ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಚಾರಣೆಗೆ ಹಾಜರಾದ ತಿಮರೋಡಿ

ಬೆಳ್ತಂಗಡಿ: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಸಂದರ್ಭ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿತ್ತು. ಈ ಪ್ರಕರಣದಲ್ಲಿ ತಿಮರೋಡಿ 3 ನೇ ಆರೋಪಿಯಾಗಿದ್ದು, ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಹಾಗೆಯೇ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಸುಜಾತ ಭಟ್ ಅವರು ತಮ್ಮ ನಾಲ್ಕನೇ ದಿನದ ವಿಚಾರಣೆಗಾಗಿ ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಲು SIT ಮುಖ್ಯಸ್ಥ […]

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಚಾರಣೆಗೆ ಹಾಜರಾದ ತಿಮರೋಡಿ Read More »

ಆ. 31: ಧರ್ಮಸ್ಥಳಕ್ಕೆ ನೈತಿಕ ಬಲ‌ ತುಂಬಲು ಜೆಡಿಎಸ್‌ನಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಮೇಲೆ ಅಪಪ್ರಚಾರ, ಷಡ್ಯಂತ್ರ, ಸುಳ್ಳು ಆರೋಪಗಳು ನಡೆಯುತ್ತಿದ್ದು, ಇದನ್ನು ವಿರೋಧಿಸಿ ಜೆಡಿಎಸ್ ಆ.31 ರಂದು ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಂಡಿರುವುದಾಗಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಸರ್ಕಾರ ಧರ್ಮಸ್ಥಳಕ್ಕೆ ಅಪಮಾನ ಮಾಡಲು ಮುಂದಾಗಿದೆ. ನಾನು ಒಬ್ಬ ಭಕ್ತನಾಗಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರ ಜೊತೆ ಧರ್ಮಸ್ಥಳಕ್ಕೆ ತೆರಳಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ಪಾರದರ್ಶಕವಾಗಿ ನಡೆದಿದೆಯೇ? ಇದರ ಹಿಂದೆ ಯಾರಿದ್ದಾರೆ?

ಆ. 31: ಧರ್ಮಸ್ಥಳಕ್ಕೆ ನೈತಿಕ ಬಲ‌ ತುಂಬಲು ಜೆಡಿಎಸ್‌ನಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ Read More »

ಅಕ್ಷಯ ಕಾಲೇಜಿನಲ್ಲಿ ಜೀವ ರಕ್ಷಣ ಕುರಿತು ಒರಿಯಂಟೇಶನ್‍ ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭಗಳಲ್ಲಿ ಸುರಕ್ಷತೆ ಮತ್ತು ಸಿದ್ಧತೆಯ ಬಗ್ಗೆ ಜಾಗೃತಿ ಮೂಡಿಸಲು ಜೀವ ರಕ್ಷಣೆ ಕುರಿತು ಒರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪ್ರಾಂಶುಪಾಲ ರಕ್ಷಣ್ ಟಿ.ಆರ್. ವಹಿಸಿದ್ದರು. ಅಕ್ಷಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‍ ನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವರಣಾಶಿ ಸ್ವಿಮ್ಮಿಂಗ್ ಅಕಾಡೆಮಿಯ ಮುಖ್ಯ ಕೋಚ್ ಮತ್ತು ಮಾಲೀಕ ಪಾರ್ಥ ವರಣಾಶಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಜೀವ ರಕ್ಷಣಾ ತಂತ್ರಗಳು ಮತ್ತು ವಿಶೇಷವಾಗಿ ನೀರಿನಲ್ಲಿ

ಅಕ್ಷಯ ಕಾಲೇಜಿನಲ್ಲಿ ಜೀವ ರಕ್ಷಣ ಕುರಿತು ಒರಿಯಂಟೇಶನ್‍ ಕಾರ್ಯಕ್ರಮ Read More »

