ದಲಿತ ಕುಟುಂಬಕ್ಕೆ ದಾರಿ ನೀಡದೆ ದೌರ್ಜನ್ಯ ಆರೋಪ | ಪುತ್ತೂರಿನಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಧರಣಿ

ಪುತ್ತೂರು: ದಲಿತ ಕುಟುಂಬಕ್ಕೆ ತೆರಳುವ ರಸ್ತೆಯನ್ನು ಬಂದ್ ಮಾಡಿದ್ದು, ತಕ್ಷಣವೇ ದಾರಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧ ಮುಂಬಾಗದಲ್ಲಿ ಧರಣಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪಿ. ಸುಂದರ್ ಪಾಟಾಜೆ, ಕೆಮ್ಮಿಂಜೆ ಗ್ರಾಮದ ಕುದ್ಕೋಳಿ ಎಂಬಲ್ಲಿ ನಾಲ್ಕು ದಲಿತ ಕುಟುಂಬಗಳ ಮನೆಗೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿಯೋರ್ವರು ಬಂದ್ ಮಾಡಿದ್ದಾರೆ. ಅವರು ಈ ಪ್ರದೇಶದಲ್ಲಿನ ೪ ದಲಿತ […]

ದಲಿತ ಕುಟುಂಬಕ್ಕೆ ದಾರಿ ನೀಡದೆ ದೌರ್ಜನ್ಯ ಆರೋಪ | ಪುತ್ತೂರಿನಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಧರಣಿ Read More »

ಮಕ್ಕಳಿಗೆ ಸಂಸ್ಕಾರ ಕಲಿಸಿದಾಗ ಧರ್ಮ ಜಾಗೃತಿ | ಅಜಲಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ

ಪುತ್ತೂರು: ಋಷಿ ಮುನಿಗಳ ಸಾವಿರಾರು ವರ್ಷಗಳ ತಪಸ್ಸಿನ ಫಲವೇ ಹಿಂದೂ ಧರ್ಮ. ಇಂತಹ ಧರ್ಮವನ್ನು ಮುಂದಿನ ಜನಾಂಗಕ್ಕೆ ಕೊಂಡೊಯ್ಯಬೇಕಾದರೆ, ಮಕ್ಕಳಲ್ಲಿ ಸಂಸ್ಕಾರವನ್ನು ಕಲಿಸಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಹೇಳಿದರು.ಮುಂಡೂರು ಉದಯಗಿರಿ ಅಜಲಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಅಂಗವಾಗಿ ರವಿವಾರ ರಾತ್ರಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ನಮ್ಮ ಹಿರಿಯರಿಗೆ ಗೌರವ ನೀಡುವಂತಹ ಸಂಸ್ಕಾರವನ್ನು ಮಕ್ಕಳಿಗೆ ತಿಳಿಸಿಕೊಡುವ ಕೆಲಸ ಆಗಬೇಕಿದೆ. ದೈವಸ್ಥಾನ, ದೇವಸ್ಥಾನ, ಮಂದಿರಗಳಲ್ಲಿ ಇಂತಹ ಸಂಸ್ಕಾರವನ್ನು

ಮಕ್ಕಳಿಗೆ ಸಂಸ್ಕಾರ ಕಲಿಸಿದಾಗ ಧರ್ಮ ಜಾಗೃತಿ | ಅಜಲಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ Read More »

ಬೆಟ್ಟಂಪಾಡಿಯಲ್ಲಿ ಬೂತ್ ವಿಜಯ ಅಭಿಯಾನ

ಪುತ್ತೂರು: ಬೆಟ್ಟಂಪಾಡಿ ಗ್ರಾಮದಲ್ಲಿ ಬೂತ್ ವಿಜಯ ಅಭಿಯಾನದ ಅಂಗವಾಗಿ ಶಂಕರ್ ಅವರ ಮನೆಯಲ್ಲಿ ಸೋಮವಾರ ಬಿಜೆಪಿ ಧ್ವಜವನ್ನು ಹಸ್ತಾಂತರಿಸಿ, ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಜಗನ್ನಾಥ ರೈ ಕೊಮ್ಮಂಡ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಟ್ಟಂಪಾಡಿಯಲ್ಲಿ ಬೂತ್ ವಿಜಯ ಅಭಿಯಾನ Read More »

