ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ

ಶಿರಾಡಿ ಘಾಟ್‌ನಲ್ಲಿ ಟ್ರಾಫಿಕ್‌ ಜಾಮ್‌ ಆಗಿ ವಾಹನ ಸವಾರರಿಗೆ ಸಮಸ್ಯೆ ಮಂಗಳೂರು: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ರಸ್ತೆ ಮತ್ತು ರೈಲು ಮಾರ್ಗ ಎರಡರಲ್ಲೂ ಭೂಕುಸಿತ ಸಂಭವಿಸಿದೆ. ಎಡಕುಮೇರಿ ಬಳಿ ಭೂಕುಸಿತವಾಗಿ ಬೆಂಗಳೂರು-ಮಂಗಳೂರು ರೈಲುಗಳು ಸ್ಥಗಿತಗೊಂಡಿವೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ […]

ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ Read More »

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಮೆರವಣಿಗೆ ಪುತ್ತೂರು ನಗರದಾದ್ಯಂತ ಶನಿವಾರ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಪರ್ಲಡ್ಕದಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ನಡೆದ ಬಳಿಕ ಶ್ರೀಕೃಷ್ಣ ಲೋಕ ಶೋಬಾಯಾತ್ರೆ ಶಿಶುಮಂದಿರದಿಂದ ಆರಂಭಗೊಂಡು ಮುಖ್ಯರಸ್ತೆಗೆ ಬಂದಿ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಿರ್ಮಿಸಿದ ಸಭಾಭವನಕ್ಕೆ ಆಗಮಿಸಿತು. ಸಾವಿರಾರು ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸಿ, ಹೆತ್ತವರು

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ Read More »

ಭೀಕರ ಬೆಂಕಿ ಅವಘಡ : ಐದು ಮಂದಿ ಸಜೀವ ದಹನ

ತಂದೆ-ತಾಯಿ ಇಬ್ಬರು ಪುಟ್ಟ ಮಕ್ಕಳ ದುರಂತ ಅಂತ್ಯ ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತ ಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ. ದುರಂತದಲ್ಲಿ ಸಜೀವ ಸುಟ್ಟುಕರಕಲಾದವರನ್ನು ಮದನ್ (38), ಅವರ ಪತ್ನಿ ಸಂಗೀತಾ (33) ಪುತ್ರರಾದ ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌

ಭೀಕರ ಬೆಂಕಿ ಅವಘಡ : ಐದು ಮಂದಿ ಸಜೀವ ದಹನ Read More »

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಬೆಂಗಳೂರು: ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಶುಕ್ರವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ 12:01 ಗಂಟೆ ಸುಮಾರಿಗೆ ಭೈರವೈಕ್ಯರಾಗಿದ್ದಾರೆ. ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು (ಶನಿವಾರ) ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಶ್ರೀಗಳ ಉತ್ತರಾಧಿಕಾರಿಗಳಾದ ನಿಶ್ಚಲಾನಂದನಾಥ ಸ್ವಾಮೀಜಿ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ Read More »

ಧರ್ಮಸ್ಥಳಕ್ಕೆ ಹೊರಟಿದೆ ಬೃಹತ್‌ ವಾಹನ ರ‍್ಯಾಲಿ

ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದವರ ವಿರುದ್ಧ ಸಿಡಿದೆದ್ದಿರುವ ಭಕ್ತರು ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್‌ ವಾಹನ ರ‍್ಯಾಲಿ ನೆಲಮಂಗಲದಿಂದ ಇಂದು ಹೊರಟಿದೆ. ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷವಾಕ್ಯ ಕೂಗುತ್ತಾ ಕಾರ್ಯಕರ್ತರು ಮತ್ತು ಧರ್ಮಸ್ಥಳದ ಭಕ್ತರು ರ‍್ಯಾಲಿಯಲ್ಲಿ ಹೊರಟಿದ್ದಾರೆ. ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಈ ರ‍್ಯಾಲಿ ನಡೆಯುತ್ತಿದೆ. ರ‍್ಯಾಲಿಯಲ್ಲಿ 400ಕ್ಕೂ ಹೆಚ್ಚು ವಾಹನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಟಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‍ಗೇಟ್‍ನಿಂದ ಯಾತ್ರೆ ಆರಂಭಗೊಂಡಿದ್ದು, ಹಾಸನ

ಧರ್ಮಸ್ಥಳಕ್ಕೆ ಹೊರಟಿದೆ ಬೃಹತ್‌ ವಾಹನ ರ‍್ಯಾಲಿ Read More »

ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್‌

ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ ಎಂದ ಸಚಿವೆ ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿಕ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬುಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ನಾನು ಕೂಡ ಧರ್ಮಸ್ಥಳದ ಭಕ್ತೆ. ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸಲಾಗಿತ್ತು ಎಂಬು ಉಪಮುಖ್ಯಮಂತ್ರಿಗಳ ಹೇಳಿಕೆ ನನ್ನ ಸಹಮತವಿದೆ ಎಂದು

ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್‌ Read More »

ಬಾವಿಗೆ ಬಿದ್ದು ಮಹಿಳೆ ಸಾವು

ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಪಟಿರುವ ಘಟನೆ ನಡೆದಿದೆ. ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆರ್.ಗೀತಾ (59) ಮೃತರು. ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು, ಔಷಧಿ ಪಡೆಯುತ್ತಿದ್ದರು. ಸಹೋದರ ಶೇಖರ್ ಅವರ ಮನೆಯಲ್ಲಿ ವಾಸ್ತವ್ವ ಹೊಂದಿದ್ದು, ಆ.15ರಂದು ಮಧ್ಯಾಹ್ನ ಊಟ ಮಾಡಿದ್ದರು. ಬಳಿಕ ಅವರು ಮನೆಯಂಗಳದ ಬಾವಿಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರು ಸಹೋದರರಾದ ಸೆಲೂನ್ನ ಮಾಲಕ ಶೇಖರ್, ತಂಕರ್, ಸುರೇಶ್, ಸಹೋದರಿಯರಾದ ಆರ್.

ಬಾವಿಗೆ ಬಿದ್ದು ಮಹಿಳೆ ಸಾವು Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರ ಬಳಿ ಇರುವ ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿ ನಡೆಯಿತು.ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ, ಪ್ರಸ್ತುತ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು, ಟ್ರಸ್ಟಿನ ನೂತನ ಅಧ್ಯಕ್ಷರಾಗಿ ಶ್ರೀರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮ್ ರಾಜ್ ಅರ್ಲಪದವು, ಕೋಶಾಧಿಕಾರಿಯಾಗಿ ರೂಪೇಶ್ ನಾಯ್ಕ್ ಟಿ. ಪುತ್ತೂರು ಅವರನ್ನು ನಿರ್ದೇಶಕರುಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ Read More »

ರಸ್ತೆ ಬದಿ ನಿಂತಿದ್ದ  ಕಾರಿಗೆ ಲಾರಿ ಡಿಕ್ಕಿ

ಕುಂದಾಪುರ: ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ತೆಕ್ಕಟ್ಟೆ ಉದ್ಯಮಿ ಮತ್ತು ಅವರ ಮಗ ನಿಂತಿದ್ದ ಇನ್ನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಇಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತೆಕ್ಕಟ್ಟೆಯ ಶ್ರೀ ಗಣೇಶ್ ಸಿಲ್ಕ್ ನ ವ್ಯವಸ್ಥಾಪಕ ನಿರ್ದೇಶಕ ಅನಂತ್ ನಾಯಕ್ (57) ಮತ್ತು ಅವರ ಮಗ ಅನೂಪ್ ನಾಯಕ್ (23) ರವರು ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಭಜನತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಇನೋವಾ

ರಸ್ತೆ ಬದಿ ನಿಂತಿದ್ದ  ಕಾರಿಗೆ ಲಾರಿ ಡಿಕ್ಕಿ Read More »

ಜವಾಬ್ದಾರಿ ಅರಿತ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುವರು : ನಿವೃತ್ತ ಯೋಧ ಮೋಹನ್ ಗೌಡ | ವಿವೇಕಾನಂದ ವಿದ್ಯಾಸಂಸ್ಥೆಗಳಿಂದ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಸ್ವಾತಂತ್ರ್ಯ ದಿನಾಚರಣೆ ಅಂದರೆ ಅದು ಸಾವಿರಾರು ದೇಶಭಕ್ತರ ತ್ಯಾಗ ಬಲಿದಾನಗಳ ಸ್ಮರಣೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ತಾನು ಮಾಡಬೇಕಾದ ಕರ್ತವ್ಯವನ್ನು ಸದಾ ನೆನಪಿನಲ್ಲಿ ಇಡಬೇಕಾಗಿದೆ ಎಂದು ನಿವೃತ್ತ ಯೋಧ ಮೋಹನ ಗೌಡ ಹೇಳಿದರು. ಅವರು ತೆಂಕಿಲ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಗೈದು ಮಾತನಾಡಿದರು.ಇಂದಿನ ಮಕ್ಕಳು ಶಾಲೆಗಳಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತು ಶಿಕ್ಷಣವನ್ನು ಮುಂದುವರಿಸಿದರೆ ಸತ್ಪ್ರಜೆಗಳಾಗುವರು ಎಂದು ಅವರು ನುಡಿದರು.ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಬಿ

ಜವಾಬ್ದಾರಿ ಅರಿತ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುವರು : ನಿವೃತ್ತ ಯೋಧ ಮೋಹನ್ ಗೌಡ | ವಿವೇಕಾನಂದ ವಿದ್ಯಾಸಂಸ್ಥೆಗಳಿಂದ 79ನೇ ಸ್ವಾತಂತ್ರ್ಯೋತ್ಸವ Read More »

error: Content is protected !!
Scroll to Top