ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ

ಆಳಂದದಲ್ಲಿ ಹಿಂದೂ ಮುಖಂಡರು, ಡಿಸಿ, ಎಸ್ಪಿ ಮೇಲೆ ಕಲ್ಲು ತೂರಿದ ಪ್ರಕರಣ ಬೆಂಗಳೂರು: ಕಲಬುರಗಿಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸ್ಪೀಕರ್‌ ಯು.ಟಿ. ಖಾದರ್ ಗೃಹ ಸಚಿವ ಜಿ.ಪರಮೇಶ್ವರ್​ಗೆ ಬರೆದಿರುವ ಪತ್ರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ ನಡೆಯನ್ನು ಹಿಂದೂ ಸಂಘಟನೆಗಳು, ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು […]

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ Read More »

ಮೇ 1ರಿಂದ ಮದ್ಯದ ಬೆಲೆ ಏರಿಕೆ?

ಅಲ್ಕೋಹಾಲ್‌ ಪ್ರಮಾಣದ ಆಧಾರದಲ್ಲಿ ಬೆಲೆ ನಿರ್ಧರಿಸಲು ಅಧಿಸೂಚನೆ ಬೆಂಗಳೂರು: ಸರ್ಕಾರ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ

ಮೇ 1ರಿಂದ ಮದ್ಯದ ಬೆಲೆ ಏರಿಕೆ? Read More »

ದ.ಕ. ಜಿಲ್ಲೆಯ ಎಲ್ಲಾ 11 ಮೊರಾರ್ಜಿ, ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 100% ಫಲಿತಾಂಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇದರ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಎರಡು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು, ಒಂದು ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಆರ್ಥಿಕವಾಗಿ ಬಡ ವಿದ್ಯಾರ್ಥಿಗಳಿಗೆ ಇರುವ ಈ ಶಾಲೆಗಳು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ವಿವಿಧ ಉಚಿತ

ದ.ಕ. ಜಿಲ್ಲೆಯ ಎಲ್ಲಾ 11 ಮೊರಾರ್ಜಿ, ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 100% ಫಲಿತಾಂಶ Read More »

ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ. ಸಂಯೋಜನೆಯಲ್ಲಿ ಶ್ರೀ ಮಹಾಭಾರತ ಸರಣಿಯ 113 ನೇ ತಾಳಮದ್ದಳೆ ಕರಂಡಕಾಸುರ ಕಾಳಗ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ದೇವಿ ಪ್ರಸಾದ ಆಚಾರ್ಯ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ್ತ ಪಾಂಗಣ್ಣಾಯ ಸಹಕರಿಸಿದರು. ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ), ದಿನೇಶ್ ಭಟ್ ಬಳೆಂಜ (ಅರ್ಜುನ), ಶ್ರುತಿ ವಿಸ್ಮಿತ್ (ಶುಕತುಂಡ), ಅಂಬಾ ಪ್ರಸಾದ್ ಪಾತಾಳ (ಕಲುಷಗಾಮಿನಿ),

ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ Read More »

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಪುತ್ತೂರು: ಕಲ್ಲೇಗ ‌ಟೈಗರ್ಸ್ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಹತ್ಯೆ ಮಾಡಿದ 1 ಮತ್ತು 2 ನೇ ಆರೋಪಿಗಳಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ನೀಡಿದೆ. ನವೆಂಬರ್ 6, 2023 ರಂದು ರಾತ್ರಿ ವೇಳೆ ನೆಹರೂ ನಗರದಲ್ಲಿ ಅಕ್ಷಯ್ ಕಲ್ಲೇಗನ ಮೇಲೆ ಭೀಕರ ಹಲ್ಲೆ ನಡೆಸಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣದ 1 ನೇ ಆರೋಪಿ ಪಡೀಲಿನ ಮನೀಶ್, 2 ನೇ ಆರೋಪಿ ಕೃಷ್ಣನಗರದ ‌ಚೇತನ್

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ರಾತ್ರಿ ವೇಳೆ ಸರ್ಕಾರಿ ಬಸ್ಸಿಗೆ ಅಡ್ಡಗಟ್ಟಿ ಕುಡುಕರ ಕಿರಿಕಿರಿ

