ನ. 15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ

ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ ಪಿಎಂಶ್ರೀ ಸಡಗರವು 15 ನವೆಂಬರ್ 2025 ರಂದು ನಡೆಯಲಿದ್ದು, ಆ ಪ್ರಯುಕ್ತ ಶಾಲಾ ಮಕ್ಕಳ ವಾರ್ಷಿಕ ಕ್ರೀಡಾಕೂಟ ನವೆಂಬರ್ 8, 2025 ರಂದು ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ನಿರ್ವಹಿಸಲಿದ್ದಾರೆ. ಧ್ವಜವಂದನೆಯನ್ನು ಶಾರೀರಿಕ ಶಿಕ್ಷಣ ಇಲಾಖೆ ಪುತ್ತೂರಿನ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ. ಸ್ವೀಕರಿಸಲಿದ್ದಾರೆ. ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿನವೀನ್ ಡಿ (ಅಧ್ಯಕ್ಷರು […]

ನ. 15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ Read More »

ಶ್ರೀ ಕಾಳಿಕಾಂಬಾ ಯಕ್ಷ ಟ್ರಸ್ಟ್ ನಿಂದ ಶ್ರೀ ವಾಲ್ಮೀಕಿ ಜಯಂತಿ ಆಚರಣೆ

ಉಪ್ಪಿನಂಗಡಿಯ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್. ರಿ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆಚರಿಸಲಾಯಿತು. ಶಿಕ್ಷಕಿ ಮತ್ತು ಕಲಾವಿದೆ ಪುಷ್ಪಾ ತಿಲಕ್ ಮಾತನಾಡಿ ವಾಲ್ಮೀಕಿ ಮಹರ್ಷಿಗಳು ಆದಿ ಕಾವ್ಯವೆನಿಸಿದ ಶ್ರೀಮದ್ ರಾಮಾಯಣವನ್ನು ರಚಿಸಿ ಅದರಲ್ಲಿರುವ ಪಾತ್ರಗಳು ವ್ಯಕ್ತಿಗಳಾಗದೆ ವ್ಯಕ್ತಿತ್ವಗಳಾಗಿ ನಮ್ಮ ಮುಂದೆ ಪ್ರತ್ಯಕ್ಷವಾಗುತ್ತದೆ. ಕಥಾನಾಯಕನಾದ ಶ್ರೀರಾಮಚಂದ್ರನ ಜೀವನದ ಬಹುಮುಖಿ ದರ್ಶನವನ್ನು ಈ ಕಾವ್ಯವು ಮಾಡಿಸುತ್ತದೆ. ವಾಲ್ಮೀಕಿ ರಾಮಾಯಣವು ವಿಶ್ವದ ಹೆಚ್ಚಿನ ಭಾಷೆಗಳಲ್ಲಿ ಭಾಷಾಂತರಗೊಂಡು ಪ್ರಕಟವಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಶ್ರೀ ಕಾಳಿಕಾಂಬಾ ಯಕ್ಷ ಟ್ರಸ್ಟ್ ನಿಂದ ಶ್ರೀ ವಾಲ್ಮೀಕಿ ಜಯಂತಿ ಆಚರಣೆ Read More »

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ‌ಸಿದ್ದರಾಮಯ್ಯ ಮನವಿ

ಬೆಂಗಳೂರು: ನಮ್ಮ ಮೆಟ್ರೋಗೆ ವಾಲ್ಮೀಕಿ ಮಹರ್ಷಿಗಳ ಹೆಸರನ್ನು ಇರಿಸುವಂತೆ ಸಿ ಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಮ್ಮ ಮೆಟ್ರೋವನ್ನು ನಡೆಸುತ್ತಿವೆ. ಈ ಕಾರಣದಿಂದ ರಾಜ್ಯ ಸರ್ಕಾರದಿಂದ ಬೆಂಗಳೂರಿನ ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಸಾಧ್ಯವಿಲ್ಲ. ಹೀಗಾಗಿ ನಾನು ಕೇಂದ್ರ ಸರ್ಕಾರದ ಬಳಿ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಒಪ್ಪಿಕೊಳ್ಳಬೇಕು. ಮುಂದೇನಾಗುತ್ತದೆ ಎಂಬುದನ್ನು ನಿರೀಕ್ಷಿಸೋಣ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ವಿ. ಎಸ್. ಉಗ್ರಪ್ಪ ಅವರು ಪಠ್ಯದಲ್ಲಿ ವಾಲ್ಮೀಕಿ ಮತ್ತು

