ಧನ್ಕರ್ ರಾಜೀನಾಮೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆಗೆ ‌ಸಂಬಂಧಿಸಿದ ಹಾಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಧನ್ಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಅನಾರೋಗ್ಯದ ಕಾರಣಗಳನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಜೊತೆಗೆ ತಮ್ಮ ಹುದ್ದೆ, ಪ್ರಧಾನಿ ಮೋದಿ ಅವರಿಗೆ ಮತ್ತು ಇತರ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ ಎನ್ನುವ ಮೂಲಕ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎನ್ನುವ ವಿಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸತ್ಯ ಮತ್ತು ಸುಳ್ಳಿನ ವ್ಯಾಖ್ಯಾನಗಳು ವಿಪಕ್ಷಗಳ ಹೇಳಿಕೆಗಳನ್ನು […]

ಧನ್ಕರ್ ರಾಜೀನಾಮೆ ಬಗ್ಗೆ ಅಮಿತ್ ಶಾ ಹೇಳಿದ್ದೇನು? Read More »

ಮಾಸ್ಕ್‌ಮ್ಯಾನ್ ಚೆನ್ನಯ್ಯನಿಗೆ ಮೆಡಿಕಲ್ ಟೆಸ್ಟ್

ಧರ್ಮಸ್ಥಳ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ಪ್ರಕರಣದ ಮಾಸ್ಕ್‌ಮ್ಯಾನ್ ಆರೋಪಿ ಚೆನ್ನಯ್ಯ‌ನಿಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ. ಚೆನ್ನಯ್ಯನಿಗೆ SIT ಇನ್ಸ್‌ಪೆಕ್ಟರ್ ಸಂಪತ್ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ತಂಡ ಮೆಡಿಕಲ್ ಟೆಸ್ಟ್ ಮಾಡಿಸಿದೆ. ಬಳಿಕ SIT ಕಚೇರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ಹೇಳಿವೆ.

ಮಾಸ್ಕ್‌ಮ್ಯಾನ್ ಚೆನ್ನಯ್ಯನಿಗೆ ಮೆಡಿಕಲ್ ಟೆಸ್ಟ್ Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಆರ್ಥಿಕ ವರ್ಷದಲ್ಲಿ 1.67 ಕೋಟಿ ರೂ. ಲಾಭ | ಸದಸ್ಯರಿಗೆ ಶೇ.14 ಡಿವಿಡೆಂಡ್‍ : ತಾರನಾಥ ಕಾಯರ್ಗ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2034-25ನೇ ಸಾಲಿನಲ್ಲಿ 412.92 ಕೋಟಿ ರೂ. ವ್ಯವಹಾರ ಮಾಡಿ 1.67 ಕೋಟಿ ರೂ. ಲಾಭಗಳಿಸಿದ್ದು, ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹೇಳಿದರು. ಅವರು ಭಾನುವಾರ ಸಂಘದ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರ ಸಹಕಾರದಿಂದಾಗಿ ಸಂಘವು ಸತತವಾಗಿ 23ನೇ ಬಾರಿಗೆ ಅಡಿಟ್‍ ನಲ್ಲಿ ಎ ಗ್ರೇಡ್ ಪಡೆದುಕೊಂಡಿದೆ ಎಂದು ಹೇಳಿದರು. ಪ್ರತಿ ದಿನ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಆರ್ಥಿಕ ವರ್ಷದಲ್ಲಿ 1.67 ಕೋಟಿ ರೂ. ಲಾಭ | ಸದಸ್ಯರಿಗೆ ಶೇ.14 ಡಿವಿಡೆಂಡ್‍ : ತಾರನಾಥ ಕಾಯರ್ಗ Read More »

ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯ ಉದ್ಘಾಟನೆ

ಪುತ್ತೂರು: ಸುಳ್ಯದ ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯಿಂದ ನಿರ್ವಹಿಸಲ್ಪಡುವ ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯದ ಉದ್ಘಾಟನೆ ಪುತ್ತೂರಿನ ಮಹಾವೀರ ವೆಂಚರ್ಸ್‌ನ ಪಾಲಿಕ್ಲಿನಿಕ್ ಆವರಣದಲ್ಲಿ ನಡೆಯಿತು. “Committee B” A.O.L.E. Kurunjibhag, Sullia ಇದರ ಚೇರ್ಮನ್ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು ಉದ್ಘಾಟನೆಯನ್ನು ನಿರ್ವಹಿಸಿದರು. Rtn. ಡಾ. ಶಿವಪ್ರಕಾಶ್ ಬಿ. ಅವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಹಾವೀರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುರೇಶ್ ಪುತ್ತೂರಾಯ, Asst. Governor Zone V, RID

ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯ ಉದ್ಘಾಟನೆ Read More »

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ವಿರೋಧ : ವೈರಲ್‌ ಆಗುತ್ತಿದೆ ಹಳೆಯ ವಿಡಿಯೋ

ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿ ದೌರ್ಜನ್ಯ ಎಸಗಿದ್ದೀರಿ ಎಂಬ ಹೇಳಿಕೆಗೆ ಟೀಕೆ ಬೆಂಗಳೂರು: ಕರ್ನಾಟಕದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಂಬಿಕೆಯ ನೆಲೆಗಟ್ಟಿನಲ್ಲಿ ಬಾನು ಮುಷ್ತಾಕ್‌ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ವಿರೋಧ : ವೈರಲ್‌ ಆಗುತ್ತಿದೆ ಹಳೆಯ ವಿಡಿಯೋ Read More »

