ಹೊಸ ವರ್ಷ ಮತ್ತು ಭಾರತ

2022 ಅಂತ್ಯವಾಗುತ್ತಿದೆ. 2023 ಕಾಲಿಡಲು ಕ್ಷಣಗಣನೆ ಶುರುವಾಗಿದೆ. ಕೊರೋನಾದ ಭಯವನ್ನು ಒಳಗೊಳಗೇ ಅದುಮಿಕೊಂಡು, ಕ್ಯಾಲೆಂಡರ್ ಬದಲಿಸಲು ಸಿದ್ಧರಾಗಿದ್ದೇವೆ. ಇದು ಸಂಭ್ರಮಿಸುವ ಸಮಯ ಅಲ್ಲದೇ ಇದ್ದರೂ, ವಿಶ್ವಾದ್ಯಂತ ಹೊಸ ವರ್ಷವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲು ಸಜ್ಜಾಗಿದ್ದೇವೆ. ವಿಶ್ವಾದ್ಯಂತ ಏನೇ ನಡೆಯಲಿ, ಭಾರತದ ಸ್ಥಿತಿಗತಿ ಮಾತ್ರ ಭಿನ್ನ. ಇಲ್ಲಿನ ಮಣ್ಣಿನ ಗುಣವೋ ಏನೋ, ಭಾರತದಲ್ಲಿ ಹೊಸ ವರ್ಷಾಚರಣೆಗೆ ತನ್ನದೇ ಆದ ಅರ್ಥವಿದೆ. ಹೊಸ ವರ್ಷ ಎಂದರೆ ಹೊಸತನ. ಮನುಷ್ಯರಿಗೆ ಪ್ರತಿದಿನವೂ ಹೊಸತನವೇ. ಆದರೆ ಪ್ರಕೃತಿಗೆ… ಮನುಷ್ಯನ ದಿನವೊಂದರಲ್ಲಿ ಆಗುವ ಬದಲಾವಣೆಗಳು, ಪ್ರಕೃತಿಯಲ್ಲಿ […]

ಹೊಸ ವರ್ಷ ಮತ್ತು ಭಾರತ Read More »

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ

ಪುತ್ತೂರು: ಭಾರತ್ ಜೋಡೋ ಯಾತ್ರೆಯನ್ನು ತಡೆಯುವ ಉದ್ದೇಶದಿಂದ ರಾಹುಲ್ ಗಾಂಧಿಯವರಿಗೆ ಕೇಂದ್ರ ಸರಕಾರ ಪತ್ರ ಬರೆಯುತ್ತದೆ. ಆದರೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವಾಗ ಇದಾವುದೇ ನಿಯಮಾವಳಿ ಅನ್ವಯವಾಗುವುದಿಲ್ಲವೇ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಪ್ರಶ್ನಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಮುಂದುವರಿಯುತ್ತಿದ್ದಂತೆ ಕೇಂದ್ರ ಸಚಿವರಾದ ಮನ್ಸೂರ್ ಮಾಂಡವಿಯಾ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುತ್ತಾರೆ. ನಿಮ್ಮ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಲ್ಲ ಎಂದು ಆರೋಪಿಸುತ್ತಾರೆ. ಅಂದರೆ ಇದು ಯಾತ್ರೆಯನ್ನು

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ Read More »

ಜ. 7ರಂದು ಪಾಂಗಳಾಯಿ ನೇಮೋತ್ಸವ

ಪುತ್ತೂರು: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ನೇತೃತ್ವದಲ್ಲಿ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ಜ. 7ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ತಾರನಾಥ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ನಡೆಯಲಿದೆ. ದೈವಸ್ಥಾನದಲ್ಲಿ ಶ್ರೀ ಅರಸು ಮುಂಡ್ಯತ್ತಾಯ,

ಜ. 7ರಂದು ಪಾಂಗಳಾಯಿ ನೇಮೋತ್ಸವ Read More »

