ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಓರ್ವ ಗಂಭೀರ

ಕಾರವಾರ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ದಾಂಡೇಲಿಯ ಅಜಂಗಾವ ಎಂಬಲ್ಲಿ ನಡೆದಿದೆ. ಮೃತರನ್ನು ಧಾರವಾಡದ ಫರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ ತೆರಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಢಿಕ್ಕಿಯ ಭೀಕರತೆಗೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ದಾಂಡೇಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಓರ್ವ ಗಂಭೀರ Read More »

ಪತಿ ಮನೆಯವರ ಕಿರುಕುಳ: ಗೃಹಣಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಗೃಹಣಿಯೊಬ್ಬಳು ವರದಕ್ಷಿಣೆಯ ಕುರುಕುಳದಿಂದ ಬೇಸತ್ತು, ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ(28) ಎಂಬವರೇ ಮೃತ ದುರ್ದೈವಿ. ಶ್ರೀನಿಧಿ ಅವರು ಸಂತೋಷ್ ಜೊತೆಗೆ 2021 ರಲ್ಲಿ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಸಹ ಇವರಿಗಿದ್ದಾರೆ. ಗಂಡ ಮತ್ತು ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ, ಕಿರುಕುಳದಿಂದ ಬೇಸತ್ತು ಶ್ರೀನಿಧಿ ಅವರು ಕಿಟಕಿಗೆ ‌ಶಾಲಿನಿಂದ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಶ್ರೀನಿಧಿ ಅವರು ತವರು

ಪತಿ ಮನೆಯವರ ಕಿರುಕುಳ: ಗೃಹಣಿ ಆತ್ಮಹತ್ಯೆಗೆ ಶರಣು Read More »

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ ವತಿಯಿಂದ ಭವತಿ ಭಿಕ್ಷಾಂದೇಹಿ ಮೂಲಕ ಸಹಾಯಧನ ವಿತರಣೆ

ಪೊಳಲಿ: ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ (ರಿ.) ಇದರ 8ನೇ ಸೇವಾ ಯೋಜನೆ ಅಡಿಯಲ್ಲಿ ಭವತಿ ಭಿಕ್ಷಾಂದೇಹಿ ಮೂಲಕ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಜಾತ್ರಾ ಸಂದರ್ಭದಲ್ಲಿ ನಿಧಿ ಸಂಗ್ರಹಣಾ ಅಭಿಯಾನ ನಡೆಸಲಾಗಿದ್ದು, ಒಟ್ಟುಗೂಡಿದ ಒಟ್ಟು ಮೊತ್ತ 1,98,088 ಅನ್ನು ಪೊಳಲಿ ದೇವಸ್ಥಾನದಲ್ಲಿ ಅತಿಥಿಗಳ ಮೂಲಕ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಸಿದಬಿರುವೆರ್ ಕುಡ್ಲ ಸ್ಥಾಪಕ ಅಧ್ಯಕ್ಷರು ಉದಯ್ ಪೂಜಾರಿ, ಉದ್ಯಮಿ ಪ್ರಸಾದ್ ಗರೋಡಿ, ಖ್ಯಾತ ಯೂಟ್ಯೂಬರ್ ವಿಶ್ವನಾಥ್ ಪೂಜಾರಿ ಮತ್ತು ವಿವಿನ್ ಪೂಜಾರಿ, ಲೈಫ್ ಆಫ್

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ ವತಿಯಿಂದ ಭವತಿ ಭಿಕ್ಷಾಂದೇಹಿ ಮೂಲಕ ಸಹಾಯಧನ ವಿತರಣೆ Read More »

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಆಚರಿಸಲಾಯಿತು. ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ, ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ Read More »

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆದ ಖದೀಮ ಪೊಲೀಸರ ಅತಿಥಿ

ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿದ್ದ ಆರೋಪಿಯನ್ನು ನಾಯಕನಹಟ್ಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಳ್ಳಕೆರೆ ತಾಲೂಕಿನ ಗಿಂತ ಕೊಲಮ್ಮನಹಳ್ಳಿಯ ಪಾಲಯ್ಯ ಜಿ. ಎಂದು ಗುರುತಿಸಲಾಗಿದೆ. ಪಾಲಯ್ಯ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ. ಆರೋಪಿ ನೆಟ್ಟಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ 791 ಗಾಂಜಾ ಗಿಡಗಳಿಂದ ಸುಮಾರು 187 ಕೆಜಿ ಸೊಪ್ಪನ್ನು ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆದ ಖದೀಮ ಪೊಲೀಸರ ಅತಿಥಿ Read More »

ವಿದ್ಯಾರ್ಥಿ ಜೀವನದಲ್ಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಎ. ಬಾಬು ನಾಯ್ಕ

ಪುತ್ತೂರು: ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇವುಗಳ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಧಾರ್ಮಿಕ ಉಪನ್ಯಾಸ ನೀಡಿದರು. ಜೀವನದಲ್ಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.

