ಸಮೀಕ್ಷೆಯ ಜಾತಿ ಕಾಲಂನಲ್ಲಿ “ಒಕ್ಕಲಿಗ”, ಉಪಜಾತಿ ಕಾಲಂನಲ್ಲಿ “ಗೌಡ” ಎಂದು ನಮೂದಿಸಿ |ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ಅಧ್ಯಕ್ಷರು : ಸುರೇಶ್ ಗೌಡ ಬೈಲು ಮನವಿ

ಕರ್ನಾಟಕ ರಾಜ್ಯ ಸರಕಾರವು ಈಗಾಗಲೇ ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ೨೦೨೫ ಇದೇ ತಿಂಗಳು ಸೆಪ್ಟೆಂಬರ್ ೨೨ ರಿಂದ ರಾಜ್ಯಾದ್ಯಂತ ಆರಂಭಗೊಳ್ಳಲಿದೆ. ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳು ಪ್ರತೀ ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಮಾಡಲಿದ್ದಾರೆ. ಈಗಾಗಲೇ ಪ್ರತೀ ಮನೆಗೆ UID ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮ ಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ನಿರ್ದೇಶನ […]

ಸಮೀಕ್ಷೆಯ ಜಾತಿ ಕಾಲಂನಲ್ಲಿ “ಒಕ್ಕಲಿಗ”, ಉಪಜಾತಿ ಕಾಲಂನಲ್ಲಿ “ಗೌಡ” ಎಂದು ನಮೂದಿಸಿ |ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ಅಧ್ಯಕ್ಷರು : ಸುರೇಶ್ ಗೌಡ ಬೈಲು ಮನವಿ Read More »

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಸೋಮವಾರದಿಂದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಬೆಂಗಳೂರು: ಹಲವು ಗೊಂದಲ, ವಿರೋಧಗಳು ಮತ್ತು ದಸರಾ ಹಬ್ಬದ ನಡುವೆ ಸೆ.22ರಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರ ಕೋರಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ Read More »

ಇಂದಿನಿಂದ ಶಾಲೆಗಳಿಗೆ ದಸರಾ ರಜೆ

ಅ.8ರಿಂದ ಎರಡನೇ ಅವಧಿಯ ತರಗತಿಗಳು ಆರಂಭ ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭವಾಗಿದ್ದು, ಅ.7ರವರೆಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯು 2025-26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ಮಾರ್ಗದರ್ಶಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಮಾರ್ಗದರ್ಶಿಯ ಪ್ರಕಾರ ದಸರಾ ರಜೆ ನೀಡಲಾಗಿದೆ. ಅ.8ರಿಂದ ಶಾಲೆಗಳ ಎರಡನೇ ಅವಧಿಯ ತರಗತಿಗಳು ಆರಂಭವಾಗಲಿದೆ. ಈ

ಇಂದಿನಿಂದ ಶಾಲೆಗಳಿಗೆ ದಸರಾ ರಜೆ Read More »

ದೇವಾಲಯಗಳ ಸೇವಾ ಶುಲ್ಕ ದಿಢೀರ್‌ ಹೆಚ್ಚಿಸಿದ ಸರ್ಕಾರ

ಸುಬ್ರಹ್ಮಣ್ಯ, ಪುತ್ತೂರು ದೇವಸ್ಥಾನಗಳಲ್ಲಿ ಇನ್ನು ಮುಂದೆ ಸೇವೆಗಳು ದುಬಾರಿ ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೆ ಏರಿಕೆಯಾಗಿದೆ ಎಂಬ ವಿಚಾರ ನಿನ್ನೆಯಿಂದೀಚೆಗೆ ವೈರಲ್‌ ಆಗಿದೆ. ಇನ್ನು ಮುಂದೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ಸುಬ್ರಹ್ಮಣ್ಯ ಸೇರಿದಂತೆ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ನಿತ್ಯ ಭಕ್ತರು ಸಲ್ಲಿಸುವ ಸೇವೆಗಳ ಶುಲ್ಕ ಏರಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರು ನಿತ್ಯ ಅರ್ಪಿಸುವ ಹೂವಿನ ಪೂಜೆಯ ದರವನ್ನು ಏಕಾಏಕಿ 100 ರೂ. ಏರಿಸಲಾಗಿದೆ. ಇದಕ್ಕೆ ಭಾರಿ

ದೇವಾಲಯಗಳ ಸೇವಾ ಶುಲ್ಕ ದಿಢೀರ್‌ ಹೆಚ್ಚಿಸಿದ ಸರ್ಕಾರ Read More »

