ಪಕ್ಷದ ಶಾಸಕರು ಅಭಿಪ್ರಾಯದ ಮೇಲೆ ಹೈಕಮಾಂಡ್ ತೀರ್ಮಾನ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಶಾಸಕರು ಅಭಿಪ್ರಾಯಗಳನ್ನು ಇಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳುತ್ತದೆ. ಕೆಲವು ಬಾರಿ ಶಾಸರಕ ಅಭಿಪ್ರಾಯ ಕಡಿಮೆ ಅಥವಾ ಹೆಚ್ಚಾದ ಸಮಯದಲ್ಲಿ ಬುದ್ಧಿವಂತಿಕೆಯಿಂಗ ನಿರ್ಣಯಗಳನ್ನು ಪ್ರಕಟ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. RSS ತನ್ನ ಕಾರ್ಯ ಚಟುವಟಿಕೆಗಳನ್ನು ಸರ್ಕಾರಿ ಮತ್ತು ಅನುದಾನಿತ ಶಾಲಾ ವಠಾರಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ನಡೆಸುತ್ತಿರುವುದಕ್ಕೆ ಸಂಬಂಧಿಸಿದ ಹಾಗೆ ಕೇಂದ್ರೀಕೃತ ಮನವಿ ಸಲ್ಲಿಸಿ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ಪಕ್ಷದ ಸಾಮರಸ್ಯಕ್ಕಾಗಿ ಹೈಕಮಾಂಡ್ ನಿರ್ಧಾರಗಳನ್ನು ಅತ್ಯಂತ ಮುಖ್ಯ ಎಂದು […]

ಪಕ್ಷದ ಶಾಸಕರು ಅಭಿಪ್ರಾಯದ ಮೇಲೆ ಹೈಕಮಾಂಡ್ ತೀರ್ಮಾನ: ಪ್ರಿಯಾಂಕ್ ಖರ್ಗೆ Read More »

ಸುಳ್ಯದ ಯುವಕ ಮಾರಿಷಸ್‌ನಲ್ಲಿ ಮೃತ್ಯು: ಜಲಪಾತ ವೀಕ್ಷಣೆಗೆ ತೆರಳಿದ್ದಾಗ ಕಾಲು ಜಾರಿ ಅವಘಡ

ಸುಳ್ಯ: ಮಾರಿಷಸ್‌ನಲ್ಲಿ ವಿದ್ಯಾರ್ಥಿ ವಿಸಾದಲ್ಲಿದ್ದ ಸುಳ್ಯದ ಯುವಕನೊಬ್ಬ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ನಂದನ್ ಎಸ್. ಭಟ್(25) ಎಂದು ಗುರುತಿಸಲಾಗಿದೆ. ಅವರು ಮಾರಿಷಸ್‌ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆ್ಯಂಡ್ ಟೂರಿಸಂ ಅಧ್ಯಯನ ಮಾಡುತ್ತಿದ್ದರು. ನಿನ್ನೆ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಲ್ಲಿನ ಸರ್ಕಾರ ಮತ್ತು ಭಾರತ‌ ಸರ್ಕಾರದ ಸಹಾಯದಿಂದ ಸ್ವಗ್ರಾಮಕ್ಕೆ ತರಲು ಅನುಕೂಲ

ಸುಳ್ಯದ ಯುವಕ ಮಾರಿಷಸ್‌ನಲ್ಲಿ ಮೃತ್ಯು: ಜಲಪಾತ ವೀಕ್ಷಣೆಗೆ ತೆರಳಿದ್ದಾಗ ಕಾಲು ಜಾರಿ ಅವಘಡ Read More »