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಜ್ಞಾನ ರಶ್ಮಿ ಕಾರ್ಯಕ್ರಮ ಡಿ. 31ರಂದು ವಿದ್ಯಾಚೇತನ ಅಡಿಟೋರಿಯಂನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿಜ್ಞಾನ ಪ್ರಯೋಗದ ಆಧಾರದಲ್ಲಿ ಬೆಳೆದು ಬಂದಿದೆ. ಆದ್ದರಿಂದ ಪ್ರಾಯೋಗಿಕ ಅಭ್ಯಾಸ ಮಾಡಿದರೆ ಮಾತ್ರ ವಿಜ್ಞಾನದಲ್ಲಿ ಆಸಕ್ತಿ ಬೆಳೆಯುತ್ತದೆ ಎಂದರು. ದೋಲ್ಪಾಡಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಶಿಧರ ಪಿ. ಮಾತನಾಡಿ, ವಿಶ್ವ ಬಹಳಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದ್ದರಿಂದ ಆಧುನಿಕತೆಯಲ್ಲಿ ನಮ್ಮ ಜೀವನಕ್ಕೆ ವಿಜ್ಞಾನ ಬಹು ಅಗತ್ಯ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ Read More »

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಮೆಗಾ ಡೈರಿ ಉದ್ಘಾಟಿಸಿದ ನಿರ್ಮಲಾನಂದ ಶ್ರೀ | ಅಮಿತಾ ಶಾ, ದೇವೇಗೌಡ ಭಾಗಿ

ಬೆಂಗಳೂರು: ಮಂಡ್ಯದ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ವತಿಯಿಂದ ನೂತನವಾಗಿ ನಿರ್ಮಿಸಿರುವ ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಆಶೀರ್ವಚನ ನೀಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಪುಟ್ಟರಾಜು,

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಮೆಗಾ ಡೈರಿ ಉದ್ಘಾಟಿಸಿದ ನಿರ್ಮಲಾನಂದ ಶ್ರೀ | ಅಮಿತಾ ಶಾ, ದೇವೇಗೌಡ ಭಾಗಿ Read More »

ಬಿಜೆಪಿಗೆ 351.50 ಕೋ.ರೂ. ದೇಣಿಗೆ

ಒಂದು ವರ್ಷದಲ್ಲಿ ಒಟ್ಟು ದೇಣಿಗೆಯ ಶೇ.72.17 ಬಿಜೆಪಿಗೆ ಹೊಸದಿಲ್ಲಿ : ಬಿಜೆಪಿ ಈ ವರ್ಷ ಬಿಜೆಪಿಯು ಚುನಾವಣಾ ಟ್ರಸ್ಟ್‌ಗಳಿಂದ 351.50 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಇದು ರಾಜಕೀಯ ಪಕ್ಷಗಳಿಗೆ ಸಂದಾಯವಾದ ಒಟ್ಟು ದೇಣಿಗೆಯ ಶೇ.72.17 ಆಗುತ್ತದೆ. ಬಿಜೆಪಿ 2021-22ನೇ ಸಾಲಿನಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ಅತಿ ಹೆಚ್ಚು ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ತಿಳಿಸಿದೆ. ಕೆಲ ಹೊಸ ಪಕ್ಷಗಳಿಗೆ ಹೋಲಿಕೆ ಮಾಡಿದರೆ, ದೇಶದ ಹಳೆ ಪಕ್ಷವಾದ ಕಾಂಗ್ರೆಸ್‌ ಅತಿ ಕಡಿಮೆ

ಬಿಜೆಪಿಗೆ 351.50 ಕೋ.ರೂ. ದೇಣಿಗೆ Read More »

2024ರಲ್ಲೂ ರಾಹುಲ್‌ ಗಾಂಧಿಯೇ ಪ್ರತಿಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ

ಹಿರಿಯ ನಾಯಕ ಕಮಲನಾಥ್‌ ಘೋಷಣೆ ಹೊಸದಿಲ್ಲಿ : 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಹೇಳಿದ್ದಾರೆ. ದೇಶಾದ್ಯಂತ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ಕಮಲನಾಥ್ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ್ದಾರೆ. ರಾಹುಲ್ ಗಾಂಧಿ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಅವರು ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗಿರುವುದಿಲ್ಲ.

