ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ

ಭಾರತ ವಿರೋಧಿಯಾಗಿದ್ದ ಮಾಜಿ ಪ್ರಧಾನಿಯಿಂದ ಈಗ ಗೂಬೆ ಕೂರಿಸುವ ಯತ್ನ ಕಾಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಜನರಲ್‌ ಝಡ್‌ ಕ್ಷಿಪ್ರ ದಂಗೆಯಲ್ಲಿ ಅಧಿಕಾರ ಕಳೆದುಕೊಂಡು ಪಲಾಯನ ಮಾಡಿರುವ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಶ್ರೀರಾಮನನ್ನು ವಿರೋಧಿಸಿದ ನಿಲುವಿನಿಂದಾಗಿ ನನ್ನ ಅಧಿಕಾರ ಹೋಯಿತು ಎಂದು ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗೂಬೆ ಕೂರಿಸುವ ಪ್ರಯತ್ನ ಆರಂಭಿಸಿದ್ದಾರೆ. ಯುವಜನತೆಯ ಪ್ರತಿಭಟನೆಯ ಬಳಿಕ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶಿವಪುರದಲ್ಲಿರುವ ಬ್ಯಾರಕ್‌ನಲ್ಲಿ ಆಶ್ರಯ ಪಡೆದುಕೊಂಡಿರುವ […]

ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ ತುರ್ತು ಸಭೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ  ಬಿಜೆಪಿ ಪದಾಧಿಕಾರಿಗಳಾಗಿ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆ ಪರಿವಾರ ಸೇವಾ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು. ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂಧರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಂಸದರು, ರಾಜ್ಯಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ ತುರ್ತು ಸಭೆ Read More »

ಮಳೆಯಿಂದಾಗಿ ಗುಂಡಿಗಳಿಂದ ಕೆಟ್ಟು ಹೋದ ರಸ್ತೆ | ಪುತ್ತೂರು ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪರಿಶೀಲಿಸಿ ತಕ್ಷಣ ದುರಸ್ಥಿಗೆ ಸೂಚನೆ

ಪುತ್ತೂರು: ವಾಡಿಕೆಗಿಂತ ಹೆಚ್ಚು ಹಾಗೂ ನಿರಂತರ ಮಳೆ ಸುರಿದ ಪರಿಣಾಮ ನಗರಸಭೆಯ ಬಹುಪಾಲು ರಸ್ತೆಗಳು ಹದಗೆಟ್ಟು ಗುಂಡಿಗಳಾಗಿ ಸಂಚಾರಕ್ಕೆ ಸಂಚಕಾರ ಎದುರಾಗಿರುವ ಹಿನ್ನಲೆಯಲ್ಲಿ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಅಧಿಕಾರಿಗಳ ಜೊತೆ ನಗರಸಭೆ ಮುಖ್ಯರಸ್ತೆಯಲ್ಲಿ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೇ ತಿಂಗಳಿನಿಂದಲೇ ಮಳೆ ಬಿಡುವಿಲ್ಲದೆ ಸುರಿದಿದ್ದರಿಂದ ರಸ್ತೆಗಳು ಹದಗೆಟ್ಟಿದೆ. ಹೀಗಾಗಿ, ಹದಗೆಟ್ಟ ರಸ್ತೆಗಳು ಹಾಳಾಗಿ ಹೊಂಡ ಗುಂಡಿಗಳಾಗಿ ಸಂಚಾರಕ್ಕೆ ಅಡ್ಡಿಯಾಗಿವೆ. ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿದರೂ ಮತ್ತೆ

ಮಳೆಯಿಂದಾಗಿ ಗುಂಡಿಗಳಿಂದ ಕೆಟ್ಟು ಹೋದ ರಸ್ತೆ | ಪುತ್ತೂರು ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪರಿಶೀಲಿಸಿ ತಕ್ಷಣ ದುರಸ್ಥಿಗೆ ಸೂಚನೆ Read More »

ಸೆ.12 : ಮಂಗಳೂರಿನಲ್ಲಿ ಯುಇಎ ವತಿಯಿಂದ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ.

