ದೇಶದ ರೈತರನ್ನು ಹಾದಿ ತಪ್ಪಿಸುವ ಕಾರ್ಯ ರಾಹುಲ್ ಗಾಂಧಿ ಅವರದ್ದು: ಅಮಿತ್ ಶಾ ವ್ಯಂಗ್ಯ

ಗಾಂಧಿನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ರೈತಾಪಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಅಮೆರಿಕ, ಇಂಗ್ಲೆಂಡ್ ಮತ್ತು ಐರೋಪ್ಯ ಒಕ್ಕೂಟದ ಜೊತೆಗಿನ ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟ ಹಾಗೆ ಅವರು ಸುಳ್ಳಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಒಪ್ಪಂದ ದೇಶದ ರೈತರಿಗೆ ಮಾರಕ ಎಂದಿರುವ ರಾಹುಲ್ ಹೇಳಿಕೆ ಹಾಸ್ಯಾಸ್ಪದ. ರಾಹುಲ್ ಸಂಸತ್ತಿನಲ್ಲಿ ರೈತರ ರಕ್ಷಣೆ ಮಾಡುವುದಾಗಿ ಹೇಳುವಾಗ ನಗು ಬರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ರೈತರನ್ನು ತಪ್ಪು ದಾರಿಗೆ ಎಳೆದ ಮತ್ತು ಇಂತಹ […]

ದೇಶದ ರೈತರನ್ನು ಹಾದಿ ತಪ್ಪಿಸುವ ಕಾರ್ಯ ರಾಹುಲ್ ಗಾಂಧಿ ಅವರದ್ದು: ಅಮಿತ್ ಶಾ ವ್ಯಂಗ್ಯ Read More »

ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿಸುವ ಕೇಂದ್ರದ ಪ್ರಯತ್ನ ಸರಿಯಲ್ಲ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ‌ಮಾಡುವ ಕೇಂದ್ರ ಸರ್ಕಾರದ ಪ್ರಯತ್ನ ಸರಿಯಲ್ಲ ಎಂದು MLC ಬಿ.ಕೆ. ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಭಾರತ ದೇಶದಲ್ಲಿ ವಿವಿಧ ಧರ್ಮದ ಜನರಿದ್ದಾರೆ. ಅವರೆಲ್ಲರಿಗೂ ಈ ಗೀತೆ ಸಮಾನ ಸ್ವೀಕಾರಾರ್ಹವಲ್ಲ. ರಾಷ್ಟ್ರ ಗೀತೆಯ ಗೌರವವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ವಂದೇ ಮಾತರಂ ಗೀತೆಗೆ ಅಧಿಕ ಪ್ರಶಾಸ್ತ್ಯ ನೀಡುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಗೀತೆಗೂ ಮೊದಲು ವಂದೇ ಮಾತರಂ‌ ಹಾಡುವುದು ಸಂಪ್ರದಾಯಕ್ಕೆ ವಿರುದ್ಧ. ಕೋಮು ರಾಜಕೀಯ ಉದ್ದೀಪನಕ್ಕೆ ಈ ವಿಷಯವನ್ನು

ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿಸುವ ಕೇಂದ್ರದ ಪ್ರಯತ್ನ ಸರಿಯಲ್ಲ: ಬಿ.ಕೆ. ಹರಿಪ್ರಸಾದ್ Read More »

ನ್ಯಾಯವಾದಿ ಪ್ರದೀಶ್ ಪಿ.ಜೆ. ಕ್ರಿಶ್ಚಿಯನ್‌ ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಕ

ಕಡಬ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯ ಯುವ ನ್ಯಾಯವಾದಿ ಪ್ರದೀಶ್ ಪಿ.ಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಕ್ರಿಶ್ಚಿಯನ್‌ ವಿವಾಹ ನೋಂದಣಿ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ. 1872ರ ಭಾರತೀಯ ಕ್ರಿಶ್ಚಿಯನ್ ವಿವಾಹ ಕಾಯ್ದೆಯ ಕಲಂ 07 (ಕೇಂದ್ರ ಕಾಯ್ದೆ XV) ಹಾಗೂ ಕ್ರಿಶ್ಚಿಯನ್ ವಿವಾಹ (ಕರ್ನಾಟಕ) ನಿಯಮಗಳು 1961ರನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಲು ವಿವಾಹ ನೋಂದಣಿ ಮಾಡುವ ಉದ್ದೇಶಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸಿ ಕ್ರಿಶ್ಚಿಯನ್ ಜನಾಂಗದ ವಿವಾಹ ವಿಧಿ ನೆರವೇರಿಸಲು ವಿವಾಹ ನೋಂದಣಾಧಿಕಾರಿಯನ್ನಾಗಿ ತಕ್ಷಣದಿಂದ

