ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್‌

ಧರ್ಮಸ್ಥಳ ಅವಹೇಳನ, ಅಪಪ್ರಚಾರ ವಿರುದ್ಧ ರಾಜ್ಯಾದ್ಯಂತ ಹೆಚ್ಚುತ್ತಿದೆ ಅಸಹನೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್‌ ಹಾಗೂ ಯೂಟ್ಯೂಬರ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್‌ ದಾಖಲಾಗಿದೆ. ಧರ್ಮಸ್ಥಳಕ್ಕೆ ಸಂಬಂಧಿಸಿ ಮಾತನಾಡುತ್ತ ಜೈನ ಧರ್ಮೀಯರ ವಿರುದ್ಧ ಅವಮಾನಕರ ಹೇಳಿಕೆ, ಜೈನರ ನಂಬಿಕೆಗಳಿಗೆ ಧಕ್ಕೆ ಎಸಗಿದ್ದಾರೆ ಎಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದ ಅಜೀತ್‌ ಬಸಾಪುರ ಎಂಬವರು ಹುಬ್ಬಳ್ಳಿ ಗ್ರಾಮೀನ ಪೊಲೀಸ್‌ ಟಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಜೀರೊ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ […]

ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್‌ Read More »

ಧರ್ಮಸ್ಥಳ ದೂರುದಾರ ಹೇಳಿದಲ್ಲಿ ಶವಗಳು ಸಿಗದೇ ಹೋದರೆ ಆತನನ್ನೇ ನೇಣಿಗೆ ಹಾಕಿ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪ್ರಸ್ತುತ SIT ಶೋಧಿಸಿದ ಸ್ಥಳಗಳಲ್ಲಿ ಅನಾಮಿಕ ದೂರುದಾರ ಹೇಳಿದ ಯಾವುದೇ ಕುರುಹುಗಳು ಸಿಗದೇ ಹೋದಲ್ಲಿ ಆತನನ್ನೇ ನೇಣಿಗೆ ಹಾಕಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು,‌ ಧರ್ಮಸ್ಥಳ ದೇಗುಲ ಮತ್ತು ಅಲ್ಲಿನ ಧರ್ಮಾಧಿಕಾರಿಗಳಿಗೆ ಯಾವುದೇ ಕಳಂಕ ಬಾಧಿಸಲು ಬಿಡುವುದಿಲ್ಲ. ಸದ್ಯ ತನಿಖೆ ನಡೆಯುತ್ತಿದೆ. ಆದರೆ ಶವಗಳು ಸಿಗುತ್ತಿಲ್ಲ. ಒಂದು ವೇಳೆ ಈ ತನಿಖೆಯಲ್ಲಿ ದೂರುದಾರ ಹೇಳಿದಂತೆ ಶವಗಳು ದೊರೆಯದಲ್ಲಿ ಆತನನ್ನು ಸುಮ್ಮನೆ ಬಿಡಬಾರದು,

ಧರ್ಮಸ್ಥಳ ದೂರುದಾರ ಹೇಳಿದಲ್ಲಿ ಶವಗಳು ಸಿಗದೇ ಹೋದರೆ ಆತನನ್ನೇ ನೇಣಿಗೆ ಹಾಕಿ: ಬೇಳೂರು ಗೋಪಾಲಕೃಷ್ಣ Read More »

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು Read More »

ಬಾಬಾ ಬುಡನ್ ದರ್ಗಾದಲ್ಲೂ SIT ಉತ್ಖನನ ನಡೆಸಲು ರಾಜ್ಯ ಸರ್ಕಾರಕ್ಕೆ ಆಗ್ರಹ

ಚಿಕ್ಕಮಗಳೂರು: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಆರೋಪದಡಿ ಧರ್ಮಸ್ಥಳದ ಸುತ್ತಮುತ್ತ SIT ತನಿಖೆ ನಡೆಯುತ್ತಿದ್ದು, ಇದೇ ರೀತಿಯಲ್ಲಿ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿಯೂ ಉತ್ಖನನ ಕಾರ್ಯ ನಡೆಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್. ಲೋಕೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ದತ್ತಪೀಠದ ಆವರಣದಲ್ಲಿ ಗೋರಿಗಳಿದ್ದು, ಇವು ನಕಲಿಯೋ ಅಸಲಿಯೋ ಎಂಬ ಬಗ್ಗೆ ಉತ್ಖನನ ನಡೆಸುವುದು ಅಗತ್ಯವಾಗಿದೆ. ಇದಕ್ಕಾಗಿ ಸರ್ಕಾರ SIT ರಚಿಸುವಂತೆಯೂ ಆಗ್ರಹಿಸಿದ್ದಾರೆ. ದತ್ತಪೀಠ ಹಿಂದೂಗಳ ಧಾರ್ಮಿಕ ಸ್ಥಳ. ಅಲ್ಲಿ

