ಪೊಲೀಸರಿಗೆ ಯಾಮಾರಿಸಿ ತಪ್ಪಿಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಲಿಗೆ ಮಾಡಿದ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟಿದ್ದ ಬಳಿಕ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸೀಕ್ವೆರಾ ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯ ಮೇಲೆ 2011 – 2012 ರಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿ 2015 ರಲ್ಲಿ ಶಿಕ್ಷೆ ಪ್ರಕಟವಾಗಿತ್ತು. 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5000 ರೂ. ದಂಡವನ್ನು ವಿಧಿಸಿ ಕೋರ್ಟ್ ಆದೇಶ‌ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್‌ಗೂ […]

ಪೊಲೀಸರಿಗೆ ಯಾಮಾರಿಸಿ ತಪ್ಪಿಸಿಕೊಂಡಿದ್ದ ಆರೋಪಿಯ ಬಂಧನ Read More »

ಕಡಬ: ಬಾರ್‌ನಲ್ಲಿ ಹಲ್ಲೆ; ದೂರು ದಾಖಲು

ಕಡಬ : ಕಡಬ ಗ್ರಾಮದ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಹಲ್ಲೆ, ಜಾತಿ ನಿಂದನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಜನವರಿ 16ರಂದು ರಾತ್ರಿ ಕಡಬ ಗ್ರಾಮದ ಕಲಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದಾಗ ಪರಿಚಯಸ್ಥರಾದ ಅಜಯ್, ಬೇಬಿ ಮತ್ತು ಅನಿಲ್ ಎಂಬವರು ವಿನಾಕಾರಣ ಜಗಳ ಆರಂಭಿಸಿ ಜಾತಿನಿಂದನೆ ಮಾಡಿ, ಕೈಯಿಂದ

ಕಡಬ: ಬಾರ್‌ನಲ್ಲಿ ಹಲ್ಲೆ; ದೂರು ದಾಖಲು Read More »

ಲಕ್ಕುಂಡಿ ಉತ್ಖನನದಲ್ಲಿ ಪತ್ತೆಯಾಯಿತು ಶಿವಲಿಂಗ, ಕೊಡಲಿ, ನಾಗರಹಾವು…

ಐತಿಹಾಸಿಕ ಗ್ರಾಮವನ್ನು ಅಗೆದಷ್ಟು ಸಿಗುತ್ತಿದೆ ಅಚ್ಚರಿಯ ವಸ್ತುಗಳು ಬೆಂಗಳೂರು : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಮುಂದುವರಿದಂತೆ ಒಂದೊಂದೇ ರಹಸ್ಯ ಬಹಿರಂಗವಾಗುತ್ತಿದೆ. ಗ್ರಾಮದ ಮನೆಯೊಂದರ ಅಡಿಪಾಯ ತೆಗೆಯುವಾಗ ನಿಧಿ ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ಖನನ ಕಾರ್ಯ ಭರದಿಂದ ಸಾಗುತ್ತಿದ್ದು, ದೇವಸ್ಥಾನಗಳ ಅವಶೇಷಗಳು ಸೇರಿದಂತೆ ಶಿಲ್ಪಕಲೆಗಳ ರಾಶಿ ರಾಶಿ ಕುರುಹುಗಳು ಪತ್ತೆಯಾಗುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ನಡೆಯುತ್ತಿರುವ ವೇಳೆ ಪಕ್ಕದಲ್ಲಿದ್ದ ಖಾಸಗಿ ಸಂಸ್ಥೆಯ ಶಾಲೆಯನ್ನು ಜೆಸಿಬಿ ಮೂಲಕ

ಲಕ್ಕುಂಡಿ ಉತ್ಖನನದಲ್ಲಿ ಪತ್ತೆಯಾಯಿತು ಶಿವಲಿಂಗ, ಕೊಡಲಿ, ನಾಗರಹಾವು… Read More »

ಪುತ್ತೂರು : ವಿದ್ಯುತ್‌ ಕಂಬದ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಬಲೂನ್‌ ವಿದ್ಯುತ್‌ ತಂತಿಗೆ ತಗುಲಿದಾಗ ಸಂಭವಿಸಿದ ಅವಘಡ ಪುತ್ತೂರು : ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ

ಪುತ್ತೂರು : ವಿದ್ಯುತ್‌ ಕಂಬದ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ Read More »

ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು

ಹಳಿತಪ್ಪಿ ಇನ್ನೊಂದು ಹಳಿಗೆ ಜಿಗಿದಾಗ ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಮ್ಯಾಡ್ರಿಡ್‌ : ಸ್ಪೇನ್ ದೇಶದ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದು ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ ಎಂದು ಸ್ಪೇನ್‌ನ ಅದಿಪ್ ರೈಲು ನೆಟ್ ವಾರ್ಕ್ ಆಪರೇಟರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ

ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು Read More »

ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ

ಅಡಗಿ ಕುಳಿತ ಉಗ್ರರನ್ನು ಹೊರಗೆಳೆಯಲು ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಅಡಗಿ ಕುಳಿತಿದ್ದು, ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿವೆ. ಈ ನಡುವೆ ಯೋಧರ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದು, ಪರಿಣಾಮ 8 ಮಂದಿ ಸೈನಿಕರು

ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ Read More »

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು

ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಬಂದಿದ್ದಾಗ ಸಂಭವಿಸಿದ ದುರಂತ ಸುಬ್ರಹ್ಮಣ್ಯ : ಕುಮಾರಧಾರಾ ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸುಳ್ಯ ಕೊಲ್ಲಮೊಗ್ರು ಗ್ರಾಮದ ಜಯರಾಮ ಎಂಬವರು ದೂರು ದಾಖಲಿಸಿರುತ್ತಾರೆ. ಜ.18 ರಂದು ಸಂಜೆ ಜಯರಾಮ ಅವರ ಸಹೋದರನ ಮಗ ಸುಜಿತ್ (28) ಮತ್ತು ಗೋಪಾಲ್ ನಾಯರ್ ಎಂಬವರ ಮಗ ಹರಿಪ್ರಸಾದ್ (39) ಎಂಬವರು ಸುಬ್ರಹ್ಮಣ್ಯದ ಕುಲ್ಕುಂದ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು Read More »

ಭಾರತದಲ್ಲಿ ಮೊದಲ ಬಾರಿ ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

ಕೊಹ್ಲಿಯ ಶತಕ ವ್ಯರ್ಥ; 41 ರನ್‌ಗಳಿಂದ ಸೋತ ಟೀಂ ಇಂಡಿಯಾ ಇಂದೋರ್‌: ಇಂದೋರ್‌ನ ಹೋಳ್ಕರ್‌ ಸ್ಟೇಡಿಯಂನಲ್ಲಿ ನಡೆದ 3ನೇ ತಥಾ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌ ವಿರುದ್ಧ 41 ರನ್‌ಗಳ ಸೋಲು ಕಂಡು ಸರಣಿಯನ್ನು ಕಿವೀಸ್‌ಗೆ ಒಪ್ಪಿಸಿದೆ. ಭಾರತದ ನೆಲದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿರುವ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಇದೀಗ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಡ್ಯಾರಿಲ್ ಮಿಶೆಲ್ ಅವರ ಸತತ ಎರಡನೇ ಶತಕ ಮತ್ತು

ಭಾರತದಲ್ಲಿ ಮೊದಲ ಬಾರಿ ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌ Read More »

ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಅವಹೇಳನ ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮತ್ತು ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ನ್ಯಾಯಾಲಯದ ಆದೇಶವನ್ನು ಪದೇ ಪದೇ ಉಲ್ಲಂಘಿಸಿದ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಬಂಧನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ.ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ Read More »

ನಿಮ್ಮಂತಹ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿಯನ್ನು ನೋಡಿಲ್ಲ : ಎ.ಆರ್‌.ರೆಹಮಾನ್‌ಗೆ ಕಂಗನಾ ತಿರುಗೇಟು

ಬಾಲಿವುಡ್‌ನಲ್ಲಿ ಕೋಮುವಾದ ಇದೆ ಎಂದಿದ್ದ ಎ.ಆರ್‌.ರೆಹಮಾನ್‌ ಮುಂಬೈ: ಬಾಲಿವುಡ್‌ ಕೋಮುವಾದದತ್ತ ವಾಲಿರುವುದರಿಂದ ನನಗೆ ಎಂಟು ವರ್ಷಗಳಿಂದ ಹಿಂದಿ ಚಿತ್ರಗಳಲ್ಲಿ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ ಎಂದಿದ್ದ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರನ್ನು ನಟಿ ಹಾಗೂ ಸಂಸದೆ ಕಂಗನಾ ರಣಾವತ್‌ ಟೀಕಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಇತ್ತೀಚಿನ ಸಂದರ್ಶನವೊಂದರಲ್ಲಿ ಸಂಗೀತ ಉದ್ಯಮದ ಬದಲಾಗುತ್ತಿರುವ ಮುಖ ಮತ್ತು ಅದರೊಳಗಿನ ಧಾರ್ಮಿಕ ಪ್ರಭಾವಗಳ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಚಿತ್ರೋದ್ಯಮದಲ್ಲಿ ಕೋಮುವಾದ ಹೆಚ್ಚಾಗಿದೆ ಎಂದು ರೆಹಮಾನ್

ನಿಮ್ಮಂತಹ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿಯನ್ನು ನೋಡಿಲ್ಲ : ಎ.ಆರ್‌.ರೆಹಮಾನ್‌ಗೆ ಕಂಗನಾ ತಿರುಗೇಟು Read More »

error: Content is protected !!
Scroll to Top