ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ

ಬಳ್ಳಾರಿ: ಕಸಾಯಿಖಾನೆಗೆ ತೆಗೆದುಕೊಂಡು ಹೋಗುವುದಕ್ಕಾಗಿ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳನ್ನು ಹಳೇ ಬೈಪಾಸ್ ಬಳಿಯ ಗೋಲಬಡಿ ‌ದಾರಿಯಲ್ಲಿ ರಕ್ಷಣೆ ಮಾಡಲಾಗಿದೆ. ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯನ್ನು ಆಧರಿಸಿ ಕೌಲಬಜಾರ್ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಾತಕ್ಕಾಗಿ ಇಷ್ಟೊಂದು ಗೋವುಗಳನ್ನು ಕೊಟ್ಟಿಗೆಯಲ್ಲಿ ಇರಿಸಲಾಗಿದೆ ಎನ್ನುವ ಪ್ರಶ್ನೆಗೆ ಸೂಕ್ತ ಉತ್ತರ ಸಿಕ್ಕಿಲ್ಲ ಎಂದು ವರದಿಯಾಗಿದೆ. ಸದ್ಯ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿದ್ದ ಎಲ್ಲಾ ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು, ಅವುಗಳನ್ನು ಗೋಶಾಲೆೆಗೆ ರವಾನೆ ಮಾಡುವುದಾಗಿ ಪೊಲೀಸರು […]

ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ Read More »

ಆಟೋ – ಬೈಕ್ ಅಪಘಾತ: ಆರು ತಿಂಗಳ ಮಗು ಸೇರಿ ಮೂವರು ಸಾವು

ಬೆಳಗಾವಿ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗದ ರೈಲು ನಿಲ್ದಾಣದ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಒಂದೇ ಕುಟುಂಬದ ಮೂರು ಜನರು ಮೃತಪಟ್ಟ ಘಟನೆ ನಡೆದಿದೆ. ಅಪ್ಪ, ಅಮ್ಮನ ಜೊತೆಗೆ ಆರು ತಿಂಗಳ ಮಗು ಮೃತಪಟ್ಟಿರುವುದಾಗಿದೆ. ಬೊಮ್ಮನಾಳ‌ ನಿವಾಸಿಗಳಾದ ಮಹಾಂತೇಶ್ ಮಾನೆ, ಸಾಕ್ಷಿ ಮಾನೆ ಹಾಗೂ ಇನ್ನೂ ಹೆಸರು ಸಹ ಇರಿಸದ ಅವರ ಆರು ತಿಂಗಳ ಮಗು ಈ ದುರ್ಘಟನೆಯಲ್ಲಿ ಬಲಿಯಾದ ದುರ್ದೈವಿಗಳು. ದಂಪತಿ ಮಗುವಿನ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ

ಆಟೋ – ಬೈಕ್ ಅಪಘಾತ: ಆರು ತಿಂಗಳ ಮಗು ಸೇರಿ ಮೂವರು ಸಾವು Read More »

ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಪಾಗಲ್ ಪ್ರೇಮಿ

ಕೊಯಮತ್ತೂರು: ತನ್ನ ಪ್ರೀತಿಯನ್ನು ಯುವತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆಕೆಯ ಮನೆಗೆ ಪಾಗಲ್ ಪ್ರೇಮಿ ಪೆಟ್ರೋಲ್ ಬಾಂಬ್ ಎಸೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಯುವಕ ಪೆಟ್ರೋಲ್ ಬಾಂಬ್ ಎಸೆದ ದೃಶ್ಯಗಳು ಸಿಸಿ‌ಟಿವಿ‌ಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ‌ಸಾಕಷ್ಟು ವೈರಲ್ ಆಗಿದೆ. ತೊಂಡಾಮುತ್ತೂರು ಎಂಬಲ್ಲಿ ಯುವಕ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಆತನ ಪ್ರೀತಿಯನ್ನು ಯುವತಿ ಒಪ್ಪಿಕೊಂಡಿಲ್ಲ. ಇದೇ ಸಿಟ್ಟಿನಲ್ಲಿ ಯುವತಿಯ ಮನೆಗೆ ಆತ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಬಾಂಬ್

ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಪಾಗಲ್ ಪ್ರೇಮಿ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಮಂಗಳೂರು: ಕಾರ್ ಮತ್ತು ಬೈಕ್ ನಡುವೆ ಸೋಮಂತಡ್ಕ‌ ಅಗರಿ ‌ಕ್ರಾಸ್ ಸಮೀಪ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ (36) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿಯ ಕಳೆಂಜ ನಿವಾಸಿಯಾದ ಇವರು ಉಜಿರೆಯಲ್ಲಿ ತಮ್ಮದೇ ಸ್ಟುಡಿಯೋ ನಡೆಸುತ್ತಿದ್ದರು. ಮೇ 24 ರಂದು ಉಜಿರೆಯಿಂದ ಕಕ್ಕಿಂಜೆಗೆ ಬೈಕಿನಲ್ಲಿ ತೆರಳುವ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು, ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು Read More »

ಪುತ್ತೂರು : ವಿದ್ಯುತ್‌ ಶಾಕ್‌ ಹೊಡೆದು ಯುವಕ ಮೃತ್ಯು

ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ಮೇ 24ರಂದು ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ. ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ನಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್‌ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ.

ಪುತ್ತೂರು : ವಿದ್ಯುತ್‌ ಶಾಕ್‌ ಹೊಡೆದು ಯುವಕ ಮೃತ್ಯು Read More »

ದುಬೈಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಕೆಲವು ತಿಂಗಳಿಂದ ಕೋಮಾದಲ್ಲಿದ್ದ ಮಹಿಳೆ ಮಂಗಳೂರು : ದುಬೈಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಕಿನ್ನಿಗೋಳಿಯ ಯುವತಿಯೊಬ್ಬರು ಮೇ 24ರಂದು ನಿಧನರಾಗಿದ್ದಾರೆ. ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26)ಂಋತ ಮಹಿಳೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ

ದುಬೈಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು Read More »

ರೌಡಿ ಶೀಟರ್‌ ಆರೀಫ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ತೊಕ್ಕೊಟ್ಟು ಫ್ಲೈಓವರ್ ಮೇಲೆ ಬರ್ಬರವಾಗಿ ಕೊಲೆಯಾಗಿರುವ ಆರಿಫ್‌ ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ರೌಡಿ ಶೀಟರ್‌ ಆರೀಫ್ ಹುಸೈನ್ ಅಲಿಯಾಸ್ ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2026ರ ಮಾರ್ಚ್ 27ರಂದು ಮುಂಜಾನೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಡಿಕ್ಕಿ ಹೊಡೆದು ಕೆಡವಿದ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಕೃತ್ಯಕ್ಕೆ ಬಳಸಿದ್ದ ಕಾರನ್ನು

ರೌಡಿ ಶೀಟರ್‌ ಆರೀಫ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಕಾರಿನೊಳಗೆ ಸಿಲುಕಿಕೊಂಡ ಮಗು : ಕಿಟಿಕಿಯ ಗಾಜು ಒಡೆದು ರಕ್ಷಿಸಿದ ಸಾರ್ವಜನಿಕರು

ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆಗಿ ಸಿಲುಕಿದ ಮಗು ಬೆಳ್ತಂಗಡಿ: ಕಾರಿನ ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆದ ಕಾರಣ ಮಗುವೊಂದು ಕಾರಿನೊಳಗೆ ಸಿಲುಕಿಕೊಂಡ ಆತಂಕಕಾರಿ ಘಟನೆ ನಡೆದಿದ್ದು, ಸಾರ್ವಜನಿಕರು ಸಮಯಪ್ರಜ್ಞೆಯಿಂದ ಮಗುವನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಡಂತ್ಯಾರಿನ ಮದ್ದಡ್ಕ ಎಂಬಲ್ಲಿ ಭಾನುವಾರ ನಡೆದಿದೆ. ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಆಟೋ-ಲಾಕ್ ವ್ಯವಸ್ಥೆಯು ಇದ್ದಕ್ಕಿದ್ದಂತೆ ಸಕ್ರಿಯಗೊಂಡಿದ್ದು, ಮಗು ಕಾರಿನೊಳಗೆ ಸಿಲುಕಿಕೊಂಡಿದೆ. ಮಗು

