ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ

ಪುತ್ತೂರು: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಡಾ। ವಿಕ್ರಂ ಸಾರಾಭಾಯಿ ಅವರ ಜನ್ಮದಿನದ ಸ್ಮರಣಾರ್ಥ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮತ್ತು ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಕೆನರಾ ವಿಕಾಸ್ ಕ್ಯಾಂಪಸ್‍ ನಲ್ಲಿ ಆಯೋಜಿಸಿರುವ ವಿಕ್ರಮ ಕಾರ್ಯಕ್ರಮದಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದ ‘ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ’ಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮೂರು ತಂಡಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ವಿಕ್ರಮ್‍ ಟ್ರೋಫಿ ಹಾಗೂ ಮೂರು ಸಾವಿರ […]

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದ ಶ್ರೀನಿವಾಸ ಪೂಜಾರಿ ಉಡುಪಿ: ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಸಲುವಾಗಿ ಅಪಪ್ರಚಾರ ಮಾಡಲು ವಿದೇಶಗಳಿಂದ ಹಣ ಬಂದಿರುವ ಅನುಮಾನ ವ್ಯಕ್ತಪಡಿಸಿರುವ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಧರ್ಮಸ್ಥಳದ ಕುರಿತಾಗಿ ವ್ಯಾಪಕವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ Read More »

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಂದು ಸುಟ್ಟು ಹಾಕಿದ ದುರುಳರು

ವಸತಿ ಶಾಲೆಯ ವಿದ್ಯಾರ್ಥಿನಿ ಮೇಲೆ ನಡೆದ ಪೈಶಾಚಿಕ ಕೃತ್ಯಕ್ಕೆ ಆಕ್ರೋಶ ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಬಳಿಕ ಶವ ಸುಟ್ಟು ಹಾಕಿರುವ ಪೈಶಾಚಿಕ ಕೃತ್ಯ ಚಿತ್ರದುರ್ಗದ ಹಿರಿಯೂರು ಎಂಬಲ್ಲಿ ಸಂಭವಿಸಿದ್ದು, ಈ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವರ್ಷಿತಾ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ಪದವಿ ವಿದ್ಯಾರ್ಥಿನಿಯಾಗಿದ್ದು, ಈಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಂದು ಸುಟ್ಟು ಹಾಕಿದ ದುರುಳರು Read More »

ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಪಡುವೆಟ್ಟು ಎಂಬಲ್ಲಿ ಕಳೆದ ಜೂನ್ 4ರಂದು ಮನೆಯ ಗೇಟು ಮುಂಭಾಗದಲ್ಲಿ ನಿಂತಿದ್ದ ಮಹಿಳೆಯೋರ್ವರ ಕತ್ತಿನಿಂದ 6 ಪವನ್ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದು ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನಾಗಿರುತ್ತಾರೆ. ಆರೋಪಿಯಿಂದ 4,54,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೈಕ್ ಬಗ್ಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ

ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ Read More »

5 ಕೋ.ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು : ಡ್ರಗ್ಸ್‌ ದಂಧೆ ವಿರುದ್ಧ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬೆಂಗಳೂರು ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ ಅವರಿಂದ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಫ್ರಿಕಾ ಮೂಲದ ಜೊಯಲ್ ಕಾಬೊಂಗ್ ಮತ್ತು ಜೊಯ್ ಸಂಡೇ ಬಂಧಿತ ಆರೋಪಿಗಳು. ಜೊಯಲ್ ಕಾಬೊಂಗ್​ 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ. ಜೊಯ್ ಸಂಡೇ ಮೂರು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಲ್ಲಿ ವಾಸವಾಗಿದ್ದರು. ಈ ಇಬ್ಬರು

5 ಕೋ.ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ Read More »

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ

5 ವರ್ಷದಲ್ಲಿ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆ ಬೆಂಗಳೂರು : ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳ ಅಪಹರಣ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢವಾಗಿ ನಾಪತ್ತೆಯಾದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ 3

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ Read More »

9ನೇ ತರಗತಿ ಮಕ್ಕಳಿಗೆ ಓಪನ್‌ ಬುಕ್‌ ಎಕ್ಸಾಮ್‌ ಪದ್ಧತಿ ಅಳವಡಿಸಲು ನಿರ್ಧಾರ

ಪಠ್ಯಪುಸ್ತಕ ನೋಡಿ ಪರೀಕ್ಷೆ ಬರೆಯಬಹುದು ನವದೆಹಲಿ: ಮಕ್ಕಳ ಪರೀಕ್ಷೆ ಒತ್ತಡ ನಿವಾರಿಸಲು ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರೀಯ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ (ಓಪನ್ ಬುಕ್) ಪರೀಕ್ಷೆ ಜಾರಿಗೊಳಿಸಲು ನಿರ್ಧಾರ ಕೈಗೊಂಡಿದೆ. ಈ ಹೊಸ ನೀತಿಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ತೆರೆದ ಪುಸ್ತಕ ಪರೀಕ್ಷಾ ಪದ್ಧತಿ ಜಾರಿ ಮಾಡಲಾಗುತ್ತಿದೆ. ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಆದ್ಯತೆ