ವಿದ್ಯಾರ್ಥಿ ಜೀವನದಲ್ಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಎ. ಬಾಬು ನಾಯ್ಕ Read More »

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ – ಸೌಮ್ಯ ದಂಪತಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ

ಸಾಧನೆಗಳ ಸರದಾರನಿಗೆ ಜನತಾ ಕೃಷಿ ರತ್ನ ಪ್ರಶಸ್ತಿ ಪ್ರಧಾನ ಪುತ್ತೂರು: ಜನತಾ ನ್ಯೂಸ್ ಕನ್ನಡ ವತಿಯಿಂದ ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯುನಲ್ಲಿ ಮನರಂಜನೆ ಫ್ಯಾಶನ್ ಶೋ ಮ್ಯೂಸಿಕಲ್ ನೈಟ್ ನೃತ್ಯ ಸಂಜೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜೇನು ಕೃಷಿ ಕ್ಷೇತ್ರದಲ್ಲಿನ ಸಾಧನೆಗಳ ಸರದಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರ ಗಣನೀಯ ಸೇವೆ ಸಾಧನೆ ಮತ್ತು ಪ್ರತಿಭೆಯನ್ನು ಪರಿಗಣಿಸಿ ಜನತಾ ಕೃಷಿ ರತ್ನವನ್ನು ಜನತಾ ನ್ಯೂಸ್ ಮ್ಯಾನೇಜಿಂಗ್

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ – ಸೌಮ್ಯ ದಂಪತಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ Read More »

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ

ಉಡುಪಿ: ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕಟಪಾಡಿಯ ಕಲ್ಲಾಪು ಸಮೀಪ ನಡೆದಿದೆ. ಮೃತನನ್ನು ಕಟಪಾಡಿ ಸರ್ಕಾರಿ ಗುಡ್ಡೆ ನಿವಾಸಿ ಭೀಮಪ್ಪ ಹುನ್ನಳ್ಳಿ ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆಯ ಹನಗುಂದದವರಾಗಿದ್ದಾರೆ. ಸಹ ಸವಾರ ಕಟಪಾಡಿ ನಾಯ್ಕರ್‌ತೋಟದ ಸಾಗರ್ ಶೆಣೈ ಗಾಯಗೊಂಡಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ‌ಕಾರಣ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ Read More »

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿ ಬೆಳ್ತಂಗಡಿ: ಬೆಳ್ತಂಗಡಿಯ ಎಲ್ಲೆಡೆ ಸೋಮವಾರ ಸಂಜೆ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದು ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ Read More »

ಅಮೆರಿಕ-ಇರಾನ್‌ ಶಾಂತಿ ಮಾತುಕತೆ ಇನ್ನೂ ಅತಂತ್ರ

ನಾಳೆಗೆ ಮುಕ್ತಾಯವಾಗಲಿದೆ ತಾತ್ಕಾಲಿಕ ಕದನ ವಿರಾಮ ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಎರಡನೇ ಸುತ್ತಿನ ಸಮರ ವಿರಾಮ ಮಾತುಕತೆ ವಿಚಾರ ಇನ್ನೂ ಅತಂತ್ರವಾಗಿಯೇ ಮುಂದುವರಿದಿದೆ. ನಾವು ಪಾಕಿಸ್ತಾನಕ್ಕೆ ಹೋಗುತ್ತಿದ್ದೇವೆ ಎಂದು ಅಮೆರಿಕ ಹೇಳಿದರೆ, ಇತ್ತ ಇರಾನ್ ನಾವು ಹೋಗಲ್ಲ ಎಂದು ಹೇಳುತ್ತಿದೆ. ಇದರ ನಡುವೆಯೇ ಇಸ್ಲಾಮಾಬಾದ್‌ನಲ್ಲಿ ಮಾತ್ರ ಮಾತುಕತೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಮೆರಿಕ ಘೋಷಿಸಿರುವ ತಾತಾಕಲಿಕ ಕದನ ವಿರಾಮ ಏ.22ಕ್ಕೆ ಮುಕ್ತಾಯವಾಗಲಿದ್ದು, ಶಾಂತಿ ಮಾತುಕತೆ ಏರ್ಪಡದಿದ್ದಲ್ಲಿ ಮುಂದಿನ ಸ್ಥಿತಿ ಏನಾಗಬಹುದು ಎಂಬ ಆತಂಕ ಜಗತ್ತನ್ನು

ಅಮೆರಿಕ-ಇರಾನ್‌ ಶಾಂತಿ ಮಾತುಕತೆ ಇನ್ನೂ ಅತಂತ್ರ Read More »

error: Content is protected !!
Scroll to Top