ನ್ಯಾಯವಾದಿ ಪ್ರದೀಶ್ ಪಿ.ಜೆ. ಕ್ರಿಶ್ಚಿಯನ್‌ ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಕ Read More »

ಮಂಗಳವಾರ ಕಂಕಣ ಸೂರ್ಯ ಗ್ರಹಣ

ಎಷ್ಟು ಹೊತ್ತಿಗೆ ಗ್ರಹಣ, ಎಲ್ಲೆಲ್ಲಿ ಗೋಚರ? ನವದೆಹಲಿ: 2026ರ ಮೊದಲ ಸೂರ್ಯ ಗ್ರಹಣ ಮಂಗಳವಾರ (ಫೆ.17) ಗೋಚರವಾಗಲಿದೆ. ಇದನ್ನ ʻರಿಂಗ್ ಆಫ್ ಫೈರ್ʼ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3.26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7.57ಕ್ಕೆ ಕೊನೆಗೊಳ್ಳಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96%ರಷ್ಟನ್ನು ಚಂದ್ರ ಆವರಿಸಲಿದೆ. ಆದ್ರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ. ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕದ ಕೆಲವು ಭಾಗಗಳು, ಟಾಂಜಾನಿಯಾ,

ಮಂಗಳವಾರ ಕಂಕಣ ಸೂರ್ಯ ಗ್ರಹಣ Read More »

400 ಕೋ. ರೂ. ದರೋಡೆ ಕಟ್ಟುಕಥೆ!

ಬೆಳಗಾವಿಯ ಘಾಟಿಯಲ್ಲಿ ಇಂಥ ಘಟನೆಯೇ ನಡೆದಿಲ್ಲ ಎಂದು ತನಿಖೆಯಿಂದ ಸಾಬೀತು ಬೆಳಗಾವಿ : ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ದಿಢೀರ್‌ ತಿರುವು ಪಡೆದುಕೊಂಡಿದ್ದು, ಇಡೀ ಘಟನೆಯೇ ಸುಳ್ಳು ಎನ್ನುವ ಮಾಹಿತಿ ಹೊರಬಿದ್ದಿದೆ. ಘಟನೆ ಕಟ್ಟುಕಥೆ ಎಂಬ ಅನುಮಾನಕ್ಕೆ ಬಲವಾದ ಪುರಾವೆ ಸಿಕ್ಕಿದೆ. ಬೆಳಗಾವಿ ಸಮೀಪದ ಗಡಿ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂದು ನೀಡಿದ್ದ ದೂರಿನ ಮೇಲೆ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ

400 ಕೋ. ರೂ. ದರೋಡೆ ಕಟ್ಟುಕಥೆ! Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಮಂಗಳೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಚಂದ್ರಹಾಸ ಪೂಂಜ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ವಹಿಸಿದ್ದರು. ಮೇಲ್ಕಾರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶಂಕರಪತ್ತಿನ ಸಹಕಾರಿ ಸಂಘದ ಶಾಖೆಯನ್ನು ಪುತ್ತೂರು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ಪಂದ್ಯ ಮುಗಿಯುವ ಮೊದಲೇ ಸ್ಟೇಡಿಯಂನಿಂದ ಕಾಲ್ಕಿತ್ತ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