9ನೇ ತರಗತಿ ಮಕ್ಕಳಿಗೆ ಓಪನ್‌ ಬುಕ್‌ ಎಕ್ಸಾಮ್‌ ಪದ್ಧತಿ ಅಳವಡಿಸಲು ನಿರ್ಧಾರ Read More »

ಒಳ ಮೀಸಲಾತಿಯಲ್ಲಿ ‌ಯಾವುದೇ ಜಾತಿಗೂ ಅನ್ಯಾಯವಾಗದಿರಲಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಒಳ ಮೀಸಲಾತಿಗೆ ‌ಸಂಬಂಧಿಸಿದ ಹಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿದ್ದು, ಎಸ್‌ಸಿ ಸಮುದಾಯದಲ್ಲಿ 101 ಜಾತಿಗಳಿವೆ. ಯಾವುದಕ್ಕೂ ಅನ್ಯಾಯವಾಗದ ಹಾಗೆ ನಿರ್ಣಯಗಳನ್ನು ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿ ಎಂ ಸಿದ್ದರಾಮಯ್ಯ ಅವರೇ ನೀವು ರಾಜ್ಯದ ಮುಖ್ಯಮಂತ್ರಿಗಳು. ಒಳ ಮೀಸಲಾತಿ ಸಂದರ್ಭದಲ್ಲಿ ದೃಢ ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಒಳ ಮೀಸಲಾತಿಯಲ್ಲಿ ‌ಯಾವುದೇ ಜಾತಿಗೂ ಅನ್ಯಾಯವಾಗದಿರಲಿ: ಬಿ.ವೈ. ವಿಜಯೇಂದ್ರ Read More »

ಮುಂದಿನ ಪ್ರಧಾನಿ ರಾಹುಲ್ ಗಾಂಧಿ: ತೇಜಸ್ವಿ ಯಾದವ್

ಬಿಹಾರ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ಪಟ್ಟ ಅಲಂಕರಿಸಲಿದ್ದಾರೆ ಎಂದು RJD ನಾಯಕ ತೇಜಸ್ವಿ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವಾಡದಲ್ಲಿ ‘ಮತದಾರ ಅಧಿಕಾರ ಯಾತ್ರೆ’ ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಳೆಯ, ಅಶಕ್ತ ಎನ್‌ಡಿ‌ಎ ಸರ್ಕಾರವನ್ನು ಕಿತ್ತು ಹಾಕಿ, ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಯುವಕರು ದೃಢನಿಶ್ಚಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯವನ್ನು ಮುನ್ನಡೆಸಲು ಯುವ ಪೀಳಿಗೆಗೆ ಅವಕಾಶ ಸಿಗುವ ಕಾಲ ಬಂದಿದೆ. ನಿತೀಶ್ ಕುಮಾರ್ ಅಧಿಕಾರ ಕೆಳಗಿಳಿಸಿ,‌ಯುವ

ಮುಂದಿನ ಪ್ರಧಾನಿ ರಾಹುಲ್ ಗಾಂಧಿ: ತೇಜಸ್ವಿ ಯಾದವ್ Read More »

ಭಾರತದ ಬಾಹ್ಯಾಕಾಶ ಯೋಜನೆಗಳಿಗೆ ಶುಕ್ಲಾ ಅವರ ಅನುಭವ ಮೌಲ್ಯಯುತವಾದದ್ದು: ಪ್ರಧಾನಿ ಮೋದಿ

Posts ನವದೆಹಲಿ: ಬಾಹ್ಯಾಕಾಶಯಾನ ಮುಗಿಸಿದ ಬಳಿಕ ಭಾರತಕ್ಕೆ ಬಂದ ಗಗನಯಾನಿ ಶುಭಂಶು ಶುಕ್ಲಾ ಆವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗಾಗಿ ಭಾರತ 40-50 ಗಗನಯಾನಿಗಳ ಗುಂಪನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶುಕ್ಲಾ ಅವರು ಸೋಮವಾರ ಸಂಜೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ತಮ್ಮ ಬಾಹ್ಯಾಕಾಶ‌ಯಾನದ ಅನುಭವಗಳನ್ನು ಹಂಚಿಕೊಂಡರು. ಆ ಬಳಿಕ ಪ್ರಧಾನಿ ಮೋದಿ ಮಾತನಾಡಿದ್ದು, ಶುಕ್ಲಾ ಅವರ ಬಾಹ್ಯಾಕಾಶ‌ ಪ್ರಯಾಣ ಭವಿಷ್ಯದ ಕಾರ್ಯಾಚರಣೆಗಳಿಗೆ ಮೊದಲ ಹೆಜ್ಜೆಯಾಗಿದೆ.

ಭಾರತದ ಬಾಹ್ಯಾಕಾಶ ಯೋಜನೆಗಳಿಗೆ ಶುಕ್ಲಾ ಅವರ ಅನುಭವ ಮೌಲ್ಯಯುತವಾದದ್ದು: ಪ್ರಧಾನಿ ಮೋದಿ Read More »

error: Content is protected !!
Scroll to Top