ಮಾ. 8: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಹತ್ತೂರೊಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಮಾ. 8 ರಂದು ಬಿಡುಗಡೆ ಮಾಡಲಿದ್ದಾರೆ. ಮಹಾಲಿಂಗೇಶ್ವರ ದೇಗುಲದಲ್ಲಿ ಮಾ. 8 ರಂದು 11 ಗಂಟೆಗೆ ದೇಗುಲದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಎ. 1 ರಂದು ಜಾತ್ರಾ ಪ್ರಯುಕ್ತ ಗೊನೆ ‌ಮುಹೂರ್ತ ನಡೆಯಲಿದ್ದು, ಎ. 19 ರ ವರೆಗೆ ಪುತ್ತೂರು ಜಾತ್ರೆ ಬಹಳಷ್ಟು ವೈಭವದಿಂದ ನಡೆಯಲಿದೆ. ಪ್ರಧಾನ ವಿಧಿ […]

ಮಾ. 8: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾರು – ಬೈಕ್ ಅಪಘಾತ: ಮೂರು ಸಾವು

ಗದಗ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಮುಂಡರಗಿಯ ಮೇವುಂಡಿ ಎಂಬಲ್ಲಿ ನಡೆದಿದೆ. ಮೃತರನ್ನು ‌ಶಿವಪ್ಪ ಪಾಟ್ಲಿ, ಮುತ್ತಪ್ಪ ‌ಮುದುಗಣ್ಣವರ್, ಆನಂದ ಲಕ್ಷ್ಮೇಶ್ವರಮಠ ಎಂದು ಗುರುತಿಸಲಾಗಿದೆ. ಒಂದೇ ಬೈಕಿನಲ್ಲಿ ಈ ಮೂವರು ಮುಂಡರಗಿಯಿಂದ ಜಂತ್ಲಿ ಗ್ರಾಮಕ್ಕೆ ಹೋಗುತ್ತಿದ್ದರು. ಕಾರು ಡೋಣಿ ಗ್ರಾಮದಿಂದ ಮುಂಡರಗಿಯತ್ತ ಹೋಗುತ್ತಿತ್ತು. ಬೈಕ್ ಸವಾರರ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದೆ. ಕಾರು

ಕಾರು – ಬೈಕ್ ಅಪಘಾತ: ಮೂರು ಸಾವು Read More »

ಹದಿನಾರರೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ: ಸಿಎಂ ಸಿದ್ದರಾಮಯ್ಯ ಅವರ ದಿಟ್ಟ ನಿಲುವು

ಬೆಂಗಳೂರು: ಹದಿನಾರು ವರ್ಷದೊಳಗಿನ ಮಕ್ಕಳಿಗೆ ರಾಜ್ಯದಲ್ಲಿ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸುವಂತಹ ದಿಟ್ಟ ನಿಲುವನ್ನು ಸಿಎಂ ‌ಸಿದ್ದರಾಮಯ್ಕ ಅವರ ನೇತೃತ್ವದ ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ಇಂದಿನ ಬಜೆಟ್ ಮಂಡನೆಯ ವೇಳೆ ಸಿಎಂ ‌ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಇದು ಅವರ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ ಹದಿನಾರರ ಒಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧದಂತಹ ಕ್ರಮ ಕೈಗೊಳ್ಳಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ. ಹಾಗೆಯೇ ಮಾದಕ

ಹದಿನಾರರೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ: ಸಿಎಂ ಸಿದ್ದರಾಮಯ್ಯ ಅವರ ದಿಟ್ಟ ನಿಲುವು Read More »

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ: ವೀಕ್ಷಿಸಿದ ಯುವತಿಯರಿಗೆ ಬಂತು ಬೆದರಿಕೆ ಕರೆ

