ಪಠಾಣ್ ಚಿತ್ರಕ್ಕೆ ಮುಸ್ಲಿಮರಿಂದಲೂ ವಿರೋಧ

ಸಮುದಾಯಕ್ಕೆ ಅಪಚಾರ ಎಂಬ ಆರೋಪ ಭೋಪಾಲ್: ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಮುಂದಿನ ವರ್ಷ ತೆರೆಗೆ ಬರಲಿರುವ ‘ಪಠಾಣ್’ ಚಿತ್ರದ ಮಾದಕ ಹಾಡಿಗೆ ಕೇಸರಿ ಬಿಕಿನಿ ಧರಿಸಿದ ಕಾರಣಕ್ಕೆ ಹಿಂದು ಸಂಘಟನೆಗಳಿಂದ ಭಾರಿ ವಿರೋಧ ಎದುರಿಸುತ್ತಿರು ಪಠಾಣ್‌ ಚಿತ್ರಕ್ಕೆ ಈಗ ಮುಸ್ಲಿಮರಿಂದಲೂ ವಿರೋಧ ವ್ಯಕ್ತವಾಗಿದೆ.ಅಖಿಲ ಭಾರತ ಮುಸ್ಲಿಂ ತೆವ್ಹಾರ್ ಸಮಿತಿ ಎಂಬ ಮುಸ್ಲಿಮ್‌ ಸಂಘಟನೆ ಚಿತ್ರದ ಶೀರ್ಷಿಕೆ ಮತ್ತು ಅಶ್ಲೀಲ ದೃಶ್ಯಗಳನ್ನು ಬದಲಾಯಿಸಬೇಕು, ಇಲ್ಲದಿದ್ದರೆ ಚಿತ್ರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದೆ. ಕಳೆದೆರಡು ದಿನಗಳಿಂದ ದೇಶದ ನಾನಾಭಾಗಗಳಿಂದ ಅಸಂಖ್ಯಾತ ಫೋನ್ […]

ಪಠಾಣ್ ಚಿತ್ರಕ್ಕೆ ಮುಸ್ಲಿಮರಿಂದಲೂ ವಿರೋಧ Read More »

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ

ಹುಡುಗಿಯರೊಂದಿಗೆ ಅನುಚಿತ ವರ್ತನೆ ಆರೋಪಿಸಿ ವ್ಯಕ್ತಿ ಮೇಲೆ ಹಲ್ಲೆ ಮಂಗಳೂರು: ಬಸ್ಸಿನಲ್ಲಿ ಬಾಲಕಿಯರ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ಕಟ್ಟಡ ಕಾರ್ಮಿಕ ಇಸಾಕ್ (43) ಎಂಬವರು ಹಲ್ಲೆಗೊಳಗಾದವರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆಬಿ ಮೂಡ ಗ್ರಾಮದ ನಿವಾಸಿಯಾಗಿರುವ ಇಸಾಕ್ ಬುಧವಾರ ಬೆಳಗ್ಗೆ ಮೂಡುಬಿದಿರೆಯಿಂದ ಕೆಲಸಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ನನ್ನ ಹತ್ತಿರ ಬಂದು ಬಸ್‌ನಲ್ಲಿದ್ದ ಹುಡುಗಿಯರೊಂದಿಗೆ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ Read More »

ಭೀಕರ ಭೂಕುಸಿತ : 8 ಸಾವು

50ಕ್ಕೂ ಅಧಿಕ ಮಂದಿ ಅವಶೇಷದಡಿ ಕೌಲಾಲಂಪುರ್‌: ಮಲೇಷ್ಯಾದಲ್ಲಿ ಭೀಕರ ಭೂಕುಸಿತ ಸಂಭವಿಸಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಕೌಲಾಲಂಪುರದ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.ಸಾವಿನ ಸಂಖ್ಯೆ ಏರಬಹುದು ಎನ್ನಲಾಗಿದೆ.ಭೂಕುಸಿತದಿಂದ ಹಲವು ಮಂದಿ ಗಾಯಗೊಂಡಿದ್ದಾರೆ 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ.ಇದುವರೆಗೆ 31 ಮಂದಿಯನ್ನು ರಕ್ಷಿಸಲಾಗಿದೆ. ಕ್ಯಾಂಪ್‌ಸೈಟ್‌ನಿಂದ ಸುಮಾರು 30 ಮೀಟರ್ ಎತ್ತರದಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸುಮಾರು

ಭೀಕರ ಭೂಕುಸಿತ : 8 ಸಾವು Read More »

ಆರೋಗ್ಯ ಧಾರಾ – ರಸಾಯನ ಬಳಸಿ ದೀರ್ಘಾಯುಗಳಾಗಿ

ಇನ್ನು ಕೆಲವೇ ದಿನಗಳಲ್ಲಿ ನಾವು 2023ನ್ನು ಸ್ವಾಗತಿಸಲಿದ್ದೇವೆ. ಮೊನ್ನೆ ತಾನೇ 2022 ವರ್ಷ ಶುರುವಾದದ್ದು ಎಂದು ಅನ್ನಿಸುತ್ತಿಸರಬೇಕು. ಹೌದು ಒಂದು ವರ್ಷ ಬಹುಬೇಗನೆ ಕಳೆದು ಹೋಗುತ್ತದೆ. ಆದ್ದರಿಂದ ನಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡದೆ ಅಗತ್ಯವಿದ್ದವರಿಗೆ ಸಹಾಯ ಮಾಡುತ್ತಾ ನಮ್ಮ ತಪ್ಪುಗಳನ್ನು ತಿದ್ದುತ್ತ ಒಳ್ಳೆಯ ರೀತಿಯಲ್ಲಿ ಕಾಲವನ್ನು ಉಪಯೋಗಿಸೋಣ. ವರ್ಷ ಕಳೆದಂತೆ ನಮ್ಮ ಆಯಸ್ಸು ಹೆಚ್ಚುತ್ತದೆ. ವಯಸ್ಸಾದಂತೆ ನಮ್ಮ ಆರೋಗ್ಯವು ಕ್ಷೀಣಿಸುತ್ತದೆ. ನಮ್ಮ ಆಯುಸ್ಸನ್ನು ವೃದ್ಧಿಸುವ ಉಪಾಯವನ್ನು ಆಯುರ್ವೇದದಲ್ಲಿ ರಸಾಯನವೆಂದು ಕರೆಯುತ್ತಾರೆ. ಇದರ ಬಗ್ಗೆ ತಿಳಿದುಕೊಳ್ಳೋಣ.ರಸಾಯನ ಶಾಸ್ತ್ರ

ಆರೋಗ್ಯ ಧಾರಾ – ರಸಾಯನ ಬಳಸಿ ದೀರ್ಘಾಯುಗಳಾಗಿ Read More »

310 ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಾಂಶುಪಾಲರು ಗ್ರೇಡ್-1 (ಯು. ಜಿ) 310 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು 15-1-2023 ಕೊನೆಯ ದಿನಾಂಕ. ಆಸಕ್ತರು 16-12-2022ರಿಂದ ಅರ್ಜಿ ಸಲ್ಲಿಸಬಹುದು.ಪ್ರಾಧಿಕಾರದ https://cetonline.karnataka.gov.in/kea/ ಲಿಂಕ್ ಉಪಯೋಗಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇರುವುದಿಲ್ಲ. ಅರ್ಜಿ ಸಲ್ಲಿಸುವವರು 55 ವರ್ಷಗಳ ವಯೋಮಿತಿ ಮೀರಿರಬಾರದು.ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ

310 ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 1760 ಹುದ್ದೆಗಳು

ಹೊಸದಿಲ್ಲಿ : ಇಂಡಿಯನ್ ಆಯಿಲ್ ಕಾರ್ಪೊರೇಷನ್‌ ಟೆಕ್ನಿಷಿಯನ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಸೇರಿ 1760 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಕಾರ್ಪೊರೇಟ್ ವೆಬ್‌ಸೈಟ್ ಮೂಲಕ ಡಿಸೆಂಬರ್ 14, 2022 ರಿಂದ ಜನವರಿ 3, 2023ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಯು 12ನೇ ತರಗತಿ, ಐಟಿಐ, ಡಿಪ್ಲೋಮಾ, ಪದವಿ (ಸಂಬಂಧಿತ ವಿಭಾಗ) ಹೊಂದಿರಬೇಕು.ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 24 ವರ್ಷ. ವಯಸ್ಸಿನ ಸಡಿಲಿಕೆಯು ನಿಯಮಗಳ ಪ್ರಕಾರ ಅನ್ವಯಿಸುತ್ತದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 1760 ಹುದ್ದೆಗಳು Read More »

