ಮಡಪ್ಪಾಡಿಯ ಹಿರಿಯ ಸಹಕಾರಿ ಪಾಲ್ತಾಡು ಚಿನ್ನಪ್ಪ ಜಯರಾಮ ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಸುಳ್ಯ ತಾಲೂಕಿನ, ಒಂದೊಮ್ಮೆ ಕುಗ್ರಾಮವಾಗಿದ್ದ, ಮಾಡಪ್ಪಾಡಿಯ ಪಾಲ್ತಾಡು ಮನೆಯ ಹಿರಿಯ ಸಹಕಾರಿ ಪಿ.ಸಿ. ಜಯರಾಮರಿಗೆ ಕರ್ನಾಟಕ ಸರಕಾರವು ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ. ನಾಳೆ ಪ್ರಶಸ್ತಿ ಪ್ರದಾನನಾಳೆ, ನ. 14 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್’ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಸಮಾರಂಭದ ಉದ್ಘಾಟನಾ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ. ಮಡಪ್ಪಾಡಿಯ ಪ್ರಾಥಮಿಕ ಕೃಷಿ ಸಹಕಾರಿ ಸಂಘಕ್ಕೆ ಕಾಯಕಲ್ಪ ಮಡಪ್ಪಾಡಿಯ ಪ್ರಾಥಮಿಕ ಕೃಷಿ ಸಹಕಾರಿ ಸಂಘದಲ್ಲಿ ಸುದೀರ್ಘ 37 ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದ ಹಿರಿಮೆ […]

ಮಡಪ್ಪಾಡಿಯ ಹಿರಿಯ ಸಹಕಾರಿ ಪಾಲ್ತಾಡು ಚಿನ್ನಪ್ಪ ಜಯರಾಮ ಅವರಿಗೆ ಸಹಕಾರ ರತ್ನ ಪ್ರಶಸ್ತಿ Read More »

ನವದೆಹಲಿ ಬ್ಲಾಸ್ಟ್: ಉಗ್ರರ ಡೈರಿ ಪತ್ತೆ ಹಚ್ಚಿದ NIA ಅಧಿಕಾರಿಗಳು

ನವದೆಹಲಿ: ಕೆಂಪು ಕೋಟೆಯ ಸಮೀಪ ಸ್ಪೋಟ ನಡೆಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ NIA ಅಧಿಕಾರಿಗಳು ಉಗ್ರರ ಡೈರಿಯನ್ನು ಪತ್ತೆ ಮಾಡಿದ್ದು, ಇದರಲ್ಲಿ ಮಹತ್ವದ ಹಲವಾರು ಅಂಶಗಳು, ಸ್ಪೋಟಕ ಮಾಹಿತಿಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಈ ಡೈರಿ ಉಗ್ರರಾದ ‌ಮುಜಾಮಿಲ್ ಮತ್ತು ಉಮರ್‌ಗೆ ಸಂಬಂಧಿಸಿದ್ದಾಗಿದೆ. ಇದರಲ್ಲಿ ಹಲವಾರು ಕೋಡ್‌ವರ್ಡ್‌ಗಳು, ಷಡ್ಯಂತ್ರಗಳು ಹೊರಬಿದ್ದಿವೆ ಎಂದು ಮಾಹಿತಿ ಇದೆ. ಡೈರಿಯಲ್ಲಿ ಹಲವು ಬಾರಿ ಆಪರೇಷನ್ ಪದವನ್ನು ಉಗ್ರರು ಬಳಕೆ ಮಾಡಿದ್ದು, ಉಕಾಸ (ಜೇಡ) ಎಂಬ ಹ್ಯಾಂಡ್ಲರ್ ಹೆಸರು ಕೂಡ ಡೈರಿಯಲ್ಲಿ ಪತ್ತೆಯಾಗಿದೆ.

ನವದೆಹಲಿ ಬ್ಲಾಸ್ಟ್: ಉಗ್ರರ ಡೈರಿ ಪತ್ತೆ ಹಚ್ಚಿದ NIA ಅಧಿಕಾರಿಗಳು Read More »

ನವದೆಹಲಿ ಬ್ಲಾಸ್ಟ್ ಬಗ್ಗೆ ರಾಹುಲ್ ಗಾಂಧಿ ಯಾಕೆ ಪ್ರತಿಕ್ರಿಯೆ ನೀಡಿಲ್ಲ: ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ನವದೆಹಲಿ ಕೆಂಪುಕೋಟೆಯ ಸಮೀಪ ನಡೆದ ಬಾಂಬ್ ಬ್ಲಾಸ್ಟ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾಕೆ ಈ ವರೆಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಉಗ್ರರು ದಾಳಿ ಮಾಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆಗಳಿಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್, ಸೇನಾಭವನ, ಪ್ರಮುಖ ಸ್ಥಳಗಳು ಉಗ್ರರ ಟಾರ್ಗೆಟ್

