ಅಯತಪ್ಪಿ ಬಾವಿಗೆ ಬಿದ್ದ ಯುವಕನನ್ನು ಕಾಪಾಡಿದ ಅಗ್ನಿಶಾಮಕ ಸಿಬ್ಬಂದಿ

ಕಾರ್ಕಳ: ಬಾವಿ ಕಂಬ ತುಂಡಾಗಿ ನೀರು ಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಕೆಂಚಬೆಟ್ಟುವಿನಲ್ಲಿ ನಡೆದಿದೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾವಿಗೆ ಬಿದ್ದ ಯುವಕನನ್ನು ಪ್ರಶಾಂತ್ ಭಂಡಾರಿ ಎಂದು ಗುರುತಿಸಲಾಗಿದೆ. ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದ್ದು, ಮನೆಯವರು ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನನ್ನು ಕಾಪಾಡಿದ್ದಾರೆ.

ಅಯತಪ್ಪಿ ಬಾವಿಗೆ ಬಿದ್ದ ಯುವಕನನ್ನು ಕಾಪಾಡಿದ ಅಗ್ನಿಶಾಮಕ ಸಿಬ್ಬಂದಿ Read More »

ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ ಸಂಪನ್ನ

ಸಾವಿರಾರು ಪ್ರಮುಖ ಗಣ್ಯರ ಸಮ್ಮುಖ ಧ್ವಜಾರೋಹಣ ನೆರವೇರಿಸಿದ ಮೋದಿ ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಶ್ರೀರಾಮ ಮತ್ತು ಸೀತಾಮಾತೆಯ ದೈವಿಕ ವಿವಾಹವನ್ನು ಆಚರಿಸುವ ವಿವಾಹ ಪಂಚಮಿಯ ಸಂದರ್ಭದಲ್ಲಿ ಅಯೋಧ್ಯೆ ಪೂರ್ಣ ವೈಭವದಿಂದ ಹೊಳೆಯುತ್ತಿದೆ. ತ್ರೇತಾಯುಗದಲ್ಲಿ ರಾಮ ಮತ್ತು ಜಾನಕಿಯ ವಿವಾಹವು ಮಾರ್ಗಶಿರ ಮಾಸದ ಹದಿನೈದು ದಿನಗಳ ಐದನೇ ದಿನದಂದು

ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ ಸಂಪನ್ನ Read More »

ನ. 27 ರಿಂದ 11 ದಿನಗಳ ಕಾಲ ಕಬ್ಬನ್ ಪಾರ್ಕ್‌ನಲ್ಲಿ ಫಲ ಪುಷ್ಪ ಪ್ರದರ್ಶನ

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ತೋಟಗಾರಿಕಾ ಇಲಾಖೆಯ ಫಲ ಪುಷ್ಪ ಪ್ರದರ್ಶನ ನ. 27 ರಿಂದ ತೆೊಡಗಿದಂತೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಇಲ್ಲಿ ಆಯೋಜನೆ ಮಾಡುತ್ತಿರುವುದು ಇದೇ ಮೊದಲಾಗಿದ್ದು, ಈ ವರೆಗೆ ಸಣ್ಣ ಪುಟ್ಟ ಕಾರ್ಯಕ್ರಮಗಳಷ್ಟೇ ಈ ಪಾರ್ಕ್‌ನಲ್ಲಿ ನಡೆಯುತ್ತಿತ್ತು. ಈ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ಸಂದರ್ಶಿಸುವರು ನೂರಾರು ಬಗೆಯ ಹೂವು ಹಣ್ಣುಗಳನ್ನು ಕಾಣಬಹುದು. ವಿವಿಧ ವಿಷಯಗಳ ನೂರಾರು ಮಳಿಗೆಗಳೂ ಈ ಮೇಳದಲ್ಲಿ ಇರಲಿದೆ. ಈ ಕಾರ್ಯಕ್ರಮಕ್ಕೆ ಇಲಾಖೆ ಸುಮಾರು

ನ. 27 ರಿಂದ 11 ದಿನಗಳ ಕಾಲ ಕಬ್ಬನ್ ಪಾರ್ಕ್‌ನಲ್ಲಿ ಫಲ ಪುಷ್ಪ ಪ್ರದರ್ಶನ Read More »

