ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘ 100% ಸಾಲ ಮರುಪಾವತಿ | ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸನ್ಮಾನ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿ ಅವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿದರು. 2024-25ರ ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ […]

ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘ 100% ಸಾಲ ಮರುಪಾವತಿ | ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸನ್ಮಾನ Read More »

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ

ಹೋಮ್‌ಲಿ ಬೈಟ್ಸ್ …ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ. ಇದೀಗ …ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ… ಓಣಂ ಹಬ್ಬದ ಪ್ರಯುಕ್ತ,ನೆರೆ ರಾಜ್ಯ ಕೇರಳದಲ್ಲಿ..ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬದ ಸಂದರ್ಭದಲ್ಲಿ ನಮ್ಮ ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ ಸಾಂಪ್ರದಾಯಿಕ ಪದಾರ್ಥಗಳೊಂದಿಗೆ ಓಣಂ ಸದ್ಯ! ಪ್ರಸ್ತುತ ಪಡಿಸುತ್ತಿದೆ, ತಿರುವೊಣಂ ದಿನ

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ Read More »

ಮಾನವ ಜಿಪಿಎಸ್‌ ಕುಖ್ಯಾತಿಯ ಉಗ್ರ ಬಾಗು ಖಾನ್‌ ಎನ್‌ಕೌಂಟರ್‌ಗೆ ಬಲಿ

100ಕ್ಕೂ ಅಧಿಕ ಉಗ್ರರಿಗೆ ಒಳ ನುಸುಳುಲು ಸಹಾಯ ಮಾಡಿದ್ದ ಪಾತಕಿ ಶ್ರೀನಗರ: ನೂರಕ್ಕೂ ಅಧಿಕ ಉಗ್ರರಿಗೆ ಒಳನುಸುಳಲು ಸಹಾಯ ಮಾಡಿದ್ದ, ಉಗ್ರರ ಲೋಕದಲ್ಲಿ ಮಾನವ ಜಿಪಿಎಸ್‌ ಎಂದೇ ಕುಖ್ಯಾತನಾಗಿದ್ದ ಬಾಗು ಖಾನ್‌ ಎಂಬಾತನನ್ನು ಭದ್ರತಾ ಪಡೆ ಶನಿವಾರ ಎನ್‌ಕೌಂಟರ್‌ನಲ್ಲಿ ಸಾಯಿಸಿದೆ. ಇವನ ಜೊತೆಗೆ ಇನ್ನೂ ಓರ್ವ ಉಗ್ರ ಸತ್ತಿದ್ದಾನೆ. ಸಮಂದರ್‌ ಚಾಚಾ ಎಂಬ ಇನ್ನೊಂದು ಹೆಸರನ್ನು ಹೊಂದಿರುವ ಬಾಗು ಖಾನ್‌ 1995ರಿಂದೀಚೆಗೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ನೆಲೆ ಮಾಡಿಕೊಂಡಿದ್ದ. ನೌಶೇರಾದಲ್ಲಿ ಇಂದು ಬೆಳಗ್ಗೆ ಅವನನ್ನು ಭದ್ರತಾ ಪಡೆ

ಮಾನವ ಜಿಪಿಎಸ್‌ ಕುಖ್ಯಾತಿಯ ಉಗ್ರ ಬಾಗು ಖಾನ್‌ ಎನ್‌ಕೌಂಟರ್‌ಗೆ ಬಲಿ Read More »