ನವದೆಹಲಿ ಬ್ಲಾಸ್ಟ್ ಬಗ್ಗೆ ರಾಹುಲ್ ಗಾಂಧಿ ಯಾಕೆ ಪ್ರತಿಕ್ರಿಯೆ ನೀಡಿಲ್ಲ: ವಿಜಯೇಂದ್ರ ಪ್ರಶ್ನೆ Read More »

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಬೆಂಬಲ: ಹತ್ತು ಕಂಬಳ ಕೂಟಗಳಿಗೆ ತಲಾ 5 ಲಕ್ಷ ರೂ. ಅನುದಾನ

ಪುತ್ತೂರು: ಕರಾವಳಿ ಜಿಲ್ಲೆಗಳ ಜಾನಪದ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರ ಕೊಡುಗೆ ನೀಡಿದ್ದು, 10 ಕಂಬಳ ಕೂಟಗಳಿಗೆ ‌ತಲಾ 5 ಲಕ್ಷ ರೂ. ಗಳಂತೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ. ಈ ಅನುದಾನವನ್ನು ಪ್ರವಾಸೋದ್ಯಮ ಇಲಾಖೆಯ ಮೂಲಕ ಬಿಡುಗಡೆ ಮಾಡಲಾಗಿದೆ. ಪುತ್ತೂರು, ಉಪ್ಪಿನಂಗಡಿ, ಜಪ್ಪು, ಬಂಟ್ವಾಳ, ಮೂಲ್ಕಿ, ವೇಣೂರು, ನರಿಂಗಾಣ, ಮಂಗಳೂರು, ಮೂಡಬಿದ್ರೆ, ಐಕಳ ಗಳಲ್ಲಿ ನಡೆಯುವ ಕಂಬಳಗಳಿಗೆ ‌ಸಂಬಂಧಿಸಿದ ಹಾಗೆ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಅಶೋಕ್

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಬೆಂಬಲ: ಹತ್ತು ಕಂಬಳ ಕೂಟಗಳಿಗೆ ತಲಾ 5 ಲಕ್ಷ ರೂ. ಅನುದಾನ Read More »

ಕೆಂಪುಕೋಟೆ ಸ್ಫೋಟಕ್ಕೆ ಇನ್ನೂ ಒಂದು ಕಾರು ಬಳಕೆ

ಮೂರನೇ ಕಾರನ್ನು ಹುಡುಕುತ್ತಿರುವ ಪೊಲೀಸರು ನವದೆಹಲಿ: ಕೆಂಪುಕೋಟೆ ಮೆಟ್ರೊ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದ ಕಾರು ಸ್ಫೋಟಕ್ಕೆ ಇನ್ನೂ ಒಂದು ಕಾರು ಬಳಕೆಯಾಗಿರುವ ಕುರಿತು ತನಿಖಾಧೀಕಾರಿಗಳಿಗೆ ಮಾಹಿತಿ ಸಿಕ್ಕಿದ್ದು, ಈ ಮೂರನೇ ಕಾರನ್ನು ಹಲವು ಭದ್ರತಾ ಸಂಸ್ಥೆಗಳು ಹುಡುಕುತ್ತಿವೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ಸೋಮವಾರ ಸಂಜೆ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹನ್ನೆರಡು ಜನರು ಸಾವಿಗೀಡಾಗಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ತನಿಖಾಧಿಕಾರಿಗಳು ಶಂಕಿತ

ಕೆಂಪುಕೋಟೆ ಸ್ಫೋಟಕ್ಕೆ ಇನ್ನೂ ಒಂದು ಕಾರು ಬಳಕೆ Read More »

