ಸಾರ್ವಜನಿಕ ಸ್ಥಳದಲ್ಲಿ ಮಾರಾಕಾಸ್ತ್ರ ಹಿಡಿದ ಪುಂಡರು: ಆರೋಪಿಗಳ ಬಂಧನ, ಗಾಂಜಾ ವಶ

ದಾವಣಗೆರೆ: ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಹಿಡಿದು ಪುಂಡಾಟ ಮೆರೆದ ಇಬ್ಬರು ರೌಡಿ ಶೀಟರ್‌ಗಳನ್ನು ಕೆಟಿಜೆ ನಗರ ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಭಾರೀ ಪ್ರಮಾಣದ ಗಾಂಜಾ ಜಪ್ತಿ ‌ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಸಾಹಿಲ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ನಿಟ್ಟುವಳ್ಳಿ ಶ್ರೀರಾಮ ಬಡಾವಣೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು.‌ ಈ ಸಮಯದಲ್ಲಿ ಅಟೋದಲ್ಲಿ ಬಂದ ಆರೋಪಿಗಳಿಬ್ಬರು ಲಾಂಗ್, ಮಚ್ಚು ಹಿಡಿದು ಓಡಾಟ ನಡೆಸಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದಲ್ಲಿ […]

ಸಾರ್ವಜನಿಕ ಸ್ಥಳದಲ್ಲಿ ಮಾರಾಕಾಸ್ತ್ರ ಹಿಡಿದ ಪುಂಡರು: ಆರೋಪಿಗಳ ಬಂಧನ, ಗಾಂಜಾ ವಶ Read More »

ONGC ಪೈಪ್‌ಲೈನ್ ‌ಸ್ಪೋಟ: ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆ

ಆಂಧ್ರಪ್ರದೇಶ: ರಾಜ್ಯದ ಕೊನಸಿಮಾ ಜಿಲ್ಲೆಯ ಮಾಲಿಕಿಪುರಂ ಮಂಡಲದ ಇರುಸುಮುಂಡ ಗ್ರಾಮದಲ್ಲಿ ಒಎನ್‌ಜಿಸಿ ಪೈಪ್‌ಲೈನ್ ಸ್ಪೋಟವಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿದೆ. ಈ ಹಿನ್ನೆಲೆ ಹತ್ತಿರದ ಮೂರು ಗ್ರಾಮಗಳ ಜನರನ್ನು ಸ್ಥಳಾಂತರ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಉಪಕರಣಗಳು, ಸ್ಟೌ, ಗ್ಯಾಸ್ ಸೇರಿದಂತೆ ಯಾವುದೇ ಬೆಂಕಿ ಹೊತ್ತುವ ಸಲಕರಣೆಗಳನ್ನು ಬಳಕೆ ಮಾಡದಂತೆ ಸೂಚಿಸಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ನಿಭಾಯಿಸಲು ONGC ತಂಡವನ್ನು ನಿಯೋಜಿಸಲಾಗಿದೆ. ONGC ಬಾವಿ ಮರು ಕೊರೆಯುವ ಕೆಲಸ ನಡೆಯುವ ಸಮಯದಲ್ಲಿ ಈ ದುರಂತ ಸಂಭವಿಸಿದೆ.

ONGC ಪೈಪ್‌ಲೈನ್ ‌ಸ್ಪೋಟ: ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆ Read More »

ಹರಿದ್ವಾರಕ್ಕೆ ಹಿಂದೂಯೇತರರ ನಿಷೇಧ: ಉತ್ತರಾಖಂಡ್ ಸಿಎಂ ಹೇಳಿದ್ದೇನು?

ಡೆಹ್ರಾಡೂನ್: ಹರಿದ್ವಾರ ಮತ್ತು ಇನ್ನಿತರ ಹಿಂದೂಗಳ ಧಾರ್ಮಿಕ ಯಾತ್ರಾ ಸ್ಥಳಗಳಿಗೆ ಹಿಂದೂಯೇತರರ ಪ್ರವೇಶ‌ ನಿರ್ಬಂಧಿಸುವ ಕುರಿತು ಉತ್ತರಾಖಂಡ್ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಅಲ್ಲಿನ ಸಿಎಂ ಪುಷ್ಕರ್ ಸಿಂಗ್ ಧಾಮಿ ಮಾತನಾಡಿದ್ದು, ಪವಿತ್ರ ನಗರ ಹರಿದ್ವಾರ. ಆ ದೇವ ಭೂಮಿಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಸ್ವರೂಪವನ್ನು ಕಾಪಾಡಲು ಸರ್ಕಾರ ಬದ್ಧ.‌ ಅಲ್ಲಿನ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶ ನಿರ್ಬಂಧಕ್ಕೆ ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಹರಿದ್ವಾರದಲ್ಲಿ 2027 ರಲ್ಲಿ ಅರ್ಧ ಕುಂಭ ಮೇಳ ನಡೆಯಲಿದೆ‌.