ಅರಸು ಕಂಬಳದಲ್ಲಿ ಭವತಿ ಭಿಕ್ಷಾಂದೇಹಿ

ಪುತ್ತೂರು: ಟರ್ಪಾಲ್ ಹೊದಿಕೆಯಲ್ಲಿ ವಾಸವಾಗಿರುವ ಕುಟುಂಬವೊಂದಕ್ಕೆ ನೆರವಾಗುವ ದೃಷ್ಟಿಯಿಂದ ಪುತ್ತೂರು ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಹಾಗೂ ನೊಂದವರ ಬಾಳಿಗೆ ಬೆಳಕು, ತುಳುನಾಡ ಪೊರ್ಲು ಗೊಂಬೆ ಬಳಗ ಕುಪ್ಪೆಪದವು ಆಶ್ರಯದಲ್ಲಿ ಮೂಲ್ಕಿಯ ಅರಸು ಕಂಬಳದಲ್ಲಿ ಭವತಿ ಭಿಕ್ಷಾಂದೇಹಿ ಕಾರ್ಯಕ್ರಮ ನಡೆಸಲಾಯಿತು. ನಾವೂರು ಗ್ರಾಮದ ಮೈಂದಳ ಎಂಬಲ್ಲಿ ಕುಟುಂಬವೊಂದು ಟರ್ಪಾಲ್ ಹೊದಿಕೆಯಲ್ಲಿ ಜೀವನ ನಿರ್ವಹಿಸುತ್ತಿದೆ. ಇಬ್ಬರು ಪುಟ್ಟ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ತಮ್ಮ ಜೀವನವನ್ನು ನಿರ್ವಹಿಸಿಕೊಂಡು ಹೋಗಬೇಕಾದ ಜವಾಬ್ದಾರಿ ರೇವತಿ ಪೂಜಾರಿ ಅವರದ್ದು. ಒಂದೆಡೆ ಕಲಿಕೆಯ ತುಡಿತ, ಇನ್ನೊಂದೆಡೆ ಕುಳಿತುಕೊಳ್ಳಲು

ಅರಸು ಕಂಬಳದಲ್ಲಿ ಭವತಿ ಭಿಕ್ಷಾಂದೇಹಿ Read More »

ಶ್ರೀದೇವಿ ಮಹಾತ್ಮೆಯ ಆಮಂತ್ರಣ ಬಿಡುಗಡೆ

ಪುತ್ತೂರು: ಪಾಣಾಜೆ ಸುಬೋಧ ಪ್ರೌಢಶಾಲಾ ವಠಾರದಲ್ಲಿ ಜ. 11ರಂದು ನಡೆಯಲಿರುವ ಶ್ರೀದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರವನ್ನು ಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು. ಜ. 11ರಂದು ಸಂಜೆ 6ರಿಂದ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಪಾಣಾಜೆ ಬಿ.ಬಿ. ಕ್ರಿಯೇಷನ್ಸ್ ನೇತೃತ್ವದಲ್ಲಿ ಯಕ್ಷಗಾನ ನಡೆಯಲಿದೆ. ರಾತ್ರಿ 8ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಇದೇ ಸಂದರ್ಭ ಎಸ್ಡಿಪಿ ರೆಮಿಡೀಸ್ನ ಡಾ. ಹರಿಕೃಷ್ಣ ಪಾಣಾಜೆ, ದ.ಕ. ಸಹಕಾರಿ ಹಾಲು ಉತ್ಪಾದಕರ ನಿ. ಮಂಗಳೂರು ಇದರ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಚಲನಚಿತ್ರ ನಟ

