ಅಪಘಾತಕ್ಕೀಡಾದ ಪುರುಷೋತ್ತಮರವರ ಆರೋಗ್ಯ ವಿಚಾರಿಸಿದ ಶಾಸಕರು

ಪುತ್ತೂರು: ಅಪಘಾತಕ್ಕೀಡಾಗಿ ಬಳಿಕ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಬನ್ನೂರಿನ ಕೊಲ್ಯ ನಿವಾಸಿ ಪುರುಷೋತ್ತಮ ಅವರ ಮನೆಗೆ ಶಾಸಕ ಶ್ರೀ ಸಂಜೀವ ಮಠಂದೂರು ಭೇಟಿ ನೀಡಿ ಯೋಗ್ಯಕ್ಷೇಮ ವಿಚಾರಿಸಿದರು. ಶಕ್ತಿ ಕೇಂದ್ರ ಸಂಚಾಲಕ ನಾಗೇಶ್, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಪಘಾತಕ್ಕೀಡಾದ ಪುರುಷೋತ್ತಮರವರ ಆರೋಗ್ಯ ವಿಚಾರಿಸಿದ ಶಾಸಕರು Read More »

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

ಪುತ್ತೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ 64ನೆಯ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮಾತನಾಡಿ, ಜೆಡಿಎಸ್ ವರಿಷ್ಠಿರಾದ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಬಡವರ ಹಾಗೂ ರೋಗಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದ್ದರು. ಇಂದು ಅವರ ೬೪ನೆಯ ಹುಟ್ಟು ಹಬ್ಬವಾಗಿದ್ದು, ಆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್ Read More »

ದಯಾಮರಣ ಕೋರಿ ಪೊಲೀಸ್‌ ಸಿಬ್ಬದಿಯಿಂದ ರಾಷ್ಟ್ರಪತಿಗೆ ಪತ್ರ

ವಿಧಾನಸೌಧ ಭದ್ರತೆ ವಿಭಾಗದ ಡಿಸಿಪಿ ಅಶೋಕ ರಾಮಪ್ಪ ಜುಂಜರವಾಡ ವಿರುದ್ಧ ಆರೋಪ ಬೆಂಗಳೂರು : ವಿಧಾನಸೌಧ ಭದ್ರತೆ ವಿಭಾಗದ ಡಿಸಿಪಿ ಅಶೋಕ ರಾಮಪ್ಪ ಜುಂಜರವಾಡ ವಿರುದ್ಧ ವಿಧಾನಸೌಧದ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಮಾನಸಿಕ ಕಿರುಕುಳ ಹಾಗೂ ಆಡಳಿತಾತ್ಮಕ ಹಿಂಸೆಯ ಆರೋಪ ಮಾಡಿ ರಾಷ್ಟ್ರಪತಿಗೆ ದಯಾ ಮರಣ ಕೋರಿ ಅನಾಮಧೇಯ ಪತ್ರ ಬರೆದಿದ್ದಾರೆ. ಇದೀಗ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಡಿಸಿಪಿ ಅಶೋಕ ರಾಮಪ್ಪ ಮಾನವೀಯತೆ ಇಲ್ಲದ ಅಧಿಕಾರಿ. ಕೆಳಹಂತದ ಅಧಿಕಾರಿ

ದಯಾಮರಣ ಕೋರಿ ಪೊಲೀಸ್‌ ಸಿಬ್ಬದಿಯಿಂದ ರಾಷ್ಟ್ರಪತಿಗೆ ಪತ್ರ Read More »

ಮೆಸ್ಸಿ… ಮೆಸ್ಸಿ… ಮೆಸ್ಸಿ… ಜಗದಗಲ ಮೆಸ್ಸಿ!

