ದರ್ಶನ್ ವಿಷಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ವಕೀಲರ ದೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಜೈಲು ಸೇರಿರುವ ನಟ ದರ್ಶನ್ ತೂಗುದೀಪ್‌ಗೆ ‌ ಕೋರ್ಟ್ ಸಮ್ಮತಿಯ ಬಳಿಕವೂ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್‌ಶೀಟ್ ನೀಡಲಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಜೈಲಧಿಕಾರಿಗಳ ನಡೆಯನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಕಡೆ ಗಣಿಸಿದ್ದಾಗಿ ಅರ್ಜಿಯಲ್ಲಿ ಹೇಳಲಾಗಿದೆ. ಕೋರ್ಟ್ ಆದೇಶ‌ ನೀಡಿದ ಬಳಿಕವೂ ಜೈಲಿನಲ್ಲಿ ದರ್ಶನ್ ತೂಗುದೀಪ್ ಅವರ ಸ್ಥಿತಿ ಹಾಗೆಯೇ ಇದೆ. ಬೆಳಗ್ಗೆ ಮತ್ತು […]

ದರ್ಶನ್ ವಿಷಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ವಕೀಲರ ದೂರು Read More »

ಅನಾರೋಗ್ಯದಿಂದ ಪುತ್ತೂರಿನ ಖ್ಯಾತ ಜ್ಯೋತಿಷಿ ನಿಧನ

ಪುತ್ತೂರು: ನರಿಮೊಗರು ನಿವಾಸಿ ಖ್ಯಾತ ಜ್ಯೋತಿಷಿ ವರ್ಧಮಾನ ಜೈನ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತರಾಗಿದ್ದಾರೆ. ಅವರಿಗೆ 56 ವರ್ಷಗಳಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಪುತ್ತೂರಿನ ಖ್ಯಾತ ಜ್ಯೋತಿಷಿ ನಿಧನ Read More »

ಸೌದಿ ಅರೇಬಿಯಾ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವಕ ಸಾವು

ಬಸ್ಸಿಗೆ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಮಂಗಳೂರು : ಸೌದಿ ಅರಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿ ಯುವಕ ಮೃತಪಟ್ಟಿದ್ದಾರೆ. ಮೃತನನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ. ಅಬ್ದುಲ್ ರಾಝಿಕ್ ಸೌದಿ ಅರೇಬಿಯಾದಲ್ಲಿ ಕೆಲಸದ ನಿಮಿತ್ತ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಜುಬೈಲ್‌ನ ಪಾಲಿಟೆಕ್ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ರಾಝಿಕ್ ಸೆ.14ರಂದು

ಸೌದಿ ಅರೇಬಿಯಾ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವಕ ಸಾವು Read More »

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು

ಬೆಂಗಳೂರು: ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ ನಡೆದ ಗಣೇಶೋತ್ಸವದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಮದ್ದೂರಿನಲ್ಲಿಯೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅವರು ತುಮಕೂರಿನಲ್ಲಿ ಶನಿವಾರ ನಡೆದ ಗಣೇಶ ವಿಸರ್ಜನಾ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅನ್ಯ ಕೋಮಿನ ಜನರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡಿದ್ದಾಗಿ ಪೊಲೀಸ್ ಸಿಬ್ಬಂದಿ ರಘುನಾಥ್ ದೂರು ನೀಡಿರುವುದಾಗಿದೆ. ಈ

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು Read More »