ಬಿಜಿಪಿ ಯಡಿಯೂರಪ್ಪ ಅವರಿಂದ ಮುಕ್ತವಾದರೆ ಮಾತ್ರ ಭವಿಷ್ಯವಿದೆ: ಯತ್ನಾಳ್

ಬೆಂಗಳೂರು: ಬಿಜೆಪಿಯು ಯಡಿಯೂರಪ್ಪ ಅವರ ಹಿಡಿತದಿಂದ ಮುಕ್ತವಾದಲ್ಲಿ ಮಾತ್ರ ಅದಕ್ಕೆ ಭವಿಷ್ಯ ಇದೆ. ನಾನು ಬಿ ಎಸ್‌ ವೈ ಬಗೆಗಿನ ಧೋರಣೆಯಲ್ಲಿ ಮೆತ್ತಗಾಗಿಲ್ಲ. ಹಾಗೆಯೇ, ಅವರ ಜೊತೆಗೆ ರಾಜಿಯೂ ಆಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಡಿಯೂರಪ್ಪ ಜೊತೆಗೆ ಸಾಫ್ಟ್ ಎನ್ನುವ ಶಬ್ಧ ನನ್ನ ಶಬ್ದ ಕೋಶದಲ್ಲೇ ಇಲ್ಲ. ವರಿಷ್ಠರು ಯಡಿಯೂರಪ್ಪ ಜೊತೆಗೆ ಕ್ಷಮೆ ತೋರುವಂತೆ ಹೇಳಿದರೂ ಕೇಳಲಾರೆ. ಬಿಜೆಪಿಗೆ ಹಿಂದುತ್ವ ಮತ್ತು ಭವಿಷ್ಯ ಬೇಕಾದಲ್ಲಿ ಯಡಿಯೂರಪ್ಪ ಅವರನ್ನು ಕೈ ಬಿಡಲಿ ಎಂದು ಆಗ್ರಹಿಸಿದ್ದಾರೆ.

ಬಿಜಿಪಿ ಯಡಿಯೂರಪ್ಪ ಅವರಿಂದ ಮುಕ್ತವಾದರೆ ಮಾತ್ರ ಭವಿಷ್ಯವಿದೆ: ಯತ್ನಾಳ್ Read More »

ಕಾಂಗ್ರೆಸ್ ಯಾವ ದೇಶಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದೆ?: ಬಿ. ವೈ. ವಿಜಯೇಂದ್ರ

ಬೆಂಗಳೂರು: ಅಧಿಕಾರ ಸೃಷ್ಟಿಯ ರಾಜಕಾರಣ ಹೊರತು ಪಡಿಸಿ ಕಾಂಗ್ರೆಸ್ ನಾಯಕರು ಈ ವರೆಗೆ ಯಾವ ದೇಶ ಭಕ್ತ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸಿದ್ದೀರಿ ಎಂದು ಆಧಾರ ಸಹಿತ ತಿಳಿಸುವಂತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ‌ಸವಾಲೊಡ್ಡಿದ್ದಾರೆ. ಹಿಂದೂ ಸಂಘಟನೆಗಳ ಮೇಲೆ ವಿರೋಧ ವ್ಯಕ್ತಪಡಿಸುವ ನೀವು ಯಾವಾಗಲಾದರೂ ಕೋಮುವಾದಿ ಸಂಘಟನೆಗಳ ಬಗ್ಗೆ, ಉಗ್ರ ಸಂಘಟನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದೀರಾ?, ಟೀಕೆ ಮಾಡಿದ್ದೀರಾ?. ನಿಮಗೆ ರಾಷ್ಟ್ರ ಭಕ್ತ ಸಂಘಟನೆಗಳ ಸೇವೆ, ಇತಿಹಾಸ ತಿಳಿಯಲು ಹೇಗೆ

ಕಾಂಗ್ರೆಸ್ ಯಾವ ದೇಶಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದೆ?: ಬಿ. ವೈ. ವಿಜಯೇಂದ್ರ Read More »

RSS ನಿಷೇಧ ಸರಿಯಾದ ತೀರ್ಮಾನ ಅಲ್ಲ: ಪೇಜಾವರ ಶ್ರೀ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. RSS ನಿಷ್ಪಕ್ಷಪಾತವಾಗಿ ದೇಶ ಸೇವೆ ಮಾಡುತ್ತಿದೆ. ಪ್ರಾಕೃತಿಕ ವಿ ಕೋಪ ಗಳ ಸಂದರ್ಭದಲ್ಲಿ RSS ನೀಡುವ ಸೇವೆಯನ್ನು ಯಾರೂ ಅಲ್ಲಗಳೆಯುವುದು ಅಸಾಧ್ಯ. ಯಾವುದೇ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳುವ ಮೊದಲು ಸರ್ಕಾರ ಅದರ ಲಾಭ ನಷ್ಟಗಳನ್ನು, ಸಾಧಕ ಬಾಧಕಗಳನ್ನು ಆಲೋಚನೆ ಮಾಡಬೇಕು. ಯಾವ ಸಚಿವರೇ ತಮ್ಮ ಅಭಿಪ್ರಾಯ ಮಂಡನೆ ಮಾಡಲಿ. ಆದರೆ ಅಂತಿಮವಾಗಿ ಸಿ