ಇನ್ನು ಫುಟ್ಬಾಲ್ ದೇವರು ಆಡುವುದಿಲ್ಲ ನಮಗೆಲ್ಲ ತಿಳಿದಿರುವ ಹಾಗೆ ಫುಟ್ಬಾಲ್ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆ. ಶ್ರೀಮಂತ ಕ್ರೀಡೆ ಕೂಡ. ಅದಕ್ಕೆ ಕಾರಣದೇವ ಮಾನವರ ಹಾಗೆ ಇರುವ ಫುಟ್ಬಾಲ್ ಆಟಗಾರರು! ಪೀಲೆ, ಮರಡೋನಾ, ಜಿದಾನೆ ಮೊದಲಾದವರೆಲ್ಲ ಫುಟ್ಬಾಲ್ ಪ್ರೇಮಿಗಳ ಆರಾಧ್ಯ ದೇವರೇ ಆಗಿದ್ದವರು. ಕೋಟಿ ಕೋಟಿ ಬೆಲೆಬಾಳುವವರು.ವರ್ತಮಾನದ ಫುಟ್ಬಾಲ್ ಜಗತ್ತಿನ ದೇವರು ಲಿಯೋನೆಲ್ ಮೆಸ್ಸಿ ತನ್ನ ಜೀವಮಾನದ ಕೊನೆಯ ಪಂದ್ಯವನ್ನು ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಡುತ್ತಾರೆ ಎಂದರೆ ಅವರ ಲಕ್ಷಾಂತರ ಅಭಿಮಾನಿಗಳಿಗೆ ಕರುಳು ಹಿಂಡುವ ಅನುಭವ.

ಮೆಸ್ಸಿ… ಮೆಸ್ಸಿ… ಮೆಸ್ಸಿ… ಜಗದಗಲ ಮೆಸ್ಸಿ! Read More »

ಮೋದಿ ಕುರಿತು ಪಾಕ್‌ ಸಚಿವ ಭುಟ್ಟೊ ಕೀಳು ಹೇಳಿಕೆ : ಇಂದು ದೇಶಾದ್ಯಂತ ಬಿಜೆಪಿ ಪ್ರತಿಭಟನೆ

ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ಥಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನೀಡಿದ ವೈಯಕ್ತಿಕ ಕೀಳು ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದ್ದು, ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದೆ. ಪಾಕಿಸ್ಥಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಮತ್ತು ಅವಹೇಳನಕಾರಿ ಎಂದು ಬಿಜೆಪಿ ಬಣ್ಣಿಸಿದೆ.ಬಿಲಾವಲ್ ಭುಟ್ಟೊ ಅಧಿಕಾರದಲ್ಲಿ ಉಳಿಯಲು ಮತ್ತು ಪಾಕಿಸ್ಥಾನದ ಸರ್ಕಾರವನ್ನು ಉಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಆ ಸಚಿವರ ಹೇಳಿಕೆಯು ಜಗತ್ತನ್ನು ದಾರಿ ತಪ್ಪಿಸುವ ಗುರಿಯನ್ನು ಹೊಂದಿದೆ.

ಮೋದಿ ಕುರಿತು ಪಾಕ್‌ ಸಚಿವ ಭುಟ್ಟೊ ಕೀಳು ಹೇಳಿಕೆ : ಇಂದು ದೇಶಾದ್ಯಂತ ಬಿಜೆಪಿ ಪ್ರತಿಭಟನೆ Read More »

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ

ಪುತ್ತೂರು: ಇಲ್ಲಿನ ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನಾ ಸಮಾರಂಭ ಡಿ. 17ರಂದು ಸಂಜೆ 5 ಗಂಟೆಗೆ ಆಸ್ಪತ್ರೆಯಲ್ಲಿ ನಡೆಯಲಿದೆ. ಮಾಡ್ಯುಲರ್ ಓಟಿ  ವಿಭಾಗವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೆಬ್’ಸೈಟ್ ಅನ್ನು ಸರ್ಜನ್ ಡಾ. ಎಂ.ಕೆ. ಪ್ರಸಾದ್ ಅನಾವರಣಗೊಳಿಸಲಿದ್ದಾರೆ. ಯು ಬ್ರೀದ್ ಕ್ಲಿನಿಕ್ ಅನ್ನು ಸರ್ಜರಿ ಪ್ರೊಫೆಸರ್ ಡಾ. ಗೋಪಿನಾಥ್ ಪೈ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆಯ ಮುಂದಿನ ಗವರ್ನರ್ ವಿಕ್ರಮ್ ದತ್ತ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ Read More »

