ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌

11 ಲಕ್ಷ ರೂಪಾಯಿ ಎಗರಿಸಿ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಪೊಲೀಸ್‌ ಸಿಬ್ಬಂದಿ ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ. ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್‌ಕಾನ್‌ಸ್ಟೆಬಲ್‌ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ […]

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌ Read More »

ಪುತ್ತೂರು : ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ

ಪುತ್ತೂರು : ಕಬಕ ಗ್ರಾಮದ ಮುರದಲ್ಲಿರುವ ರೈಲ್ವೆ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೆ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎಂಬ ನಿಖರ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್

ಪುತ್ತೂರು : ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ Read More »

ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ

ಹೀಗಿದೆ ರಷ್ಯಾ ಅಧ್ಯಕ್ಷರ ಬಂದೋಬಸ್ತ್‌ ವ್ಯವಸ್ಥೆ ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಗುರುವಾರ ಸಂಜೆಯ ವೇಳೆ ಪುಟಿನ್‌ ಅವರ ವಿಮಾನ ದೆಹಲಿಯಲ್ಲಿ ಲ್ಯಾಂಡ್‌ ಆಗಲಿದೆ. ಐದು ಸ್ತರದ ರಕ್ಷಣಾ ವ್ಯವಸ್ಥೆಯೊಂದಿಗೆ ಪುಟಿನ್‌ 2 ದಿನಗಳ ಭಾರತದಲ್ಲಿ ತಂಗಲಿದ್ದಾರೆ. ಪುಟಿನ್‌ ಆಗಮನಕ್ಕೆ ಮೊದಲೇ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು 50ಕ್ಕೂ ಹೆಚ್ಚು ರಷ್ಯಾದ ಭದ್ರತಾ ಸಿಬ್ಬಂದಿ ತಂಡ ದೆಹಲಿಗೆ ಆಗಮಿಸಿದೆ. ಪುಟಿನ್ ಭದ್ರತೆಯ ಹೊಣೆ ಪ್ರೆಸಿಡೆನ್ಶಿಯಲ್‌ ಸೆಕ್ಯೂರಿಟಿ

ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ Read More »

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ

ಜೈಲಿನಲ್ಲಿರುವ ಉಗ್ರನಿಗೆ ಡಾಕ್ಟರ್‌ ಟೆರರ್‌ಗಳ ಜೊತೆ ಸಂಪರ್ಕದ ಅನುಮಾನ ಬೆಂಗಳೂರು : ದೆಹಲಿ ಕಾರು ಬಾಂಬ್‌ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆ ನಡೆಸುತ್ತಿದೆ. ಇತ್ತೀಚೆಗೆ

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ Read More »

ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿ ಬಂಧನ

ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಓರ್ವನನ್ನು ಪೋಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರಿಯಡ್ಕ ನಿವಾಸಿ ಮುಹಮ್ಮದ್ ಮುಸ್ತಫ (40) ಬಂಧಿತ ಆರೋಪಿ. ಈತ ಎರಡು ತಿಂಗಳಿಂದ ಬಾಲಕಿಯನ್ನು ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದು, ನ.29ರಂದು ಮನೆಗೆ ಕರೆದಿದ್ದಾನೆ ಎಂದು ಬಾಲಕಿಯ ಸಹೋದರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು

ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿ ಬಂಧನ Read More »

ದುರ್ಬಲ ಬೌಲಿಂಗ್‌, ಕಳಪೆ ಫೀಲ್ಡಿಂಗ್‌ನಿಂದಾಗಿ ಸೋತ ಭಾರತ

358 ರನ್‌ ಮಾಡಿದರೂ ಗೆಲ್ಲಲಾಗದೆ ಸರಣಿ 1-1 ಸಮಬಲ ರಾಯ್‌ಪುರ : ಬರೋಬ್ಬರಿ ಎರಡು ಶತಕಗಳ ನೆರವಿನೊಂದಿಗೆ 358 ರನ್‌ಗಳ ಬೃಹತ್‌ ಮೊತ್ತ ಕಲೆ ಹಾಕಿದರೂ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋತಿದೆ. ರಾಂಚಿಯಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಗೆದ್ದಿಕೊಂಡಿದ್ದ ಟೀಂ ಇಂಡಿಯಾ ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಸೋತಿದೆ. ಕಳಪೆ ಫೀಲ್ಡಿಂಗ್, ಬೌಲಿಂಗ್‌ಗೆ ಭಾರತ ಭಾರಿ ಬೆಲೆತೆತ್ತಿದೆ. ಟೀಂ ಇಂಡಿಯಾ ಬ್ಯಾಟರ್​ಗಳು ಕಲೆಹಾಕಿದ್ದ 358 ರನ್​ಗಳನ್ನು ತಂಡದ

ದುರ್ಬಲ ಬೌಲಿಂಗ್‌, ಕಳಪೆ ಫೀಲ್ಡಿಂಗ್‌ನಿಂದಾಗಿ ಸೋತ ಭಾರತ Read More »

ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ

ಸಂಪ್ಯ: ಪುತ್ತೂರಿನ ಆರಕ್ಷಕ ಠಾಣೆಯ ಬಳಿ ಕಾರ್ಯಾಚರಿಸುತ್ತಿರುವ ತರಬೇತಿ ಸಂಸ್ಥೆ ವಿದತ್ (VIDATH) ಇದರ ಆಡಳಿತ ಮಂಡಳಿಯವರು ಕಚೇರಿ ನಿರ್ವಾಹಕ (Office Admin) ಹುದ್ದೆಗೆ ನೇಮಕಾತಿ ಮಾಡಲಿದ್ದು ಆಸಕ್ತರನ್ನು ಆಹ್ವಾನಿಸಿದ್ದಾರೆ. ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಶುಭಾ ಅವರು ತಿಳಿಸಿದ್ದಾರೆ.

ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ Read More »

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶವಿರುವ ಸರ್ಕಾರಿ ಅಧಿಕಾರಿ ಹುದ್ದೆಗಳನ್ನು ಪಡೆಯಲು ಕೆಎಎಸ್,ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸನ್ನು ಪಡೆಯಲು ಪಿಯುಸಿಯ ವಿದ್ಯಾರ್ಥಿಗಳು ಈ ಹಂತದಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು. ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಜ್ಞಾನಾರ್ಜನೆಗಾಗಿ ಶಿಕ್ಷಣದ ಜೊತೆಗೆ ಸಾಮಾಜಿಕ ಋಣವನ್ನು ತೀರಿಸುವುದು ಪ್ರತಿಯೊಬ್ಬರ ಕರ್ತವ್ಯವೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಿರಿಯ ಉಪನ್ಯಾಸಕಿಯಾದ ಭಾಗ್ಯಲಕ್ಷ್ಮಿ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ Read More »

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದ ಆರೋಪಿ ಪೊಲೀಸರ ಬಲೆಗೆ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕುಯೊಬ್ಬಳನ್ನು ಹಿಂಬಾಲಿಸಿ, ತನ್ನ ಮನೆಗೆ ಕರೆದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ಮುಸ್ತಫಾ (40) ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಆರೋಪಿ ಮುಸ್ತಫಾ ಅಪ್ರಾಪ್ತ ಬಾಲಕಿಯನ್ನು ಬಸ್ಸು ನಿಲ್ದಾಣದಿಂದ ಹಿಂಬಾಲಿಸುವ ಕೆಲಸ ಮಾಡುತ್ತಿದ್ದನು. ಆ ಬಳಿಕ ಆಕೆಯನ್ನು ತನ್ನ ಮನೆಗೆ ಬರುವಂತೆ ಕರೆದಿದ್ದಾನೆ. ಈ ವಿಚಾರವನ್ನು ಬಾಲಕಿ ತನ್ನ ಮನೆಯಲ್ಲಿ ತಿಳಿಸಿದ್ದು, ಮನೆಯವರು ಮುಸ್ತಫಾನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದಾರೆ.

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದ ಆರೋಪಿ ಪೊಲೀಸರ ಬಲೆಗೆ Read More »

ಸುಳ್ಳು ಸುದ್ದಿ ಹಬ್ಬಿಸಿ‌ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದವರ ‌ವಿರುದ್ಧ ಮಧು ಬಂಗಾರಪ್ಪ ಗರಂ

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಭಯ, ಗೊಂದಲ, ಆತಂಕ ಹುಟ್ಟಿಸುವವರ ವಿರುದ್ಧ ಸಚಿವ ಮಧು ಬಂಗಾರಪ್ಪ ಗುಡುಗಿದ್ದಾರೆ. SSLC – PUC ಗೆ ಕಳೆದ ವರ್ಷದಂತೆ ಈ ವರ್ಷ ಸಹ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ವಿಷಯದಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ, ಗೊಂದಲ ಸೃಷ್ಟಿ ಮಾಡುವವರಿಗೆ ಅವರು ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಉತ್ತೀರ್ಣವಾಗಲು 33% ಅಂಕಗಳನ್ನು ಪಡೆಯಬೇಕು ಎಂದಿದೆ. ಅದರಂತೆ ಪರೀಕ್ಷಾ ವಿಧಾನದಲ್ಲೂ ಮಾರ್ಪಾಡು ತಂದಿದೆ. ಮೂರನೇ ಪರೀಕ್ಷೆಯನ್ನು ಸರ್ಕಾರ ಕೈಬಿಟ್ಟಿದೆ ಎಂಬುದಾಗಿ ಕೆಲವು

ಸುಳ್ಳು ಸುದ್ದಿ ಹಬ್ಬಿಸಿ‌ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದವರ ‌ವಿರುದ್ಧ ಮಧು ಬಂಗಾರಪ್ಪ ಗರಂ Read More »

error: Content is protected !!
Scroll to Top