Bônus Pin-up No Depósito 1700 Brl

Bônus Pin-up No Depósito 1700 BrlComo o nom de famille sugere, esta ocasion destina-se exclusivamente the novos clientes. Content Dispositivos Ios Сompatíveis Softwares At The Fornecedores De Jogos Na Pin-up Brasil Melhores Programs De Apostas Outros Sites Posso Baixar O Pin-up Online Casino App Mesmo Aqui No Brasil? Aposta Múltipla Do Dia Código De Bônus […]

Bônus Pin-up No Depósito 1700 Brl</tg Read More »

ತ್ರಿವಳಿ ತಾಲೂಕು ಬೆಸೆಯುವ ಬಲೆರಾವು ಸೇತುವೆ ಸಹಿತ ಕಿಂಡಿಅಣೆಕಟ್ಟು | ಮೈಕೊಡವಿ ಮೇಲೆದ್ದ ಮೂಲೆಗುಂಪಾಗಿದ್ದ ಶಾಂತಿಗೋಡು ಗ್ರಾಮದ ಬಲೆರಾವು

ಪುತ್ತೂರು: ತೀರಾ ಕುಗ್ರಾಮವಾಗಿದ್ದ ಬಲೆರಾವು, ಆಧುನಿಕ ಜಗತ್ತಿಗೆ ತೆರೆದುಕೊಳ್ಳತೊಡಗಿದೆ. ಮುಂದೊಂದು ದಿನ ಇದು ತಾಲೂಕಿನ ಪ್ರಮುಖ ಪ್ರದೇಶವಾಗಿ ಬೆಳೆದರೂ ಅಚ್ಚರಿಪಡಬೇಕಾಗಿಲ್ಲ. ಇದಕ್ಕೆಲ್ಲಾ ಕಾರಣ, ಒಂದು ರಸ್ತೆ ಹಾಗೂ ಒಂದು ಸೇತುವೆ ಸಹಿತ ಕಿಂಡಿಅಣೆಕಟ್ಟು. ಹೌದು! ಹೆಸರಿಗೆ ತಕ್ಕಂತೆ ಬಲೆರಾವು – ಬಲ್ಲೆಗಳೇ ತುಂಬಿದ್ದ ಊರು. ತುಳುವಿನಲ್ಲಿ ಹೇಳಬೇಕೆಂದರೆ – “ರಾವು ಕುಟ್ಟುದು ಬಲ್ಲೆ ಜಿಂಜಿನ ಊರು”. ಇದೊಂದು ಸಾಲು ಸಾಕು, ಬಲೆರಾವು ಪ್ರದೇಶದ ಚಿತ್ರಣ ನಿಮ್ಮ ಮನಸ್ಸಿನಲ್ಲಿ ತುಂಬಿಕೊಳ್ಳಲು. ಸರಿಯಾದ ರಸ್ತೆಯೇ ಇರದಂತಹ ಸಣ್ಣ ಪ್ರದೇಶವಿದು. ಆದ್ದರಿಂದ

ತ್ರಿವಳಿ ತಾಲೂಕು ಬೆಸೆಯುವ ಬಲೆರಾವು ಸೇತುವೆ ಸಹಿತ ಕಿಂಡಿಅಣೆಕಟ್ಟು | ಮೈಕೊಡವಿ ಮೇಲೆದ್ದ ಮೂಲೆಗುಂಪಾಗಿದ್ದ ಶಾಂತಿಗೋಡು ಗ್ರಾಮದ ಬಲೆರಾವು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ ಕುಂಜೂರುಪಂಜ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಯೋಜನೆಯ ಮೇಲ್ವಿಚಾರಕ ಹರೀಶ್ ಕೆ. ಮಾತನಾಡಿ, ಒಗ್ಗಟ್ಟಿನಿಂದ ಮುನ್ನಡೆದರೆ ಸಂಘವನ್ನು, ಘಟಕವನ್ನು ಮಾದರಿಯಾಗಿ ರೂಪಿಸಬಹುದು. ಎಲ್ಲರ ಸಹಕಾರ ಇದ್ದರೆ ತಂಡವನ್ನು ಬಲಪಡಿಸಬಹುದು ಎಂದ ಅವರು, ಶೌರ್ಯ ತಂಡದ ಸದಸ್ಯರು ಗ್ರಾಮಕ್ಕೆ ಸಂಬಂಧಪಟ್ಟ ಬೇರೆ ಬೇರೆ ಸೇವೆಗಳಲ್ಲಿ ಭಾಗವಹಿಸಬಹುದು. ತಿಂಗಳಿಗೆ ಒಂದು ಸೇವೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದರು. ಜಾತ್ರೋತ್ಸವ ಹಾಗೂ ನೇಮೋತ್ಸವದಲ್ಲಿ ಸೇವೆ ಸಲ್ಲಿಸಿದ ಸದಸ್ಯರಿಗೆ ಅಭಿನಂದನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ Read More »

ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳಿಯೂರುಕಟ್ಟೆ ವೆಂಕಟನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಜಯರಾಂ ಪೂಜಾರಿ ಮಾತನಾಡಿ, ಮನೆ ಪರಿಸರ, ಸ್ನೇಹಿತರ ಒಡನಾಟ, ಸಾಮಾಜಿಕ ವ್ಯವಸ್ಥೆಯಿಂದ ದುಶ್ಚಟಕ್ಕೆ ಬಲಿಯಾಗುವುದು ಇದೆ. ಒಮ್ಮೆ ಮಾದಕ ವಸ್ತು, ಕುಡಿತದ ಚಟಕ್ಕೆ ಬಲಿಯಾದರೆ, ಮುಂದೆ ಬಹಳ ಕಷ್ಟ ಪಡಬೇಕಾಗುತ್ತದೆ. ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ ಆಗಿರುವುದರಿಂದ, ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನವನ್ನು ಕಂಡುಕೊಳ್ಳಿ ಎಂದರು. ಬದುಕಿನಲ್ಲಿ ತಾಳ್ಮೆ, ಎಚ್ಚರಿಕೆ,

ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ  ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ಜ. 7ರಂದು ಸಂಪನ್ನಗೊಂಡಿತು. ಡಿ 31ರಿಂದ ಮೊದಲ್ಗೊಂಡು ಜ7ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಿತು. ಜ. 7ರಂದು ಬೆಳಿಗ್ಗೆ

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ Read More »

ಹಿಂದಿ ಸಿನೆಮಾದ ಮೆಲೊಡಿ ಹಾಡುಗಳ ಸಾಮ್ರಾಟ ಒ.ಪಿ. ನಯ್ಯರ್

ಸ್ವಾಭಿಮಾನದ ಪರಾಕಾಷ್ಠೆ ಅವರ ಬದುಕು ಹಿಂದಿ ಸಿನೆಮಾದಲ್ಲಿ 1950-70ರ ದಶಕದಲ್ಲಿ ಅತ್ಯಂತ ಮಾಧುರ್ಯಪೂರ್ಣ ಹಾಡುಗಳನ್ನು ಪರಿಚಯಿಸಿದ ಕೀರ್ತಿ ಒ. ಪಿ.ನಯ್ಯರ್ ಅವರಿಗೆ ಸಲ್ಲುತ್ತದೆ.ನಯಾದೌರ್, ಸಿ ಐ. ಡಿ., ಹೌರಾ ಬ್ರಿಜ್, ಫಾಗುನ್, ಏಕ್ ಮುಸಾಫಿರ್ ಏಕ್ ಹಸೀನಾ, ಕಾಶ್ಮೀರ್ ಕೀ ಕಲಿ, ಮೇರೆ ಸನಮ್, ಸಾವನ್ ಕೀ ಘಟ, ಯೇ ರಾತ್ ಫಿರ್ ನಾ ಆಯೇಗಿ, ಪ್ರಾಣ್ ಜಾಯೆ ಪರ್ ವಚನ ನಾ ಜಾಯೇ ಮೊದಲಾದ ಆಲ್ ಟೈಮ್ ಮೆಲೊಡಿ ಸಿನೆಮಾಗಳಿಗೆ ಸಂಗೀತ ಕೊಟ್ಟು ಮಾಧುರ್ಯದ ಪರಾಕಾಷ್ಠೆಯನ್ನು

ಹಿಂದಿ ಸಿನೆಮಾದ ಮೆಲೊಡಿ ಹಾಡುಗಳ ಸಾಮ್ರಾಟ ಒ.ಪಿ. ನಯ್ಯರ್ Read More »

ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ

ಕಾಂಗ್ರೆಸ್‌ನಿಂದ ತೀವ್ರ ವಿರೋಧ ಬೆಂಗಳೂರು: ಟಿಪ್ಪು ನಿಜ ಕನಸುಗಳು ವಿವಾದಾತ್ಮಕ ನಾಟಕ ರಾಜ್ಯದಾದ್ಯಂತ ಸಂಚಲನ ಮೂಡಿಸಿರುವಾಗಲೇ ಬಿಜೆಪಿ ಇದೇ ಮಾದರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಣಿಯಲು ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಸಿದ್ಧಪಡಿಸಿದೆ. ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಯಾಗಲಿದ್ದು ಇದನ್ನು ಕಾಂಗ್ರೆಸ್‌ ತೀವ್ರರವಾಗಿ ವಿರೋಧಿಸಿ ತಡೆಯುವಂತೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಅದನ್ನು ಕೂಡಲೇ ರದ್ದು ಮಾಡಬೇಕು. ಕಾನೂನು ಸುವ್ಯವಸ್ಥೆ

ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ Read More »