RSS ನಿಷೇಧ ಸರಿಯಾದ ತೀರ್ಮಾನ ಅಲ್ಲ: ಪೇಜಾವರ ಶ್ರೀ Read More »

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ

ಸ್ವಂತ ಸೈಟ್‌ ಆಸೆಯಿಂದ ಕೋಟಿಗಟ್ಟಲೆ ಕಳೆದುಕೊಂಡ ಕಲಾವಿದರು ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ Read More »

ಹೆಬ್ಬಾರಬೈಲು ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬ‌ರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್‌ ಜವುಳಿ ಮಳಿಗೆಯಲ್ಲಿ ವ್ಯವಹಾರ ನಿರ್ವಹಿಸುತ್ತಿದ್ದ ಅವರು ಇತ್ತೀಚಿನ ಕೆಲ ವರ್ಷಗಳಿಂದ ಪಿಗ್ನಿ ಸಂಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 13ರ ಸಂಜೆ ಎಂದಿನಂತೆ ಪಿಗ್ನಿ ಸಂಗ್ರಹಣೆಯ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ

ಹೆಬ್ಬಾರಬೈಲು ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ Read More »

ಉಡುಪಿ ಸಹಿತ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಉಡುಪಿ ಸೇರಿದಂತೆ ಬೆಂಗಳೂರು, ದಾವಣಗೆರೆ, ಹಾವೇರಿ, ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ), ಉಡುಪಿ ಸಾರಿಗೆ

ಉಡುಪಿ ಸಹಿತ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ Read More »

ಖಾಸಗಿ ಬಸ್‌ಗಳ ಟಿಕೆಟ್‌ ದರ ಏರಿಕೆ : ಪ್ರಯಾಣಿಕರಿಗೆ ಬರೆ

ದೀಪಾವಳಿ ರಜೆಯ ಹಿನ್ನೆಲೆಯಲ್ಲಿ ಟಿಕೆಟ್‌ ದರ ಏರಿಸಿಕೊಂಡ ಖಾಸಗಿ ಬಸ್‌ಗಳು ಬೆಂಗಳೂರು: ದೀಪಾವಳಿ ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಲು ಜನ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೊರಡುತ್ತಿದ್ದು, ಹಬ್ಬದ ಸಂದರ್ಭ ಖಾಸಗಿ ಬಸ್‌ಗಳು ಟಿಕೆಟ್‌ ದರ ದುಪ್ಪಟ್ಟು ಮಾಡಿಕೊಂಡಿವೆ. ಅ.18 ಶನಿವಾರ ಬರುತ್ತದೆ. ಮರುದಿನ ಭಾನುವಾರ ಹೇಗೋ ರಜೆ ಇದೆ. ನಂತರ ಮೂರು ದಿನ ದೀಪಾವಳಿ ಹಬ್ಬವಿದೆ. ಹೀಗೆ ಸಾಲಾಗಿ ರಜೆಗಳು ಬಂದಿರುವುದರಿಂದ ದೂರದ ಊರುಗಳಲ್ಲಿ ದುಡಿಯುತ್ತಿರುವ ಜನ ಅ.17ರ ಶುಕ್ರವಾರ ರಾತ್ರಿಯಿಂದಲೇ ಊರಿಗೆ ಹೊರಡುವ ಪ್ಲಾನ್‌ ಮಾಡಿದ್ದಾರೆ. ಇದೇ

ಖಾಸಗಿ ಬಸ್‌ಗಳ ಟಿಕೆಟ್‌ ದರ ಏರಿಕೆ : ಪ್ರಯಾಣಿಕರಿಗೆ ಬರೆ Read More »

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ

ಬ್ರಹ್ಮಾವರದಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣು ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಎಚ್.ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುದೀಪ್ ಭಂಡಾರಿ ಎಂದು ಗುರುತಿಸಲಾಗಿದೆ. ನಿನ್ನೆ ಸಾಯಂಕಾಲ ಅವರು ಹೆಬ್ರಿಯಲ್ಲಿದ್ದು ಬಳಿಕ ಬ್ರಹ್ಮಾವರಕ್ಕೆ ಹೋಗಿದ್ದರು ಎನ್ನಲಾಗಿದೆ. ಸುದೀಪ್‌ ಭಂಡಾರಿ ಬಾರಕೂರಿನಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ Read More »

error: Content is protected !!
Scroll to Top