ಜಬಲ್ಪುರ ದುರಂತ: ಹರಿದಡುತ್ತಿರುವ ತಾಯಿ – ಮಗುವಿನ ಚಿತ್ರ ಎಐ ರಚಿತ?

ಜಬಲ್ಪುರ: ನರ್ಮದಾ ನದಿಯ ಬಾರ್ಗಿ ಅಣೆಕಟ್ಟಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ ಪ್ರಕರಣದಲ್ಲಿ 9 ಮಂದಿ ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾದ ಘಟನೆ ಎ. 30 ರಂದು ಸಂಭವಿಸಿತ್ತು. ಇದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತಾಯಿಯೊಬ್ಬಳು ತನ್ನ ತೋಳುಗಳಲ್ಲಿ ‌ಮಗುವನ್ನು ಬಿಗಿದಪ್ಪಿ ಇಬ್ಬರೂ ಮೃತಪಟ್ಟು ‌ತೇಲುತ್ತಿರುವ ಹಾಗಿರುವ ‌ಚಿತ್ರವೊಂದು ಭಾರೀ ವೈರಲ್ ಆಗಿತ್ತು. ಈ ಚಿತ್ರ ಕಲ್ಲೆದೆಯನ್ನೂ ‌ಕರಗಿಸುವಷ್ಟು ನೋವಿನಿಂದ ಕೂಡಿತ್ತು. ಈ ಚಿತ್ರ ಜಬಲ್ಪುರ ದುರಂತದಲ್ಲಿ ಮಡಿದ ತಾಯಿ ಮಗುವಿನದ್ದು ಎಂದು ಹೇಳಲಾಗಿತ್ತು. ಆದರೆ ಇದನ್ನು ಸ್ವತಃ ಜಬಲ್ಪುರ […]

ಜಬಲ್ಪುರ ದುರಂತ: ಹರಿದಡುತ್ತಿರುವ ತಾಯಿ – ಮಗುವಿನ ಚಿತ್ರ ಎಐ ರಚಿತ? Read More »

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ

ಪುತ್ತೂರು: ಮೊದಲು ಮದುವೆಯಾಗಿರುವ ‌ಸಂಗತಿಯನ್ನು ರಹಸ್ಯವಾಗಿಟ್ಟು, ಎರಡನೇ ಮದುವೆ ಮಾಡಿಕೊಂಡ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಕಡೆಯವರು ಮನೆಯೊಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೆಮ್ಮಿಂಜೆಯ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ (35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ರಫ್‌ಗೆ ಖತೀಜಮ್ಮ ಜೊತೆಗೆ ಮೊದಲೇ ಮದುವೆ ನಡೆದಿದ್ದರೂ, ಅದನ್ನು ರಹಸ್ಯವಾಗಿಟ್ಟು ಮೂಡಬಿದ್ರೆಯ ಐಸಮ್ಮ ಎಂಬವರ ಪುತ್ರಿ ರುಬಿಯಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ. ಈ ವಿಚಾರ ತಿಳಿದ ಖತೀಜಮ್ಮ ಅಶ್ರಫ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸರಿಗೆ ದೂರು

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ Read More »

ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ

ಪುತ್ತೂರು: ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ ಮಳಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆ, ಪುತ್ತೂರು ವಕೀಲರ ಸಂಘದ

ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ Read More »

ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು

ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ಜೊತೆ ಕಿರಿಕ್‌ ಮಾಡಿದ ಮಹಿಳೆ ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾ ದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ದೊಡ್ಡ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಸಣ್ಣ ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ

ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು Read More »

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಕಮಾಲ್‌ : 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ

ಪಶ್ಚಿಮ ಬಂಗಾಳದಲ್ಲಿ ಮುನ್ನಡೆ ವಿಸ್ತರಿಸಿಕೊಂಡ ಬಿಜೆಪಿ ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲ ಲೆಕ್ಕಾಚಾರ ಬುಡಮೇಲಾಗುವ ಸಾಧ್ಯತೆ ಗೋಚರಿಸುತ್ತಿದೆ. ಇಲ್ಲಿ ಚಿತ್ರನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಎಲ್ಲ ಸಮೀಕ್ಷೆಗಳನ್ನು ತಲೆಕೆಳಗಾಗಿಸಿ ಮುನ್ನಡೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಅಚ್ಚರಿ ಹುಟ್ಟಿಸಿದೆ. ಇದಕ್ಕೂ ಹೆಚ್ಚಿನ ಅಚ್ಚರಿಯೆಂದರೆ ಆಡಳಿತರೂಢ ಡಿಎಂಕೆ ತೃತೀಯ ಸ್ಥಾನದಲ್ಲಿರುವುದು. ಬಿಜೆಪಿ ಒಳಗೊಂಡಿರುವ ಎಐಎಡಿಎಂಕೆ ದ್ವಿತೀಯ ಸ್ಥಾನದಲ್ಲಿದ್ದು, ಸದ್ಯದ ಮುನ್ನಡೆ ಯಾರ ಊಹೆಗೂ ನಿಲುಕದ ಫಲಿತಾಂಶವಾಗಿದೆ. ಯಾವ ಚುನಾವಣೋತ್ತರ ಸಮೀಕ್ಷೆಯೂ ಟಿವಿಕೆ ಪಕ್ಷವನ್ನು