ಚಳಿ ತಡೆಯಲು ಹಾಕಿದ ಹೀಟರ್‌ಗೆ ಕುಟುಂಬವೇ ಬಲಿ

ವಿಷಕಾರಿ ಅನಿಲ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು ಲಖನೌ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಿಸ್ವಾನ್ ಎಂಬಲ್ಲಿ ಚಳಿ ತಡೆಯಲು ಹಾಕಿಕೊಂಡ ಹೀಟರ್ ಒಂದಿಡೀ ಕುಟುಂಬವನ್ನು ಬಲಿತೆಗೆದುಕೊಂಡಿದೆ. ಹೀಟರ್‌ನ ವಿಷಕಾರಿ ಅನಿಲ ಸೇವಿಸಿ ಮದ್ರಸಾ ಶಿಕ್ಷಕ ಆಸಿಫ್ (32) , ಅವರ ಪತ್ನಿ ಶಗುಫ್ತಾ (30) ಮತ್ತು ಮಕ್ಕಳಾದ 3 ವರ್ಷದ ಝೈದ್ ಮತ್ತು 2 ವರ್ಷದ ಮೈರಾ ಮೃತಪಟ್ಟಿದ್ದಾರೆ.ಶನಿವಾರ ರಾತ್ರಿ ಆಸಿಫ್ ಕುಟುಂಬ ತೀವ್ರ ಚಳಿಯನ್ನು ತಡೆಯಲು ಗ್ಯಾಸ್ ಪೆಟ್ರೋಮ್ಯಾಕ್ಸ್ ಹಚ್ಚಿ ಕೊಠಡಿಯಲ್ಲಿ ಮಲಗಿತ್ತು.

ಚಳಿ ತಡೆಯಲು ಹಾಕಿದ ಹೀಟರ್‌ಗೆ ಕುಟುಂಬವೇ ಬಲಿ Read More »

ಕಗ್ಗದ ಸಂದೇಶ – ನೋವು ಸಂಕಷ್ಟಗಳಲ್ಲಿ ಸುಖ ಕಾಣುವ ಬದುಕು…

ಅಸಮದಲಿ ಸಮತೆಯನು ವಿಷಮದಲಿಮೆತ್ರಿಯನು|ಅಸಮಂಜಸದಿ ಸಮನ್ವಯ ಸೂತ್ರನಯವ||ವೆಸನಮಯ ಸಂಸಾರದಲಿ ನಿನೋದವ ಕಾಣ್ಬರಸಿಕತೆಯೇ ಯೋಗವೆಲೊ- ಮಂಕುತಿಮ್ಮ||ಅಸಮಾನತೆ ಎನ್ನುವುದು ಈ ಸೃಷ್ಟಿಯ ಸಹಜ ಗುಣ. ಇದರಲ್ಲಿ ಸಮಾನತೆಯನ್ನು ಕಾಣುವುದು, ವಿಷಮ ಅಂದರೆ ಗಂಭೀರವಾದ ಪರಿಸ್ಥಿತಿಯಲ್ಲಿಯೂ ಸ್ನೇಹ ಅಂದರೆ ಹೊಂದಾಣಿಕೆಯ ಭಾವವನ್ನು ಹೊಂದುವುದು, ಅಸಮಂಜಸ ಅಂದರೆ ಹೊಂದಾಣಿಕೆ ಇಲ್ಲದ ಕಡೆ ಸಮನ್ವಯದ ಸೂತ್ರವನ್ನು ಅನ್ವಯಿಸುವುದು, ನೋವು ಸಂಕಷ್ಟಗಳೇ ತುಂಬಿರುವ ಬದುಕಿನಲ್ಲಿ ಸಂತೋಷವನ್ನು ಕಾಣುವಂತಹ ರಸಿಕತೆಯೇ ಜೀವನದ ನಿಜವಾದ ಯೋಗವೆಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹೇಳಿದ್ದಾರೆ.ವಿವಿಧತೆ ಎನ್ನುವುದು ಸೃಷ್ಟಿಯ ಸಹಜ ಗುಣ. ವೈವಿಧ್ಯಮಯವಾದ

ಕಗ್ಗದ ಸಂದೇಶ – ನೋವು ಸಂಕಷ್ಟಗಳಲ್ಲಿ ಸುಖ ಕಾಣುವ ಬದುಕು… Read More »

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ

ಪುತ್ತೂರು: ಬ್ರಹ್ಮ ಎಂದರೆ ನಿರಾಕಾರ. ವಟುಗಳಿಗೆ ಬ್ರಹ್ಮೋಪದೇಶ ನೀಡುವ ಮೂಲಕ ನಿರಾಕಾರ ತತ್ವವನ್ನು ಬೋಧಿಸಲಾಗಿದೆ. ಬ್ರಹ್ಮೋಪದೇಶ ಸಂಸ್ಕಾರ ಪಡೆದ ವಟುಗಳು ಮುಂದೆ ಸಂಸ್ಕಾರವಂತರಾಗಿ ಸಮಾಜದಲ್ಲಿ ಬೆಳಗುವಂತಾಗಲಿ ಎಂದು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಹೇಳಿದರು. ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ರವಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ Read More »

error: Content is protected !!
Scroll to Top