ಜ. 8, 9,10: ಕಾಡು ಬಯಲು ರಂಗಮಂದಿರದಲ್ಲಿ ಇಫಿಜೀನಿಯಾ, ಮುಕ್ತಧಾರಾ, ಲೀಕ್ ಔಟ್ ನಾಟಕ ಪ್ರದರ್ಶನ

ಪುತ್ತೂರು: ಇಲ್ಲಿನ ನೆಹರೂನಗರದ ಕಾಡು ಬಯಲು ರಂಗಮಂದಿರದಲ್ಲಿ ಜ. 8, 9, 10ರಂದು ನೀನಾಸಂ ತಂಡದ ಇಫಿಜೀನಿಯಾ, ಮುಕ್ತಧಾರಾ ಹಾಗೂ ಏಕವ್ಯಕ್ತಿ ನಾಟಕ ಲೀಕ್ ಔಟ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾಡು ಬಯಲು ರಂಗಮಂದಿರದ ನಿರ್ದೇಶಕ ರಾಘವೇಂದ್ರ ಎಚ್.ಎಂ. ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡು ಬಯಲುರಂಗಮಂದಿರದಲ್ಲಿ ಪ್ರತಿ ವರ್ಷ ನಿರಂತರವಾಗಿ ರಂಗ ಚಟುವಟಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನೀನಾಸಂ ನಾಟಕ ಕಳೆದ 30 ವರ್ಷಗಳಿಂದ ಕಾಡು ಬಯಲು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕೋವಿಡ್ ಕಾರಣಗಳಿಂದ ಕಳೆದ 2 ವರ್ಷ […]

ಜ. 8, 9,10: ಕಾಡು ಬಯಲು ರಂಗಮಂದಿರದಲ್ಲಿ ಇಫಿಜೀನಿಯಾ, ಮುಕ್ತಧಾರಾ, ಲೀಕ್ ಔಟ್ ನಾಟಕ ಪ್ರದರ್ಶನ Read More »

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜ. 5ರಂದು ತೆಂಕಿಲ ಒಕ್ಕಲಿಗ ಗೌಡ ಸೇವಾ ಸಂಘದ ಚುಂಚಶ್ರೀ ಸಭಾಂಗಣದಲ್ಲಿ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಸಂಘಟಿಸಿರುವುದೇ ನಮ್ಮೆಲ್ಲರ ಭಾಗ್ಯ. ರಾಜ್ಯದ ಕೇಂದ್ರವಾಗಿ ಪುತ್ತೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಜನರೇ ಪುತ್ತೂರಿನತ್ತ ನೋಡಲಿದ್ದಾರೆ. ಆದ್ದರಿಂದ ಎಲ್ಲರೂ ಜೊತೆಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಆದಿಚುಂಚನಗಿರಿ

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ Read More »

ಪುತ್ತೂರಿನಲ್ಲಿ ಮಹಿಳಾ ಮತದಾರರೇ ಅಧಿಕ | ಒಟ್ಟು 208272 ಮತದಾರರ ಪೈಕಿ 105363 ಮಹಿಳೆಯರು

ಪುತ್ತೂರು: ಇದುವರೆಗೆ ದಾಖಲಾಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧವಾಗಿದ್ದು, 208272 ಮತದಾರರ ಹೆಸರು ಹಕ್ಕು ಚಲಾಯಿಸುವ ಕಾರ್ಯಕ್ಕೆ ಅಂತಿಮಗೊಂಡಿದೆ. ಇದರಲ್ಲಿ 105363 ಮಂದಿ ಮಹಿಳೆಯರೇ ಎನ್ನುವುದು ವಿಶೇಷ. ಪುತ್ತೂರು ತಾಲೂಕು ಕಚೇರಿಯ ಲೆಕ್ಕಾಚಾರದಂತೆ, ಇದುವರೆಗೆ 208272 ಮಂದಿ ಮತದಾರರ ಪಟ್ಟಿ ಸಿದ್ಧವಾಗಿದೆ. ಅಂದರೆ ಇದೇ ಅಂತಿಮವಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ, ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಘೋಷಣೆ ಮಾಡುವ ದಿನದವರೆಗೂ ಮತದಾರರ ಪಟ್ಟಿಗೆ ಹೆಸರು ನೀಡಲು ಅವಕಾಶವಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾಹಿತಿ ನೀಡಿದರು.

