ಪುತ್ತೂರು : 10 ಕೆಜಿ ಭಾರದ ಘಂಟೆ ಕದ್ದವ ಸೆರೆ

ಪುತ್ತೂರು : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ ಯಾನೆ ಸಂಶು (50) ಬಂಧಿತ ಆರೋಪಿ. 10 ಕೆಜಿ ತೂಕದ ಸುಮಾರು 8,000 ರೂ. ಬೆಲೆ ಬಾಳುವ ತಾಮ್ರದ ಗಂಟೆ ಕಳವು ಘಟನೆಗೆ ಸಂಬಂಧಿಸಿದಂತೆ ಜುಲೈ 26ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. […]

ಪುತ್ತೂರು : 10 ಕೆಜಿ ಭಾರದ ಘಂಟೆ ಕದ್ದವ ಸೆರೆ Read More »

ಮಂಗಳೂರು : ಈಜು ಕೋಚ್‌ ಈಜುಕೊಳದಲ್ಲಿ ಮುಳುಗಿ ಸಾವು

ಈಜುವಾಗಲೇ ಹೃದಯಾಘಾತವಾಗಿ ಉಸಿರುಕಟ್ಟಿ ಮೃತ್ಯು ಮಂಗಳೂರು: ಈಜು ಕೋಚ್‌ ಈಜುಕೊಳದಲ್ಲೇ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಈಜುಕೊಳದ ಲೈಫ್‌ಗಾರ್ಡ್ ಕೂಡ ಆಗಿದ್ದ ಅವರು ಹೃದಯಾಘಾತದಿಂದಾಗಿ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಭಾನುವಾರ ಈಜುವಾಗಲೇ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಬಂಟ್ವಾಳ ತಾಳುಕಿನ ಕಲ್ಲಡ್ಕದ ಸಮೀಪದ ಸೂರಿಕುಮೇರಿನ ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರಿಗೆ ನೀರಿನೊಳಗೆ

ಮಂಗಳೂರು : ಈಜು ಕೋಚ್‌ ಈಜುಕೊಳದಲ್ಲಿ ಮುಳುಗಿ ಸಾವು Read More »

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ

ವಿಪಕ್ಷ ಬತ್ತಳಿಕೆಯಲ್ಲಿ ಧರ್ಮಸ್ಥಳ ಪ್ರಕರಣ, ಆರ್‌ಸಿಬಿ ಕಾಲ್ತುಳಿತ ಸಹಿತ ಹಲವು ಪ್ರಬಲ ಅಸ್ತ್ರಗಳು ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ. ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ ವಿಚಾರ ಮುಂದಿಟ್ಟು ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ Read More »

ಭಾರತ ವಿಶ್ವಗುರವಾಗಲು ಸಂಸ್ಕೃತಿಯನ್ನು ಕಾಪಾಡಬೇಕಿದೆ – ಭವ್ಯಾ ನಿಡ್ಪಳ್ಳಿ

ಪುತ್ತೂರು: ಬನ್ನೂರಿನ ಅಲುಂಬುಡದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ನಡೆದ ಆಟಿ ಆಚರಣೆ ಕೂಟ ಮತ್ತು ಬನ್ನೂರು ಒಕ್ಕಲಿಗ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ ಅವರು ಶಿಖರೋಪನ್ಯಾಸ ನೀಡಿದರು.  ಇಂದಿನ ಕಾರ್ಯಕ್ರಮವು ಭಾರತ ವಿಶ್ವಗುರುವಾಗಲು ನೆರವಾಗುವ ಕಾರ್ಯಕ್ರಮವಾಗಿದೆ ಏಕೆಂದರೆ ಭಾರತ ಗಟ್ಟಿಯಾಗಬೇಕಾದರೆ ಪ್ರತಿಯೊಂದು ಸಮುದಾಯವೂ ತಳಮಟ್ಟದಲ್ಲಿ ಗಟ್ಟಿಯಾಗಬೇಕು. ಆ ಕೆಲಸ ಇಂದು ಇಲ್ಲಿ ಆಗಿದೆ ಎಂದರು. ಆಟಿ ಆಚರಣೆಯ ನೆಪದಲ್ಲಿ

ಭಾರತ ವಿಶ್ವಗುರವಾಗಲು ಸಂಸ್ಕೃತಿಯನ್ನು ಕಾಪಾಡಬೇಕಿದೆ – ಭವ್ಯಾ ನಿಡ್ಪಳ್ಳಿ Read More »