ಅಧ್ಯಕ್ಷ ಮೊಹ್ಸಿನ್ ನಖ್ವಿ ತರಾತರಿಯಿಂದ ಕಾರಿನತ್ತ ಧಾವಿಸುವ ವಿಡಿಯೋ ವೈರಲ್‌ ಕೊಲಂಬೊ: ಇಲ್ಲಿ ನಡೆದ ಟಿ20 ವಿಶ್ವಕಪ್‌ ಮ್ಯಾಚ್‌ನಲ್ಲಿ ಭಾರತದ ಎದುರು ಸೋತ ಪಾಕಿಸ್ತಾನ ಮಾಮೂಲಿಯಂತೆ ವಿಪರೀತ ಟ್ರೋಲ್‌ಗೆ ಗುರಿಯಾಗಿದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಭಾರತೀಯರು ಮಾತ್ರವಲ್ಲದೆ ಪಾಕಿಸ್ತಾನಿಯರು ಕೂಡ ಪಾಕಿಸ್ತಾನ ತಂಡವನ್ನು ನಾನಾ ರೀತಿಯಲ್ಲಿ ಲೇವಡಿ ಮಾಡುತ್ತಿದ್ದಾರೆ. ಗ್ರೇಟೆಸ್ಟ್ ರೈವಲ್ರಿ ಎಂದು ಹೇಳಿಕೊಂಡರೂ ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನ ತಂಡದ ಕಡೆಯಿಂದ ಯಾವುದೇ ರೀತಿಯ ಪೈಪೋಟಿ ಕಂಡು ಬರುತ್ತಿಲ್ಲ. ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ 61 ರನ್‌ಗಳ

ಪಂದ್ಯ ಮುಗಿಯುವ ಮೊದಲೇ ಸ್ಟೇಡಿಯಂನಿಂದ ಕಾಲ್ಕಿತ್ತ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ Read More »

ನಾಳೆ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌?

ಕುರ್ಚಿ ಕಿತ್ತಾಟದ ಮಧ್ಯೆ ಕೈಗೊಂಡ ವಿದೇಶ ಪ್ರವಾಸದಿಂದ ಸಂಚಲನ ಬೆಂಗಳೂರು: ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ ತೀವ್ರ ಕಚ್ಚಾಟ ನಡೆಯುತ್ತಿರುವಂತೆಯೇ ಕೆಲವು ಕಾಂಗ್ರೆಸ್‌ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌ ಆಗಿದೆ. ಕಿತ್ತಾಟ ತಾರಕಕ್ಕೇರಿರುವಾಗಲೇ ಶಾಸಕರು ಔಿದೇಶ ಪ್ರವಾಸಕ್ಕೆ ಮುಂದಾಗಿರುವುದು ಸಂಚಲನ ಸೃಷ್ಟಿಸಿದೆ. ಹೈಕಮಾಂಡ್‌ ಹೇಳಿಕೆಗೂ ಡೋಂಟ್‌ ಕೇರ್‌ ಎಂದಿರುವ ಕಾಂಗ್ರೆಸ್‌ ಶಾಸಕರು ಸರ್ಕಾರದ ಖರ್ಚಿನಲ್ಲೇ ವಿದೇಶ ಪ್ರವಾಸಕ್ಕೆ ಮುಂದಾಗಿದ್ದಾರೆ. ಸುಮಾರು 27 ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಹಾಗೂ

ನಾಳೆ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌? Read More »

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ

ನೆಲ್ಯಾಡಿಯ ಕೊಪ್ಪಮಾದೇರಿಯಲ್ಲಿ ಸಂಭವಿಸಿದ ಪ್ರಕರಣ ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ Read More »

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ

ಅಜ್ಜಿಯ ತಿಥಿ ಕಾರ್ಯಕ್ಕೆ ಆಮೆ ಮಾಂಸ ಮಾಡಲು ಮುಂದಾಗಿದ್ದ ಆರೋಪಿಗಳು ಬೆಳ್ತಂಗಡಿ : ನದಿಯಲ್ಲಿ ಆಮೆಗಳನ್ನು ಹಿಡಿದು ಸುಟ್ಟು ಬೇಯಿಸುತ್ತಿದ್ದ ನಾಲ್ಕು ಮಂದಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಹಿಡಿದು ನದಿ ದಡದಲ್ಲೇ ಮಾಂಸ ಮಾಡಿ ಸುಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ನಾಲ್ಕು ಆಮೆಯನ್ನು ಹಿಡಿದು ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14ರಂದು

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ Read More »

error: Content is protected !!
Scroll to Top