ಶ್ರೀದೇವಿ ಮಹಾತ್ಮೆಯ ಆಮಂತ್ರಣ ಬಿಡುಗಡೆ Read More »

13.90 ಲಕ್ಷ ರೂ.ನ ಪರ್ಪುಂಜ ಶಾಲಾ ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಾಸಕರ ಅನುದಾನದಿಂದ ಪರ್ಪುಂಜ ಸ.ಹಿ.ಪ್ರಾ. ಶಾಲೆಗೆ 13.90 ಲಕ್ಷ ರೂ.ನಲ್ಲಿ ಹೊಸ ಕೊಠಡಿಗೆ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಜ. 1ರಂದು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಯಾವುದೇ ಕೊರತೆ ಆಗಬಾರದು ಎಂಬ ನೆಲೆಯಲ್ಲಿ ಸರಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಪುತ್ತೂರಿನ 111 ಶಾಲೆಗಳಿಗೆ ನೂತನ ಕೊಠಡಿ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ

13.90 ಲಕ್ಷ ರೂ.ನ ಪರ್ಪುಂಜ ಶಾಲಾ ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಕುಂಬ್ಲಾಡಿ: ಅಷ್ಟಬಂಧ ಬ್ರಹ್ಮಕಲಶೋತ್ಸವ, ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಚಾರ್ವಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕ್ಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೊತ್ಸವದ ಅಂಗವಾಗಿ ಜ. 2 ರಂದು ಬೆಳಿಗ್ಗೆ 7ರಿಂದ ಗಣಪತಿ ಹೋಮ, ಶಾಂತಿ ಹೋಮ, ಸ್ವಶಾಂತಿ, ಘೋರ ಶಾಂತಿ, ಹೋಮ ಕಳಶಾಭಿಷೇಕ ಹಾಗೂ ಮಧ್ಯಾಹ್ನ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ 7ರಿಂದ ಅಂಕುರಪೂಜೆ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಹಾಗೂ ರಾತ್ರಿ

ಕುಂಬ್ಲಾಡಿ: ಅಷ್ಟಬಂಧ ಬ್ರಹ್ಮಕಲಶೋತ್ಸವ, ಧಾರ್ಮಿಕ ಕಾರ್ಯಕ್ರಮ Read More »

ಕುಟ್ಟಿನೋಪಿನಡ್ಕ ಶಾಲೆಯ ನೂತನ ಕಾಮಗಾರಿಗೆ ಶಿಲಾನ್ಯಾಸ, ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಜಿಲ್ಲೆಯಲ್ಲಿ ಪುತ್ತೂರಿಗೆ ಮಾತ್ರ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಎಂದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಕುಟ್ಟಿನೋಪಿನಡ್ಕ ಪ್ರಾಥಮಿಕ ಶಾಲಾ ತರಗತಿ ಕಟ್ಟಡಕ್ಕೆ ಮಂಜೂರಾದ 13.90 ಲಕ್ಷ ರೂ.ನ ಕಾಮಗಾರಿಗೆ ಶಿಲಾನ್ಯಾಸ ಹಾಗೂ 3.30 ಲಕ್ಷ ರೂ.ನ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲೆಗಳಿಗೆ ಉಚಿತ ಶಿಕ್ಷಣ, ಉಚಿತ ಬಿಸಿಊಟ, ಉಚಿತ ಸಮವಸ್ತ್ರ, ಪೌಸ್ಟಿಕ ಆಹಾರ, ಪ್ರತಿಭಾವಂತ ಅಧ್ಯಾಪಕರು, ನೂತನ ಶಾಲಾ ಕೊಠಡಿ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಗ್ರಾಮೀಣ ಮಕ್ಕಳ ಭವಿಷ್ಯದ ದೃಷ್ಠಿಯಿಂದ ದ.ಕ. ಜಿಲ್ಲೆಯಲ್ಲಿ