ಬಾಬಾ ಬುಡನ್ ದರ್ಗಾದಲ್ಲೂ SIT ಉತ್ಖನನ ನಡೆಸಲು ರಾಜ್ಯ ಸರ್ಕಾರಕ್ಕೆ ಆಗ್ರಹ Read More »

ನಟಿ ರನ್ಯಾ ರಾವ್ ಮಲತಂದೆ ಪೊಲೀಸ್ ಮಹಾನಿರ್ದೇಶಕ ರಾಮಚಂದ್ರ ರಾವ್ ಕಡ್ಡಾಯ ರಜೆ ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು: ದುಬೈ‌ನಿಂದ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬಂಧನದಲ್ಲಿರುವ ನಟಿ ರನ್ಯಾ ರಾವ್ ಮಲ ತಂದೆ, ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರ ಕಡ್ಡಾಯ ರಜೆ ಆದೇಶ ಹಿಂಪಡೆದಿರುವ ರಾಜ್ಯ ಸರ್ಕಾರ, ಅವರನ್ನು ಮರು ನೇಮಿಸಿ ಆದೇಶಿಸಿದೆ. ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ನಟಿ ರನ್ಯಾ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ರಾಮಚಂದ್ರ ರಾವ್ ಅವರ ಸಂಭಾವ್ಯ ಪಾತ್ರದ ತನಿಖೆ ಮಾಡಲು ಅವರನ್ನು ಮಾರ್ಚ್ 15 ರಂದು ಕಡ್ಡಾಯ

ನಟಿ ರನ್ಯಾ ರಾವ್ ಮಲತಂದೆ ಪೊಲೀಸ್ ಮಹಾನಿರ್ದೇಶಕ ರಾಮಚಂದ್ರ ರಾವ್ ಕಡ್ಡಾಯ ರಜೆ ಆದೇಶ ಹಿಂಪಡೆದ ಸರ್ಕಾರ Read More »

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಚುನಾವಣಾ ಆಯೋಗಕ್ಕೆ ಜೆಡಿಎಸ್ ನಿಯೋಗ ದೂರು ನೀಡಿದೆ. ದೂರಿನಲ್ಲಿ, ಕಾಂಗ್ರೆಸ್ ಮತಗಳ್ಳತನದ ಆರೋಪ ದಲ್ಲಿ ಪ್ರತಿಭಟನೆ ನಡೆಸಿದ್ದು ಈ ಆರೋಪ ಸುಳ್ಳು. ಹಾಗೆಯೇ ಚುನಾವಣಾ ಆಯೋಗದ ವಿರುದ್ದ ಮಾಡಿರುವ ಆರೋಪ ಸಹ ಹುರುಳಿಲ್ಲದ್ದು. ಆದ್ದರಿಂದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ. ನಿಯೋಗದಲ್ಲಿ ಜೆಡಿಎಸ್ ಎಂಎಲ್‌ಸಿ ಕೆ.ಎ. ತಿಪ್ಪೆರುದ್ರಸ್ವಾಮಿ, ಮುಖಂಡರಾದ ಜವರಾಯಿ ಗೌಡ, ಹೆಚ್. ಎನ್. ದೇವರಾಜ್ ಸೇರಿದಂತೆ ಇನ್ನಿತರರು ಇದ್ದರು

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ Read More »

12ರ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ : ಮುಂಬಯಿಯಲ್ಲಿ ಬೆಳಕಿಗೆ ಬಂದ ಭಯಾನಕ ಕೃತ್ಯ

