ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣವೂ ವಾಪಸ್‌ ಬೆಂಗಳೂರು : ವಿವಿಧ ಸಂದರ್ಭಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆ ಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಾರಿ ನಿರ್ದೇಶನಾಲಯ(ಇ.ಡಿ) 2019 ಜೂನ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಕಾಂಗ್ರೆಸ್‌ […]

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ Read More »

ಮಂಗಳೂರು : ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದವ ಸೆರೆ

ಮಂಗಳೂರು: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆ ಎಎಸ್ಸೈ ಅಶೋಕ್ ಕೆ. ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್‌ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಎಂಬಾತನನ್ನು ಬಂಧಿಸಲಾಗಿದೆ. ಸೆ.2ರಂದು ರಾತ್ರಿ 12.45ಕ್ಕೆ ಅಶೋಕ್ ಸಿಬ್ಬಂದಿಯೊಂದಿಗೆ ರೌಂಡ್ಸ್‌ನಲ್ಲಿದ್ದಾಗ ನಾಗುರಿಯಲ್ಲಿ ಚಿಕ್‌ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಸಮೇತ ಏಳೆಂಟು ಮಂದಿ ನಿಂತಿದ್ದರು. ತಕ್ಷಣ ಎಎಸ್ಸೈ ಯಾಕೆ ಇಲ್ಲಿ

ಮಂಗಳೂರು : ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದವ ಸೆರೆ Read More »

ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ

ಎರಡು ತಿಂಗಳಿಂದ ಮಂಗಳೂರು ಜೈಲಿನಲ್ಲಿದ್ದ ಶ್ರೀಕೃಷ್ಣ ಜೆ.ರಾವ್‌ ಪುತ್ತೂರು: ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಸಹಪಾಠಿ ಯುವತಿಗೆ ಮಗು ಕರುಣಿಸಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್‌ಗೆ ನ್ಯಾಯಾಲಯ ಜಾಮೀನು ನೀಡಿದೆ. ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ.ರಾವ್ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯನ್ನಾಗಿ ಮಾಡಿದ್ದ. ಯುವತಿಗೆ ಮಗು ಜನಿಸಿದ್ದು, ಈಗಲೂ ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನವುಂಟು ಮಾಡುತ್ತಿದೆ. ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ

ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ

ಟೆಲಿಗ್ರಾಮ್‌, ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ಮೋಸ ಮಾಡುತ್ತಿದ್ದ ಆರೋಪಿಗಳು ಉಡುಪಿ : ಆನ್‌ಲೈನ್‌ ಟ್ರೆಡಿಂಗ್‌ ನಡೆಸಿ ಮೋಸ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೂಡಿಕೆದಾರರನ್ನು ವಂಚಿಸಲು ಬಳಸಲಾಗುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು 6 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಸುರತ್ಕಲ್‌ನ ಕೋಡಿಕೆರೆ ಗ್ರಾಮದ ಪ್ರೇಮ್ ನಗರದ ಮೊಹಮ್ಮದ್ ಕೈಸ್ (20), ಪಡುಬಿದ್ರಿ ಹೆಜಮಾಡಿಯ ಮಂಜತೋಟದ ಅಹ್ಮದ್ ಅನ್ವೀಜ್ (20), ಬಂಟ್ವಾಳ ತಾಲೂಕಿನ ಸಫ್ವಾನ್ (30) ಮತ್ತು ತಸೀರ್ (31), ಮೈಸೂರು ಜಿಲ್ಲೆಯ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ Read More »

ಡಿ.ಕೆ.ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ

1413 ಕೋ. ರೂ. ಸಂಪತ್ತು ಹೊಂದಿರುವ ಡಿಕೆಶಿ ನವದೆಹಲಿ: ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಕನಜಕಪುರ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಡಿಕೆಶಿ ಒಟ್ಟು ಆಸ್ತಿ 1413 ಕೋ. ರೂ. ಕೇಂದ್ರ ಸಚಿವರಾದ ಆಂಧ್ರದ ಟಿಡಿಪಿಯ 5705 ಕೋ. ರೂ. ಆಸ್ತಿಯೊಂದಿಗೆ ಪ್ರಥಮ ಸ್ಥಾನದಲ್ಲಿದ್ದಾರೆ. ಅವರು ಗುಂಟೂರು ಕ್ಷೇತ್ರದ ಸಂಸದರಾಗಿದ್ದಾರೆ. ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ

ಡಿ.ಕೆ.ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ Read More »

