ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ

ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಅಂಗಳಕ್ಕೆ ಅಳವಡಿಸಿದ್ದ ಶಿಟಿನ ಚಪ್ಪರದ ರಾಡ್‌ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ 6ರಂದು ರಾತ್ರಿ 11 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್‌ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐತಪ್ಪ ಪೂಜಾರಿಯವರ ಸೊಸೆ ಬೆಳಗ್ಗೆ 6 […]

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ Read More »

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಅವರ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ 7ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿಗೆ ನೀಡಲು ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲನ್ನು ಎಸ್‌ಐಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ Read More »

ಐಪಿಎಲ್‌ ಫೈನಲ್‌ ಪಂದ್ಯ ಅಹಮದಾಬಾದ್‌ಗೆ ಶಿಫ್ಟ್‌ ಆಗಲು 10 ಸಾವಿರ ಉಚಿತ ಟಿಕೆಟ್‌ ಕೇಳಿದ್ದು ಕಾರಣ

ಸಚಿವರು, ಎಂಎಲ್‌ಎ, ಎಂಎಲ್‌ಸಿ ಸೇರಿ ಎಲ್ಲರಿಗೂ ಉಚಿತ ಟಿಕೆಟ್‌ಗೆ ಬೇಡಿಕೆ ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ 2026ರ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲು 10 ಸಾವಿರ ಹೆಚ್ಚುವರಿ ಉಚಿತ ಟಿಕೆಟ್‌ಗಳ ಟಿಕೆಟ್‌ಗಳ ಬೇಡಿಕೆಯೇ ಮುಖ್ಯ ಕಾರಣ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ಐಪಿಎಲ್ ನಿಯಮದ ಅನ್ವಯ ಕೇವಲ ಶೇ.15ರಷ್ಟು ಉಚಿತ ಟಿಕೆಟ್‌ಗಳನ್ನು ಮಾತ್ರ ಆತಿಥೇಯ ಸಂಸ್ಥೆಗೆ ನೀಡಲು ಅವಕಾಶವಿದೆ. ಆದರೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಇದಕ್ಕಿಂತ ಹೆಚ್ಚುವರಿಯಾಗಿ ಸುಮಾರು 10

ಐಪಿಎಲ್‌ ಫೈನಲ್‌ ಪಂದ್ಯ ಅಹಮದಾಬಾದ್‌ಗೆ ಶಿಫ್ಟ್‌ ಆಗಲು 10 ಸಾವಿರ ಉಚಿತ ಟಿಕೆಟ್‌ ಕೇಳಿದ್ದು ಕಾರಣ Read More »

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ

ಕಲ್ಲಂಗಡಿಯೊಳಗೆ ಸೇರಿಕೊಂಡಿದ್ದ ಅಪಾಯಕಾರಿ ವಿಷದಿಂದ ಸಾವು ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಕಲ್ಲಂಗಡಿ ಹಣ್ಣು ತಿಂದು ಸಾವಿಗೀಡಾಗಿರುವ ರಹಸ್ಯ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಬಯಲಾಗಿದೆ. ಅವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ ಬದಲಾಗಿ ಹಣ್ಣಿನೊಳಗಿದ್ದ ಇಲಿ ಪಾಷಾಣ ಕಾರಣ ಎಂದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿದೆ. ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಆದರೆ ಅವರು ಮೃತಪಟ್ಟಿರುವುದು ಕಲ್ಲಂಗಡಿ

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ Read More »

ಒಂದೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟ

13 ವರ್ಷಗಳಲ್ಲೇ ಗರಿಷ್ಠ ಮದ್ಯ ಮಾರಾಟ, ಸರ್ಕಾರಕ್ಕೆ ಹರಿದುಬಂತು ಕೊಟಿಗಟ್ಟಲೆ ಆದಾಯ ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ಮದ್ಯ ಮಾರಾಟದಲ್ಲಿ ರಾಜ್ಯ ಅಬಕಾರಿ ಇಲಾಖೆ ಹೊಸ ಇತಿಹಾಸ ಬರೆದಿದೆ. ಕಳೆದ ತಿಂಗಳ ವ್ಯಾಪಾರದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ ಮೂರು ಸಾವಿರ ಕೋಟಿ ಆದಾಯ ಬಂದಿದೆ. ಈ ಮೂಲಕ ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು. ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿ ಏಪ್ರಿಲ್‌ನಲ್ಲಿ ದಾಖಲೆಯ 68.17

ಒಂದೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟ Read More »

ಮಳೆ ನೀರು ತುಂಬಿದ್ದ ಹೊಂಡದಲ್ಲಿ ‌ಮುಳುಗಿ ಈಜಲು ಹೋಗಿದ್ದ ಬಾಲಕ ಸಾವು

ಕಲಬುರ್ಗಿ: ಮಳೆ ನೀರು ತುಂಬಿದ್ದ ಹೊಂಡದಲ್ಲಿ ಈಜಾಟಕ್ಕೆ ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ‌ ಘಟನೆ ವಾಡಿ ಪಟ್ಟಣದ ಹೊರವಲಯದಲ್ಲಿರುವ ಡಿಗ್ಗಿ ‌ತಾಂಡಾ‌ದಲ್ಲಿ ನಡೆದಿದೆ. ಮೃತನನ್ನು ರಿತೇಶ್(12) ಎಂದು ಗುರುತಿಸಲಾಗಿದೆ. ರೈಲ್ವೆ ಕಾಮಗಾರಿಗೆಂದು ಬೃಹತ್ ಹೊಂಡವೊಂದನ್ನು ತೋಡಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯ ಕಾರಣಕ್ಕೆ ಹೊಂಡ ತುಂಬಿತ್ತು. ಈ ಹೊಂಡಕ್ಕೆ ರಿತೇಶ್ ತನ್ನ ಗೆಳೆಯರ ಜೊತೆಗೆ ಈಜಾಟಕ್ಕೆ ಹೋಗಿದ್ದನು. ಆದರೆ ಆಳ ಅರಿಯದೆ ಆತ ನೀರಿನಲ್ಲಿ ಮುಳುಗಿ ಮೃತಪಟ್ಚಿರುವುದಾಗಿದೆ. ರಿತೇಶ್ ಮುಳುಗುತ್ತಿದ್ದ ಹಾಗೆ ಈತನ ಗೆಳೆಯರು ಕಿರುಚಿದ್ದು, ಸಾರ್ವಜನಿಕರು

ಮಳೆ ನೀರು ತುಂಬಿದ್ದ ಹೊಂಡದಲ್ಲಿ ‌ಮುಳುಗಿ ಈಜಲು ಹೋಗಿದ್ದ ಬಾಲಕ ಸಾವು Read More »

ಲವ್ ಜಿಹಾದ್: ಸಮೀರ್‌ಗೆ ಹಿಂದೂ ಮುಖಂಡರಿಂದ ಥಳಿತ

ಕೊಪ್ಪಳ: ಲವ್ ಜಿಹಾದ್ ಘಟನೆಯೊಂದು ಕೊಪ್ಪಳದಲ್ಲಿ ‌ನಡೆದುದ್ದು, ಮುಸ್ಲಿಂ ಯುವಕನನ್ನು ಹಿಡಿದು ಹಿಂದೂ ಪರ ಮುಖಂಡರು ಧರ್ಮದೇಟು ‌ನೀಡಿದ ಘಟನೆ ನಡೆದಿದೆ. ಹಿಂದೂ ಅಪ್ರಾಪ್ತ ಯುವತಿಯ ಜೊತೆಗೆ ಓಡಾಡುತ್ತಿದ್ದ ಮುಸ್ಲಿಂ ಯುವಕ ಸಮೀರ್‌ನಿಗೆ ಥಳಿಸಲಾಗಿದ್ದು, ಸದ್ಯ ಆತ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ. ಸಮೀರ್ ಹಿಂದೂ ಯುವತಿಯ ಜೊತೆಗೆ ಸರಸ ಸಲ್ಲಾಪವಾಡಿದ ಆರೋಪವಿದ್ದು, ಆತನ ಮೊಬೈಲ್ ಪರಿಶೀಲನೆ ನಡೆಸಿದಲ್ಲಿ ಸಾಕ್ಷಿ ದೊರೆಯುತ್ತದೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಮುಖಂಡರು ಒತ್ತಾಯಿಸಿದ್ದಾರೆ. ಇನ್ನು ಸಮೀರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ

ಲವ್ ಜಿಹಾದ್: ಸಮೀರ್‌ಗೆ ಹಿಂದೂ ಮುಖಂಡರಿಂದ ಥಳಿತ Read More »

ಆಸ್ಪತ್ರೆಯ ನೌಕರನಿಂದಲೇ ‌ರೋಗಿಯ ಸಹೋದರಿಯ ಮೇಲೆ ಅತ್ಯಾಚಾರ

ಬಾಗಲಕೋಟೆ: ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ವಿಧವೆಯೊಬ್ಬರ ಮೇಲೆ ಆಸ್ಪತ್ರೆಯ ಬಾತ್‌ರೂಮ್‌ನಲ್ಲೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಆರೋಪಿಯನ್ನು ಆಸ್ಪತ್ರೆಯ ಡಿ ದರ್ಜೆಯ ನೌಕರ ಫರೀದ್ ಸಾಬ್ ಡಾಂಗಿ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರ ಸಹೋದರಿಯ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿದೆ. ಕಳೆದ ಒಂದು ತಿಂಗಳಿನಿಂದ ಮಹಿಳೆ ಆಸ್ಪತ್ರೆಯಲ್ಲಿ ರೋಗಿಯ ಜೊತೆಗಿದ್ದರು. ಈ ವೇಳೆ ಫರೀದ್ ಅವರ ಪರಿಚಯ ಮಾಡಿಕೊಂಡಿದ್ದ. ಆ ಬಳಿಕ ಮೇ 4 ರ ಮದ್ಯರಾತ್ರಿ ವೇಳೆ ಅವರ ಮೇಲೆ ಅತ್ಯಾಚಾರ

ಆಸ್ಪತ್ರೆಯ ನೌಕರನಿಂದಲೇ ‌ರೋಗಿಯ ಸಹೋದರಿಯ ಮೇಲೆ ಅತ್ಯಾಚಾರ Read More »

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಬಂಟ್ವಾಳ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ಹಲವು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಟ್ವಾಳದ ಕರಿಯಂಗಳ ನಿವಾಸಿ. ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ‌ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈಗ ಆರೋಪಿ ಭಾರತಕ್ಕೆ ಹಿಂದಿರುಗಿದ್ದು, ಆತನ ಬರುವಿಕೆಯ ಮಾಹಿತಿ ಪಡೆದ ಪೊಲೀಸರು ಮುಂಬೈ ಸಹರಾ ಠಾಣಾ ಪೊಲೀಸರ ನೆರವಿನ ಜೊತೆಗೆ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ Read More »

ಪತ್ನಿಗೆ ಚಾಕು ಚುಚ್ಚಲು ಬಂದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದ ಪತಿಯೊಬ್ಬನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ‌ನೀಡಿರುವ ಘಟನೆ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ‌ನಡೆದಿದೆ. ಆರೋಪಿ ಪತಿಯನ್ನು ‌ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ತನ್ನ ಪತ್ನಿಗೆ ಚಾಕು ಇರಿಯಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಹಾಗೆಯೇ ಸಂಜಯ್‌ಗೆ ಹಿಗ್ಗಾಮುಗ್ಗ ಬಾರಿಸಿದ್ದಾರೆ. ಸಂಜಯ್ ಎರಡನೇ ಮದುವೆಯಾಗಿದ್ದು, ವಿಪರೀತ ಕುಡಿತದ ಚಟ‌ ಹೊಂದಿದ್ದ. ಇದರಿಂದ ಬೇಸತ್ತ ಪತ್ನಿ ಆತನಿಂದ ಬೇರೆಯಾಗಿ ವಾಸಿಸುತ್ತಿದ್ದಳು. ಪತ್ನಿ ರಸ್ತೆಯಲ್ಲಿ ನಡೆದುಕೊಂಡು

ಪತ್ನಿಗೆ ಚಾಕು ಚುಚ್ಚಲು ಬಂದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು Read More »

error: Content is protected !!
Scroll to Top