ಹರಿದ್ವಾರಕ್ಕೆ ಹಿಂದೂಯೇತರರ ನಿಷೇಧ: ಉತ್ತರಾಖಂಡ್ ಸಿಎಂ ಹೇಳಿದ್ದೇನು? Read More »

ಶಾಶ್ವತವಾದದ್ದು ಎಂದಿಗೂ ನಾಶವಾಗುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಸಾವಿರಾರು ವರುಷಗಳ ಐಹಿತ್ಯವುಳ್ಳ ಪ್ರಸಿದ್ಧ ಸೋಮನಾಥ ದೇಗುಲದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೇಖನವೊಂದನ್ನು ಬರೆದಿದ್ದಾರೆ. ದೇಗುಲದ ಮೇಲೆ ಘಜ್ನಿ ದಾಳಿ ನಡೆಸಿ ಸಾವಿರ ವರ್ಷಗಳಾಗುತ್ತಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆ ಅವರು ದೇವಾಲಯದ ಬಗ್ಗೆ ಬರೆದುಕೊಂಡಿದ್ದು, ಇದು ಕೇವಲ ಆರಾಧನಾ ಸ್ಥಳವಲ್ಲ ಬದಲಾಗಿ ಭಾರತದ ಆತ್ಮ, ನಾಗರೀಕತೆಯ ಪ್ರತೀಕ ಎಂದು ವರ್ಣಿಸಿದ್ದಾರೆ. ಸೋಮನಾಥ ಎಂಬ ಹೆಸರು ಕೇಳಿದಾಗ ಹೃದಯದಲ್ಲಿ ಹೆಮ್ಮೆ ಮೂಡುತ್ತದೆ. ಇದು

ಶಾಶ್ವತವಾದದ್ದು ಎಂದಿಗೂ ನಾಶವಾಗುವುದಿಲ್ಲ: ಪ್ರಧಾನಿ ಮೋದಿ Read More »

ಹೀಲಿಯಂ ಗ್ಯಾಸ್ ಸ್ಪೋಟ: ಮೃತರ ಕುಟುಂಬಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಗ್ಯಾಸ್ ಸ್ಫೋಟದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ‌ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕ್ರಿಸ್‌ಮಸ್‌ ದಿನದಂದು ಅರಮನೆ ಮುಂದೆ ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಸ್ಪೋಟವಾಗಿತ್ತು. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದರು. ಮೃತರ ನೋವಿಗೆ ಸ್ಪಂದಿಸಿರುವ ಸಿ ಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಪರಿಹಾರದ ಭರವಸೆ

ಹೀಲಿಯಂ ಗ್ಯಾಸ್ ಸ್ಪೋಟ: ಮೃತರ ಕುಟುಂಬಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಸಿದ್ದರಾಮಯ್ಯ Read More »

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ

ಅಂಕ ಗಳಿಕೆಯೇ ‌ಶಿಕ್ಷಣವಲ್ಲ: ರಾಜೇಂದ್ರ ಭಟ್ ಕೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ: ಶಿವರಾಮ ಏನೆಕಲ್ ಕಾಣಿಯೂರು: ಸಾಧನೆ ಮಾಡಬೇಕು ಎನ್ನುವವರಿಗೆ ಅಸಾಧ್ಯವಾದದ್ದು ಏನೂ ಇಲ್ಲ. ವಿದ್ಯಾರ್ಥಿಯಾಗಿದ್ದಾಗಲೇ ಪರಿಶ್ರಮ, ಅಭ್ಯಾಸ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಕುದ್ಮಾರು ಶಾಲೆಯಲ್ಲಿ ಮಕ್ಕಳ ಸಾಧನೆಗೆ ಪೂರಕ ವಾತಾವರಣ ಇರುವುದು ಸಂತಸದ ವಿಷಯ ರಾಷ್ಟ್ರೀಯ ಮಟ್ಟದ ವಿಕಸನ ತರಬೇತುದಾರ, ನಿವೃತ್ತ ಪ್ರಾಂಶುಪಾಲ ಸೀತಾರಾಮ ಕೇವಳ ಹೇಳಿದರು. ಅವರು ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು SDMC ವತಿಯಿಂದ ಸ.

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ Read More »

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌

15-17 ವರ್ಷದ ನಾಲ್ಕು ಮಂದಿಯನ್ನು ಬಂಧಿಸಿದ್ದೇವೆ ಎಂದ ಗೃಹ ಸಚಿವ ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲೆಸೆದವರು ನಾಲ್ಕೈದು ಚಿಕ್ಕ ಹುಡುಗರು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಅವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌ Read More »

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ

ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದಕ್ಕೆ ಸಾಕ್ಷಿ ಇದೆ ಎಂದ ಸುಪ್ರೀಂ ಕೋರ್ಟ್‌ ನವದೆಹಲಿ : ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಇಂದು ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ Read More »

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ

ಅಕ್ರಮವಾಗಿ ಮನೆ ನಿರ್ಮಿಸಿದ್ದು ನಿಜ ಎಂದ ಸಚಿವ ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ

ಮೂರು ಹಂತಗಳಲ್ಲಿ ನಡೆಯಲಿದೆ ಪ್ರಿಪರೇಟರಿ ಎಕ್ಸಾಮ್‌ ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ Read More »

error: Content is protected !!
Scroll to Top