ಸೆ.5: ಪುತ್ತೂರಿನಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ

ಪುತ್ತೂರು: ಸೆ. 5 ರಂದು ತುಳುಕೂಟ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವುಗಳ ಆಶ್ರಯದಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ ಬೆಳಗ್ಗೆ 9.30ರಿಂದ ಪುತ್ತೂರಿನ ಜಿ.ಎಲ್‌. ವನ್ ಮಹಲ್‌ನ ಮೊದಲ ಮಹಡಿಯಲ್ಲಿ ನಡೆಯಲಿದೆ. ಜಿ.ಎಲ್.‌ ಆಚಾರ್ಯ ಜ್ಯುವೆಲ್ಲರ್ಸ್‌ನ ಮಾಲಕ ಬಲರಾಮ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಅಕ್ಷತಾ ಪೆರ್ಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಕವಿತಾ ಅಡೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಲಾಗಿದೆ.

ಸೆ.5: ಪುತ್ತೂರಿನಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ Read More »

GST ವ್ಯವಸ್ಥೆಯಲ್ಲಿ ಬದಲಾವಣೆ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲಿದೆ: H.D. ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ಜಿಎಸ್‌ಟಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದು, ಇದು ದೇಶಕ್ಕೆ ಪ್ರಧಾನಿ ಮೋದಿ ಅವರ ದೀಪಾವಳಿ ಕೊಡುಗೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಿಎಸ್‌ಟಿ ‌ಸುಧರಣೆಗಳಿಗೆ ಅನುಮೋದನೆ ನೀಡಲಾಗಿದೆ. ಈ ನಿರ್ಧಾರ ಜನಜೀವನ‌ ಸುಲಭಗೆೊಳಿಸುವ ಮತ್ತು ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬುವಲ್ಲಿ ಮಹತ್ವದ ಮತ್ತು ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜಿಎಸ್‌ಟಿ ಈಗ ಕೇವಲ ಎರಡು ಫ್ಲ್ಯಾಬ್‌ಗಳನ್ನು ಹೊಂದಿದ್ದು,

GST ವ್ಯವಸ್ಥೆಯಲ್ಲಿ ಬದಲಾವಣೆ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲಿದೆ: H.D. ಕುಮಾರಸ್ವಾಮಿ Read More »

ಬಾನು ಮುಷ್ತಾಕ್ ಹಿಂದೂವೇ?: ಯತ್ನಾಳ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ನಾಯಕರ ಧರ್ಮಸ್ಥಳ ಯಾತ್ರೆಯನ್ನು ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ‌ಸಿದ್ದರಾಮಯ್ಯ ಮಾಂಸಾಹಾರ ಸೇವಿಸದೆ ಧರ್ಮಸ್ಥಳಕ್ಕೆ ಹೋಗಲಿ ಎಂದು ಹೇಳಿದ್ದಾರೆ. ಧರ್ಮಸ್ಥಳ ಚಲೋ ‌ನಡೆಸುವ ಬುದ್ಧಿ ಕಾಂಗ್ರೆಸಿಗರಿಗೆ ಬಂದಿರುವುದು ಉತ್ತಮ ಸಂಗತಿ. ಈ ವರೆಗೆ ಮಸೀದಿ, ದರ್ಗಾ‌ಗೆ ಹೋಗುತ್ತಿದ್ದರು. ಈಗ ಧರ್ಮಸ್ಥಳಕ್ಕೆ ಹೋಗುತ್ತಿದ್ದಾರೆ. ಮಾಂಸಾಹಾರ ಸೇವಿಸದೆ ಸಿದ್ದರಾಮಯ್ಯ ಅವರೂ ಹೋಗಲಿ. ಡಿಕೆಶಿ ಅವರೂ ಹೋಗಲಿ ಎಂದು ಹೇಳಿದ್ದಾರೆ. ಮೈಸೂರು ದಸರಾದಲ್ಲಿ ಸನಾತನ ಸಂಸ್ಕೃತಿಯ ಸಂಸ್ಕಾರಗಳು ನಡೆಯುತ್ತದೆ. ಅಲ್ಲಿ ಬಾನು ಮುಷ್ತಾಕ್‌ಗೆ ಏನು

ಬಾನು ಮುಷ್ತಾಕ್ ಹಿಂದೂವೇ?: ಯತ್ನಾಳ್ ಪ್ರಶ್ನೆ Read More »