ಅನಧಿಕೃತ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಅಕ್ರಮ | ತಕ್ಷಣ ಪರವಾನಿಗೆ ನವೀಕರಿಸಲು ಕೆದಂಬಾಡಿ ಗ್ರಾಪಂ ಸೂಚನೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಒಟ್ಟು ಕಟ್ಟಡಗಳ ಪೈಕಿ 23 ಕಟ್ಟಡಗಳೇ ಅನಧಿಕೃತ. ಈ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಕೂಡ ಅನಧಿಕೃತ. ಕೆದಂಬಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬೆಳಕಿಗೆ ಬಂದ ಅಂಶವಿದು. ಗ್ರಾ.ಪಂ. ಅಧ್ಯಕ್ಷ ರತನ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಮಾತನಾಡಿ, ಅಂಗಡಿ ಪರವಾನಿಗೆ ನವೀಕರಣ ಹಾಗೂ ಅನಧಿಕೃತ ಅಂಗಡಿಗಳಿಗೆ ದಂಡನೆ ವಿಚಾರದಲ್ಲಿ ಅಂಗಡಿಯವರು ದಂಡ ಕಟ್ಟುತ್ತಿಲ್ಲ. ಇನ್ನೊಂದೆಡೆ ಅನಧಿಕೃತ

ಅನಧಿಕೃತ 23 ಕಟ್ಟಡಗಳಲ್ಲಿರುವ 37 ಅಂಗಡಿಗಳು ಅಕ್ರಮ | ತಕ್ಷಣ ಪರವಾನಿಗೆ ನವೀಕರಿಸಲು ಕೆದಂಬಾಡಿ ಗ್ರಾಪಂ ಸೂಚನೆ Read More »

ಕಾವು ಸರಕಾರಿ ಶಾಲೆಯಲ್ಲಿ ರೆಡ್ ಡೇ | ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ಕಾರ್ಯಕ್ರಮ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಪ್ರಾರಂಭಿಸಿ, ಸರಕಾರಿ ಶಾಲೆಗಳಿಗೇ ಮಾದರಿಯಾಗಿರುವ ಕಾವು ಸರಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ರೆಡ್ ಡೇ ಕಾರ್ಯಕ್ರಮ ನಡೆಯಿತು. ಕೆಂಪು ಬಣ್ಣದ ವಸ್ತುಗಳ ಸಂಗ್ರಹ ಮತ್ತು ಕೆಂಪು ಬಣ್ಣದ ವಸ್ತ್ರ ಧರಿಸಿದ್ದ ಎಲ್‌ಕೆಜಿ, ಯುಕೆಜಿ ಮಕ್ಕಳು, ರೆಡ್ ಡೇಯನ್ನು ಆಚರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಎಲ್‌ಕೆಜಿ, ಯುಕೆಜಿ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಗೂ ಕಾವು ಶಾಲೆಯನ್ನು ದತ್ತು ಸ್ವೀಕರಿಸಿರುವ ಕಾವು

ಕಾವು ಸರಕಾರಿ ಶಾಲೆಯಲ್ಲಿ ರೆಡ್ ಡೇ | ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ಕಾರ್ಯಕ್ರಮ Read More »

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಚೆಲ್ಯಡ್ಕ ಪುಳಿತ್ತಡಿ ರಸ್ತೆ ಕಾಮಗಾರಿಗೆ 10 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕ ಸಂಜೀವ ಮಠಂದೂರು ಅವರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೋರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ Read More »

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಕೈಕಾರ ಬೀಜತ್ರೆ ಯ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ , ನವೀನ್ ಕೈಕಾರ,  ಸಂತೋಷ್ ಕೈಕಾರ, ಹರೀಶ್ ಬಿಜತ್ರೆ, ಪಾಣಾಜೆ ಮಹಾಶಕ್ತಿ ಕೇಂದ್ರದ ಜಯರಾಮ್ ಪೂಜಾರಿ, ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಮಂಜುನಾಥ್ ಮಂಡಲ, ಸ್ಥಳೀಯರು  ಉಪಸ್ಥಿತರಿದ್ದರು. ರಾಜ್ಯ ಎಸ್ ಟಿ ಮೋರ್ಚಾ  ಸದಸ್ಯರಾದ ಎನ್. ಎಸ್. ಮಂಜುನಾಥ್ ಸ್ವಾಗತಿಸಿ

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top