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ‌ಸಿದ್ದರಾಮಯ್ಯ ಮನವಿ Read More »

ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಸಮುದಾಯದ ಓಲೈಕೆ: ಅರವಿಂದ್ ಬೆಲ್ಲದ್ ಆಕ್ರೋಶ

ಧಾರವಾಡ: ರಾಜ್ಯ ಸರ್ಕಾರ ಮುಸ್ಲಿಂ ಓಲೈಕೆಯಲ್ಲೇ ಆಡಳಿತ ನಡೆಸುತ್ತಿದ್ದು, ಈಗ ಸರ್ಕಾರಿ ಕಾರ್ಯಕ್ರಮದಲ್ಲೇ ಕುರಾನ್ ಪಠಣಕ್ಕೆ ಅವಕಾಶ ನೀಡುವ ಮೂಲಕ ತಮ್ಮ ಧ್ಯೇಯವೇ ಮುಸ್ಲಿಂ ತುಷ್ಟೀಕರಣ ಎಂದು ಸಾರ್ವಜನಿಕರಿಗೆ ತೋರಿಸಿದ್ದಾರೆ ಎಂದು ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಿಗೆ ಅದರದ್ದೇ ಆದ ರೀತಿ, ನೀತಿಗಳಿವೆ. ಆದರೆ ಹುಬ್ಬಳ್ಳಿಯ ವಿಶಾಲ್ ನಗರದಲ್ಲಿ ಇತ್ತೀಚೆಗೆ ಆಯೋಜನೆ ಮಾಡಿದ್ದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಒಂದು ವರ್ಗದ ಓಲೈಕೆಗಾಗಿ ನಿಯಮಗಳನ್ನು ಗಾಳಿಗೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಸಮುದಾಯದ ಓಲೈಕೆ: ಅರವಿಂದ್ ಬೆಲ್ಲದ್ ಆಕ್ರೋಶ Read More »

RSS ಮುಖಂಡ ಪ್ರೊ. ಕೃ. ನರಹರಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕ, ಮಾಜಿ ಪರಿಷತ್ ಸದಸ್ಯ ಪ್ರೊ. ಕೃ. ನರಹರಿ(93) ಅವರು ನಿಧನರಾಗಿದ್ದಾರೆ‌. ಬೆಂಗಳೂರಿನಲ್ಲಿರುವ ತಮ್ಮ ಸ್ವ ಗೃಹದಲ್ಲಿ ವಯೋಸಹಜ ಸಮಸ್ಯೆಗಳಿಂದ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಈ ಹಿಂದೆ RSS ನ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶಿಕ್ಷಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದವರು. ಅವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಟ ನಡೆಸಿ ಜೈಲು ವಾಸ ಅನುಭವಿಸಿದ್ದರು‌. ಶ್ರೀಯುತರ ನಿಧನಕ್ಕೆ

RSS ಮುಖಂಡ ಪ್ರೊ. ಕೃ. ನರಹರಿ ನಿಧನ Read More »

