್ತಕದಲ್ಲಿ […]

ಕಗ್ಗದ ಸಂದೇಶ- ನಡೆ ನುಡಿ ಎಂದೆಂದೂ ಸತ್ಯವಾಗಿರಲಿ… Read More »

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಧರ್ಮದ ಶಕ್ತಿಯನ್ನು ಅನಾವರಣ ಮಾಡಿ, ಮಾದರಿ ಸಮಾರಂಭ ಎಂಬ ಪ್ರಶಂಸೆಗೆ ಪಾತ್ರವಾಗಿದೆ. ಎಲ್ಲಾ ಪಕ್ಷ ಮುಖಂಡರೂ ಭಾಗವಹಿಸಿದ್ದು ಪಕ್ಷಾತೀತ ಎಂದು ಸಾಬೀತಾದರೆ, ಎಲ್ಲಾ ಸಮುದಾಯದವರು ಭಾಗವಹಿಸುವ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನ ಇಡೀ ಸಮಾಜಕ್ಕೆ ಮಾರ್ಗದರ್ಶಕ ಎನ್ನುವುದನ್ನು ರುಜುವಾತು ಪಡಿಸಿತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸಿ, ಸಂದೇಶ ರವಾನೆ ಆಗುತ್ತಿತ್ತು. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ Read More »

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಗುರುವಂದನೆ, ತುಲಾಭಾರ ಸಮಾರಂಭ ವೈಭವದಿಂದ ಜರಗಿತು. ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯತಿವರೇಣ್ಯರ ಉಪಸ್ಥಿತಿಯಲ್ಲಿ ನಡೆದ ಸಮಾರಂಭಕ್ಕೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು. ರಾಜಕೀಯ ನಾಯಕರ ಸಹಿತ, ಅನೇಕ ಗಣ್ಯರು ಆಗಮಿಸಿ ಗುರುಗಳ ಆಶೀರ್ವಾದ ಸ್ವೀಕರಿಸಿದರು. ಬೆಳಿಗ್ಗೆ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ದರ್ಬೆಯಿಂದ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀಗಳ ಉಪಸ್ಥಿತಿಯಲ್ಲಿ ಗಣ್ಯರು ಚೆಂಡೆ,

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ Read More »

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಮೊದಲು ವೈಭವದ ಶೋಭಾಯಾತ್ರೆ ನಡೆಯಿತು. ದರ್ಬೆ ವೃತ್ತದಿಂದ ಹೊರಟ ಶೋಭಾಯಾತ್ರೆ ಪುತ್ತೂರು ಪೇಟೆ ಮೂಲಕ ಸಾಗಿ ಸಭಾಂಗಣದ ಬಳಿ ಸಮಾಪನಗೊಂಡಿತು. ಮುಂಭಾಗದಿಂದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುತ್ಥಳಿ ಸಾಗಿದರೆ, ಅದನ್ನು ಅನುಸರಿಸಿ ಹಾಗೂ ಚೆಂಡೆ, ಕೊಂಬು ವಾದ್ಯಗಳ ಸ್ವರದೊಂದಿಗೆ ಸ್ವಾಮೀಜಿಗಳು, ಪ್ರಮುಖರು ಸಾಗಿದರು. ಇದರ ಹಿಂದೆ ಸಾಗಿ ಬಂದ ಟ್ಯಾಬ್ಲೋಗಳು ಆಕರ್ಷಕವಾಗಿತ್ತು.

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ Read More »

ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತದ ಭವಿಷ್ಯ

ಬಿಜೆಪಿಯಲ್ಲಿ ಹೆಚ್ಚಿದ ತಳಮಳ; ಕರಾವಳಿಯಲ್ಲಿ ಕೇಸರಿ ಪ್ರಾಬಲ್ಯ ಅಬಾಧಿತ ಬೆಂಗಳೂರು : ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಂತಯೇ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ, ಪಾದಯಾತ್ರೆ, ರಥ ಯಾತ್ರೆ, ಬಸ್‌ ಯಾತ್ರೆ, ಮನೆಮನೆಗೆ ಭೇಟಿ, ಬೂತ್‌ ಮಟ್ಟದಲ್ಲಿ ಸಭೆ, ಘಟಾನುಘಟಿ ನಾಯಕ ಭೇಟಿ ಮಯಂತಾದ ಚಟುವಟಿಕಗಳು ಬಿರುವಿಸಿನಿಂದ ನಡೆಸುತ್ತಿವೆ. ಈ ನಡುವೆ ಖಾಸಗಿ ಸಂಸ್ತೆಯೊಂ<ದು ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯೊಂದು ಕೆಲವೊಂದು ಅಚ್ಚರಿಯ ಅಂಶಗಳನ್ನು ಒಳಗೊಂಡಿದೆ.ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸರಳ ಬಹುಮತದ ಸನಿಹದಲ್ಲಿರುತ್ತದೆ ಎಂದು ಭವಿಷ್ಯ

ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತದ ಭವಿಷ್ಯ Read More »

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ

ಪುತ್ತೂರು: ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜ. 22ರಂದು ಬೆಳಿಗ್ಗೆ ಉಪ್ಪಿನಂಗಡಿಯ ಪೆರಿಯಡ್ಕ ಬಿಜಿಎಸ್ ಶಾಲಾ ಆವರಣದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಮೀನುಗಾರಿಕಾ ಇಲಾಖೆಯ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ Read More »