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ

ಚಿಂತನಾ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಸಂತೋಷ್‌ ಬೆಂಗಳೂರು: ಬಿಜೆಪಿ ಚಿಂತನಾ ಸಭೆಯ ಸಮಾರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಹಾಗೆಯೇ ನಾಯಕತ್ವ ಗುಣ ಬಗ್ಗೆಯೂ ಹೇಳಿದ್ದಾರೆ. ಪಕ್ಷದಲ್ಲಿ ಆಂತರಿಕ ಸ್ಫರ್ಧೆ ಇರಬೇಕು. ಅದು ಅಶಿಸ್ತಿನ ಹಂತಕ್ಕೆ ಹೋಗಬಾರದು. ಹಿಂದೆ ಎಲ್ಲ ಹಂತದಲ್ಲೂ ತಪ್ಪಾಗಿದೆ ಹೌದು. ಅದನ್ನು ಸರಿಪಡಿಸಿಕೊಂಡು ಹೋಗಬೇಕು. ಆರೋಪ ಬೇಡ. ಪಕ್ಷದಲ್ಲಿ ನಾಯಕರು ಮಾತನಾಡುವಾಗ ಪರಸ್ಪರ ನೇರವಾಗಿಯೇ ಮಾತಾಡಿ.

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ Read More »

ಸೆ. 27-28: ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ

ಪುತ್ತೂರು: ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ (ರಿ.) ರಾಮಕುಂಜೇಶ್ವರ ಆಶ್ರಯದಲ್ಲಿ 14 – 17 ರ ವಯೋಮಾನದ ಬಾಲಕರು ‌ಮತ್ತು ಬಾಲಕಿಯರ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ ಪಂದ್ಯಾಟ 2025 ಸೆ. 27 ಮತ್ತು 28 ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜದಲ್ಲಿ ‌ನಡೆಯಲಿದೆ. ಸೆ. 27 ರಂದು ಸಂಜೆ ಗಂಟೆ 6 ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ಕ್ರೀಡಾಕೂಟದಲ್ಲಿ ಶೈಕ್ಷಣಿಕ, ಕೃಷಿ, ಆಹಾರ, ವಾಣಿಜ್ಯ, ವಿಜ್ಞಾನ ಮೇಳಗಳ

ಸೆ. 27-28: ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ Read More »

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ

ನವದೆಹಲಿ: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿ ಸಹ ವಜಾ ಮಾಡಲಾಗಿದೆ. ಸರ್ಕಾರ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇನ್ನಿತರರು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ Read More »

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌

ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ ಭಯೋತ್ಪಾದಕ ಯಾಸಿನ್‌ ಮಲಿಕ್‌ ಹೇಳಿಕೆ ನವದೆಹಲಿ: ಜಾಗತಿಕ ಭಯೋತ್ಪಾದಕ ಲಷ್ಕರ್-ಎ-ತೈಬಾ ಸ್ಥಾಪಕ ಹಾಫಿದ್‌ ಸಯೀದ್‌ನನ್ನು ಪಾಕಿಸ್ತಾನದಲ್ಲಿ ಭೇಟಿ ಮಾಡಿ ಬಂದದ್ದಕ್ಕೆ ಅಂದಿನ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ತನಗೆ ಧನ್ಯವಾದ ಹೇಳಿದ್ದರು ಎಂಬುದಾಗಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಹಾಗೂ ಉಗ್ರ ಯಾಸಿನ್‌ ಮಲಿಕ್‌ ಹೇಳಿರುವುದು ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. 26/11 ದಾಳಿ ಸೇರಿದಂತೆ ಭಾರತದಲ್ಲಿ ಸಂಭವಿಸಿದ ಹಲವು ಭೀಕರ ಭಯೋತ್ಪಾದಕ ಕೃತ್ಯಗಳ ಮಾಸ್ಟರ್‌ಮೈಂಡ್ ಆಗಿರುವ ಹಾಫೀಜ್ ಸಯೀದ್‌ನನ್ನು ಭೇಟಿಯಾದ ನಂತರ ಅಂದಿನ ಪ್ರಧಾನಿ ಮನಮೋಹನ

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ತಮಿಳುನಾಡಿನಿಂದ ಬಂಧಿಸಿ ಕರೆತಂದಿದ್ದಾರೆ. ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ. Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಸೆ.22ರಿಂದ ನಂದಿನಿ ತುಪ್ಪ, ಬೆಣ್ಣೆ, ಚೀಸ್‌ ಬೆಲೆ ಇಳಿಕೆ

ಜನರಿಗೆ ಸಿಗಲಿದೆ ಜಿಎಸ್‌ಟಿ ಇಳಿಕೆ ಲಾಭ ಬೆಂಗಳೂರು: ಜಿಎಸ್‌ಟಿ ಪರಿಷ್ಕರಣೆಯಾಗಿರುವ ಹಿನ್ನೆಲೆಯಲ್ಲಿ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ನಿಟ್ಟಿನಲ್ಲಿ ಸೋಮವಾರದಿಂದ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು ಶೇ.12ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು ಶೇ.5ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಯುಎಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು ಶೇ.5ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ

ಸೆ.22ರಿಂದ ನಂದಿನಿ ತುಪ್ಪ, ಬೆಣ್ಣೆ, ಚೀಸ್‌ ಬೆಲೆ ಇಳಿಕೆ Read More »

error: Content is protected !!
Scroll to Top