ಬಿಗ್‌ ಬಾಸ್‌ ಮನೆಗೆ ಬೀಗ ಜಡಿದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದ ಕ್ರಮ ಎಂದು ಆರೋಪ ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ರಿಯಾಲಿಟಿ ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ರಾಮನಗರದ ಜಾಲಿವುಡ್‌ ಸ್ಟುಡಿಯೋದಲ್ಲಿದ್ದ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಕರ್ನಾಟಕ ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದೇ ತುರ್ತು ವಿಚಾರಣೆ ಮಾಡುವಂತೆ

ಬಿಗ್‌ ಬಾಸ್‌ ಮನೆಗೆ ಬೀಗ ಜಡಿದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ Read More »

ಮಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಪೃಥ್ವಿರಾಜ್‌ ಮನೆಗೆಳ ಇ.ಡಿ. ದಾಳಿ

ಬೆಳ್ಳಂಬೆಳಗ್ಗೆ ಮಲಯಾಳಂ ಸೂಪರ್‌ಸ್ಟಾರ್‌ಗಳಿಗೆ ಇ.ಡಿ. ದಾಳಿಯ ಶಾಕ್‌ ತಿರುವನಂತಪುರ: ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳಾದ ಮಮ್ಮುಟ್ಟಿ, ಪೃಥ್ವಿರಾಜ್‌ ಸುಕುಮಾರನ್‌, ಮಮ್ಮುಟ್ಟಿಯವರ ಮಗ ನಟ ದುಲ್ಕರ್‌ ಸಲ್ಮಾನ್‌ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸಿನಿಮಾ ತಾರೆಯರು ಒಳಗೊಂಡಿರುವ ಸ್ಮಗ್ಲಿಂಗ್ ಪ್ರಕರಣ ಸದ್ದು ಮಾಡುತ್ತಿದೆ. ವಿದೇಶಗಳ ಐಷಾರಾಮಿ ಕಾರುಗಳನ್ನು ಅಕ್ರಮವಾಗಿ ಖರೀದಿ ಮಾಡಲಾಗಿದೆ ಎಂಬ ಗುಮಾನಿಯ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಕೆಲ ವಾರಗಳ ಹಿಂದಷ್ಟೆ ದುಲ್ಕರ್ ಸಲ್ಮಾನ್,

ಮಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಪೃಥ್ವಿರಾಜ್‌ ಮನೆಗೆಳ ಇ.ಡಿ. ದಾಳಿ Read More »

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ

ಮಧ್ಯಪ್ರದೇಶವೊಂದರಲ್ಲೇ ಒಟ್ಟು 20 ಮಕ್ಕಳನ್ನು ಬಲಿತೆಗೆದುಕೊಂಡ ಕೆಮ್ಮಿನ ಕಷಾಯ ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ಈ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ Read More »

ಮಚ್ಚಿನಿಂದ ಕೊಚ್ಚಿ ಬಿಜೆಪಿ ನಾಯಕನ ಬರ್ಬರ ಹತ್ಯೆ

ಬೆಂಗಳೂರು : ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂಭಾಗದಲ್ಲಿ ಬುಧವಾರ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ. ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌

ಮಚ್ಚಿನಿಂದ ಕೊಚ್ಚಿ ಬಿಜೆಪಿ ನಾಯಕನ ಬರ್ಬರ ಹತ್ಯೆ Read More »

ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ

ಮುಖ್ಯಮಂತ್ರಿ, ಪ್ರಧಾನಿಯಾಗಿ ಸತತ 24 ವರ್ಷ ಪೂರೈಕೆ; ಇಷ್ಟರತನಕ ಸೋಲಿಲ್ಲದ ಸರದಾರ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ರಾಜಕಾರಣದಲ್ಲಿ ಸತತ 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಧಿಅಕರದ ಪಡಸಾಲೆಯಲ್ಲಿ ಅವರಿಗೆ ಈಗ ಬೆಳ್ಳಿಹಬ್ಬದ ಸಂಭ್ರಮ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರ ಗ್ರಹಣದ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಅಧಿನಾಯಕರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ

ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ Read More »

error: Content is protected !!
Scroll to Top