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದಿಂದ ಆರಂಭದಲ್ಲೇ ತಪ್ಪು ನಡೆ : ಮಾಜಿ ಸಚಿವ ತೀಕ್ಷ್ಣ ಟೀಕೆ

ತಲೆಬುರುಡೆ ಕುರಿತು ಆರಂಭದಲ್ಲಿ ಯಾಕೆ ತನಿಖೆ ಮಾಡದಿರುವುದು ಲೋಪ ಎಂದ ರಾಜಣ್ಣ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಆರಂಭದಲ್ಲೇ ತಪ್ಪು ಹೆಜ್ಜೆಯಿಟ್ಟಿತ್ತು ಎಂದು ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ. ಭೂಮಿಯಲ್ಲಿ ಹೂತ ಮೃತದೇಹವನ್ನು ಹೊರತೆಗೆಯಲು ಕಾನೂನಿನಲ್ಲಿ ನಿರ್ದಿಷ್ಟ ನಿಯಮಗಳಿವೆ. ತಾಲೂಕು ಮ್ಯಾಜಿಸ್ಟ್ರೇಟ್ ಅನುಮತಿ

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದಿಂದ ಆರಂಭದಲ್ಲೇ ತಪ್ಪು ನಡೆ : ಮಾಜಿ ಸಚಿವ ತೀಕ್ಷ್ಣ ಟೀಕೆ Read More »

ಭೀಕರ ಅಪಘಾತ : 8 ಯಾತ್ರಿಕರು ಸ್ಥಳದಲ್ಲೇ ಸಾವು

ಯಾತ್ರಿಕರಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಲಖನೌ: ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2.10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಮಕ್ಕಳು. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ

ಭೀಕರ ಅಪಘಾತ : 8 ಯಾತ್ರಿಕರು ಸ್ಥಳದಲ್ಲೇ ಸಾವು Read More »

ಕೆಜಿಎಫ್‌ ಖ್ಯಾತಿಯ ನಟ ದಿನೇಶ್‌ ಮಂಗಳೂರು ನಿಧನ

ಯಶ್‌, ಪುನೀತ್‌ ರಾಜ್‌ಕುಮಾರ್‌ ಮುಂತಾದವರ ಜೊತೆ ನಟಿಸಿದ್ದ ಪ್ರತಿಭಾವಂತ ಉಡುಪಿ : ಕನ್ನಡ ಚಿತ್ರರಂಗದ ನಟ ಮತ್ತು ಕಲಾ ನಿರ್ದೇಶಕ ದಿನೇಶ್ ಮಂಗಳೂರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ‘ಉಳಿದವರು ಕಂಡಂತೆ’, ‘ಕಿರಿಕ್ ಪಾರ್ಟಿ, ‘ಕೆಜಿಎಫ್’ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ನಟಿಸಿದ್ದರು. ಆಗಸ್ಟ್ 25ರಂದು ಬೆಳಗ್ಗೆ ಕುಂದಾಪುರದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಡುಪಿ ಜಿಲ್ಲೆಯ ಕುಂದಾಪುರದ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದರು. ಕಲಾ ನಿರ್ದೇಶಕ, ಕಲಾವಿದ, ನಿರ್ಮಾಪಕ,

ಕೆಜಿಎಫ್‌ ಖ್ಯಾತಿಯ ನಟ ದಿನೇಶ್‌ ಮಂಗಳೂರು ನಿಧನ Read More »

ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ

ಡಿಕೆಶಿ ಹಾಡಿದ ಆರ್‌ಎಸ್‌ಎಸ್‌ ಗೀತೆಯಿಂದ ಕೈ ಪಡೆಯಲ್ಲಿ ಕಿಡಿ ಬೆಂಗಳೂರು : ವಿಧಾನಸಭೆ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಡಿದ ಆರ್‌ಎಸ್‌ಎಸ್‌ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೇ… ಕಾಂಗ್ರೆಸ್‌ನೊಳಗೆ ವಿವಾದದ ಕಿಡಿ ಹೊತ್ತಿಸಿದೆ. ಬಿಜೆಪಿಯವರು ಡಿಕೆಶಿ ನಡೆಯನ್ನು ವ್ಯಂಗ್ಯವಾಗಿಯಾದರೂ ಸ್ವಾಗತಿಸಿದ್ದರೆ, ಸದಾ ಆರ್‌ಎಸ್‌ಎಸ್‌ನ್ನು ದ್ವೇಷಿಸುತ್ತಿರುವ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಚರ್ಚೆ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ನಮಸ್ತೇ ಸದಾ ವತ್ಸಲೇ… ಎಂದು ಆರ್​​ಎಸ್​ಎಸ್ ಗೀತೆ ಹಾಡಿದ್ದಾರೆ. ಅದು ಸಾಂದರ್ಭಿಕವಾಗಿ

ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ Read More »

ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ

ಸಸಿಹಿತ್ಲು ಬೀಚ್‌ನಲ್ಲಿ ಸಂಭವಿಸಿದ ದುರಂತ ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತ ಯುವಕ ಪಡುಪಣಂಬೂರು ಕಜಕತೋಟ ನಿವಾಸಿ ದಿ.ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್

ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ Read More »

error: Content is protected !!
Scroll to Top