ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಿಗೂಢ ನಾಪತ್ತೆ ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರಿ ಇನ್ನೂ ಪತ್ತೆಯಾಗದಿರುವುದು ಕಳವಳ ಮೂಡಿಸಿದೆ. ಈ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ […]

ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ Read More »

ಪಶ್ಚಿಮ ಬಂಗಾಳ : ಎರಡನೇ ಹಂತದ ಮತದಾನದ ವೇಳೆ ವ್ಯಾಪಕ ಹಿಂಸಾಚಾರ

ಬಿಜೆಪಿ ಬೂತ್‌ ಏಜೆಂಟ್‌ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನವು ಇಂದು ನಡೆಯುತ್ತಿದ್ದು, ಮತದಾನದ ಆರಂಭಿಕ ಗಂಟೆಗಳಲ್ಲೇ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ ಮತ್ತು ಘರ್ಷಣೆಗಳು ನಡೆದ ವರದಿಯಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ ರಾಜ್ಯದಲ್ಲಿ ಸರಾಸರಿ 18.39% ಮತದಾನ ದಾಖಲಾಗಿದೆ. ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 20.86% ಮತದಾನವಾಗಿದ್ದರೆ, ಹೂಗ್ಲಿಯಲ್ಲಿ 20.16% ಮತದಾನ ನಡೆದಿದೆ. ಚಪ್ರಾ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 53ರಲ್ಲಿ

ಪಶ್ಚಿಮ ಬಂಗಾಳ : ಎರಡನೇ ಹಂತದ ಮತದಾನದ ವೇಳೆ ವ್ಯಾಪಕ ಹಿಂಸಾಚಾರ Read More »

ಪತ್ನಿಯನ್ನು ಭೀಕರವಾಗಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ: ಪುಟ್ಟ ಮಗು ಪಾರು

ಕಲಬುರ್ಗಿ: ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೊಬ್ಬ ಕುಡುಗೋಲಿನಿಂದ ಪತ್ನಿಯನ್ನು ಹತ್ಯೆ ಮಾಡಿ, ಮಗುವನ್ನು ಹಿಡಿದುಕೊಂಡು ಬಾವಿಗೆ ಹಾರಿದ್ದಾನೆ. ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಪತಿ ಮೃತಪಟ್ಟ ಘಟನೆ ನಡೆದಿದೆ. ಅಫಜಲಪುರದ ಮದರಾ(ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಜಲಿ(23) ಎಂಬಾಕೆಯನ್ನು ಪತಿ ಲಕ್ಷ್ಮೀಪುತ್ರ ಎಂಬಾತ ಕೊಲೆ ಮಾಡಿದ್ದಾನೆ. ಆ ಬಳಿಕ ತನ್ನ ಪುಟ್ಟ ಮಗುವಿನ ಜೊತೆಗೆ ಆತ್ಮಹತ್ಯೆಯ ಉದ್ದೇಶದಿಂದ ಗ್ರಾಮದ ಬಾವಿಗೆ ಹಾರಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಮಗುವನ್ನು ಬಾವಿಯಿಂದ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಆದರೆ ಲಕ್ಷ್ಮೀಪುತ್ರ

ಪತ್ನಿಯನ್ನು ಭೀಕರವಾಗಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ: ಪುಟ್ಟ ಮಗು ಪಾರು Read More »

ನಳ್ಳಿ ನೀರಿನ ವಿಚಾರಕ್ಕೆ ನಿಂದನೆ, ಹಲ್ಲೆ: ದೂರು ದಾಖಲು

ಪುತ್ತೂರು: ನಳ್ಳಿ ‌ನೀರಿನ ಸರಬರಾಜು ವಿಷಯಕ್ಕೆ ಸಂಬಂಧಿಸಿದ ಹಾಗೆ ಹಲ್ಲೆ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಶಾಂತಿಗೋಡು ಗ್ರಾಮದ ಉಮೇಶ್ ಖಂಡಿಗ ಅವರು ದೂರು ನೀಡಿರುವುದಾಗಿದೆ. ಉಮೇಶ್ ಅವರು ನರಿಮೊಗರು ಪಂಚಾಯತ್‌ನಿಂದ ನಳ್ಳಿ ‌ನೀರಿನ ಸೌಲಭ್ಯ ಪಡೆದಿದ್ದು, ಅವರ ಮನೆಗೆ ನೀರು ಸರಬರಾಜು ಸ್ಥಗಿತವಾಗಿತ್ತು‌. ಈ ಬಗ್ಗೆ ನೀರು ಬಿಡುವ ಕೆಲಸ ಮಾಡುತ್ತಿದ್ದ ಶೇಖರ್ ಎಂಬವರಿಗೆ ಕರೆ ಮಾಡಿ ನೀರು ಬಿಡುವಂತೆ ಹೇಳಿದ್ದರು. ಆದರೆ ಶೇಖರ್ ಮತ್ತು