ಬಾನು ಮುಷ್ತಾಕ್ ತಮ್ಮ ಹಿಂದಿನ ಹೇಳಿಕೆಗಳಿಗೆ ‌ಸ್ಪಷ್ಚನೆ ನೀಡಲಿ: ಸಂಸದ ಯದುವೀರ್

ಮೈಸೂರು: ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ಈ ಹಿಂದೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ಅವರಿಂದ ದಸರಾ ಉದ್ಘಾಟನೆಯಾಗುವುದಕ್ಕೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಆದರೆ ನಾನು ಅವರ ಹಳೆಯ ಭಾಷಣವನ್ನು ಆ ಬಳಿಕ ಕೇಳಿದ್ದು, ಅದಕ್ಕೆ ಸ್ಪಷ್ಚೀಕರಣ ನೀಡಲಿ. ಇಲ್ಲವಾದರೆ ಅವರು ನಾಡಹಬ್ಬವನ್ನು ಉದ್ಘಾಟನೆ ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದು ತಿಳಿಸಿದ್ದಾರೆ.

ಬಾನು ಮುಷ್ತಾಕ್ ತಮ್ಮ ಹಿಂದಿನ ಹೇಳಿಕೆಗಳಿಗೆ ‌ಸ್ಪಷ್ಚನೆ ನೀಡಲಿ: ಸಂಸದ ಯದುವೀರ್ Read More »

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ

ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಎಡವಟ್ಟುಗಳು ನಡೆಯುತ್ತಲೇ ಇರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರು ದಸರಾ, ಧರ್ಮಸ್ಥಳ ಪ್ರಕರಣ ಮೊದಲಾದ ಗೊಂದಲಗಳನ್ನು ಗಮನದಲ್ಲಿಟ್ಚುಕೊಂಡು ಅವರು ಈ ಮಾತುಗಳನ್ನು ಹೇಳಿದ್ದಾರೆ. ಮಾತನಾಡುವುದು ಸುಲಭ. ಆದರೆ ಅದನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟ. ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು ಎನ್ನುವುದು ಅವರು ತಿಳಿದಿದ್ದರೆ, ಅವರು ಯಾರ ಮೇಲೆ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ. ಹೇಳಿಕೆ ನೀಡುವಾಗ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ Read More »

RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ

ಬೆಂಗಳೂರು: ಕೆಲ ಸಮಯದ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಚವರ ಕುಟುಂಬ ವರ್ಗಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು RCB ಘೋಷಣೆ ಮಾಡಿದೆ. ಈ ಘೋಷಣೆಯನ್ನು ಫ್ರಾಂಚೈಸಿಯ ಅಧಿಕೃತ ಖಾತೆಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂ ಮೂಲಕ ಹೊಸದಾಗಿ ಆರಂಭ ಮಾಡಲಾದ RCB ಕೋರ್ಸ್ ಅಡಿಯಲ್ಲಿ ಮಾಡಲಾಗಿದೆ. ಐಪಿಎಲ್‌ನಲ್ಲಿ ಚಾಂಪಿಯನ್ಸ್ ಆದ ಸಂಭ್ರಮವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆಯಲಾಗಿತ್ತು. ಈ ಆಚರಣೆಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿತ್ತು.

RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ Read More »

ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯ ಆಂತರಿಕ ಯೋಜನೆ ಧರ್ಮಸ್ಥಳದ ಆಸ್ತಿಯನ್ನು ಹೊಡೆಯುವುದಾಗಿದೆ ಎಂದು ಡಿಸಿಎಂ ‌ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಧರ್ಮಸ್ಥಳ ಆಸ್ತಿಯನ್ನು ಕಬಳಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ ಎನ್ನುವ ವಿಪಕ್ಷ ನಾಯಕ R. ಅಶೋಕ್ ಅವರಿಗೆ ಮತು ಭ್ರಮಣೆಯಾಗಿದೆ. ತಾನೇನು ಮಾತನಾಡುತ್ತಿದ್ದೇನೆ ಎನ್ನುವ ಅರಿವು ಅವರಿಗೆ ಇಲ್ಲ. ಜಾತಿ ಮತ್ತು ಭಾವನೆಗಳ ಜೊತೆಗೆಯೇ ಬಿಜೆಪಿಯವರು ರಾಜಕೀಯ ಮಾಡಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. RSS ಗೀತೆ ಹಾಡಿ ಡಿಕೆಶಿ ನಾಟಕ ಮಾಡುತ್ತಿದ್ದಾರೆ

ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್ Read More »

ವಿವಾದ ಸೃಷ್ಟಿಸುವುದಕ್ಕಾಗಿಯೇ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: R. ಅಶೋಕ್

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ವಿಪಕ್ಷ ನಾಯಕ R. ಅಶೋಕ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾನು ಅವರು ಚಾಮುಂಡೇಶ್ವರಿಯನ್ನು ಆನೆಯ ಮೇಲೆ ಕೂರಿಸುವುದಕ್ಕೂ ಕ್ಯಾತೆ ತೆಗೆಯುವುದಿಲ್ಲ ಎಂದು ಏನು ಗ್ಯಾರಂಟಿ? ನವರಾತ್ರಿ ಮತ್ತು ಮಷ್ತಾಕ್‌ಗೆ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ. ಬಾನು ಅವರ ಕೈಯಲ್ಲಿ ದಸರಾ ಉದ್ಘಾಟಿಸಬೇಕು ಎನ್ನುವ ಉಪಾಯ ಯಾರದ್ದು? ಮುಖ್ಯಮಂತ್ರಿಗಳದ್ದೋ, ಸಂಪುಟ ಸಹೋದ್ಯೋಗಿಗಳದ್ದೋ?, ಅಲ್ಲ ಧರ್ಮಸ್ಥಳ ಕ್ಷೇತ್ರದ ಹೆಸರಿಗೆ ಮಸಿ ಬಳಿಯಲು ಹೊರಟ ನಗರ

ವಿವಾದ ಸೃಷ್ಟಿಸುವುದಕ್ಕಾಗಿಯೇ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: R. ಅಶೋಕ್ Read More »

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ

ಕಾರು ದಡದಲ್ಲಿ ನಿಲ್ಲಿಸಿ ನದಿಯಲ್ಲಿ ಈಜಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಉಡುಪಿ : ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಈಜಲು ಇಳಿದು ನಾಪತ್ತೆಯಾಗಿದ್ದು, ಈ ಪ್ರಕರಣ ಅನೇಕ ಊಹಾಪೋಹಗಳಿಎಗ ಕಾರಣವಾಗಿದೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ ಸಿ.ಆರ್. ಗೋವಿಂದರಾಜು ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ Read More »

ಆಸ್ತಿ ನೋಂದಣಿ ಶುಲ್ಕ ಏರಿಕೆ ಮಾಡಿ ಆದೇಶ ಹೊರಡಿಸಿದ ಕಂದಾಯ ಇಲಾಖೆ

ಜನರಿಗೆ ಸರ್ಕಾರದಿಂದ ಮತ್ತೊಂದು ಏರಿಕೆ ಬರೆ ಬೆಂಗಳೂರು: ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಸರ್ಕಾರ ಮತ್ತೊಂದು ಬರೆ ಎಳೆದಿದೆ. ಆಸ್ತಿ ನೋಂದಣಿ ಶುಲ್ಕ ಶೇ.1ರಿಂದ ಶೇ.2ರಷ್ಟು ಏರಿಕೆ ಮಾಡಲಾಗಿದ್ದು, ಆ.31ರಿಂದ ಅನ್ವಯವಾಗಲಿದೆ. ರಾಜ್ಯದಲ್ಲಿ ಈವರೆಗೆ ನಿವೇಶನ, ಭೂಮಿ, ಫ್ಲ್ಯಾಟ್,​ ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ

ಆಸ್ತಿ ನೋಂದಣಿ ಶುಲ್ಕ ಏರಿಕೆ ಮಾಡಿ ಆದೇಶ ಹೊರಡಿಸಿದ ಕಂದಾಯ ಇಲಾಖೆ Read More »

error: Content is protected !!
Scroll to Top