ಕಾರಿನೊಳಗೆ ಸಿಲುಕಿಕೊಂಡ ಮಗು : ಕಿಟಿಕಿಯ ಗಾಜು ಒಡೆದು ರಕ್ಷಿಸಿದ ಸಾರ್ವಜನಿಕರು Read More »

ಸಿಎನ್‌ಜಿ ದರ ಮತ್ತೆ 2 ರೂ. ಏರಿಕೆ

ಪೆಟ್ರೋಲು, ಡೀಸೆಲ್‌ ಏರಿಕೆ ಬೆನ್ನಲ್ಲೇ ಜನರಿಗೆ ಇನ್ನೊಂದು ಶಾಕ್‌ ನವದೆಹಲಿ: ಜಾಗತಿಕ ಇಂಧನ ಬೆಲೆಗಳ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಭಾರಿ ಆರ್ಥಿಕ ಹೊಡೆತ ನೀಡಲಾಗಿದ್ದು, ಮಂಗಳವಾರ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ಮತ್ತೆ 2 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ಎರಡು ವಾರಗಳಲ್ಲಿ ನಡೆದಿರುವ ನಾಲ್ಕನೇ ಬೆಲೆ ಏರಿಕೆ ಇದಾಗಿದೆ. ಮೇ 26ರ ಬೆಳಿಗ್ಗೆ 8 ಗಂಟೆಯಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾದ ಹೊಸ ದರಗಳ ಪ್ರಕಾರ, ದೆಹಲಿಯಲ್ಲಿ ಈಗ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 83.09 ರೂಪಾಯಿ

ಸಿಎನ್‌ಜಿ ದರ ಮತ್ತೆ 2 ರೂ. ಏರಿಕೆ Read More »

ಕದನ ವಿರಾಮ ಅಂತಿಮ ಹಂತಕ್ಕೆ ತಲುಪುವಾಗಲೇ ಇರಾನ್‌ ಮೇಲೆ ಅಮೆರಿಕ ಭೀಕರ ದಾಳಿ

ಜಲಬಾಂಬ್‌ ಇಡುವ ದೋಣಿಗಳು, ಫೈಟರ್‌ ಜೆಟ್‌ಗಳನ್ನು ಗುರಿ ಮಾಡುತ್ತಿದ್ದ ಬಂದರ್‌ಗೆ ಕ್ಷಿಪಣಿ ದಾಳಿ ಟೆಹ್ರಾನ್‌: ಇರಾನ್‌ ಜೊತೆಗೆ ಕದನ ವಿರಾಮ ಹಾಗೂ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಮಾತುಕತೆ ಅಂತಿಮ ಹಂತದಲ್ಲಿ ಇರುವಾಗಲೇ ಅಮೆರಿಕ ಪಡೆಗಳು ಮತ್ತೆ ಭೀಕರ ದಾಳಿ ನಡೆಸಿವೆ. ಇರಾನ್‌ನ ಕ್ಷಿಪಣಿ ಉಡಾವಣಾ ತಾಣಗಳು ಹಾಗೂ ಹಾರ್ಮುಜ್‌ ಜಲಸಂಧಿಯಲ್ಲಿ ಗಣಿಗಳನ್ನು ನಿಯೋಜಿಸುವ ಬೋಟ್‌ಗಳನ್ನು ಗುರಿಯಾಗಿಸಿ ಅಮೆರಿಕದ ಪಡೆಗಳು ದಾಳಿ ನಡೆಸಿವೆ. ಇರಾನ್‌ನ ಬಂದರ್‌ ಅಬ್ಬಾಸ್‌ನಲ್ಲೂ ಸ್ಫೋಟಗಳು ಸಂಭವಿಸಿವೆ. ಭಾರತೀಯ ಕಾಲಮಾನ ಮಂಗಳವಾರ ಮುಂಜಾನೆ ದಕ್ಷಿಣ ಇರಾನ್‌ನಲ್ಲಿರುವ

ಕದನ ವಿರಾಮ ಅಂತಿಮ ಹಂತಕ್ಕೆ ತಲುಪುವಾಗಲೇ ಇರಾನ್‌ ಮೇಲೆ ಅಮೆರಿಕ ಭೀಕರ ದಾಳಿ Read More »

error: Content is protected !!
Scroll to Top