ಮೇ 10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ

ಆರ್ಟ್‌ ಅಫ್‌ ಲಿವಿಂಗ್‌ ಧ್ಯಾನ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಶ್ರೀ ರವಿಶಂಕರ್‌ ಗುರೂಜಿ ಜನ್ಮದಿನ ನಿಮಿತ್ತ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಈ ಸಂದರ್ಭದಲ್ಲಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಇದು ಸುಮಾರ 4 ಎಕರೆ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿರುವ ಬೃಹತ್‌ ಧ್ಯಾನಮಂದಿರವಾಗಿದ್ದು, ಅನೆಕ ಸೌಲಭ್ಯಗಳನ್ನು ಒಳಗೊಂಡಿದೆ. ಕಂಬ ರಹಿತ ಮುಖ್ಯ […]

ಮೇ 10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ Read More »

ಸವಣೂರಿನಲ್ಲಿ ಭೀಕರ ಅಪಘಾತ : ಯುವಕರಿಬ್ಬರು ಸಾವು

ಸ್ಕೂಟಿಗೆ ನೀರಿನ ಟ್ಯಾಂಕರ್‌ ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಕಡಬ: ಸ್ಕೂಟಿಗೆ ಟಾಂಕರ್‌ ಡಿಕ್ಕಿಯಾಗಿ ಸ್ಕೂಟಿ ಸವಾರಿ ಮಾಡುತ್ತಿದ್ದ ಯುವಕರಿಬ್ಬರು ಮೃತಪಟ್ಟ ಭೀಕರ ಅಪಘಾತ ಮಂಗಳವಾರ ಸಂಜೆ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ಸವಣೂರು ಸಮೀಪ ಚಾಪಳ್ಳ ತಿರುವಿನಲ್ಲಿ ಸಂಭವಿಸಿದೆ. ಬಂಟ್ವಾಳದ ಕಲ್ಲಡ್ಕ ಸಮೀಪದ ಗೋಳ್ತಮಜಲಿನ ಯಜ್ಞೇಶ್‌ (20) ಮತ್ತು ಪಾಣಾಜೆ ಗ್ರಾಮದ ಭರಣ್ಯ ನಿವಾಸಿ ಜಗನ್‌ (21) ಮೃತಪಟ್ಟಿರುವ ದುರ್ದೈವಿಗಳು. ಯುವಕರಿಬ್ಬರು ಸ್ಕೂಟಿಯಲ್ಲಿ ಆಲಂಕಾರಿನ ದೇವಸ್ಥಾನಕ್ಕೆ ಹೋಗಿ ವಾಪಸು ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಯಜ್ಞೇಶ್‌ ಡೆಲಿವರಿ ಬಾಯ್‌

ಸವಣೂರಿನಲ್ಲಿ ಭೀಕರ ಅಪಘಾತ : ಯುವಕರಿಬ್ಬರು ಸಾವು Read More »

ಸಚಿವ ಜಮೀರ್‌ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಆಭರಣ ಕದ್ದ ಇಬ್ಬರ ಬಂಧನ

ತಾಯಿಯ ಸಂಬಂಧಿಕನಿಂದಲೇ ಕಳ್ಳತನ ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಿಂದ ಕಳೆದ ಮೂರು ವರ್ಷದಲ್ಲಿ ಹಂತ ಹಂತವಾಗಿ ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇಪದೆ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ. ಬಂಧಿತ

ಸಚಿವ ಜಮೀರ್‌ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಆಭರಣ ಕದ್ದ ಇಬ್ಬರ ಬಂಧನ Read More »

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್

ಜಾತಿ ನಿಂದನೆ ಕೇಸಿನಲ್ಲಿ ಬಂಧನಕ್ಕೆ ವಾರಂಟ್‌ ಜಾರಿ ಬೆಂಗಳೂರು : ಜಾತಿನಿಂದನೆ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ Read More »