ಪುತ್ತೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್‌ ರಾಜ್ಯ ಸಮಿತಿ(ಯುಇಎ) ವತಿಯಿಂದ ಸೆ.12ರಂದು ಮಂಗಳೂರಿನ ಇಂಡಿಯಾನ ಕನ್ವೆನ್ನನ್ ಸೆಂಟರ್‌ನಲ್ಲಿ ನಡೆಯಲಿರುವ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -2025 ಕಾರ್ಯಕ್ರಮ ನಡೆಯಲಿದ್ದು ಪುತ್ತೂರಿನಿಂದ ತೆರಳುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಪುತ್ತೂರು ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ಬಪ್ಪಳಿಗೆ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಯುವ ನಾಯಕತ್ವ, ವ್ಯಕ್ತಿ ಮಾರ್ಗದರ್ಶನ ಮತ್ತು ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಬಲಪಡಿಸುವ ಉದ್ದೇಶದಿಂದ ಪುತ್ತೂರು ಸಹಿತ 21 ವಲಯದ ಯುವಕರನ್ನು

ಸೆ.12 : ಮಂಗಳೂರಿನಲ್ಲಿ ಯುಇಎ ವತಿಯಿಂದ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ. Read More »

ಮಂಗಳೂರು : ನಕಲಿ ಆಧಾರ್‌ ಕಾರ್ಡ್‌ ಜಾಲ ಬಯಲು; ಇಬ್ಬರು ಸೆರೆ

ಸರ್ಕಾರಿ ಕೆಲಸಗಳಿಗೆ ಸಲ್ಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಖದೀಮರು ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿಗಳನ್ನು ಸೃಷ್ಟಿಸಿ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆಗಳನ್ನು ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳಿಂದ ಜಾಮೀನು ಪಡೆದುಕೊಳ್ಳಲು ಬಳಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೂಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಎಂಬವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಕಲಿ ಆಧಾರ್‌ ಕಾರ್ಡ್‌ ಮೂಲಕ ಇವರು ಭಾರಿ ವಂಚನೆ ನಡೆಸಿರುವ ಕುರಿತು ಪೊಲೀಸರು ಅನುಮಾನ

ಮಂಗಳೂರು : ನಕಲಿ ಆಧಾರ್‌ ಕಾರ್ಡ್‌ ಜಾಲ ಬಯಲು; ಇಬ್ಬರು ಸೆರೆ Read More »

ಟ್ರಂಪ್‌ ಆಪ್ತ ವಿಶ್ವವಿದ್ಯಾಲಯದೊಳಗೆ ಗುಂಡೇಟಿಗೆ ಬಲಿ

ಬಂದೂಕು ಸಂಸ್ಕೃತಿಯ ಬಗ್ಗೆ ಮಾತನಾಡುತ್ತಿರುವಾಗಲೇ ಎದೆಗೆ ಬಡಿದ ಗುಂಡು ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ 31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಚಾರ್ಲ್ಸ್ ಕಿರ್ಕ್ ಬಲಪಂಥೀಯ ರಾಜಕೀಯ ಕಾರ್ಯಕರ್ತರಾಗಿದ್ದರು. 2012 ರಲ್ಲಿ ʼಟರ್ನಿಂಗ್ ಪಾಯಿಂಟ್ʼ ಹೆಸರಿನಲ್ಲಿ ಸಂಘಟನೆಯನ್ನು ಸ್ಥಾಪಿಸಿದ್ದರು. ಟರ್ನಿಂಗ್ ಪಾಯಿಂಟ್ ಆಕ್ಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ರಾಷ್ಟ್ರೀಯ ನೀತಿ ಮಂಡಳಿಯ ಸದಸ್ಯರಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಚಾರ್ಲಿ

ಟ್ರಂಪ್‌ ಆಪ್ತ ವಿಶ್ವವಿದ್ಯಾಲಯದೊಳಗೆ ಗುಂಡೇಟಿಗೆ ಬಲಿ Read More »

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ

ದೇವಿಯ ಪರಮ ಭಕ್ತರಾಗಿರುವ ಇಳಯರಾಜ ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ Read More »