ನಿವೃತ್ತಿ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

ನವದೆಹಲಿ: 75 ವರ್ಷಗಳನ್ನು ಪೂರೈಸಿದ ಬಳಿಕ ನಾನು ನಿವೃತ್ತಿ ಹೊಂದಬೇಕು ಅಥವಾ ನಿವೃತ್ತಿ ಹೊಂದುವುದಾಗಿ ಎಲ್ಲಿಯೂ ಹೇಳಿಲ್ಲ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಸ್ಪಷ್ಚನೆ ನೀಡಿದ್ದಾರೆ. ಮುಂದಿನ ತಿಂಗಳು ಪ್ರಧಾನಿ ಮೋದಿ ಮತ್ತು ಮೋಹನ್ ಭಾಗ್ವತ್ ಅವರಿಬ್ಬರೂ 75 ವರ್ಷಕ್ಕೆ ಕಾಲಿಡಲಿದ್ದು, ಈ‌ ಸಂದರ್ಭದಲ್ಲಿಯೇ ಅವರು ಈ ಸ್ಪಷ್ಟನೆ ‌ನೀಡಿರುವುದಾಗಿದೆ. 75 ವರ್ಷಕ್ಕೆ ನಿವೃತ್ತಿ ಹೊಂದುವ ವಿಷಯದಲ್ಲಿ ವಿರೋಧಿಗಳು ಭಾಗ್ವತ್ ಅವರ ಈ ಹಿಂದಿನ ಹೇಳಿಕೆಯೊಂದನ್ನು ವ್ಯಂಗ್ಯ ಮಾಡುತ್ತಿದ್ದು, ಆ ಕಾರಣಕ್ಕೆ ಈ ಸ್ಪಷ್ಟೀಕರಣ

ನಿವೃತ್ತಿ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು? Read More »

ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ ಉಡುಪಿಯ ವಿದುಷಿ ದೀಕ್ಷಾ

ಉಡುಪಿ: 216 ಗಂಟೆಗಳ ಕಾಲ ಭರತನಾಟ್ಯ ಮಾಡುವ ಗುರಿಯೊಂದಿಗೆ ಆ.21 ರಂದು ನೃತ್ಯ ಆರಂಭ ಮಾಡಿದ್ದ ಉಡುಪಿಯ ವಿದುಷಿ ದೀಕ್ಷಾ ಅವರ ಹೆಸರು ಸದ್ಯ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ನಲ್ಲಿ ಅಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ಭರತನಾಟ್ಯ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮ್ಮ ಹೆಸರು ದಾಖಲಾಗುವಂತೆ ಮಾಡಿದ್ದ ಮಂಗಳೂರಿನ ರೆಮೊನಾ ಪಿರೇರಾ ಅವರ ದಾಖಲೆ ಮುರಿದು, ಹೊಸ ದಾಖಲೆ ಬರೆದಿದ್ದಾರೆ. ದೀಕ್ಷಾ ಅವರು 170 ಗಂಟೆಗಳ

ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ ಉಡುಪಿಯ ವಿದುಷಿ ದೀಕ್ಷಾ Read More »

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ

ಕೆಲ ದಿನಗಳಿಂದ ಯಾರಿಗೂ ಸಿಗದಿದ್ದ ತಿಮರೋಡಿ ಇಂದು ದಿಢೀರ್‌ ಹಾಜರು ಮಂಗಳೂರು: ಕೆಲ ದಿನಗಳಿಂದ ಯಾರಿಗೂ ಕಾಣಿಸದಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಇಂದು ದಿಢೀರ್‌ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು ಹಾಜರಾಗಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರನ್ನು ನಿಂದಿಸಿದ ಆರೋಪದಲ್ಲಿ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಕೇಸ್‌ಗೆ ಸಂಬಂದಿಸಿ ಆಗಸ್ಟ್‌ 21ರಂದು ಉಜಿರೆಯ ತಿಮರೋಡಿ ನಿವಾಸಕ್ಕೆ ಪೊಲೀಸರು ಆಗಮಿಸಿ ಮಹೇಶ್‌ ಶೆಟ್ಟಿಯನ್ನು ಬಂಧಿಸಿದ್ದರು. ಬಂಧನದ ವೇಳೆ

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ

ಕಾಣಿಯೂರು: ಕುದ್ಮಾರಿನ ಜನತೆಯ ಪ್ರೀತಿ, ಸಹಕಾರ ಶ್ಲಾಘನೀಯವಾಗಿದ್ದು ದೇವಸ್ಥಾನದ ಬ್ರಹ್ಮಕಲಶೋತ್ಸವವು ಎಲ್ಲರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಯಶಸ್ವಿಯಾಗಿ ನಡೆದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಆ.27 ರಂದು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದ ನೆಲಕ್ಕೆ ಅಳವಡಿಸಿದ ಹಾಸು ಕಲ್ಲನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಶಾಂತಿಮೊಗರು ಕ್ಷೇತ್ರವು

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ Read More »