ಕ್ರೇನ್ ಗುದ್ದಿ ‌ದ್ವಿಚಕ್ರ ವಾಹನ ಸವಾರ ಸಾವು

ಬೆಳ್ತಂಗಡಿ: ಕ್ರೇನ್ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲುವಿನಲ್ಲಿ ‌ನಡೆದಿದೆ. ಬಳಂಜದ ಜಯ ಮೇಸ್ತ್ರಿ(49) ಎಂಬವರೇ ‌ಮೃತ ದುರ್ದೈವಿ. ಬೆಳಾಲಿನಲ್ಲಿ ಬಾಡಿಗೆ ಮನೆಯಲ್ಲಿ ಅವರು ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೇನ್ ಗುದ್ದಿ ‌ದ್ವಿಚಕ್ರ ವಾಹನ ಸವಾರ ಸಾವು Read More »

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಜೀಪು ಚಾಲಕನ ಮೇಲೆ ವಾಮಾಚಾರ: ದೂರು ದಾಖಲು

ಚಿಕ್ಕಮಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯ ‌ಮನೆಯ ಮುಂದೆ ವಾಮಾಚಾರ ನಡೆಸಿರುವ ಘಟನೆ ಬಾಳೇಹೊನ್ನೂರಿನಲ್ಲಿ ನಡೆದಿದೆ. ಎಸಿಎಫ್ ಮೋಹನ್ ಮತ್ತು ಜೀಪು ಚಾಲಕನನ್ನು ಗುರಿಯಾಗಿಸಿ ಈ ವಾಮಾಚಾರ ನಡೆಸಲಾಗಿದೆ. ಅನಾಮಧೇಯ ವ್ಯಕ್ತಿಗಳು ಮೋಹನ್ ಅವರ ಮನೆಯ ಗೇಟಿನ‌ ಮುಂದೆ ವಾಮಾಚಾರ ನಡೆಸಿರುವುದಾಗಿದೆ. ಮೋಹನ್ ಮತ್ತು ಚಾಲಕನ ಫೋಟೋ‌ಗಳನ್ನು ಮಣ್ಣಿನ ಮಡಿಕೆಯ ಒಳಗೆ ಇರಿಸಿ, ಅದಕ್ಕೆ ಅರಿಸಿನ ಕುಂಕುಮ ಹಾಕಿ ಬಳಿಕ ಅದನ್ನು ಒಡೆದು ಹಾಕಲಾಗಿದೆ. ಮೋಹನ್ ಅವರಿಗೆ ಇಂದು ಬೆಳಗ್ಗೆ ಈ ದೃಶ್ಯ ಕಂಡಿದ್ದು, ಅವರ ಮನೆಯವರನ್ನು ಆತಂಕಕ್ಕೆ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಜೀಪು ಚಾಲಕನ ಮೇಲೆ ವಾಮಾಚಾರ: ದೂರು ದಾಖಲು Read More »

ಮಾದಕ ದ್ರವ್ಯ ಸೇವನೆ, ಹೆಲ್ಮೆಟ್ ಇಲ್ಲದ ದ್ವಿಚಕ್ರ ವಾಹನ ಚಾಲನೆ: ಮಹಮ್ಮದ್ ಅಸ್ಬೀರ್ ಪೊಲೀಸ್ ವಶಕ್ಕೆ

ವಿಟ್ಲ: ಪೊಲೀಸರು ವಿಟ್ಲದ ‌ನಾಲ್ಕು ಮಾರ್ಗ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಹೆಲ್ಮೆಟ್ ಧರಿಸದೆ ಯುವಕನೊಬ್ಬ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ವಿಚಾರಿಸಿದಾಗ ಮಾದಕ ದ್ರವ್ಯ ಸೇವಿಸಿರುವುದಾಗಿ ‌ತಿಳಿದು ಬಂದಿದೆ. ಸದ್ಯ ಆತನ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್(26) ಎಂದು ಗುರುತಿಸಲಾಗಿದೆ. ಯುವಕ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಆತನನ್ನು ತಡೆದು ನಿಲ್ಲಿಸಿದ್ದಾರೆ. ಆದರೆ ಈ ವೇಳೆ ಆತ ಪೊಲೀಸರ ಜೊತೆಗೆ ಅಸಭ್ಯವಾಗಿ, ಅನುಚಿತವಾಗಿ ವರ್ತಿಸಿದ್ದಾನೆ. ಮಾದಕ