ಕುಟ್ಟಿನೋಪಿನಡ್ಕ ಶಾಲೆಯ ನೂತನ ಕಾಮಗಾರಿಗೆ ಶಿಲಾನ್ಯಾಸ, ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಜಿಲ್ಲೆಯಲ್ಲಿ ಪುತ್ತೂರಿಗೆ ಮಾತ್ರ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಎಂದ ಶಾಸಕ ಸಂಜೀವ ಮಠಂದೂರು Read More »

ಕೊಯ್ಯೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಸಮಾವೇಶ

ಪುತ್ತೂರು: ಬೆಳ್ತಂಗಡಿಯ ಬೋಳ್ತೆರ್ ಕೊಯ್ಯೂರು ಒಕ್ಕಲಿಗ ಗೌಡ ಸೇವಾ ಸಂಘದ 20ನೇ ವರ್ಷದ ಮಹಾಸಭೆ ಹಾಗೂ ವಾರ್ಷಿಕ ಸಮಾವೇಶ ಜ. 1ರಂದು ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಹಿಂದೂ ಧರ್ಮ ನಮ್ಮ ನಡೆ, ನುಡಿ, ಆಚಾರ, ವಿಚಾರ, ಸಂಪ್ರದಾಯ, ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡಿದ್ದು, ಯುವಕರು ಈ ಹಾದಿಯಲ್ಲಿ ಮುನ್ನಡೆಯಬೇಕು. ಯುವಕರು ಸಂಘಟನೆಯ ನೇತೃತ್ವ ವಹಿಸಿ, ಸಮುದಾಯವನ್ನು ಮುನ್ನಡೆಸುವತ್ತಲೂ ಗಮನ ಹರಿಸಬೇಕು. ನಾಯಕತ್ವ ಮೈಗೂಡಿಸಿಕೊಂಡಾಗ, ಎಲ್ಲಾ ಕೆಲಸಗಳನ್ನು ಸುಲಭವಾಗಿ ನಿರ್ವಹಿಸಿಕೊಂಡು ಹೋಗಬಹುದು ಎಂದರು. ಕೊಯ್ಯೂರು ಒಕ್ಕಲಿಗ

ಕೊಯ್ಯೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಸಮಾವೇಶ Read More »

ಜ. 13-17: ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಪಂದ್ಯ | 1500 ಮಂದಿ ಕ್ರೀಡಾಪಟುಗಳು ಭಾಗಿ

ಪುತ್ತೂರು: ಇದೇ ಮೊದಲ ಬಾರಿಗೆ ಸರ್ಕಾರಿ ಕಾಲೇಜಿನಲ್ಲಿ ಅಖಿಲ ಭಾರತ ಮಟ್ಟದ ರಾಷ್ಟ್ರೀಯ ಬಾಲ್ಬ್ಯಾಡ್ಮಿಂಟನ್ ಪಂದ್ಯ ಜ. 13ರಿಂದ 17ರವರೆಗೆ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ನಡೆಯಲಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಶಾಸಕರೂ ಆಗಿರುವ ಸಂಜೀವ ಮಠಂದೂರು ಹೇಳಿದರು. ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸುವ ಸುಮಾರು 84 ತಂಡಗಳು ಈಗಾಗಲೇ ಹೆಸರನ್ನು ನೋಂದಾಯಿಸಿಕೊಂಡಿವೆ. ಒಟ್ಟು ಸುಮಾರು 100 ತಂಡಗಳು, 1000 ಕ್ರೀಡಾಪಟುಗಳು, 200 ಮಂದಿ ತೀರ್ಪುಗಾರರು, 300 ಮಂದಿ

ಜ. 13-17: ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಪಂದ್ಯ | 1500 ಮಂದಿ ಕ್ರೀಡಾಪಟುಗಳು ಭಾಗಿ Read More »

error: Content is protected !!
Scroll to Top