ಪುತ್ತೂರು: ನಗರದ ಜಿ. ಎಲ್. ಒನ್ ಮಾಲ್‌ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ ‘ದಿ ಕೇರಳ ಸ್ಟೋರಿ 2’ ಚಿತ್ರವನ್ನು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪ್ರದರ್ಶಿಸಲಾಗಿದ್ದು, ಇದರ ಬೆನ್ನಲ್ಲೇ ಈ ವಿಷಯದ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿವೆ. ಕೆಲವು ರಾಜಕೀಯ ನಾಯಕರು ಈ ಚಿತ್ರದ ಪ್ರದರ್ಶನಕ್ಕೆ ಬೆಂಬಲ ಸೂಚಿಸಿದ್ದರು. ವಿದ್ಯಾರ್ಥಿಗಳು ಸಹ ಚಿತ್ರವನ್ನು ನೋಡಿದ್ದರು. ಅದಾದ ಬಳಿಕ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ವಿಚಾರಗಳನ್ನು ಕೆಲವು ವಿಘ್ನಸಂತೋಷಿಗಳು ಹರಡಲು ಆರಂಭಿಸಿದ್ದಾರೆ. ಜೊತೆಗೆ ಚಲನಚಿತ್ರದ ಬುಕ್ಕಿಂಗ್‌ಗಾಗಿ

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ: ವೀಕ್ಷಿಸಿದ ಯುವತಿಯರಿಗೆ ಬಂತು ಬೆದರಿಕೆ ಕರೆ Read More »

ಬಜೆಟ್‌ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿಷೇಧ

ಮೀನುಗಾರಿಕೆ ಪ್ರೋತ್ಸಾಹ ಧನ ಹೆಚ್ಚಳ ಅಡಿಕೆ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ 10 ಕೋಟಿ ರೂ. ಮೀಸಲು ಬೆಂಗಳೂರೂ : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆರ ಸರಿಯಾಗಿ ಬಜೆಟ್‌ ಮಂಡನೆ ಪ್ರಾರಂಭಿಸಿದ್ದಾರೆ. ಬಜೆಟ್‌ ಘೋಷಣೆಯ ಕೆಲವು ಮುಖ್ಯಾಂಶಗಳು ಇಲ್ಲಿವೆ. *ಮೀನುಗಾರಿಕೆ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್, ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು. ಉತ್ತರ ಕನ್ನಡ, ದಕ್ಷಿಣ

ಬಜೆಟ್‌ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿಷೇಧ Read More »

ಆರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಧರ್ಮಸ್ಥಳ: ಕಳ್ಳತನ ಪ್ರಕರಣವೊಂದರ ಆರೋಪಿ ಕಳೆದ ಆರು ವರ್ಷಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದು, ಆತನನ್ನು ತುಮಕೂರಿನ ತಿಪಟೂರಿನಲ್ಲಿ ಧರ್ಮಸ್ಥಳ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರಿನ ಕುಂಬಳಗೋಡು ನಿವಾಸಿ ವೆಂಕಟೇಶ್ ಯಾನೆ ಡಾಬರ್ ವೆಂಕಟೇಶ್ ಎಂದು ಗುರುತಿಸಲಾಗಿದೆ. 2017 ರ ಸಮಯದಲ್ಲಿ ಡಾಬರ್ ವೆಂಕಟೇಶ್ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕಳ್ಳತನಕ್ಕೆ ‌ಸಂಬಂಧಿಸಿದ ಪ್ರಕರಣವೊಂದು ದಾಖಲಾಗಿತ್ತು. ಸತತ ಆರು ವರ್ಷಗಳಿಂದ ಆತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ. ಸದ್ಯ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ Read More »

ಆರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ನ್ಯಾಯಾಲಯಕ್ಕೆ ರಾಜನಾದ ಬಳಿಕ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕಡಬದ ವಿನೋದ್ ಯಾನೆ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ. ಆರೋಪಿ ವಿನೋದ್‌ನ ಮೇಲೆ 2019 ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಜೀವ ಬೆದರಿಕೆ ಮೊದಲಾದ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಬಳಿಕ ಆತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಸದ್ಯ ಉಪ್ಪಿನ ಗಡಿ ಪೊಲೀಸರು ಮಾರ್ಚ್ 5 ರಂದು ಆರೋಪಿಯನ್ನು

ಆರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಪತ್ನಿಯ ಮೇಲೆ ಆ್ಯಸಿಡ್ ಹಾಕಿದ ಪತಿ