ಮಾದಕ ದ್ರವ್ಯ ಸೇವನೆ, ಹೆಲ್ಮೆಟ್ ಇಲ್ಲದ ದ್ವಿಚಕ್ರ ವಾಹನ ಚಾಲನೆ: ಮಹಮ್ಮದ್ ಅಸ್ಬೀರ್ ಪೊಲೀಸ್ ವಶಕ್ಕೆ Read More »

ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮದ FIR ಗೆ ಹೈಕೋರ್ಟ್ ತಡೆ: ಜೀವರಾಜ್‌ಗೆ ನಿರಾಳ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಅಂಚೆ ಮತ ಎಣಿಕೆ ಕಾರ್ಯದಲ್ಲಿ ಆಕ್ರಮಣ ನಡೆದಿರುವುದಾಗಿ ಆರೋಪಿಸಿ ದಾಖಲಾಗಿದ್ದ ಎಫ್‌ಐ‌ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಮಾಜಿ ಶಾಸಕ ಡಿ. ಎನ್. ಜೀವರಾಜ್, ಆಗಿನ ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಮತ್ತು ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚುನಾವಣಾ ಅಕ್ರಮದ ಹಿನ್ನೆಲೆ ಕಾನೂನು ಕ್ರಮ ಜರುಗಿಸಲಾಗಿತ್ತು. ಸದ್ಯ ಹೈಕೋರ್ಟ್ ಈ ಪ್ರಕರಣಕ್ಕೆ ತಡೆಯಾಜ್ಞೆ

ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮದ FIR ಗೆ ಹೈಕೋರ್ಟ್ ತಡೆ: ಜೀವರಾಜ್‌ಗೆ ನಿರಾಳ Read More »

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ :ಪಾಂಡುರಂಗ ಪೈ ಸಿದ್ಧಾಪುರ

ಉಡುಪಿ: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ ಓದುವುದರ ಮೂಲಕ ಶಿಕ್ಷಣದಲ್ಲಿ ಯಶಸ್ಸನ್ನು ಪಡೆಯಬಹುದು. ಅವರು ಕಿರಿಯರಿಗೆ ಮಾದರಿಯಾಗಿ ಬೆಳೆಯಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಡ್ಯುಯಲ್ ಸ್ಟಾರ್ ಎಜುಕೇಶನ್ ಇನ್ಸ್ಟಿಟ್ಯೂಷನ್ ಅಮಾಸೆಬೈಲು ಇಲ್ಲಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 614 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುವ ಪೃತ್ವಿಕ್ ಶೇಖರ್ ಪೂಜಾರಿ ಅವರ ಮನೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ :ಪಾಂಡುರಂಗ ಪೈ ಸಿದ್ಧಾಪುರ Read More »

ಬಾತುಕೋಳಿ ಹಿಡಿಯಲು ಹೋದ ಮಕ್ಕಳು ನೀರುಪಾಲು

ಚಿಕ್ಕಮಗಳೂರು: ಬಾತುಕೋಳಿಗಳನ್ನು ಹಿಡಿಯಲು ಕೆರೆಗೆ ಇಳಿದ ನಾಲ್ಕು ಮಂದಿ ಮಕ್ಕಳು ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಅರಳಗುಪ್ಪೆ ಗ್ರಾಮದಲ್ಲಿ ನಡೆದಿದೆ. ಕಾರಂಜಿ ಕೆರೆಯ ಬಳಿ ಈ ದುರ್ಘಟನೆ ನಡೆದಿದೆ. ಮೃತ ಮಕ್ಕಳನ್ನು ಮಹಾದಿಯಾ, ಅರುನುಸ್, ನಾಯುಸ್, ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಈ ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮಕ್ಕಳ ಜೊತೆಗೆ ಇದ್ದ ನಾಲ್ಕು ವರ್ಷದ ಅರ್ಮಾನ್ ಪಾರಾಗಿದ್ದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ

ಬಾತುಕೋಳಿ ಹಿಡಿಯಲು ಹೋದ ಮಕ್ಕಳು ನೀರುಪಾಲು Read More »

error: Content is protected !!
Scroll to Top