ಬೆಂಗಳೂರು : ಸಿಖ್‌ ಗುರುದ್ವಾರಕ್ಕೆ ಬಾಂಬ್‌ ಬೆದರಿಕೆ

ಆರ್‌ಡಿಎಕ್ಸ್‌ ಇಟ್ಟು ಗುರುದ್ವಾರವನ್ನು ಸ್ಫೋಟಿಸುವುದಾಗಿ ಬೆದರಿಕೆ ಬೆಂಗಳೂರು : ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು

ಬೆಂಗಳೂರು : ಸಿಖ್‌ ಗುರುದ್ವಾರಕ್ಕೆ ಬಾಂಬ್‌ ಬೆದರಿಕೆ Read More »

ದೊಂಡೋಲೆ ಚೌತಿ ತಾಳಮದ್ದಳೆಗೆ ಅಮೃತ ಮಹೋತ್ಸವದ ಸಂಭ್ರಮ | ದೊಂಡೋಲೆ  ತಾಳಮದ್ದಳೆ ನಿರಂತರವಾಗಿ ಮುಂದುವರಿಯಲಿ: ಡಿ.ಹರ್ಷೇಂದ್ರ ಕುಮಾರ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ಯಾನುಭೋಗರಾಗಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಮೂರು ತಲೆಮಾರಿನ ಹೆಗ್ಗಡೆಯವರೊಂದಿಗೆ ಕಚೇರಿಯ ಲೆಕ್ಕಪತ್ರ ಮತ್ತು ಕಂದಾಯ ವಿಭಾಗದ  ಕಾರ್ಯನಿರ್ವಹಣೆಯಲ್ಲಿ ಖ್ಯಾತಿ ಪಡೆದ ಕಲಾ ಪ್ರೇಮಿ ದೊಂಡೋಲೆ ಕೆ. ಸೂರ್ಯನಾರಾಯಣ ರಾವ್ 1951 ರಲ್ಲಿ ದೊಂಡೋಲೆ ಮನೆಯಲ್ಲಿ ಗಣೇಶ ಚತುರ್ಥಿಯಂದು  ಶ್ರೀ ಗಣೇಶನ ಪ್ರತಿಷ್ಠೆಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೆ ಮತ್ತು  ಯಕ್ಷಗಾನ ತಾಳಮದ್ದಳೆಯನ್ನು ಪ್ರಾರಂಭಿಸಿದರು. ಆರಂಭದ ಕಾಲಘಟ್ಟದಲ್ಲಿ ಧರ್ಮಸ್ಥಳ ಪರಿಸರದ ಕಲಾವಿದರು, ಕೆಲವು ಯಕ್ಷಗಾನ ಸಂಘಗಳ ಕಲಾವಿದರು ಭಾಗವಹಿಸುತ್ತಾ ಮುಂದುವರಿದ  ಕಾರ್ಯಕ್ರಮವು

ದೊಂಡೋಲೆ ಚೌತಿ ತಾಳಮದ್ದಳೆಗೆ ಅಮೃತ ಮಹೋತ್ಸವದ ಸಂಭ್ರಮ | ದೊಂಡೋಲೆ  ತಾಳಮದ್ದಳೆ ನಿರಂತರವಾಗಿ ಮುಂದುವರಿಯಲಿ: ಡಿ.ಹರ್ಷೇಂದ್ರ ಕುಮಾರ್ Read More »

ಜಪಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ

ವಾಣಿಜ್ಯ, ತಂತ್ರಜ್ಞಾನ ಅಭಿವೃದ್ಧಿ ನಿಟ್ಟಿನಲ್ಲಿ ಎರಡು ದಿನದ ಭೇಟಿ ಟೋಕಿಯೊ: ಎರಡು ದಿನಗಳ ಭೇಟಿಗಾಗಿ ಜಪಾನ್‌ಗೆ ಹೋಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜಪಾನ್‌ನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಗಿದೆ. ಭಾರತ-ಜಪಾನ್ ಪಾಲುದಾರಿಕೆಯನ್ನು ಮುನ್ನಡೆಸಲು ಪ್ರಧಾನಿ ಮೋದಿಯವರು ಇಂದು ಸಂಜೆ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರ ಈ ಭೇಟಿ ಎರಡೂ ದೇಶಗಳ ನಡುವಿನ ನಾಗರೀಕರು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಆಗಸ್ಟ್ 29ರಿಂದ

ಜಪಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ Read More »

error: Content is protected !!
Scroll to Top