4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ

ಮುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಅಪೂರ್ವ ಭಟ್‌ ಪುತ್ತೂರು: ನಾಲ್ಕು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಬರೋಬ್ಬರಿ 134 ದಿನ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿದ ಅಪೂರ್ವ ಭಟ್‌ ಅಗಲಿಕೆ ಭಾರಿ ದುಃಖ ತಂದಿದ್ದು, ಸಾವಿರಾರು ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಕಂಬನಿ […]

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ Read More »

ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್‌ ವಶ

ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇ-ಸಿಗರೇಟ್‌ ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿರುವ ಅಂಗಡಿಯ ಮೇಲೆ ಬರ್ಕೆ ಪೊಲೀಸರು ದಾಳಿ ನಡೆಸಿ, ಇ-ಸಿಗರೇಟ್ ಮತ್ತು ಇತರ ವಸ್ತುಗಳು ಸೇರಿದಂತೆ 9.72 ಲಕ್ಷ ಮೌಲ್ಯದ ಸೊತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಲಾಲ್‌ಬಾಗ್ ಬಳಿಯ ಅಂಗಡಿಯೊಂದು ಯಾವುದೇ ಪರವಾನಗಿ ಪಡೆಯದೇ ಇ-ಸಿಗರೇಟ್, ಹುಕ್ಕಾ ಪರಿಕರಗಳು ಮತ್ತು ಭಾರತೀಯ ಹಾಗೂ ವಿದೇಶಿ ಸಿಗರೇಟ್‌ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮತ್ತು ಸಂಗ್ರಹಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ವಸ್ತುಗಳನ್ನು

ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್‌ ವಶ Read More »

ನಿರ್ಮಾಪಕರಿಗೆ ತಲೆನೋವಾದ ಕಾಂತಾರಾ ಪ್ರೇಕ್ಷಕರ ವರ್ತನೆ : ದೈವಾರಾಧನೆಯನ್ನು ನಕಲು ಮಾಡದಂತೆ ಮನವಿ

ಟಾಕೀಸು, ಸಾರ್ವಜನಿಕ ಸ್ಥಳಗಳಲ್ಲಿ ಆವೇಶ ಬಂದಂತೆ ವರ್ತಿಸುತ್ತಿರುವ ಪ್ರೇಕ್ಷಕರು ಬೆಂಗಳೂರು : ಕಾಂತಾರಾ ಚಾಪ್ಟರ್‌-1 ಚಿತ್ರ ನೋಡಿ ಕೆಲವು ಪ್ರೇಕ್ಷಕರು ಮಾಡುತ್ತಿರುವ ಹುಚ್ಚಾಟಗಳು ಚಿತ್ರದ ನಿರ್ಮಾಪಕರಿಗೆ ತಲೆನೋವಾಗಿ ಪರಿಣಮಿಸಿದೆ. ಚಿತ್ರಮಂದಿರದಲ್ಲೇ ದೈವ ಮೈಮೇಲೆ ಆವೇಶ ಆದಂತೆ ವರ್ತಿಸುತ್ತಿರುವ ಪ್ರೇಕ್ಷಕರು ದೈವಾರಾಧನೆಗೆ ಅಪಚಾರ ಮಡುತ್ತಿದ್ದಾರೆ. ಇಂಥ ಅನೇಕ ಹಲವು ವಿಡಿಯೋ ತುಣುಕುಗಳು ವೈರಲ್‌ ಆಗಿದ್ದು, ದೈವಾರಾಧನೆಯ ಮೂಲವಾದ ಕರಾವಳಿಯ ಜನರಿಂದ ಇಂಥ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೈವಾರಾಧನೆ ಅತ್ಯಂತ ಪವಿತ್ರವಾದ ಧಾರ್ಮಿಕ ಸಂಪ್ರದಾಯ. ಅದನ್ನು