ಪಂದ್ಯದಲ್ಲಿ ಅವಮಾನ : ಭಾರತ ವಿರುದ್ಧ ಪಾಕ್‌ ದೂರು

ಹ್ಯಾಂಡ್‌ ಶೇಕ್‌ ನೀಡದೆ ಶಿಷ್ಟಾಚಾರ ಉಲ್ಲಂಘನೆ ಎಂಬ ಆರೋಪ ದುಬೈ: ಇಲ್ಲಿ ನಡೆದ ಏಷ್ಯಾ ಕಪ್ ಟಿ20 ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಅವಮಾನ ಒಂದೆಡೆಯಾದರೆ, ಅದಕ್ಕೂ ಮಿಗಿಲಾಗಿ ಭಾರತದ ಆಟಗಾರರು ಪಹಲ್ಗಾಮ್‌ ಉಗ್ರ ದಾಳಿ ಹಾಗೂ ಆಪರೇಷನ್‌ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಎದುರಾಳಿ ತಂಡದ ಸಹ ಆಟಗಾರರು ಎಂಬ ಕನಿಷ್ಠ ಗೌರವವನ್ನು ನೀಡದೆ ನಡೆಸಿಕೊಂಡ ರೀತಿಯಿಂದ ಇನ್ನಿಲ್ಲದ ಮುಖಭಂಗ ಅನುಭವಿಸಿರುವ ಪಾಕಿಸ್ತಾನ ತಂಡ ಈಗ ತನಗೆ ಸೂಕ್ತ ಗೌರವ ನೀಡಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ಭಾರತದ

ಪಂದ್ಯದಲ್ಲಿ ಅವಮಾನ : ಭಾರತ ವಿರುದ್ಧ ಪಾಕ್‌ ದೂರು Read More »

ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಗಳು ವಜಾ

ದಸರಾ ಉದ್ಘಾಟನೆಯಿಂದ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ ಎಂದು ಅಭಿಪ್ರಯಾಪಟ್ಟು ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌ ಬೆಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಗಳು ವಜಾ Read More »

ವಕ್ಫ್‌ ನಿಬಂಧನೆಗೆ ಸುಪ್ರೀಂ ಕೋರ್ಟ್‌ ತಡೆ

ಐದು ವರ್ಷ ಮುಸ್ಲಿಮ್‌ ಆಗಿದ್ದರೆ ಮಾತ್ರ ವಕ್ಫ್‌ ರಚನೆಗೆ ಅವಕಾಶ ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ರಲ್ಲಿನ ನಿಬಂಧನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದ್ದು, ಒಬ್ಬ ವ್ಯಕ್ತಿ ವಕ್ಫ್ ರಚಿಸಲು ಐದು ವರ್ಷಗಳ ಕಾಲ ಮುಸ್ಲಿಂ ಆಗಿರಬೇಕು ಎಂದು ಆದೇಶಿಸಿದೆ. ರಾಜ್ಯ ಸರ್ಕಾರಗಳು ಒಬ್ಬ ವ್ಯಕ್ತಿಯು ಇಸ್ಲಾಂ ಧರ್ಮದ ಅನುಯಾಯಿಯಾಗಿ ಅರ್ಹತೆ ಪಡೆಯುತ್ತಾನೆಯೇ ಎಂದು ನಿರ್ಧರಿಸಲು ನಿಯಮಗಳನ್ನು ರೂಪಿಸುವವರೆಗೆ ಈ ಷರತ್ತು ಅಮಾನತಿನಲ್ಲಿರಲಿದೆ ಎಂದು ನಿರ್ದೇಶಿಸಿದೆ. ವಿಚಾರಣೆಯ ಸಮಯದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ

ವಕ್ಫ್‌ ನಿಬಂಧನೆಗೆ ಸುಪ್ರೀಂ ಕೋರ್ಟ್‌ ತಡೆ Read More »

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ

ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಮಾಹಿತಿ ಸಂಗ್ರಹ ನೆಪದಲ್ಲಿ ಸಿದ್ದರಾಮಯ್ಯ ಹೊಸ ಕುತಂತ್ರ ಬೆಂಗಳೂರು: ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ ‘ಕ್ರಿಶ್ಚಿಯನ್’ ಸೇರಿಸಿರುವ ಸರ್ಕಾರದ ಕ್ರಮ ಹೊಸ ವಿವಾದವನ್ನು ಸೃಷ್ಟಿ ಮಾಡಿದೆ. ಕ್ರಿಶ್ಚಿಯನ್‌ ಸೇರ್ಪಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪಪ್ರಚಾರ ನಡೆಸುವಂತೆ ಕುಮ್ಮಕ್ಕು ನೀಡುತ್ತಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ Read More »

ಅಮೆರಿಕದಲ್ಲಿ ಪತ್ನಿ, ಪುತ್ರನ ಎದುರೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ

ಕ್ಯೂಬಾ ಮೂಲದ ಪಾತಕಿ ಎಸಗಿದ ಕೃತ್ಯಕ್ಕೆ ಟ್ರಂಪ್‌ ಖಂಡನೆ ವಾಷಿಂಗ್ಟನ್‌ : ಕರ್ನಾಟಕ ಮೂಲದ 50 ವರ್ಷದ ವ್ಯಕ್ತಿಯೊಬ್ಬರನ್ನು ಅಮೆರಿಕದಲ್ಲಿ ಹೆಂಡತಿ ಮತ್ತು ಮಗನ ಎದುರೇ ತಲೆ ಕತ್ತರಿಸಿ ಕೊಲೆ ಮಾಡಿದ ಬರ್ಬರ ಘಟನೆ ಸಂಭವಿಸಿದ್ದು, ಈ ಘಟನೆ ಜಾಗತಿಕವಾಗಿ ಕಳವಳಕ್ಕೆ ಕಾರಣವಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇಂಥ ಕೃತ್ಯ ಎಸಗಿದವನಿಗೆ ಯಾವುದೇ ಕಾರಣಕ್ಕೂ ಮೃದು ಧೋರಣೆ ತೋರಿಸುವುದಿಲ್ಲ ಎಂದು ಹೇಳಿದ್ದಾರೆ. ಡಲ್ಲಾಸ್‌ನಲ್ಲಿ ಮೋಟೆಲ್‌ ಮ್ಯಾನೇಜರ್‌ ಆಗಿದ್ದ ಕರ್ನಾಟಕ ಮೂಲದ ಚಂದ್ರಮೌಳಿ ಬಾಬ್‌ ನಾಗಮಲ್ಲಯ್ಯ ಅವರನ್ನ

ಅಮೆರಿಕದಲ್ಲಿ ಪತ್ನಿ, ಪುತ್ರನ ಎದುರೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ Read More »

ಸೆ.23 ಪೌರ ಕಾರ್ಮಿಕರ ದಿನಾಚರಣೆ | ನಗರಸಭೆ ಸದಸ್ಯರು, ಸಿಬ್ಬಂದಿಗಳು, ಪೌರ ಕಾರ್ಮಿಕರಿಗೆ ಕ್ರೀಡಾಕೂಟ

ಪುತ್ತೂರು: ಸೆ.23 ರಂದು ನಡೆಯಲಿರುವ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪುತ್ತೂರು ಪೌರ ಕಾರ್ಮಿಕರಿಗೆ ಕ್ರೀಡಾಕೂಟ ಭಾನುವಾರ ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ನಗರಸಭೆಯ ಸದಸ್ಯರು, ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರು ಕೆಲಸದ ಒತ್ತಡವನ್ನು ಬದಿಗೊತ್ತಿ ಭಾನುವಾರ ಕ್ರೀಡಾ ಕೂಟದಲ್ಲಿ ತಮ್ಮನ್ನು ಉತ್ಸಾಹದಿಂದ ತೊಡಗಿಸಿಕೊಂಡರು. ನಗರಸಭಾ ಸದಸ್ಯರಿಗೆ ಸಂಗೀತ ಕುರ್ಚಿ, ಪಾಸಿಂಗ್ ಬಾಲ್, ವೇಗ ನಡಿಗೆ, ಸದಸ್ಯರ ೫ ವರ್ಷದೊಳಗಿನ ಮಕ್ಕಳಿಗೆ ಪಾಸಿಂಗ್ ಬಾಲ್, ಓಟ, ಬಕೆಟ್ ಗೆ ಬಾಲ್ ಹಾಕುವುದು, 10 ವರ್ಷದೊಳಗಿನ

ಸೆ.23 ಪೌರ ಕಾರ್ಮಿಕರ ದಿನಾಚರಣೆ | ನಗರಸಭೆ ಸದಸ್ಯರು, ಸಿಬ್ಬಂದಿಗಳು, ಪೌರ ಕಾರ್ಮಿಕರಿಗೆ ಕ್ರೀಡಾಕೂಟ Read More »

error: Content is protected !!
Scroll to Top