ಅಮಲು ಬರುವ ಪಾನೀಯ, ಚುಚ್ಚುಮದ್ದು ನೀಡಿ ಲೈಂಗಿಕ ಶೋಷಣೆ ಮುಂಬಯಿ : ಬಾಂಗ್ಲಾದೇಶ ಮೂಲದ 12 ವರ್ಷದ ಬಾಲಕಿಯ ಮೇಲೆ ಮೂರು ತಿಂಗಳಲ್ಲಿ 200ಕ್ಕೂ ಹೆಚ್ಚು ಮಂದಿ ಅತ್ಯಾಚಾರವೆಸಗಿದ ಭಯಾನಕ ಕೃತ್ಯವೊಂದು ಮುಂಬಯಿಯಲ್ಲಿ ಬೆಳಕಿಗೆ ಬಂದಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದ ಕಾರಣ ಬೇಸರಗೊಂಡು ಪರಿಚಯಸ್ಥ ಮಹಿಳೆಯೊಬ್ಬಳ ಜತೆಗೆ ದೇಶಬಿಟ್ಟು ಓಡಿಬಂದಿದ್ದ ಬಾಲಕಿ ಮುಂಬಯಿಯಲ್ಲಿ ಮಾನವ ಕಳ್ಳಸಾಗಣೆ ಜಾಲದಲ್ಲಿ ಆಕೆ ಸಿಕ್ಕಿಬಿದ್ದು ನರಕ ಯಾತನೆ ಅನುಭವಿಸಿದ್ದಾಳೆ. ಯಾರೋ ಆಕೆಗೆ ಭಾರತದೊಳಗೆ ನುಸುಳಲು ಅವಕಾಶ ಮಾಡಿಕೊಟ್ಟಿದ್ದರು. ಇಲ್ಲಿ ಮಾನವ ಕಳ್ಳಸಾಗಣೆ ಜಾಲದಲ್ಲಿ

12ರ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ : ಮುಂಬಯಿಯಲ್ಲಿ ಬೆಳಕಿಗೆ ಬಂದ ಭಯಾನಕ ಕೃತ್ಯ Read More »

ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ. ಮಾರಿಯೆಟ್ ಬಿ‌. ಎಸ್. ಭೇಟಿ

ಪುತ್ತೂರು: ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ. ಮಾರಿಯೆಟ್ ಬಿ. ಎಸ್. ಭೇಟಿ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕ ಆಕಾಶ್ ನೇತೃತ್ವದಲ್ಲಿ ಬ್ಯಾಂಡ್ ಮೂಲಕ ಸ್ವಾಗತಿಸಿ ವೇದಿಕೆಗೆ ಕರೆತರಲಾಯಿತು. ವೇದಿಕೆಯಲ್ಲಿ ಬೆಥನಿ ಸಂಸ್ಥೆಯ ಜನರಲ್ ಪ್ರೊಕ್ಯುರೇಟರ್ ವೈಲೆಟ್ ಬಿ. ಎಸ್., ಶಾಲಾ ಸಂಚಾಲಕಿ ಪ್ರಶಾಂತಿ ಬಿ. ಎಸ್., ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಯ ಸುವರ್ಣ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಚೇತನ್ ಕುಮಾರ್ ಮೊಟ್ಟೆತಡ್ಕ ಉಪಸ್ಥಿತರಿದ್ದರು. ಶಾಲಾ

ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ. ಮಾರಿಯೆಟ್ ಬಿ‌. ಎಸ್. ಭೇಟಿ Read More »

ಮೊಟ್ಟೆ ಕೊಡುವ ಕಡೆ ಕಲಿಯಲ್ಲ ಎಂದು ಶಾಲೆ ಬಿಟ್ಟ 70 ಮಕ್ಕಳು

ಕಾವೆರಿದ ಶಾಲೆಯಲ್ಲಿ ಮೊಟ್ಟೆ ವಿತರಣೆ ವಿವಾದ ಬೆಂಗಳೂರು: ಸರ್ಕಾರವೇನೋ ಮಕ್ಕಳಲ್ಲಿ ಪೌಷ್ಟಕಾಂಶದ ಕೊರತೆಯಾಗಬಾರದು ಎಂಬ ಕಾಳಜಿಯಿಂದ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಮಾಡುತ್ತಿದೆ. ಆದರೆ ಕೆಲವೆಡೆ ಮೊಟ್ಟೆಗೆ ಭಾರಿ ವಿರೋಧವೂ ವ್ಯಕ್ತವಾಗುತ್ತದೆ. ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ 70 ವಿದ್ಯಾರ್ಥಿಗಳು ಸರ್ಕಾರಿ ಶಾಲೆ ತೊರೆದ ಘಟನೆ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಕೆಲವು ಪೋಷಕರು ಈ ಹಿಂದೆಯೇ

ಮೊಟ್ಟೆ ಕೊಡುವ ಕಡೆ ಕಲಿಯಲ್ಲ ಎಂದು ಶಾಲೆ ಬಿಟ್ಟ 70 ಮಕ್ಕಳು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ.ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ. ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹರು ಆದ ಡಾ. ಜಯಪ್ರಕಾಶ್ ಎಂ. ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು.ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

error: Content is protected !!
Scroll to Top