ಹಳೇ ನೇರೆಂಕಿ ಗಂಗಾಧರ ಆಚಾರ್ಯ ನಿಧನ

ಉಪ್ಪಿನಂಗಡಿ: ಹಳೆನೇರೆಂಕಿ ಗ್ರಾಮದ ಪಾತ್ರ ಮಾಡಿ ನಿವಾಸಿ ಗಂಗಾಧರ ಆಚಾರ್ಯ (64 ವರ್ಷ ) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ನಾಲ್ಕು ದಶಕಗಳಿಂದ ಕಮ್ಮಾರಿಕೆ ವೃತ್ತಿಯನ್ನು ಮಾಡುತ್ತಿದ್ದ ಇವರು ಕೆಲವು ತಿಂಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಜನವರಿ 4ರಂದು ಮಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಅವರು ಅಸ್ವಸ್ಥಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಸವಿತ, ಪುತ್ರರಾದ ಮಹೇಶ್, ರಾಜೇಶ್, […]

ಹಳೇ ನೇರೆಂಕಿ ಗಂಗಾಧರ ಆಚಾರ್ಯ ನಿಧನ Read More »

ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಸಲುವಾಗಿ ಜ. 16 ರಂದು ಸಮರ್ಪಣ್ ವಿಟ್ಲ ಇವರಿಂದ ‘ಸಮರ್ಪಣ್ ಕಲೋತ್ಸವ 2026’ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಗೌರವ ಸಮರ್ಪಣೆ, ವಿದ್ಯಾನಿಧಿ ‌ಸಮರ್ಪಣೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ವಿಟ್ಲದ ಹಿರಿಯ ಸ್ವಯಂಸೇವಕ ಈಶ್ವರ ಡಿ. ಕೂಜಪ್ಪಾಡಿ ಅವರು ಬಿಡುಗಡೆ ಮಾಡಿದರು. ಸಮರ್ಪಣ್ ಕಲೋತ್ಸವದಲ್ಲಿ ಚೈತನ್ಯ ಕಲಾವಿದರು ಬೈಲೂರು ಅವರಿಂದ ರಾಘು ಮಾಸ್ಟ್ರು ಎಂಬ ತುಳು ಹಾಸ್ಯಮಯ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ಸಮರ್ಪಣ್

ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ

ಉಳಿದವರೆಲ್ಲ ಹೊರಗಿನವರು ಎಂದು ವರದಿ ಸಲ್ಲಿಸಿದ ಅಧಿಕಾರಿಗಳು ಬೆಂಗಳೂರು: ನೆಲಸಮ ಕಾರ್ಯಾಚರಣೆಯಿಂದ ದೇಶಾದ್ಯಂತ ಸುದ್ದಿಯಾಗಿರುವ ವಿವಾದಗ್ರಸ್ತ ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಹೊರಗಿನಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಸಂಗ್ರಹಿಸಿದ್ದು, ಅವುಗಳ ನೈಜತೆಯನ್ನು ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ Read More »

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌

ಆರ್‌ಎಸ್‌ಎಸ್‌ನವರು ವಿಷಕಾರಿಗಳು ಎಂದಿ ಅವಹೇಳನ ಮಾಡಿದ್ದ ಪ್ರಿಯಾಂಕ್‌ ಖರ್ಗೆ ಬೆಂಗಳೂರು : ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌ Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ

24 ತಾಸುಗಳಲ್ಲಿ ಮೂವರು ಹಿಂದೂಗಳ ಮರ್ಡರ್‌ ಢಾಕಾ: ಬಾಂಗ್ಲಾದೇಶದಲ್ಲಿ ದಿನಸಿ ಅಂಗಡಿಯ ಮಾಲೀಕನಾಗಿದ್ದ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಘಟನೆಯಾಗಿದೆ. ಹತ್ಯೆಯಾದವರನ್ನು ಮೋನಿ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯಲ್ಲಿ ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಗೂ ಕೆಲವು ಗಂಟೆಗಳ ಮೊದಲು, ಜಶೋರ್ ಜಿಲ್ಲೆಯಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಪತ್ರಿಕೆಯೊಂದರ

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ Read More »

ಕೇಂದ್ರದ ಮಾಜಿ ಸಚಿವ ಸುರೇಶ್‌ ಕಲ್ಮಾಡಿ ನಿಧನ

ನವದೆಹಲಿ : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಇಂದು ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾಣೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸುರೇಶ್‌ ಕಲ್ಮಾಡಿ ಮೂಲತಃ ಉಡುಪಿ ಸಮೀಪ ಕಲ್ಮಾಡಿಯವರು.