2024ರಲ್ಲೂ ರಾಹುಲ್‌ ಗಾಂಧಿಯೇ ಪ್ರತಿಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ Read More »

ರಿಷಭ್‌ ಪಂತ್‌ ಚಿಕಿತ್ಸೆ ಹೊಣೆ ಬಿಸಿಸಿಯದ್ದು

ತಲೆಗೆ ಗಾಯ, ಕಾಲು, ಬೆನ್ನುಮೂಳೆ ಮುರಿತ ಮುಂಬಯಿ : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಸ್ಥಿತಿಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಂತೆಯೇ ಪಂತ್ ಆರೋಗ್ಯ ಕುರಿತು ಬಿಸಿಸಿಐ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ರಿಷಬ್ ಪಂತ್ ಉತ್ತರಖಂಡದ ರೂರ್ಕಿ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಸದ್ಯ ಪಂತ್ ಆರೋಗ್ಯ ಸ್ಥಿರವಾಗಿದೆ. ಗಾಯದ ಪ್ರಮಾಣ ಹೆಚ್ಚಿದೆ. ಇದೀಗ ರಿಷಬ್ ಪಂತ್ ಅವರನ್ನು ಡೆಹ್ರಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಂತ್ ಕುಟುಂಬದ

ರಿಷಭ್‌ ಪಂತ್‌ ಚಿಕಿತ್ಸೆ ಹೊಣೆ ಬಿಸಿಸಿಯದ್ದು Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿಡಿ. 31ರಿಂದ ಜ. 7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮಾಚಿಲ ಶ್ರೀ ಉಳ್ಳಾಕ್ಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಲಿದೆ. 31ರಂದು ಬೆಳಿಗ್ಗೆ 8ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತರುವುದು, 8:30ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ಹೊರಕಾಣಿಕೆ ತರಲಾಗುವುದು. 9ಕ್ಕೆ ದೇವಾಲಯದಲ್ಲಿ ತೋರಣ ಮುಹೂರ್ತ, 12ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ತಂತ್ರಿ ಪರಿವಾರದವರ ಆಗಮನ, ಸ್ವಾಗತ. ರಾತ್ರಿ 7ಕ್ಕೆ ಪ್ರಾಸಾದ ಪರಿಗ್ರಹ, ಪುಣ್ಯಾಹ, ಅಂಕುರಾರ್ಪಣೆ, ವಾಸ್ತು

ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ Read More »

ಜ. 1: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ನೂತನ ಕಟ್ಟಡ, ನೂತನ ಕಚೇರಿ ಉದ್ಘಾಟನೆ

ಪುತ್ತೂರು: ಯುವ ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಕತ್ವದ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ಸ್ವಂತ ಕಟ್ಟಡದಲ್ಲಿ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ಹಾಗೂ ಸಭಾ ಕಾರ್ಯಕ್ರಮ ಜ. 1ರಂದು ಬೆಳಿಗ್ಗೆ 9 ಗಂಟೆಗೆ ನೆಲ್ಲಿಕಟ್ಟೆ ಒಕ್ಕಲಿಗ ಸೌಧದಲ್ಲಿ ನಡೆಯಲಿದೆ. ಮಂಗಳೂರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಕಚೇರಿ ಉದ್ಘಾಟಿಸಿ, ಆಶೀರ್ಚನ ನೀಡುವರು. ಪುತ್ತೂರು ಒಕ್ಕಲಿಗ ಸ್ವ-ಸಹಾಯ ಸಂಘದ ಅಧ್ಯಕ್ಷ ಡಿ.ವಿ. ಮನೋಹರ ಅಧ್ಯಕ್ಷತೆ ವಹಿಸುವರು. ಶಾಸಕ ಸಂಜೀವ

ಜ. 1: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ನೂತನ ಕಟ್ಟಡ, ನೂತನ ಕಚೇರಿ ಉದ್ಘಾಟನೆ Read More »

error: Content is protected !!
Scroll to Top