ಚಿಕ್ಕಮಗಳೂರು: ಮಧ್ಯರಾತ್ರಿ ಸಮಯದಲ್ಲಿ ಕುಡಿದು ಅಮಲಿನಲ್ಲಿ ಸರ್ಕಾರಿ ಬಸ್ಸನ್ನು ‌ಅಡ್ಡಗಟ್ಟಿ ಹುಚ್ಚಾಟ ಮೆರೆದ ಘಟನೆ ಚಿಕ್ಕಮಗಳೂರಿನಲ್ಲಿ ‌ನಡೆದಿದೆ. ಸರ್ಕಾರಿ ಬಸ್ಸು ಕಡೂರಿನಿಂದ ‌ಚಿಕ್ಕಮಗಳೂರಿಗೆ ಬರುತ್ತಿತ್ತು. ನಗರದ ಟೆಂಟರ್ ‌ಚಿಕನ್ ಸಮೀಪ ಕುಡುಕರು ತಮ್ಮ ಆಟೋ ಅಡ್ಡಗಟ್ಟಿ ‌ತಡೆದು‌ ರಸ್ತೆ ನಡುವಲ್ಲೇ ಬಸ್ಸು ನಿಲ್ಲುವಂತೆ ಮಾಡಿದ್ದಾರೆ. ಸುಮಾರು ರಾತ್ರಿ 12 ಗಂಟೆಯ ವೇಳೆ ಈ ಘಟನೆ ನಡೆದಿದ್ದು, ಅಸಭ್ಯವಾಗಿ ವರ್ತಿಸುತ್ತಾ ಬಸ್ಸಿನ ಮುಂದೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾರೆ. ತೊಂದರೆ ಮಾಡದಂತೆ ಬಸ್ಸಿನ ಚಾಲಕ ಮನವಿ ಮಾಡಿದರೂ ಅದಕ್ಕೆ ಕ್ಯಾರೇ

ರಾತ್ರಿ ವೇಳೆ ಸರ್ಕಾರಿ ಬಸ್ಸಿಗೆ ಅಡ್ಡಗಟ್ಟಿ ಕುಡುಕರ ಕಿರಿಕಿರಿ Read More »

ಮಗು ಕರುಣಿಸಿದ ಪ್ರಕರಣ : ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದ ನ್ಯಾಯಾಲಯ ಬೆಂಗಳೂರು: ಪುತ್ತೂರಿನ ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ ಜೀವನಾಂಶ ಪಾವತಿಸಲು ಹೈಕೋರ್ಟ್‌ ಆದೇಶಿಸಿ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದೆ. ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು, ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಹೀಗಾಗಿ ಮುಂದಿನ ಆದೇಶದವರೆಗೂ ಮಗು ಹಾಗೂ ತಾಯಿಗೆ ಮಾಸಿಕ 75 ಸಾವಿರ ರೂಪಾಯಿ ಪಾವತಿಸುವಂತೆ ಅರ್ಜಿದಾರ ಕೃಷ್ಣ ಜೆ. ರಾವ್​ಗೆ

ಮಗು ಕರುಣಿಸಿದ ಪ್ರಕರಣ : ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ Read More »

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ವಿವಾದ : ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ

ಸರ್ಕಾರದ ವಿರುದ್ಧ ಪೋಷಕರ ತೀವ್ರ ಆಕ್ರೋಶ ಬೆಂಗಳೂರು : ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೆಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರವನ್ನು ಸಿಬ್ಬಂದಿ ಬಲವಂತವಾಗಿ ತೆಗೆಸಿರುವುದು ರಾಜ್ಯದಲ್ಲಿ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ಕೆಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಿದೆ. ಗುರುವಾರ ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ವಿವಾದ : ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ Read More »

ವಿದ್ಯುತ್ ತಂತಿ ಸ್ಪರ್ಶ: ಮಾವಿನ ಮರವೇರಿದ್ದ ವ್ಯಕ್ತಿ ಸಾವು

ಮಣಿಪಾಲ: ಡಿಸಿ ಆಫಿಸ್ ಹಿಂಭಾಗದ ಮಾವಿನ ಮರದಲ್ಲಿ ಮಾವಿನ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ. ಅಲೆವೂರು ನಿವಾಸಿ ಸದಾನಂದ ದೇವಾಡಿಗ(55) ಎಂಬವರೇ ‌ಮೃತ ದುರ್ದೈವಿ. ಗ್ರಾಮ ಸಹಾಯಕ ಕೆಲಸವನ್ನು ಅವರು ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಮಾವಿನ ಕಾಯಿ ಕೊಯ್ಯಲು ಅವರು ಮರವೇರಿದ್ದು, ಈ ವೇಳೆ ಅವರು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮರದಿಂದ ಮೃತದೇಹವನ್ನು ತೆರವು ಮಾಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶ: ಮಾವಿನ ಮರವೇರಿದ್ದ ವ್ಯಕ್ತಿ ಸಾವು Read More »

ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ

ಕಾರ್ಕಳ: ಗಾಂಧಿ ಮೈದಾನದ ಹತ್ತಿರದಲ್ಲಿರುವ ಶಾಂಭವಿ ಡಿವೈನ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಈ ದುರಂತ ನಡೆದಿದ್ದು, ಸುಮಾರು ಐದು ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸಂದೀಪ್ ಹೆಗ್ಡೆ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ಟಿವಿ ಸೇರಿದಂತೆ ಇತರ ಪರಿಕರಗಳು ಬೆಂಕಿಗೆ ಆಹುತಿಯಾಗಿವೆ.

ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ Read More »

error: Content is protected !!
Scroll to Top