ಊಟ ತಂದು ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಗಂಡನಿಂದ ಕೃತ್ಯ ಬೆಳ್ತಂಗಡಿ: ಪತಿಯೇ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಗಾಯಗೊಳಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಪ್ಲೊಟ್ಟುನಲ್ಲಿ ನಡೆದಿದೆ. ಕುಪ್ಲೊಟ್ಟು ನಿವಾಸಿ ಲಿಂಗಪ್ಪ ಪ್ರಕರಣದ ಆರೋಪಿಯಾಗಿದ್ದು, ಆ್ಯಸಿಡ್ ದಾಳಿಗೊಳಗಾದ ಆತನ ಪತ್ನಿ ಸರೋಜ(44) ಎಂಬವರು ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಸರೋಜಾ ಗಂಡ ಊಟ ಕೇಳಿದ ಸಂದರ್ಭದಲ್ಲಿ ಊಟವನ್ನು ನೀಡಿರಲಿಲ್ಲ. ಬಳಿಕ ಪಕ್ಕದ ಸಂಬಂಧಿಕರ ಮನೆಯಲ್ಲಿ ಊಟ ಮಾಡಿ ಬಂದು ಮಲಗಿದ ಸಂದರ್ಭದಲ್ಲಿ

ಪತ್ನಿಯ ಮೇಲೆ ಆ್ಯಸಿಡ್ ಹಾಕಿದ ಪತಿ Read More »

ಪೊಲೀಸ್‌ ಇಲಾಖೆಯ ಆರ್ಡರ್ಲಿ ಪದ್ಧತಿ ಕೊನೆಗೂ ರದ್ದು

ಕಾನ್‌ಸ್ಟೆಬಲ್‌ಗಳನ್ನು ಹಿರಿಯ ಅಧಿಕಾರಿಗಳ ಮನೆಗೆಲಸಕ್ಕೆ ಬಳಸುತ್ತಿದ್ದ ವ್ಯವಸ್ಥೆ ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ನಡೆದುಬಂದಿದ್ದ ‘ಆರ್ಡರ್ಲಿ’ ಪದ್ಧತಿ ಕೊನೆಗೂ ಅಂತ್ಯಗೊಂಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರ ಆದೇಶ ಹಿನ್ನೆಲೆ ಬ್ರಿಟಿಷ್‌ ಯುಗದ ಆರ್ಡರ್ಲಿ ಪದ್ಧತಿ ರದ್ದುಪಡಿಸಲಾಗಿದೆ. ಆರ್ಡರ್ಲಿ ಪದ್ಧತಿ ಬ್ರಿಟಿಷ್ ಕಾಲದಲ್ಲಿ ಆರಂಭವಾದ ವ್ಯವಸ್ಥೆ. ಈ ವ್ಯವಸ್ಥೆಯಡಿ ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಹಿರಿಯ ಅಧಿಕಾರಿಗಳ ಮನೆಗಳಿಗೆ ನಿಯೋಜಿಸಿ, ಅವರ ವೈಯಕ್ತಿಕ ಕೆಲಸಗಳನ್ನು ಮಾಡಿಸುವ ಪದ್ಧತಿ ನಡೆದುಬಂದಿತ್ತು. ಅಡುಗೆ ಮಾಡುವುದು, ಮನೆ ಸ್ವಚ್ಛಗೊಳಿಸುವುದು, ಮಕ್ಕಳನ್ನು ಶಾಲೆಗೆ

ಪೊಲೀಸ್‌ ಇಲಾಖೆಯ ಆರ್ಡರ್ಲಿ ಪದ್ಧತಿ ಕೊನೆಗೂ ರದ್ದು Read More »

ವಿಜಯೇಂದ್ರ, ಸುನಿಲ್‌ ಕುಮಾರ್‌ ವಿರುದ್ಧ ಕೀಳು ಟೀಕೆ : ಡಿಕೆಶಿಗೆ ಹೈಕೋರ್ಟ್‌ ರಿಲೀಫ್‌

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಅವಮಾನ ಮಾಡಿದ್ದ ಡಿಸಿಎಂ ಬೆಂಗಳೂರು: ಬಿಜೆಪಿ ನಾಯಕರನ್ನು ಟೀಕಿಸುವ ಉದ್ದೇಶದಿಂದ ಆಕ್ಷೇಪಾರ್ಹ ಬರಹಗಳಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮರ್ ಅವರಿಗೆ ಹೈಕೋರ್ಟಿನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್

ವಿಜಯೇಂದ್ರ, ಸುನಿಲ್‌ ಕುಮಾರ್‌ ವಿರುದ್ಧ ಕೀಳು ಟೀಕೆ : ಡಿಕೆಶಿಗೆ ಹೈಕೋರ್ಟ್‌ ರಿಲೀಫ್‌ Read More »

error: Content is protected !!
Scroll to Top