ಚುನಾವಣೆ ವಿಳಂಬ : ಸರಕಾರಕ್ಕೆ 5 ಲ.ರೂ. ದಂಡ

ಜಿಪಂ, ತಾಪಂ ಚುನಾವಣೆ ವಿಳಂಬಿಸಿದ್ದಕ್ಕೆ ತರಾಟೆ ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡಿಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.ಮೀಸಲಾತಿ ಹಾಗೂ ಡೀಲಿಮಿಟೇಷನ್‌ನ ಸಂಪೂರ್ಣ ಪ್ರಕ್ರಿಯೆಯನ್ನು ಫೆ.1, 2023ರ ವೇಳೆಗೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಗಡು ವಿಧಿಸಿದೆ. ನ್ಯಾ. ಪ್ರಸನ್ನ ಬಿ. ವರಾಳೆ, ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ

ಚುನಾವಣೆ ವಿಳಂಬ : ಸರಕಾರಕ್ಕೆ 5 ಲ.ರೂ. ದಂಡ Read More »

ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದರೆ 5 ಲ.ರೂ.

ಬಹುಮಾನ ಮೊತ್ತವನ್ನು 20 ಸಾವಿರದಿಂದ 5 ಲಕ್ಷಕ್ಕೇರಿಸಿದ ಸರಕಾರ ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.ರಾಷ್ಟ್ರೀಯ ಭದ್ರತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಘೋಷಿತ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿ ಪೊಲೀಸರಿಗೆ ನೆರವಾಗುವವರಿಗೆ 20

ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದರೆ 5 ಲ.ರೂ. Read More »

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಗ್ರರ ಟೆಕ್‌ ಪಾರ್ಕ್‌ : ಬಿಜೆಪಿ ತಿರುಗೇಟು

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಬಿಜೆಪಿ ಸಂಚು ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕೆಂಡಾಮಂಡಲ ಬೆಂಗಳೂರು: ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಬಿಜೆಪಿ ಕಿಡಿಕಿಡಿಯಾಗಿದೆ. ಚುನಾವಣೆ ಹೊಸ್ತಿಲಲ್ಲಿ ಉಗ್ರಕೃತ್ಯವನ್ನು ಸಮರ್ಥಿಸಿಕೊಂಡಿರುವ ಶಿವಕುಅಮರ್‌ ನಡೆ ಒಂದೆಡೆ ಕಾಂಗ್ರೆಸ್‌ಗೂ ಮುಜುಗರವುಂಟು ಮಾಡಿದೆ.ಮತದಾರರ ಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯದ ಬಿಜೆಪಿ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಗ್ರರ ಟೆಕ್‌ ಪಾರ್ಕ್‌ : ಬಿಜೆಪಿ ತಿರುಗೇಟು Read More »

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ

ಪುತ್ತೂರು: ಬುಧವಾರ ಒಂದೇ ದಿನ ಪುತ್ತೂರು ವಿಧಾನಸಭಾ ಕ್ಷೇತ್ರದ 21 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧೆಡೆಗಳಿಗೆ ತೆರಳಿರುವ ಶಾಸಕರು, ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ನಿರ್ಮಾಣ, ಕಾಂಕ್ರಿಟೀಕರಣ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಯೋಜನೆಗಳು, ಶಾಲೆಗೆ ಇಂಟರ್ ಲಾಕ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕರಾವಳಿ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಯೇ ದೊಡ್ಡ ತಲೆನೋವು. ಅಭಿವೃದ್ಧಿಗೊಂಡಷ್ಟು ಇನ್ನಷ್ಟು ರಸ್ತೆಗಳ ಸಮಸ್ಯೆ ಕಣ್ಣಮುಂದೆ ಧುತ್ತೆಂದು

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ Read More »

error: Content is protected !!
Scroll to Top