ಮಂಗಳೂರು: 6 ವರ್ಷದ ಹಿಂದೆ ಸ್ವಾಧಾರ ಕೇಂದ್ರದಿಂದ ಕಾಣೆಯಾದ 3 ಮಹಿಳೆಯರ ಮಾಹಿತಿ ನೀಡಲು ಮನವಿ

ಮಂಗಳೂರು: ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿದ್ದ ಮೂವರು ಮಹಿಳೆಯರು ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ವರದಿಯ ಪ್ರಕಾರ ಬೆಂಗಳೂರಿನ ಉತ್ತರಹಳ್ಳಿ ನಿವಾಸಿಗಳಾದ ರಾಣಿ (26) ಮತ್ತು ಸೋನಿಯಾ (19) ಹಾಗೂ ವಾರಸುದಾರರಿಲ್ಲದೆ ಆಶ್ರಯ ಕೇಂದ್ರದಲ್ಲಿ ವಾಸಿಸುತ್ತಿದ್ದ ಕೋಲ್ಕತ್ತ ಮೂಲದ ನರ್ಗಿಸ್ (35) ಎಂಬವರು 2019ರ ಫೆಬ್ರವರಿ 4ರಂದು ಸ್ವಾಧಾರ ಕೇಂದ್ರದ ಹಿಂಬದಿಯಿಂದ ಓಡಿ ಹೋಗಿದ್ದಾರೆ. ರಾಣಿಯ ಎತ್ತರ 152 ಸೆಂ.ಮೀ., ಗೋಧಿ ಮೈಬಣ್ಣ,

ಮಂಗಳೂರು: 6 ವರ್ಷದ ಹಿಂದೆ ಸ್ವಾಧಾರ ಕೇಂದ್ರದಿಂದ ಕಾಣೆಯಾದ 3 ಮಹಿಳೆಯರ ಮಾಹಿತಿ ನೀಡಲು ಮನವಿ Read More »

ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ

ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್

ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ Read More »

ಕೆಂಪುಕೋಟೆ ಸ್ಫೋಟಕ್ಕೆ ಟರ್ಕಿ ಲಿಂಕ್‌

ಟರ್ಕಿಯ ವ್ಯಕ್ತಿ ಉಗ್ರರ ಹ್ಯಾಂಡ್ಲರ್‌ ನವದೆಹಲಿ: ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್‌ ಸ್ಫೋಟಕ್ಕೆ ಟರ್ಕಿ ಜತೆ ಲಿಂಕ್‌ ಇರುವುದು ತನಿಖೆ ವೇಳೆ ಯಿಳಿದುಬಂದಿದೆ. ಬಂಧಿತ ಶಂಕಿತರು ಟರ್ಕಿಯ ರಾಜಧಾನಿ ಅಂಕಾರಾದಿಂದ ಕಾರ್ಯನಿರ್ವಹಿಸುತ್ತಿದ್ದ ಓರ್ವ ಹ್ಯಾಂಡ್ಲರ್‌ ಜೊತೆ ಸಂಪರ್ಕದಲ್ಲಿದ್ದರು ಎನ್ನುವುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. Ukasa ಎಂಬ ಕೋಡ್‌ವರ್ಡ್‌ನಿಂದ ಗುರುತಿಸಲ್ಪಟ್ಟ ಹ್ಯಾಂಡ್ಲರ್ ಜೊತೆ ಎನ್‌ಕ್ರಿಪ್ಟ್ ಮಾಡಿದ ಸಂದೇಶ ವೇದಿಕೆಯಾದ Session ಅಪ್ಲಿಕೇಶನ್ ಬಳಸಿ ಉಗ್ರರು ಸಂಪರ್ಕ ನಡೆಸುತ್ತಿದ್ದರು. Ukasa ಎಂದರೆ ಅರೇಬಿಕ್ ಭಾಷೆಯಲ್ಲಿ ʼಜೇಡʼ ಎಂದು ಅರ್ಥ. ವ್ಯಕ್ತಿಯ

ಕೆಂಪುಕೋಟೆ ಸ್ಫೋಟಕ್ಕೆ ಟರ್ಕಿ ಲಿಂಕ್‌ Read More »

ಉಪ್ಪಿನಂಗಡಿ : ವಿಷ ಸೇವಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.12ರಂದು ನಡೆದಿದೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ತೆರಳದೆ ಮನೆಯಲ್ಲಿ ಉಳಿದಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿದ್ದಾಳೆ. ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ

ಉಪ್ಪಿನಂಗಡಿ : ವಿಷ ಸೇವಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು Read More »

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ತಿಮರೋಡಿ, ಮಟ್ಟಣ್ಣವರ್‌ ಸೇರಿ ನಾಲ್ವರ ವಿಚಾರಣೆಗೆ ಎಸ್‌ಐಟಿ ಸಿದ್ಧತೆ ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಸಿದ್ಧತೆ ನಡೆಸುತ್ತಿದೆ. ಹೈಕೋರ್ಟ್ ಬುಧನಾರ ನೀಡಿದ ಈ ಆದೇಶದಿಂದ ಎಸ್‌ಐಟಿ ತನಿಖೆಗೆ ಹಾಗೂ ಮಹೇಶ್ ಶೆಟ್ಟಿ ಹಾಗೂ ಇತರರ ವಿಚಾರಣೆಗೆ ಇದ್ದ ಅಡೆತಡೆ

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌ Read More »

error: Content is protected !!
Scroll to Top