ನಿರ್ಮಾಪಕರಿಗೆ ತಲೆನೋವಾದ ಕಾಂತಾರಾ ಪ್ರೇಕ್ಷಕರ ವರ್ತನೆ : ದೈವಾರಾಧನೆಯನ್ನು ನಕಲು ಮಾಡದಂತೆ ಮನವಿ Read More »

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಬಿಗ್‌ ಬಾಸ್‌ ಮನೆಗೆ ಬೀಗ ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದ ಕಾರಣದಿಂದ ಬಿಗ್ ಬಾಸ್ ಕನ್ನಡ ಸೀಸನ್-12 ಶೋ ಸ್ಥಗಿತಗೊಂಡಿದೆ. ಕೆಲವೇ ದಿನಗಳ ಹಿಂದೆ ಆರಂಭ ಆಗಿದ್ದ ಈ ಕಾರ್ಯಕ್ರಮಕ್ಕೆ ಕಾನೂನಿನ ತೊಡಕು ಉಂಟಾಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್​​ಗೆ ರಾಮನಗರ ಜಿಲ್ಲಾಡಳಿತ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅದರಿಂದಾಗಿ ಶೋ ನಿಲ್ಲುವಂತಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ Read More »

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ

ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜು ಪುತ್ತೂರು ಇದರ ಫ್ಯಾಷನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಷನ್ ಡಿಸೈನ್ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಸಲಾಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.ವಿದ್ಯಾರ್ಥಿಗಳು ಸ್ವತಃಪಾಲ್ಗೊಂಡು ಅಭ್ಯಾಸ ಮಾಡುವ

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ Read More »

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ದಸರಾ ರಜೆ ವಿಸ್ತರಣೆ ಮಾಡಿ ಸಿ ಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು, ನಿಗದಿ ಮಾಡಿದ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ. 8 ರಿಂದ ಅ. 18 ರ ವರೆಗೆ ರಜೆಯನ್ನು ನೀಡುವಂತೆ ಆದೇಶ ಹೊರಡಿಸಲಾಗಿದೆ. ಸಿಎಂ ‌ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ಸಭೆ ನಡೆಸಿದ್ದು, ಅದರಲ್ಲಿ ಈ ನಿರ್ಣಯಕ್ಕೆ ಬರಲಾಗಿದೆ.

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ Read More »

ಎವಿಜಿ :ವಾಲ್ಮೀಕಿ ಜಯಂತಿ ಆಚರಣೆ

ಬನ್ನೂರು : ಇಲ್ಲಿನ ಅಲುಂಬುಡ ಕೃಷ್ಣ ನಗರ ದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಮೋತಿಬಾಯಿ ಅವರು ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶುಭ ಹಾರೈಸಿದರು. ಆಡಳಿತ ಅಧಿಕಾರಿ ಗುಡ್ಡಪ್ಪಗೌಡ ಬಲ್ಯ ದಿನದ ಮಹತ್ವವನ್ನು ತಿಳಿಸಿ, ಬದಲಾವಣೆಯನ್ನು ಬಯಸುವವರಿಗೆ ವಾಲ್ಮೀಕಿಯ ಬದುಕು ಸೂಕ್ತ ಉದಾಹರಣೆ. ದರೋಡೆಕೋರನಾಗಿದ್ದ ರತ್ನಾಕರನು ವಾಲ್ಮೀಕಿಯಾಗಿ ಪರಿವರ್ತನೆಯಾಗಿ ಭಾರತದ ಮಹಾನ್ ಗ್ರಂಥವಾದ ರಾಮಾಯಣ ರಚಿಸುವಲ್ಲಿ ಕಾರಣನಾಗಿ ಶ್ರೇಷ್ಠ ಸಂತನಾಗಿ

ಎವಿಜಿ :ವಾಲ್ಮೀಕಿ ಜಯಂತಿ ಆಚರಣೆ Read More »