ಪುತ್ತೂರಿನಲ್ಲಿ ಮಹಿಳಾ ಮತದಾರರೇ ಅಧಿಕ | ಒಟ್ಟು 208272 ಮತದಾರರ ಪೈಕಿ 105363 ಮಹಿಳೆಯರು Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥಿಸಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ | ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಮನೆಮನೆಗೆ ಆಮಂತ್ರಣ ಪತ್ರ ತಲುಪಿಸುವ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭಾವಚಿತ್ರವುಳ್ಳ ಸ್ಟಿಕ್ಕರನ್ನು ಪ್ರತಿ ಮನೆಮನೆಗೆ ತಲುಪಿಸಿ, ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ | ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ Read More »

ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ ಕೊಠಡಿ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಸಾರ್ವಜನಿಕ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಸಲಾಯಿತು. ಬಳಿಕ ಮಾತನಾಡಿದ ಶಾಸಕರು, ಅಮೃತ ಗ್ರಾಮ ಯೋಜನೆಯಡಿ ಒಟ್ಟು 27 ಲಕ್ಷದ 25 ಸಾವಿರ ರೂ. ಮಂಜೂರಾಗಿದ್ದು, ಇದರಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಆಗಲಿದೆ. ಈ ಮೂಲಕ ಆಧುನಿಕತೆಗೆ ಗ್ರಂಥಾಲಯದ ಸ್ಪರ್ಶ ನೀಡುವ ಕೆಲಸ ಇಲ್ಲಿ ನಡೆಯುತ್ತಿದೆ. ಸಾಮಾಜಿಕ ಜಾಲತಾಣ, ಮೊಬೈಲ್

ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ Read More »

ಹಾವೇರಿಯಲ್ಲಿ ನಾಳೆಯಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳ

1 ಸಾವಿರ ಬಾಣಸಿಗರಿಂದ ಅಡುಗೆ ತಯಾರಿ; ಭದ್ರತೆಗೆ 12 ಸಾವಿರ ಪೊಲೀಸರು ಹಾವೇರಿ: ಹಾವೇರಿಯಲ್ಲಿ ಶುಕ್ರವಾರದಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನನಡೆಯಲಿದ್ದು, ಅದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗಿದೆ. ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಸಮ್ಮೇಳನದಲ್ಲಿ ಭದ್ರತೆ ಮತ್ತು ಸಂಚಾರ ನಿರ್ವಹಣೆಯ ಮೇಲ್ವಿಚಾರಣೆಗೆ ಸುಮಾರು 12 ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕರನ್ನು ನಿಯೋಜಿಸಲಾಗಿದೆ.ಸಂದರ್ಶಕರು ಸ್ಥಳವನ್ನು ತಲುಪಲು ಮತ್ತು ಪಾರ್ಕಿಂಗ್ ಸ್ಲಾಟ್‌ಗಳನ್ನು ಹುಡುಕಲು ಕ್ಯೂಆರ್ ಕೋಡ್‌ಗಳನ್ನು ಪರಿಚಯಿಸಲಾಗುತ್ತಿದೆ. ಅಡುಗೆ ಕೋಣೆ ಸೇರಿದಂತೆ

ಹಾವೇರಿಯಲ್ಲಿ ನಾಳೆಯಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳ Read More »

