ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ

ಬೆಳ್ತಂಗಡಿ: ನೃತ್ಯ ಗುರು ಕಮಲಾಕ್ಷ ಆಚಾರ್ ( 77)ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ಮಂಗಳವಾರ ನಿಧನ ಹೊಂದಿದರು. 2022 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು ತಾಲೂಕಿನ ಪ್ರಥಮ ಭರತನಾಟ್ಯ ಗುರುವಾಗಿದ್ದರು. ಬೆಳ್ತಂಗಡಿಯಲ್ಲಿ ನೃತ್ಯ ನಿಕೇತನ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ,ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.1986 ರಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನೃತ್ಯ ಪರೀಕ್ಷಕರಾಗಿ ಸಲಹೆಗಾರರಾಗಿ […]

ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್

ಪುತ್ತೂರು : ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು ಬೆಂಗಳೂರಿನ ವಂದೇಮಾತರಂ ಪಾಠ ಶಾಲೆಯ ಸಂಸ್ಥಾಪಕ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್ Read More »

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ

ಚಿನ್ನದ ಕಾಣಿಕೆಗಳನ್ನು ವಿಂಗಡಿಸುವಾಗ ಎಗರಿಸುತ್ತಿದ್ದ ನೌಕರ ಸೆರೆ ತಿರುಪತಿ: ಭಕ್ತರು ತಿರುಪತಿಯ ತಿಮ್ಮಪ್ಪನಿಗೆ ಭಕ್ತಿಯಿಂದ ಸಮರ್ಪಿಸಿದ್ದ ಅರ್ಧ ಕೆಜಿಗೂ ಅಧಿಕ ಬಂಗಾರದ ಒಡವೆಗಳು ಕಳವು ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನು ಕಳ್ಳತನಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್‌ ಮತ್ತು ಇತರ ಆಭರಣಗಳು ಸೇರಿ ಸುಮಾರು 46 ಲಕ್ಷ

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ Read More »

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ದೋಣಿ ಕಾರವಾರ ಸಮೀಪ ಮುಳುಗಿ ಅಪಾರ ನಷ್ಟ ಉಂಟಾಗಿದೆ. ಮಲ್ಪೆಯ ಸೀ ಹಂಟರ್ ಹೆಸರಿನ ದೋಣಿಯ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ನೀರು ತುಂಬಿಕೊಂಡು ಮುಳುಗಿದೆ. ಬೋಟ್‌ನಲ್ಲಿದ್ದ 8 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮಲ್ಪೆಯಿಂದ ಮಹಾರಾಷ್ಟ್ರದ ಕಡೆ ಈ ಬೋಟ್ ಚಲಿಸುತಿತ್ತು. ಕಾರವಾರದಿಂದ 9 ನಾಟಿಕನ್ ಮೈಲು ದೂರದ ಲೈಟ್‌ಹೌಸ್ ಬಳಿ ಬೋಟ್ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ. ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಇಂಜಿನ್

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ Read More »

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ

ಕಬಕ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಕಬಕದಲ್ಲಿ ಇಂದು ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿದ್ದು, ಉರಿಮಜಲು ಬಳಿ ಕಬಕ-ವಿಟ್ಲ ರಸ್ತೆಯಲ್ಲಿನ ಹಾರ್ಡ್ ವೇ‌ರ್ ಅಂಗಡಿಯೊಂದಕ್ಕೆ ಸೇರಿದ ಪಿಕಪ್ ವಾಹನದಲ್ಲಿ ಕಬಕದಿಂದ ಹಿಂಬಾಲಿಸಿಕೊಂಡು ಬಂದು ಉರಿಮಜಲು ಎಂಬಲ್ಲಿ ಕೆಎಸ್‌ಆರ್‌ಟಿಸಿ ಚಾಲಕ-ನಿರ್ವಾಹಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪ್ರಯಾಣಿಕರ ಮುಂದೆಯೇ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಸೈಡ್ ಕೊಡಲಿಲ್ಲ

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ Read More »

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ಮಾ.22 ಹಾಗೂ 23 ರಂದು ನಡೆಯುವ 5ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಕರ ಸಂಕ್ರಮಣ ದಿನವಾದ ಮಂಗಳವಾರ (ಇಂದು) ಶ್ರೀ ಕೊರಗಜ್ಜನ ಸನ್ನಿಧಿಯಲ್ಲಿ ಬಿಡುಗಡೆಗೊಂಡಿತು. ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಲಿದೆ.

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕಡಬ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು  ಸೋಮವಾರ ಕಡಬ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಚರ್ಚಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಜಿ.ಪಂ.ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ  ವಿದ್ಯುತ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ  ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷಯ ಸೋಲಾರ್ ವಿದ್ಯುತ್ ಉತ್ಪಾದನೆ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಬೇಕೆಂದು ಬೇಡಿಕೆ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಸಂಸದರು ಸವಣೂರು, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ

ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ

ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ Read More »

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಲಕ್ಷ್ಮೀ ಜ್ಯುವೆಲ್ಸ್ ಮಾಲಕ ಭಾಸ್ಕರ ಆಚಾರ್ಯ ನಿಧನ

ಪುತ್ತೂರು: ಕೋರ್ಟ್‍ ರಸ್ತೆಯಲ್ಲಿರುವ ಲಕ್ಷ್ಮೀ ಜ್ಯುವೆಲ್ಸ್ ಮಾಲಕ, ಪುತ್ತೂರಿನ ಪರ್ಲಡ್ಕ ನಿವಾಸಿ ಭಾಸ್ಕರ ಆಚಾರ್ಯ (73 ವ.) ಇಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಲಕ್ಷ್ಮೀ ಜ್ಯುವೆಲ್ಸ್ ಮಾಲಕರಾಗಿದ್ದ ಅವರು ಮೊದಲು ದರ್ಬೆಯಲ್ಲಿ ಲಕ್ಷ್ಕೀ ಜ್ಯುವೆಲ್ಸ್ ನ್ನು ಆರಂಭಿಸಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಲಕ್ಷ್ಮೀ ಜ್ಯುವೆಲ್ಸ್ ಮಾಲಕ ಭಾಸ್ಕರ ಆಚಾರ್ಯ ನಿಧನ Read More »

error: Content is protected !!
Scroll to Top