ಸಿಡಿಲು ಬಡಿದು ಇಬ್ಬರು ಯುವಕರ ಸಾವು
ಬೀದರ್: ಗುಡುಗು ಸಹಿತ ಮಳೆಗೆ ಬೀದರ್ನ ಬಾಲ್ಕಿಯ ನಾವದಗಿಯಲ್ಲಿ ಇಬ್ಬರು ರೈತರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರೇವಣಸಿದ್ಧ ಮತ್ತು ಜೇವರ್ಗಿಯ ಯಲ್ಲಾಲಿಂಗ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಜಮೀನಿನಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವೇಳೆ ಈ ಘಟನೆ ನಡೆದಿದೆ. ಜೋರಾಗಿ ಸುರಿದ ಮಳೆ, ಗುಡುಗಿಗೆ ಅಲ್ಲೇ ಸಮೀಪದಲ್ಲಿದ್ದ ಮಾವಿನ ಮರದಡಿ ಈ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಸಮಯದಲ್ಲಿ ಸಿಡಿಲು ಮರಕ್ಕೆ ಬಡಿದಿದೆ. ಆಶ್ರಯ ಪಡೆದಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮನೆಗೆ ಆಧಾರ ಸ್ತಂಭದಂತಿದ್ದ ಮಕ್ಕಳನ್ನು ಕಳೆದುಕೊಂಡ […]
ಸಿಡಿಲು ಬಡಿದು ಇಬ್ಬರು ಯುವಕರ ಸಾವು Read More »