ನೇಪಾಳ : ಜೈಲುಗಳಿಗೆ ನುಗ್ಗಿದ ದಂಗೆಕೋರರು, 7000ಕ್ಕೂ ಅಧಿಕ ಕೈದಿಗಳು ಪರಾರಿ

ಘರ್ಷಣೆಯಲ್ಲಿ ಐವರು ಬಾಲಾಪರಾಧಿಗಳು ಸಾವು; ಭಾರತದ ಗಡಿಯಲ್ಲಿ ಕಟ್ಟೆಚ್ಚರ ಕಾಠ್ಮಂಡು : ನೇಪಾಳದಲ್ಲಿ ಪ್ರಾರಂಭವಾಗಿರುವ ಜನರಲ್‌ ಝಡ್‌ ಎಂದು ಕರೆಯಲಾಗುತ್ತಿರುವ ಯುವಜನರ ದಂಗೆ ಸರ್ಕಾರ ಪತನಗೊಂಡ ನಂತರವೂ ತೀವ್ರವಾಗಿ ಮುಂದುವರಿದಿದ್ದು, ದಂಗೆಕೋರರು ವಿವಿಧ ಜೈಲುಗಳಿಗೆ ದಾಳಿ ಮಾಡಿದ ಪರಿಣಾಮ 7000ಕ್ಕೂ ಅಧಿಕ ಕೈದಿಗಳು ತಪ್ಪಿಸಿಕೊಂಡಿದ್ದಾರೆ. ಸರ್ಕಾರದ ವಿರುದ್ಧ ಪ್ರಾರಂಭವಾಗಿರುವ ಪ್ರತಿಭಟನೆ ತೀವ್ರ ಹಿಂಸಾಚಾರದ ರೂಪ ತಾಳಿದೆ. ಮಂಗಳವಾರ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ನೇಪಾಳ ಹಿಂಸಾಚಾರ ಮತ್ತು ಸಾಮೂಹಿಕ ಜೈಲು ದಾಳಿಗಳನ್ನು ಕಂಡಿದೆ.

ನೇಪಾಳ : ಜೈಲುಗಳಿಗೆ ನುಗ್ಗಿದ ದಂಗೆಕೋರರು, 7000ಕ್ಕೂ ಅಧಿಕ ಕೈದಿಗಳು ಪರಾರಿ Read More »

ಎಂ.ಡಿ.ಎಸ್.ಗೆ ಆಯ್ಕೆಯಾದ ಡಾ. ರಾಶಿ ಆರ್. ಎಸ್.

ಪುತ್ತೂರು: ಡಾ. ರಾಶಿ ಆರ್.ಎಸ್. ಅವರು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್. ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ ಡಾನ್ಸ್ಟಿಕ್‌ನಲ್ಲಿ 6ನೇ ರ್‍ಯಾಂಕ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ. ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್‌. ಗೆ ಆಯ್ಕೆಯಾಗಿದ್ದಾರೆ. ಅವರು ಅರೆ ಸೇನಾಪಡೆ ಉದ್ಯೋಗಿ ರಾಧಾಕೃಷ್ಣ ಐಪಳ ಮತ್ತು ಕೆ. ಎಸ್. ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಲತಾ ಕಮಿಲ ಅವರ ಪುತ್ರಿ.

ಎಂ.ಡಿ.ಎಸ್.ಗೆ ಆಯ್ಕೆಯಾದ ಡಾ. ರಾಶಿ ಆರ್. ಎಸ್. Read More »

ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರವು ದ. ಕ ಮತ್ತು ಕೊಡಗು ಜಿಲ್ಲಾ ಮಟ್ಟದ ಸಭೆಯು ತೆಂಕಿಲ ಒಕ್ಕಲಿಗ ಸಭಾಭಾವನದ ಚುಂಚಶ್ರೀಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ಸರ್ಕಾರವು ಸಮಾಜದ ಪ್ರತಿ ವರ್ಗಕ್ಕೂ ನ್ಯಾಯ ನೀಡುವ ದೃಷ್ಟಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಇದರ ಬಗ್ಗೆ

ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರ Read More »

error: Content is protected !!
Scroll to Top