ನಳ್ಳಿ ನೀರಿನ ವಿಚಾರಕ್ಕೆ ನಿಂದನೆ, ಹಲ್ಲೆ: ದೂರು ದಾಖಲು Read More »

ನಕಲಿ ನಂಬರ್ ಬಳಸಿ ಕಾರು ಚಲಾಯಿಸಿದ ಹಬೀಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಕಲಿ ನಂಬರ್ ಪ್ಲೇಟ್ ಬಳಸಿ ಕಾರು ಚಲಾಯಿಸಿದ ವ್ಯಕ್ತಿಯೊಬ್ಬರ ‌ವಿರುದ್ದ ಪುತ್ತೂರು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿದ್ದಾರೆ. ಕೆಮ್ಮಿಂಜೆಯ ಕೂರ್ನಡ್ಕದ ಸಮೀಪ ಹಬೀಬ್ ಎಂಬವರು ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಚಲಾಯಿಸಿದ ಆರೋಪಿ. ಮಾರುತಿ ಸ್ವಿಫ್ಟ್ ಕಾರಿನ ನಂಬರ್ ಪ್ಲೇಟ್ ನಕಲಿ ಬಳಸಿ ಹಬೀಬ್ ಚಲಾಯಿಸುತ್ತಿದ್ದು, ರೌಂಡ್ಸ್‌ನಲ್ಲಿದ್ದ ಪೊಲೀಸರು ಕಾರನ್ನು ತಪಾಸಣೆಗೆ ಒಳಪಡಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಪರಿಶೀಲನೆಯ ಸಮಯದಲ್ಲಿ ಕಾರಿನ ನೋಂದಣಿ ಸಂಖ್ಯೆ, ಎಂಜಿನ್ ನಂಬರ್ ಮತ್ತು ಚೇಸೀಸ್ ನಂಬರ್‌ಗಳಲ್ಲಿ

ನಕಲಿ ನಂಬರ್ ಬಳಸಿ ಕಾರು ಚಲಾಯಿಸಿದ ಹಬೀಬ್ ವಿರುದ್ಧ ಪ್ರಕರಣ ದಾಖಲು Read More »

ಮೇ ತಿಂಗಳಲ್ಲಿ ಬಿಸಿಲು ಇನ್ನಷ್ಟು ಬಿರುಸು : ಹವಾಮಾನ ಇಲಾಖೆ ಮುನ್ಸೂಚನೆ

ತಾಪಮಾನದಲ್ಲಿ ಇನ್ನೂ 3-4 ಸೆಲ್ಸಿಯಸ್ ಡಿಗ್ರಿ ಏರಿಕೆ ಸಾಧ್ಯತೆ ಬೆಂಗಳೂರು: ಈ ವರ್ಷ ಬೇಸಿಗೆ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ಕರಾವಳಿ ಜಿಲ್ಲೆಯೂ ಸೇರಿದಂತೆ ಎಲ್ಲೆಡೆ ಸುಡುಬಿಸಿಲಿನಿಂದಾಗಿ ಜನ ಕಂಗಾಲಾಗಿದ್ದಾರೆ. ಕರ್ನಾಟಕ ಕಾದ ಕಾವಲಿಯಂತಾಗಿದೆ. ಇದರ ನಡುವೆ ಮೇ ತಿಂಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗಲಿದ್ದು, ಬಿಸಿಲಿನ ಪ್ರತಾಪ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ ತಿಂಗಳಲ್ಲೇ ಸುಡುವ ಸೂರ್ಯನ ಪ್ರತಾಪಕ್ಕೆ ಕರುನಾಡು ಹೈರಾಣಾಗಿದೆ. ಮೇ ತಿಂಗಳಲ್ಲಿ ಸೂರ್ಯ ಇನ್ನೂ ಉಗ್ರ ಪ್ರತಾಪಿಯಾಗಲಿದ್ದಾನೆ. ಮೇ ತಿಂಗಳಲ್ಲಿ ಅಸಲಿ

ಮೇ ತಿಂಗಳಲ್ಲಿ ಬಿಸಿಲು ಇನ್ನಷ್ಟು ಬಿರುಸು : ಹವಾಮಾನ ಇಲಾಖೆ ಮುನ್ಸೂಚನೆ Read More »