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಕಮಾಲ್‌ : 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ Read More »

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ತೀವ್ರ ಫೈಟ್‌

ಪಂಚ ರಾಜ್ಯಗಳ ಮತ ಎಣಿಕೆ ಪ್ರಗತಿಯಲ್ಲಿ ನವದೆಹಲಿ: ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಶುರುವಾಗಿದೆ. ಇದರ ಜೊತೆಗೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯೂ ನಡೆಯುತ್ತಿದೆ. ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಹಂತದಲ್ಲೇ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿನ ಫೈಟ್‌ ಕಂಡು ಬರುತ್ತಿದೆ. ಸದ್ಯದ ಮಾಹಿತಿಯಂತೆ 103 ಸ್ಥಾನಗಳಲ್ಲಿ ಬಿಜೆಪಿ ಮತ್ತು 102

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ತೀವ್ರ ಫೈಟ್‌ Read More »

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ

ಕೇಸರಿ ಪಕ್ಷಕ್ಕೆ ಬೋನಸ್‌ ಆಗಿ ದಕ್ಕಿದ ಒಂದು ಸ್ಥಾನ ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. ಇಂದೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಇದಕ್ಕೂ ಮೊದಲೇ ಬಿಜೆಪಿಯ ಗೆಲುವನ್ನು ಸಾರಲಾಗಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಈ ಮೂಲಕ ಕ್ಲೈಮಾಕ್ಸ್‌ ತಲುಪಿದಂತಾಗಿದೆ. ರಾಜ್ಯದ

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ Read More »

ಅಂಬುಲೆನ್ಸ್‌ ಡಿಕ್ಕಿಯಾಗಿ ರಿಕ್ಷಾ ಚಾಲಕ ಸಾವು

ಮೂಡುಬಿದಿರೆ : ಇಲ್ಲಿಗೆ ಸಮೀಪದ ಬನ್ನಡ್ಕ ಎಂಬಲ್ಲಿ ಅಂಬುಲೆನ್ಸ್ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಎಂಬವರು ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ಭಾನುವಾರ ನಡೆದಿದೆ. ಬನ್ನಡ್ಕ ಮಠದಲ್ಲಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಪ್ರಯಾಣಿಕರನ್ನು ಬಿಟ್ಟು ಆಟೋರಿಕ್ಷಾವನ್ನು ಹಿಂದಕ್ಕೆ (ರಿವರ್ಸ್) ತೆಗೆಯುತ್ತಿದ್ದ ಸಂದರ್ಭದಲ್ಲಿ, ಮೂಡುಬಿದಿರೆ ಕಡೆಯಿಂದ ಕಾರ್ಕಳಕ್ಕೆ ಅತಿವೇಗವಾಗಿ ತೆರಳುತ್ತಿದ್ದ ಅಂಬುಲೆನ್ಸ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮೇಲ್ಬಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಂಬುಲೆನ್ಸ್‌ನ ಮುಂಭಾಗ ಕೂಡ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಅಂಬುಲೆನ್ಸ್‌ ಡಿಕ್ಕಿಯಾಗಿ ರಿಕ್ಷಾ ಚಾಲಕ ಸಾವು Read More »

ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರಿಂದ 42,30,000 ರೂ. ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡಿದ್ದಾರೆ. ಮೇ 2ರಂದು ಸಂಜೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ತಪಾಸಣೆ ನಡೆಸಿದರು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಲಾಯಿತು. ಅವರು

ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ Read More »

ಪುತ್ತೂರು, ಕಡಬ ತಾಲೂಕಿನಲ್ಲಿ ತಾಪಮಾನ ಇನ್ನಷ್ಟು ಏರಿಕೆ

ಈ ತಿಂಗಳ ಮಧ್ಯಭಾಗದವರೆಗೆ ಕರಾವಳಿಯಲ್ಲಿ ಬಿಸಿಲ ತಾಪ ಅಧಿಕ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ನಿರ್ದಿಷ್ಟವಾಗಿ ಜಿಲ್ಲೆಯ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಮಾಸಿಕ ವರದಿಯಲ್ಲಿ ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಈ ಹಿಂದೆಯೇ

ಪುತ್ತೂರು, ಕಡಬ ತಾಲೂಕಿನಲ್ಲಿ ತಾಪಮಾನ ಇನ್ನಷ್ಟು ಏರಿಕೆ Read More »

error: Content is protected !!
Scroll to Top