ವಿಶ್ವ ಹಿಂದೂ ಪರಿಷದ್ ಸಂಸ್ಥಾಪನಾ ದಿನಾಚರಣೆ | 15ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು

ಪುತ್ತೂರು: ವಿಶ್ವ ಹಿಂದೂ ಪರಿಷದ್‍ ಸ್ಥಾಪನಾ ದಿನಾಚರಣೆ ಅಂಗವಾಗಿ ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್‍, ಬಜರಂಗದಳ ಹಾಗೂ ಮೊಸರುಕುಡಿಕೆ ಆಚರಣಾ ಸಮಿತಿ ವತಿಯಿಂದ 15ನೇ ವರ್ಷದ ಮೊಸರುಕುಡಿಕೆ ಉತ್ಸವದ ಪ್ರಯಕ್ತ ವಿವಿಧ ಸ್ಪರ್ಧೆಗಳು ಭಾನುವಾರ ಜರಗಿತು. ಶ್ರೀಕೃಷ್ಣನ ವೇಷ, ಭಗವದ್ಗೀತಾ ಪಠಣ, ದೇಶಭಕ್ತಿ ಗೀತೆ, ಭಾರತಮಾತೆ ಚಿತ್ರ ಬಿಡಿಸುವುದು, ರಂಗವಲ್ಲಿ ಹಾಗೂ ಸ್ಮರಣ ಶಕ್ತಿ ಸ್ಪರ್ಧೆಗಳು ಭಾನುವಾರ ಶ್ರೀ ಮಹಾಲಿಂಗೇಶ್ವರ ವಠಾರದಲ್ಲಿರುವ ಮೂರು ವೇದಿಕೆಗಳಲ್ಲಿ ಏಕಕಾಲದಲ್ಲಿ ನಡೆಯಿತು. ಮುದ್ದು, ಕಂದ, ಕಿಶೋರ, ರಾಧಾಕೃಷ್ಣ ಹಾಗೂ ಬಾಲಕೃಷ್ಣ

ವಿಶ್ವ ಹಿಂದೂ ಪರಿಷದ್ ಸಂಸ್ಥಾಪನಾ ದಿನಾಚರಣೆ | 15ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಪ್ರಧಾನಿ ಮೋದಿ ಅವರಿಂದ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ, ಆರೆಂಜ್ ಲೈನ್‌ಗೆ ಶಂಕುಸ್ಥಾಪನೆ

ಬೆಂಗಳೂರು: ಪ್ರಧಾನಿ ಮೋದಿ ಅವರು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ವರೆಗಿನ ಮೆಟ್ರೋ ಹಳದಿ ಮಾರ್ಗಕ್ಕೆ ಅಧಿಕೃತ ಚಾಲನೆ ನೀಡಿದರು. ಇದರಿಂದಾಗಿ ಈ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ಸಾಧ್ಯತೆ ಸಹ ಇದೆ. ನಮ್ಮ ಮೆಟ್ರೋ ಆರೆಂಜ್ ಲೈನ್‌ಗೆ ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ಮಾಡಿದರು. ಐಐಐಟಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ಪ್ರಧಾನಿ ಮೋದಿ ಅವರು ಕಾಯಕ ಯೋಗಿ. ಅವರು ನಮ್ಮ ಕಾಲದ ನಿಜವಾದ

ಪ್ರಧಾನಿ ಮೋದಿ ಅವರಿಂದ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ, ಆರೆಂಜ್ ಲೈನ್‌ಗೆ ಶಂಕುಸ್ಥಾಪನೆ Read More »

ಕಲ್ಲಾರೆ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ 354ನೇ ಆರಾಧನಾ ಮಹೋತ್ಸವಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ಚಾಲನೆ ನೀಡಲಾಯಿತು. ಆರಾಧನಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಗ್ಗೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10ಕ್ಕೆ  ಪಂಚಾಮೃತ ಅಭಿಷೇಕ, 12 ಕ್ಕೆ ಅಲಂಕಾರ ಪೂಜೆ, 1 ಕ್ಕೆ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಕಲ್ಲಾರೆ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ Read More »