ರಾಜ್ಯದ ಹತ್ತು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ಶಾಕ್‌ ಬೆಂಗಳೂರು : ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಡಿಕೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಮುಂಜಾನೆ ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ

ರಾಜ್ಯದ ಹತ್ತು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ Read More »

ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು SDMC ಅಧ್ಯಕ್ಷ ಪ್ರಕಾಶ್ ಕಣೆಮರಡ್ಕ ವಹಿಸಿದ್ದರು. ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ ಅವರು ಉದ್ಘಾಟನೆ ಮಾಡಿ ಪ್ರಾಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ವ್ಯಕ್ತಿತ್ವ ವಿಕಸನ ಹಾಗೂ ಸ್ವಾಸ್ಥ್ಯ ಸಂಕಲ್ಪ ತರಬೇತುದಾರಾದ ಡಾ. ಅನುರಾಧಾ ಕುರುಂಜಿ (ಉಪನ್ಯಾಸಕರು) ಮಾತನಾಡಿ, ಯುವಜನತೆ ಮನಸ್ಸು ಮತ್ತು ಬುದ್ಧಿಯನ್ನು

ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ Read More »

ಮಹಿಳೆಯರಿಗೆ ಡ್ರೋನ್ ಹಾರಿಸುವ ಉಚಿತ ತರಬೇತಿಗೆ ಸಂದರ್ಶನ

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್, ಪುತ್ತೂರು, ಅರಸ್ ಟ್ರಸ್ಟ್, ಪುತ್ತೂರು ಮತ್ತು ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ನಡೆಯಲಿರುವ ಡ್ರೋನ್ ಹಾರಿಸುವ ಅತ್ಯುನ್ನತ ದರ್ಜೆಯ 12 ದಿನಗಳ ಉಚಿತ ತರಬೇತಿಗೆ ಸಂದರ್ಶನ ನಡೆಯಲಿದೆ. ಸಂದರ್ಶನ ಯಾವಾಗ, ಎಲ್ಲಿ, ಎಷ್ಟೊತ್ತಿಗೆ? ಯಾರು ಅರ್ಹರು? ಸಂದರ್ಶನಕ್ಕೆ ಹಾಜರಾಗುವಾಗ ಏನೇನು ತರಬೇಕು? ತರಬೇತಿಯ ಪ್ರಯೋಜನ ತರಬೇತಿ ಯಾವಾಗ?2025ರ ದಶಂಬರ ತಿಂಗಳ ಎರಡನೇ ವಾರದಲ್ಲಿ ತರಬೇತಿ ನಡೆಯಲಿದೆ. ಆಸಕ್ತ ಮಹಿಳೆಯರು 9448725813 / 8217595631 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಮಹಿಳೆಯರಿಗೆ ಡ್ರೋನ್ ಹಾರಿಸುವ ಉಚಿತ ತರಬೇತಿಗೆ ಸಂದರ್ಶನ Read More »

ಡಾ. ಆರ್.ಪಿ. ಕುರುಂಜಿ ಮತ್ತು ಪದಾಧಿಕಾರಿಗಳಿಂದ ರಾಜಕೀಯದ ಭೀಷ್ಮ ‘ದೇವೇಗೌಡ’ರ ಭೇಟಿ ಮತ್ತು ಸನ್ಮಾನ

ಬೆಂಗಳೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅವಿರೋಧವಾಗಿ ನಾಲ್ಕನೇ ಬಾರಿಗೆ ಮರು ಆಯ್ಕೆಗೊಂಡ ಡಾ. ರೇಣುಕಾಪ್ರಸಾದ್ ಕೆ. ವಿ. ಮತ್ತು ಇತರ ಪದಾಧಿಕಾರಿಗಳು ಮಾಜಿ ಪ್ರಧಾನಿ ಮಾನ್ಯ ಶ್ರೀ ದೇವೇಗೌಡರನ್ನು ಭೇಟಿ ಮಾಡಿ, ಸನ್ಮಾನಿಸಿ, ಆಶೀರ್ವಾದ ಪಡೆದರು. ನೂತನ ಪದಾಧಿಕಾರಿಗಳುಅಧ್ಯಕ್ಷ: ಎಲ್. ಶ್ರೀನಿವಾಸ್, ಉಪಾಧ್ಯಕ್ಷರು: ಡಾ. ರೇಣುಕಾಪ್ರಸಾದ್ ಕೆ. ವಿ. ಮತ್ತು ಎ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ: ಸಿ.ಜಿ. ಗಂಗಾಧರ್, ಸಹಾಯಕ ಕಾರ್ಯದರ್ಶಿ: ಡಾ. ಡಿ.ಕೆ. ರಮೇಶ್ ಮತ್ತು ಖಜಾಂಚಿ: ಕೆ.ವಿ. ಶ್ರೀಧರ್.