ಕಂಬಳ ನಿಯಮದಲ್ಲಿ ಕೆಲವು ಬದಲಾವಣೆ

ತುರ್ತುಸಭೆಯಲ್ಲಿ ನಿರ್ಧಾರ ಮೂಡುಬಿದಿರೆ : ಕಂಬಳ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ಬುಧವಾರ ನಡೆದ ತುರ್ತುಸಭೆಯಲ್ಲಿ ನಿರ್ಧರಿಸಲಾಗಿದೆ.ಮುಂದಿನ ಕಂಬಳಗಳಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಕೊಡುಗೆಯಾಗಿ ನೀಡದ ಸೆನ್ಸಾರ್‌ ಸಿಸ್ಟಂ ಅಳವಡಿಸಿಕೊಂಡು ಫಲಿತಾಂಶ ನಿರ್ಧರಿಸಲು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸೆನ್ಸಾರ್‌ ಸಿಸ್ಟಂ ನಿರ್ವಹಣೆಯ ಪೂರ್ಣ ಜವಾಬ್ದಾರಿ ಕಂಗಿನಮನೆ ವಿಜಯಕುಮಾರ್‌ ಅವರದ್ದು. ಒಂದು ವೇಳೆ ಈ ಸೆನ್ಸಾರ್‌ ಸಿಸ್ಟಂ ಕಂಬಳ ಆಗುವಾಗ ಕೈಕೊಟ್ಟರೆ ಮೂರನೇ ತೀರ್ಪುಗಾರರ ತೀರ್ಮಾನವನ್ನು ಅವಲಂಬಿಸಲಾಗುವುದು. ಮೂರನೇ ತೀರ್ಪುಗಾರರಾಗಿ ಜಿಲ್ಲಾ ಕಂಬಳ ಸಮಿತಿ ಮತ್ತು ಆಯಾಯ ಕಂಬಳ

ಕಂಬಳ ನಿಯಮದಲ್ಲಿ ಕೆಲವು ಬದಲಾವಣೆ Read More »

ಮರಕ್ಕೆ ಡಿಕ್ಕಿಯಾದ ಬೊಲೆರೊ : 6 ಮಂದಿ ಸಾವು

ದೇವಸ್ಥಾನಕ್ಕೆ ಹೊರಟವರ ದುರಂತ ಅಂತ್ಯ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಹೊಡೆದು ಅಪಘಾತ ಸಂಬವಿಸಿದೆ.ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಪಿಕ್‌ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ

ಮರಕ್ಕೆ ಡಿಕ್ಕಿಯಾದ ಬೊಲೆರೊ : 6 ಮಂದಿ ಸಾವು Read More »

ಮಂಗಳೂರು-ಮಡ್‌ಗಾಂವ್‌ ರೈಲು ಪುನರಾರಂಭ

ವಾರದಲ್ಲಿ ಆರು ದಿನ ಸಂಚಾರ ಮಂಗಳೂರು : ಮಂಗಳೂರು-ಮಡಗಾಂವ್ ರೈಲನ್ನು ಪುನರಾರಂಭಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.ಮಂಗಳೂರು ಸೆಂಟ್ರಲ್‌ನಿಂದ ಮಡಗಾಂವ್ ಜಂಕ್ಷನ್‌ವರೆಗೆ ರೈಲು(10107 / 10108) ಮತ್ತೆ ಸಂಚರಿಸಲಿದೆ. ಭಾನುವಾರ ಹೊರತುಪಡಿಸಿ ವಾರದ ಉಳಿದ ಆರು ದಿನ ಈ ರೈಲಿನ ಸಂಚಾರವಿರುತ್ತದೆ. ರೈಲು ಸಂಖ್ಯೆ 10107 ಮಡಗಾಂವ್ ಜಂಕ್ಷನ್‌ನಿಂದ ಪ್ರತಿ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಬೆಳಗ್ಗೆ 5:15 ಗಂಟೆಗೆ ಹೊರಟು ಅದೇ ದಿನ 12.15ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.ರೈಲು ಸಂಖ್ಯೆ 10108 ಮಂಗಳೂರು

ಮಂಗಳೂರು-ಮಡ್‌ಗಾಂವ್‌ ರೈಲು ಪುನರಾರಂಭ Read More »

error: Content is protected !!
Scroll to Top