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೆಳ್ತಂಗಡಿ: ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರ ಬಾಗಿಲ ತಿಲಕ ಮುರಿದು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಈ ಕೈಚಳಕ ತೋರಿದ್ದಾರೆ. ಈ ಘಟನೆ ಆ. 2 ರಿಂದ ಆ. 6 ರ ನಡುವೆ ನಡೆದಿದೆ ಎಂದು ವೇಣೂರು ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಮುಂಭಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿ, ಬೆಡ್ ರೂಂ ಒಳಗಿದ್ದ ಕಪಾಟಿನ

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

ಕೊಡಗಿನ ಜಿ. ಕೆ. ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ

ಮಡಿಕೇರಿ: ರಾಜ್ಯ ಸರ್ಕಾರ ಕೊಡಮಾಡುವ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಕೊಡಗಿನ ಜಿ. ಕೆ. ಮುತ್ತಮ್ಮ ಅವರು ಭಾಜನರಾಗಿದ್ದಾರೆ. ಸಿದ್ದಾಪುರ ಸಮೀಪದ ದಿಡ್ಡಳ್ಳಿಯ ಗಿರಿಜನರಿಗೆ ‌ಸೂರು ಕೊಡಿಸುವ ಹಿನ್ನೆಲೆ ಮುತ್ತಮ್ಮ ಅವರು ಈ ಹಿಂದೆ ತೀವ್ರ ಸ್ವರೂಪದ ಹೋರಾಟ ಮಾಡಿದ್ದರು. ಇವರ ಪ್ರಯತ್ನದ ಫಲವಾಗಿ ಅಂದಿನ ಸರ್ಕಾರ ಕುಶಾಲನಗರದ ‌ಸಮೀಪದ ಬಸವನಹಳ್ಳಿಯಲ್ಲಿ ಪುನರ್ವಸತಿ ಕೇಂದ್ರವನ್ನು ಆರಂಭ ಮಾಡಿತ್ತು. ನಿರಾಶ್ರಿತರಿಗೆ ಎಲ್ಲಾ ಸವಲತ್ತುಗಳನ್ನು ಒಳಗೊಂಡ ನಿವೇಶನ ಮತ್ತು ಮನೆ ಗಳನ್ನು ನಿರ್ಮಾಣ ಮಾಡಿಕೊಟ್ಟಿತ್ತು. ಮುತ್ತಮ್ಮ ಅವರು ದುರ್ಬಲ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ

ಕೊಡಗಿನ ಜಿ. ಕೆ. ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ Read More »

ಮಹರ್ಷಿ ವಾಲ್ಮೀಕಿ ಜಯಂತಿ: ಪಿಎಂ ಮೋದಿ ಅವರಿಂದ ಶುಭಾಶಯ

ನವದೆಹಲಿ: ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಾಲ್ಮೀಕಿ ಅವರ ಆದರ್ಶ ಚಿಂತನೆಗಳು ಸಮಾಜ ಮತ್ತು ಕುಟುಂಬದ ಮೇಲೆ ಆಳವಾದ ಪರಿಣಾಮ ಬೀರಿದೆ ಎಂದು ಅವರು ತಿಳಿಸಿದ್ದಾರೆ. ಶುಭಾಶಯ ಕೋರಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಹರ್ಷಿ ವಾಲ್ಮೀಕಿ ಜಯಂತಿಯಂದು ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳು. ಪ್ರಾಚೀನ ಕಾಲದಿಂದಲೂ ಅವರ ಶುದ್ಧ ಮತ್ತು ಆದರ್ಶ ಚಿಂತನೆಗಳು ನಮ್ಮ ಸಮಾಜ ಮತ್ತು ಕುಟುಂಬದ ಮೇಲೆ ಆಳವಾದ ಪ್ರಭಾವ

ಮಹರ್ಷಿ ವಾಲ್ಮೀಕಿ ಜಯಂತಿ: ಪಿಎಂ ಮೋದಿ ಅವರಿಂದ ಶುಭಾಶಯ Read More »

error: Content is protected !!
Scroll to Top