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹೆದ್ದಾರಿ ಬದಿ ನೀರು ಕುಡಿಯಲೆಂದು ರಿಕ್ಷಾ ನಿಲ್ಲಿಸಿದಾಗ ಬಂದು ಅಪ್ಪಳಿಸಿದ ತೂಫಾನ್‌ ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೀಡಾದ ರಿಕ್ಷಾದಲ್ಲಿ ಬಂಟ್ವಾಳ

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು Read More »

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು

ಹುಮ್ಮಸ್ಸಿನಿಂದ ಮತಗಟ್ಟೆಗಳತ್ತ ಧಾವಿಸುತ್ತಿರುವ ಜನ ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗಿನಿಂದಲೇ ಮತದಾರರು ಸಾಲುಗಟ್ಟಿ ಮತಗಟ್ಟೆಗಳತ್ತ ಧಾವಿಸುತ್ತಿದ್ದು, ಮೊದಲ ಹಂತದ ದಾಖಲೆ ಮತದಾನದ ಹುಮ್ಮಸ್ಸು ಎರಡನೇ ಹಂತದಲ್ಲೂ ಕಾಣಿಸುತ್ತಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಎರಡನೇ ಹಂತದಲ್ಲಿ 142 ಕ್ಷೇತ್ರಗಳಿದ್ದು ಅದರಲ್ಲಿ ನಾಡಿಯಾ, ಪುರ್ಬಾ ಬರ್ಧಮಾನ್, ಹೌರಾ, ಹೂಗ್ಲಿ, ಕೋಲ್ಕತ್ತಾ ಸೇರಿ 7

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ

ಭೀಕರ ಕೃತ್ಯ ಎಸಗಿದ ಉಗ್ರನಿಗೆ ನೀಡಿದ ಶಿಕ್ಷೆ ಕಡಿಮೆಯಾಯಿತು ಎಂಬ ಅಭಿಪ್ರಾಯ ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್‌ ಬ್ಲಾಸ್ಟ್ ಪ್ರಕರಣದ ಅಪರಾಧಿ ಉಗ್ರ ಶಾರಿಖ್‌ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಎನ್‌ಐಎ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. 10 ವರ್ಷ ಶಿಕ್ಷೆ ತುಂಬಾ ಕಡಿಮೆ ಆಯ್ತು ಎಂದು ಎನ್‌ಐಎ ನಿರ್ಧರಿಸಿದೆ. ಶಾರಿಕ್‌ಗೆ ಈಗ 27 ವರ್ಷ, ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಇನ್ನೂ 7 ವರ್ಷ ಮಾತ್ರ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ Read More »

ಶೇ.100 ಮುಸ್ಲಿಂ ಮತದಾರರಿರುವ ವಾರ್ಡ್‌ನಲ್ಲಿ ಹಿಂದೂ ಮಹಿಳೆಗೆ ಗೆಲುವು

ಗುಜರಾತ್‌ ಸ್ಥಳೀಯ ಚುನಾವಣೆಯಲ್ಲಿ ಸಾಮರಸ್ಯದ ಸಂದೇಶ ಸಾರಿದ ಅಪರೂಪದ ಫಲಿತಾಂಶ ಗುಜರಾತ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.100 ಮುಸ್ಲಿಂ ಮತದಾರರಿರುವ ಗೋಧ್ರಾದ ವಾರ್ಡ್‌ನಲ್ಲಿ ಹಿಂದೂ ಸಮುದಾಯದ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸ್ವತಂತ್ರ ಹಿಂದೂ ಮಹಿಳಾ ಅಭ್ಯರ್ಥಿ ಅಪೇಕ್ಷಾಬೆನ್ ನೈನೇಶ್‌ಭಾಯ್ ಸೋನಿ ಅವರು ವಾರ್ಡ್ ಸಂಖ್ಯೆ 7ರಿಂದ ಅದ್ಭುತ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವು ಶೇ.100 ಮುಸ್ಲಿಂ ಸಮುದಾಯಕ್ಕೆ ಸೇರಿದೆ. ಆ ಮೂಲಕ ಸಾಮಾಜಿಕ ಸಾಮರಸ್ಯದ ಪ್ರಬಲ ಸಂದೇಶ ಸಾರಲಾಗಿದೆ. ಅಪೇಕ್ಷಾಬೆನ್ ಸೋನಿ ಅವರ ಗೆಲುವು ಈ

ಶೇ.100 ಮುಸ್ಲಿಂ ಮತದಾರರಿರುವ ವಾರ್ಡ್‌ನಲ್ಲಿ ಹಿಂದೂ ಮಹಿಳೆಗೆ ಗೆಲುವು Read More »

error: Content is protected !!
Scroll to Top