ಅಂದು ಜೀವನ ಪದ್ಧತಿ – ಇಂದು ಆಚರಣೆ: ಸೀತಾರಾಮ ಕೇವಳ

ಪುತ್ತೂರು: ಬನ್ನೂರಿನ ಅಲುಂಬುಡದ ನಡೆದ ಆಟಿ ಆಚರಣೆ ಕೂಟವನ್ನು ಊರ ಗೌಡ ವಿಶ್ವನಾಥ ಗೌಡ ಕಲ್ಲಿಮಾರು ಉದ್ಘಾಟಿಸಿ, ಸಾಂಪ್ರದಾಯಿಕ ಆಚರಣೆಗಳ ಮಹತ್ತ್ವದ ಕುರಿತು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸೀತಾರಾಮ ಕೇವಳ ಮಾತನಾಡಿ, ಆಟಿಯ ಅವಧಿಯಲ್ಲಿ ಹಿಂದಣ ಕಾಲದಲ್ಲಿ ಬಡತನವೇ ಇತ್ತು. ಆ ಪರಿಸ್ಥಿತಿಯಲ್ಲಿ ಉಣ್ಣಲು ತಿನ್ನಲು ಇರದಿದ್ದ ಕಾರಣಕ್ಕಾಗಿ ಜನರು ಗೆಡ್ಡೆ- ಗೆಣಸುಗಳ ಮತ್ತು ಸೊಪ್ಪು-ಕಾಯಿಗಳ ಮೊರೆ ಹೋಗುತ್ತಿದ್ದುದು ಅನಿವಾರ್ಯವಾಗಿತ್ತು. ಇಂದು ನಾವು ಸಾಕಷ್ಟು ಸುಖಿಗಳಾಗಿದ್ದೇವೆ. ಆದರೆ ಇತಿಹಾಸವನ್ನು ಮರೆಯಬಾರದು. ಹಾಗಾದಾಗ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ

ಅಂದು ಜೀವನ ಪದ್ಧತಿ – ಇಂದು ಆಚರಣೆ: ಸೀತಾರಾಮ ಕೇವಳ Read More »

ಧರ್ಮಸ್ಥಳ ಪ್ರಕರಣ : ಗಲಭೆಗೆ ಸಂಬಂಧಿಸಿ ಆರು ಮಂದಿ ಬಂಧನ, ಬಿಡುಗಡೆ

ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್‌ಐಆರ್‌ ಬೆಳ್ತಂಗಡಿ: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಶನಿವಾರ ಬಂಧಿಸಿದ್ದಾರೆ. ನ್ಯಾಯಾಲಯ ಎಲ್ಲರನ್ನು ಷರತ್ತುಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ. ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು

ಧರ್ಮಸ್ಥಳ ಪ್ರಕರಣ : ಗಲಭೆಗೆ ಸಂಬಂಧಿಸಿ ಆರು ಮಂದಿ ಬಂಧನ, ಬಿಡುಗಡೆ Read More »

ಕೆದಿಲದ ಮಹಿಳೆಯ ನಿಗೂಢ ಸಾವಿನ ಪ್ರಕರಣ : ಇಂದು ಬೆಳಗ್ಗೆ ಮನೆಗೆ ಬಂದ ಬಾವ

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಾವ ಇಂದು ದಿಢೀರ್‌ ಪ್ರತ್ಯಕ್ಷ ಪುತ್ತೂರು : ಕೆದಿಲ ಗ್ರಾಮದ ಕಾಂತಕೋಡಿ ಎಂಬಲ್ಲಿ ಕಳೆದ ಆ.6ರಂದು ಮಹಿಳೆಯ ಮೃತದೇಹ ಪತ್ತೆಯಾದ ದಿನವೇ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯ ಗಂಡನ ಅಣ್ಣ (ಮೃತರ ಬಾವ) ಭಾನುವಾರ ಬೆಳಗ್ಗೆ ವಾಪಸು ಬಂದಿದ್ದಾರೆ. ಕೆದಿಲ ಒಳಕುಮೇರಿಯ ಗಣಪತಿ ಯಾನೆ ರಾಮಣ್ಣ ಗೌಡ ಎಂಬವರ ಪತ್ನಿ ಮಮತಾ ಎಂಬವರ ಮೃತದೇಹ ಆ.6ರಂದು ಬೆಳಗ್ಗೆ ಕೆದಿಲ ಗ್ರಾಮದ ತೋಡಿನಲ್ಲಿ ಪತ್ತೆಯಾಗಿತ್ತು. ಅದೇ ದಿನ ರಾಮಣ್ಣ ಗೌಡರ ಅಣ್ಣ ಸುಂದರ ಯಾನೆ ಲೋಕಯ್ಯ

ಕೆದಿಲದ ಮಹಿಳೆಯ ನಿಗೂಢ ಸಾವಿನ ಪ್ರಕರಣ : ಇಂದು ಬೆಳಗ್ಗೆ ಮನೆಗೆ ಬಂದ ಬಾವ Read More »

error: Content is protected !!
Scroll to Top