ಕೇಂದ್ರದ ಮಾಜಿ ಸಚಿವ ಸುರೇಶ್‌ ಕಲ್ಮಾಡಿ ನಿಧನ Read More »

ಪ್ರತಾಪ್‌ ಸಿಂಹ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುವುದು ಪಕ್ಕಾ

ಚಾಮರಾಜ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿ ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗಲು ತೀರ್ಮಾನಿಸಿದ್ದಾರೆ. ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದ ಅವರಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಆದರೆ ಇದೀಗ ಪ್ರತಾಪ್ ಸಿಂಹ ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ ಹೆಜ್ಜೆ ಇಟ್ಟಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಲ್ಲದೇ ತಮಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸುವ ಒಲವಿದೆ ಎಂಬ ಕುರಿತೂ ಸಹ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ

ಪ್ರತಾಪ್‌ ಸಿಂಹ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುವುದು ಪಕ್ಕಾ Read More »

ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ, ಓರ್ವನ ಬಂಧನ

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಕಜೆಕ್ಕಾರ್ ಗುಡ್ದ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ. ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ

ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ, ಓರ್ವನ ಬಂಧನ Read More »

ಹೊಗೆಯಿಂದ ಉಸಿರುಕಟ್ಟಿ ಮಂಗಳೂರಿನ ಮಹಿಳೆ ಸಾವು

ಫ್ಲ್ಯಾಟ್‌ಗೆ ಬೆಂಕಿಹತ್ತಿಕೊಂಡಾಗ ಹೊರ ಬರಲಾಗದೆ ಸಾವು ಬೆಂಗಳೂರು: ಬೆಂಕಿ ಹತ್ತಿಕೊಂಡಾಗ ಉಸಿರುಗಟ್ಟಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ವರದಿಯಾಗಿದೆ. ಜನವರಿ 3ರಂದು ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರ್ಮಿಳಾ (34) ಮೃತ ದುರ್ದೈವಿ. ಶರ್ಮಿಳಾ ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್‌ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಸೇರಿದ್ದರು. ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ರೂಮ್‌ನಲ್ಲಿ ಜ.3ರಂದು ರಾತ್ರಿ

ಹೊಗೆಯಿಂದ ಉಸಿರುಕಟ್ಟಿ ಮಂಗಳೂರಿನ ಮಹಿಳೆ ಸಾವು Read More »

ಕೆಎಸ್‌ಆರ್‌ಟಿಸಿ ಪ್ರೀಮಿಯರ್‌ ಬಸ್‌ಗಳ ಟಿಕೆಟ್‌ ದರ ಕಡಿತ

ಬೆಂಗಳೂರು-ಮಂಗಳೂರು ಸೇರಿ ಕೆಲವು ರೂಟ್‌ಗಳಲ್ಲಿ ರಿಯಾಯಿತಿ ದರ ಅನ್ವಯ ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ ಆಯ್ದ ಕೆಲವು ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಮಾರ್ಚ್‌ವರೆಗೆ ಪ್ರೀಮಿಯರ್ ಬಸ್‌ಗಳಲ್ಲಿ ಶೇ.5 ರಿಂದ ಶೇ.15 ಟಿಕೆಟ್ ದರ ಕಡಿತದ ಕೊಡುಗೆ ಸರ್ಕಾರ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್‌ಗಳ ಪ್ರಯಾಣ ದರಗಳಲ್ಲಿ ಶೇ.5-15 ರಿಯಾಯಿತಿ ಘೋಷಿಸಿದೆ. ಜನವರಿಯಿಂದ ಮಾರ್ಚ್‌ವರೆಗೆ ಪ್ರಯಾಣಿಕರ ದಟ್ಟಣೆ ಕಡಿಮೆಯಿರುವ ಹಿನ್ನೆಲೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಆದರೆ ಈ ದರ ವಾರದ ದಿನಗಳಲ್ಲಿ ಮಾತ್ರ

ಕೆಎಸ್‌ಆರ್‌ಟಿಸಿ ಪ್ರೀಮಿಯರ್‌ ಬಸ್‌ಗಳ ಟಿಕೆಟ್‌ ದರ ಕಡಿತ Read More »

error: Content is protected !!
Scroll to Top