ಡಾ. ಆರ್.ಪಿ. ಕುರುಂಜಿ ಮತ್ತು ಪದಾಧಿಕಾರಿಗಳಿಂದ ರಾಜಕೀಯದ ಭೀಷ್ಮ ‘ದೇವೇಗೌಡ’ರ ಭೇಟಿ ಮತ್ತು ಸನ್ಮಾನ Read More »

ಅನುಮತಿ ಪಡೆಯದೆ ಮದುವೆ ಮನೆಯಲ್ಲಿ ಡಿಜೆ ಬಳಕೆ : ಕೇಸ್‌ ದಾಖಲು

ಬಂಟ್ವಾಳ : ಸುತ್ತಮುತ್ತಲಿನವರಿಗೆ ಕಿರಿಕಿರಿಯಾಗುವಂತೆ ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 22ರಂದು ರಾತ್ರಿ ಬಂಟ್ವಾಳ ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ನಿಮಿತ್ತ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮದುವೆ ಕಾರ್ಯಕ್ರಮದ ಹಿನ್ನೆಲೆ ಯಾವುದೇ ಪೂರ್ವಾನುಮತಿ ಪಡೆಯದೆ ಕರ್ಕಶವಾಗಿ ಡಿ.ಜೆ.

ಅನುಮತಿ ಪಡೆಯದೆ ಮದುವೆ ಮನೆಯಲ್ಲಿ ಡಿಜೆ ಬಳಕೆ : ಕೇಸ್‌ ದಾಖಲು Read More »

ಇಂದು ಅಯೋಧ್ಯೆ ರಾಮ ಮಂದಿರಲ್ಲಿ ಪ್ರಧಾನಿಯಿಂದ ಧ್ವಜಾರೋಹಣ

ರಾಮ ಮಂದಿರ ಪೂರ್ಣಗೊಂಡ ಸಂಕೇತವಾಗಿ 22 ಅಡಿ ಎತ್ತರದ ಭಗವಾ ಧ್ವಜ ಹಾರಿಸಲಿರುವ ಮೋದಿ ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ,

ಇಂದು ಅಯೋಧ್ಯೆ ರಾಮ ಮಂದಿರಲ್ಲಿ ಪ್ರಧಾನಿಯಿಂದ ಧ್ವಜಾರೋಹಣ Read More »

ಮಕ್ಕಳಿಗೂ ಕಡ್ಡಾಯವಾಗಲಿದೆ ಹೆಲ್ಮೆಟ್‌!

9 ತಿಂಗಳಿನಿಂದ 4 ವರ್ಷದ ವಯೋಮಾನದ ಮಕ್ಕಳು ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲು ಚಿಂತನೆ ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುವ ಸಂದರ್ಭದಲ್ಲಿ ಗರಿಷ್ಠ ವೇಗದ ಮಿತಿ ನಿಗದಿಪಡಿಸುವ ಹಾಗೂ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಕೇಂದ್ರ ಮೋಟಾರು ವಾಹನ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇತ್ತೀಚೆಗೆ ನಿರ್ದೇಶಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ​​ ಪೊಲೀಸರು ದ್ವಿಚಕ್ರ ವಾಹನ ಸವಾರಿ ಮಾಡುವಾಗ ಮಕ್ಕಳೂ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯ ಮಾಡಲು ಮುಂದಾಗಿದ್ದಾರೆ.

ಮಕ್ಕಳಿಗೂ ಕಡ್ಡಾಯವಾಗಲಿದೆ ಹೆಲ್ಮೆಟ್‌! Read More »

error: Content is protected !!
Scroll to Top