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ

ಪುತ್ತೂರು: ಸರಕಾರಿ ಕಾನೂನು ಮಹಾವಿದ್ಯಾಲಯದಲ್ಲಿ ಜ. 21ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳಾ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ತಂಡ ಭಾಗವಹಿಸಿದ್ದು, ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಜೊತೆಗೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆರು ವಿದ್ಯಾರ್ಥಿಗಳು ಮುಂದೆ ನಡೆಯಲಿರುವ ಅಖಿಲ ಭಾರತೀಯ ದಕ್ಷಿಣ ಪ್ರಾಂತ ಅಂತರ್ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ Read More »

ಮಕ್ಕಳಿಗೆ ಕಾಂಡೋಮ್‌ ಮಾರಿದರೆ ಕಾನೂನು ಕ್ರಮ

ರಾಜ್ಯ ಔಷಧ ನಿಯಂತ್ರಣ ಇಲಾಖೆ ಸೂಚನೆ ಬೆಂಗಳೂರು : ಶಾಲಾ ಮಕ್ಕಳ ಬ್ಯಾಗುಗಳಲ್ಲಿ ಕೆಲ ಸಮಯದ ಹಿಂದೆ ಕಾಂಡೋಮ್‌, ಗರ್ಭ ನಿರೋಧಕ ಗುಳಿಗೆಯಂಥ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೆಡಿಕಲ್‌ ಶಾಪ್‌ಗಳು ಮಕ್ಕಳಿಗೆ ಕಾಂಡೋಮ್‌ ಮತ್ತು ಗರ್ಭ ನಿರೋಧಕಗಳನ್ನು ಮಾರುವುದಿಲ್ಲ ಎಂಬ ಫಲಕ ಹಾಕಲು ರಾಜ್ಯ ಔಷಧ ನಿಯಂತ್ರಣ ಇಲಾಖೆ ಸೂಚನೆ ನೀಡಿದೆ.ಕಾಂಡೋಮ್‌ ಮತ್ತು ಗರ್ಭನಿರೋಧಕ ಮಾತ್ರೆ ಕುರಿತು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಮಟ್ಟದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ರಾಜ್ಯ ಔಷಧ

ಮಕ್ಕಳಿಗೆ ಕಾಂಡೋಮ್‌ ಮಾರಿದರೆ ಕಾನೂನು ಕ್ರಮ Read More »

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ

ಪ್ರಧಾನಿ ಮೋದಿಯನ್ನು ಕೀಳಾಗಿ ಬಿಂಬಿಸಲು ತಯಾರಿಸಿದ ಡಾಕ್ಯುಮೆಂಟರಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ತಯಾರಿಸಿದ ಆಕ್ಷೇಪಾರ್ಹ ಸಾಕ್ಷ್ಯಚಿತ್ರಕ್ಕೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್‌ಗಳಿಗೆ ನಿರ್ಬಂಧ ಹೇರಿದೆ.ಗುಜರಾತ್ ಗಲಭೆ ಕುರಿತು ವಿಮರ್ಶಾತ್ಮಕ ಸಾಕ್ಷ್ಯಚಿತ್ರ ಕುರಿತಾದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಶನಿವಾರ ನಿರ್ಬಂಧಿಸಿದ್ದು, 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಆದೇಶಿಸಿದೆ.2002ರ ಗುಜರಾತ್

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ Read More »

ಭಾರತೀಯ ಬ್ರಾಂಡ್ ಆಯ್ಕೆ ಮಾಡಿ, ದುಡ್ಡನ್ನು ಭಾರತದಲ್ಲಿಯೇ ಉಳಿಸಿ

ಪೆಪ್ಸಿ, ಕೋಕ್ ಬೇಡ ಎಳನೀರು, ಮಜ್ಜಿಗೆ ಕುಡಿಯಿರಿ! ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಗಾಂಧೀಜಿಯವರು ಆರಂಭ ಮಾಡಿದ ಬಹಳ ದೊಡ್ಡ ಅಭಿಯಾನ ಅಂದರೆ ಸ್ವದೇಶಿ ಅಭಿಯಾನ. ಭಾರತದ್ದೇ ಉತ್ಪನ್ನಗಳನ್ನು ಭಾರತದಲ್ಲಿ ಬಳಕೆ ಮಾಡಿದರೆ ಭಾರತದ ದುಡ್ಡನ್ನು ಭಾರತದಲ್ಲಿ ಉಳಿಸಬಹುದು ಎನ್ನುವುದು ಅವರ ದೊಡ್ಡ ಆಶಯವಾಗಿತ್ತು.ಅದಕ್ಕೆ ಪೂರಕವಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಟ್ಟೆಗಳನ್ನು ಅವರು ಬೀದಿಗೆ ತಂದು ಕಾರ್ಯಕರ್ತರ ಜತೆಯಲ್ಲಿ ಸುಡುವ ಕೆಲಸ ಮಾಡಿದರು. ಅದಕ್ಕೆ ಪರ್ಯಾಯವಾಗಿ ಭಾರತದ್ದೇ ಆದ ಖಾದಿಯನ್ನು ಅವರು ಜನಪ್ರಿಯ ಮಾಡಿದರು. ತಾವೇ ತಕಲಿಯಿಂದ

ಭಾರತೀಯ ಬ್ರಾಂಡ್ ಆಯ್ಕೆ ಮಾಡಿ, ದುಡ್ಡನ್ನು ಭಾರತದಲ್ಲಿಯೇ ಉಳಿಸಿ Read More »

error: Content is protected !!
Scroll to Top