ಧರ್ಮಸ್ಥಳ ಪ್ರಕರಣ: ಸಮೀರ್ ‌ಮನೆಯಲ್ಲಿ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯೂಟ್ಯೂಬರ್ ಸಮೀರ್ ಮನೆಯಲ್ಲಿ ಇಂದು ಬೆಳ್ತಂಗಡಿ ಪೋಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಬಾಡಿಗೆ ಮನೆಗೆ ನ್ಯಾಯಾಲಯದ ಸರ್ಚ್ ವಾರಂಟ್ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ ಸೋಕೋ ಸಿಬ್ಬಂದಿ ಜೊತೆ ತೆರಳಿ, ಸಮೀಕ್ಷೆ ವಿಡಿಯೋ ತಯಾರಿಸುತ್ತಿದ್ದ ಸ್ಥಳದಲ್ಲಿ ಶೋಧ ನಡೆಸಿರುವುದಾಗಿದೆ. ಈ ವೇಳೆ ಮನೆಯಲ್ಲೇ ಇದ್ದ ಸಮೀರ್ ಪೊಲೀಸರ ಕಾರ್ಯಾಚರಣೆಗೆ ಸಹಕರಿಸಿದ್ದಾಗಿ ತಿಳಿದು ಬಂದಿದೆ. ಸಮೀರ್ ‌ವಿಡಿಯೋ ತಯಾರಿಗೆ ಬಳಸಿದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಸೇರಿದಂತೆ ಹಲವಾರು

ಧರ್ಮಸ್ಥಳ ಪ್ರಕರಣ: ಸಮೀರ್ ‌ಮನೆಯಲ್ಲಿ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು Read More »

ಸೆ.7 : ಖಗ್ರಾಸ ಚಂದ್ರಗ್ರಹಣ | ಭಾರತದಲ್ಲಿ ಹೇಗೆ ಕಾಣಿಸಲಿದೆ | ಈ ಗ್ರಹಣ ಅಪರೂಪವೇ? ಸುರಕ್ಷಿತವೇ? – ಇಲ್ಲಿದೆ ಮಾಹಿತಿ

ಸೆಪ್ಟೆಂಬರ್ 7, 2025 -ಹುಣ್ಣಿಮೆಯ ರಾತ್ರಿಯಂದು, ಚಂದ್ರನು ಭೂಮಿಯ ಸುತ್ತಲೂ ತನ್ನ ಕಕ್ಷೆಯಲ್ಲಿ ಹೋಗುತ್ತಾ, ಸೂರ್ಯನಿಂದ ಭೂಮಿಯ ಹಿಂಬದಿ ಬಂದಾಗ ಚಂದ್ರ ಗ್ರಹಣವಾಗಲಿದೆ. ಚಂದ್ರನು ಪೂರ್ತಿಯಾಗಿ ಭೂಮಿಯ ನೆರಳಿನಲ್ಲಿ ಬರುವ ಕಾರಣ, ಇದು ಖಗ್ರಾಸ ಚಂದ್ರ ಗ್ರಹಣವಾಗಿರುತ್ತದೆ.ಖಗ್ರಾಸ ಚಂದ್ರ ಗ್ರಹಣದ ವೇಳೆ. ಚಂದ್ರನು ತಾಮ್ರದಂತೆ ಕೆಂಪು ಬಣ್ಣ ಹೊಂದಿರುತ್ತಾನೆ. ಭೂಮಿಯು, ಚಂದ್ರನ ಮೇಲೆ ನೇರವಾಗಿ ಬೀಳುವ ಸೂರ್ಯನ ಕಿರಣಗಳನ್ನು ತಡೆಗಟ್ಟುತ್ತದೆ. ಈ ಕಾರಣ, ಈ ಗ್ರಹಣ ಕಾಲದಲ್ಲಿ, ಚಂದ್ರನು ಮೈನಸ್ 1.35ರಷ್ಟು ಪರಿಮಾಣವಾಗಿದ್ದು, ಶೇ. 99.9ರಷ್ಟು ಮಂದವಾಗಿ

ಸೆ.7 : ಖಗ್ರಾಸ ಚಂದ್ರಗ್ರಹಣ | ಭಾರತದಲ್ಲಿ ಹೇಗೆ ಕಾಣಿಸಲಿದೆ | ಈ ಗ್ರಹಣ ಅಪರೂಪವೇ? ಸುರಕ್ಷಿತವೇ? – ಇಲ್ಲಿದೆ ಮಾಹಿತಿ Read More »

error: Content is protected !!
Scroll to Top